ಮಳೆ ಅನಾಹುತ, ಮನೆ ಕಳೆದುಕೊಂಡವರಿಗೆ ಸಿಗಲಿ ಪರಿಹಾರ


Team Udayavani, Oct 14, 2021, 6:50 AM IST

ಮಳೆ ಅನಾಹುತ, ಮನೆ ಕಳೆದುಕೊಂಡವರಿಗೆ ಸಿಗಲಿ ಪರಿಹಾರ

ಕಳೆದೊಂದು ವಾರದಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಲೇ ಇದ್ದು, ಅನಾಹುತಗಳೂ ಸಂಭವಿಸುತ್ತಿವೆ. ಮನೆ ಗೋಡೆ ಕುಸಿದು, ವಿದ್ಯುತ್‌ ಪ್ರವಹಿಸಿ ಸಾವನ್ನಪ್ಪಿದವರ ಸಂಖ್ಯೆಯೂ ಹೆಚ್ಚಾಗಿದೆ. ಅಕ್ಟೋಬರ್‌ ತಿಂಗಳಿನಲ್ಲಿ ಸುರಿಯುತ್ತಿರುವ ಮಳೆಯಂತೂ ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಅನಾಹುತವನ್ನೇ ಸೃಷ್ಟಿಸಿದೆ.

ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಮನೆ, ಕಟ್ಟಡ ಕುಸಿಯುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಮಳೆಗಾಲದಲ್ಲೇ 6 ಮನೆಗಳು ಕುಸಿತ ಕಂಡಿವೆ. ಬಿಬಿಎಂಪಿ ಇಷ್ಟೆಲ್ಲ  ಕೆಲಸ ಮಾಡುತ್ತಿರುವ ನಡುವೆಯೂ ಬೆಂಗಳೂರಿನ ಕಮಲಾನಗರದಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ವಾಲಿದ್ದು, ಇದನ್ನು ಬುಧವಾರ ತೆರವು ಮಾಡಲಾಗಿದೆ. ಜತೆಗೆ ಪಕ್ಕದಲ್ಲಿದ್ದ ಮನೆಯನ್ನೂ ಬೀಳಿಸಲಾಗಿದೆ. ಇವುಗಳಲ್ಲಿದ್ದ ವಸ್ತುಗಳನ್ನು ತೆಗೆದುಕೊಳ್ಳಲು ಆಗದಂಥ ಸ್ಥಿತಿ ಜನರಿಗಾಗಿದೆ. ಅಂದರೆ ಮನೆ ಬಳಕೆ ವಸ್ತುಗಳಾದ ಟಿವಿ, ಫ್ರಿಡ್ಜ್, ವಾಷಿಂಗ್‌ ಮೆಷಿನ್‌, ಬೆಳ್ಳಿ, ಬಂಗಾರ, ಬಟ್ಟೆ ಬರೆ ಇತ್ಯಾದಿ ವಸ್ತುಗಳನ್ನೂ ತೆಗೆದುಕೊಳ್ಳಲಾಗಿಲ್ಲ. ಈ ಮನೆಯ ಮಾಲಕರು ಮತ್ತು ಬಾಡಿಗೆದಾರರು ಮನೆಯ ಜತೆಗೆ ವಸ್ತುಗಳನ್ನೂ ಕಳೆದುಕೊಂಡು ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ.

ಬಿಬಿಎಂಪಿ ಸಮೀಕ್ಷೆ ನಡೆಸಿರುವ ಪ್ರಕಾರ, 175 ಮನೆಗಳು ಶಿಥಿಲಾವಸ್ಥೆಯಲ್ಲಿವೆ. ಈ ಎಲ್ಲ ಮನೆಗಳ ಮಾಲಕರಿಗೂ ಬಿಬಿಎಂಪಿ ಕಡೆಯಿಂದ ನೋಟಿಸ್‌ ನೀಡಲಾಗಿದೆ. ವಿಶೇಷವೆಂದರೆ, ಬುಧವಾರ ನೆಲಸಮ ಮಾಡಲಾಗಿರುವ ಕಟ್ಟಡವೂ ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ಎಂದೇ ಗುರುತಿಸಲಾಗಿತ್ತು.

