ಮಳೆಯ ಆರ್ಭಟ: ನೆರವಿಗೆ ಧಾವಿಸಲಿ ಸರ್ಕಾರ


Team Udayavani, Aug 18, 2018, 6:00 AM IST

3.jpg

ಕೊಡಗಿನಲ್ಲಿ ಸುರಿಯುತ್ತಿರುವ ಮಳೆ ರಕ್ಷಣಾ ಕಾರ್ಯಕ್ಕೂ ಅನುವು ಮಾಡಿಕೊಡುತ್ತಿಲ್ಲ. ಆದರೂ, ಸೇನೆಯ 60, ನೌಕಾಪಡೆಯ 73 ಯೋಧರು ರಕ್ಷಣಾ ಕೆಲಸದಲ್ಲಿ  ತೊಡಗಿದ್ದಾರೆ.

ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು ಕೊಡಗು ಸೇರಿದಂತೆ ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಹಾನಿಯಾಗಿದೆ. ಸರ್ಕಾರದ ಮಾಹಿತಿ ಪ್ರಕಾರವೇ ಕೊಡಗು ಜಿಲ್ಲೆಯೊಂದರಲ್ಲೇ 98 ಕಿ.ಮೀ.ಗಳಷ್ಟು ರಸ್ತೆ, 58 ಸೇತುವೆಗಳು, 243 ಸರ್ಕಾರಿ ಕಟ್ಟಡಗಳು, 3006 ವಿದ್ಯುತ್‌ ಕಂಬಗಳು ಮತ್ತು ಟ್ರಾನ್ಸ್‌ಫಾರ್ಮರ್‌ಗಳು ನೆಲಕ್ಕುರುಳಿವೆ. ಇದುವರೆಗೆ ಆರು ಮಂದಿ ಸಾವನ್