ಇದನ್ನೂ ಓದಿ:ರಾಜನಾಥ ಸಿಂಗ್ ಗೆ ಸುಳ್ಳು ಹೇಳಲು ಹೇಳಿಕೊಟ್ಟಿದ್ಯಾರು: ಓವೈಸಿ

ಇದೆಲ್ಲ ಸರಿ, ಶಿಥಿಲಾವಸ್ಥೆಯಲ್ಲಿವೆ ಎಂಬ ಕಾರಣಕ್ಕಾಗಿ ಬಿಬಿಎಂಪಿ ನೋಟಿಸ್‌ ಕೊಟ್ಟು ತೆರವಿಗೆ ಸೂಚನೆ ನೀಡಿದೆ. ಈ ಮನೆಗಳನ್ನು ತೆರವು ಮಾಡಲಾಗುತ್ತದೆ. ಆದರೆ ಇದರಲ್ಲಿ ವಾಸವಿದ್ದವರ ಕಥೆ ಮಾತ್ರ ಶೋಚನೀಯ ಎಂಬಂತೆ ಆಗುತ್ತದೆ. ಈಗಾಗಲೇ ಬೆಂಗಳೂರಿನಲ್ಲಿ ಆರು ಮನೆಗಳು ಬಿದ್ದಿದ್ದು, ಇದರಲ್ಲಿದ್ದವರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಮಾಲಕರ ಜತೆಗೆ ಈ ಮನೆಗಳಲ್ಲಿ ಇದ್ದ ಬಾಡಿಗೆದಾರರೂ ಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ರಾಜ್ಯ ಸರಕಾರ ಅಥವಾ ಬಿಬಿಎಂಪಿ ಮನೆ ಕಳೆದುಕೊಂಡವರಿಗೆ ಕೊಂಚವಾದರೂ ಪರಿಹಾರ ನೀಡುವ ಕೆಲಸ ಮಾಡಬೇಕು. ಬಾಡಿಗೆದಾರರಿಗೂ ಒಂದಷ್ಟು ಪರಿಹಾರ ಸಿಗುವಂತೆ ಆಗಬೇಕು. ಸೂರು ಮತ್ತು ಮನೆಯಲ್ಲಿದ್ದ ಎಲ್ಲ ವಸ್ತುಗಳನ್ನು ಕಳೆದುಕೊಂಡವರು, ಹೊಸದಾಗಿಯೇ ಬದುಕು ಶುರು ಮಾಡಬೇಕಾಗುತ್ತದೆ. ಅಂದರೆ ಸಣ್ಣ ಪುಟ್ಟ ವಸ್ತುಗಳಿಂದ ಹಿಡಿದು, ಎಲ್ಲವನ್ನೂ ಖರೀದಿ ಮಾಡಬೇಕಾಗುತ್ತದೆ. ಮೊದಲೇ ಮನೆ ಕಳೆದುಕೊಂಡವರಿಗೆ ಮನೆಗೆ ಬೇಕಾದ ಎಲ್ಲ ವಸ್ತುಗಳು ಮತ್ತು ಮನೆಯನ್ನು ಪುನರ್‌ನಿರ್ಮಾಣ ಮಾಡುವ ಒತ್ತಡ ಎದುರಾಗುತ್ತದೆ. ಇಂಥವರನ್ನು ಮನಸ್ಸಿನಲ್ಲಿ ಇರಿಸಿಕೊಂಡು ಪರಿಹಾರ ನೀಡುವಂತಾದರೆ ಕೊಂಚವಾದರೂ ಸಹಾಯವಾದಂತೆ ಆಗುತ್ತದೆ. ಇದರ ಜತೆಗೆ ಶಿಥಿಲಾವಸ್ಥೆಯಲ್ಲಿರುವ ಮನೆಗಳನ್ನು ತ್ವರಿತಗತಿಯಲ್ಲಿ ಪತ್ತೆ ಮಾಡಿ, ಪುನರ್ವಸತಿಗೆ ಅವಕಾಶ ಮಾಡಿಕೊಡಬೇಕು.

ಇದು ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಲ್ಲ, ಇಡೀ ರಾಜ್ಯಕ್ಕೇ ಅನ್ವಯಿಸುತ್ತದೆ. ಎಲ್ಲೇ ಆಗಲಿ ಮನೆ ಕಳೆದುಕೊಂಡವರಿಗೆ ಸೂರು ಕಟ್ಟಿಸಿಕೊಡುವ ಕೆಲಸವಾಗಬೇಕು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.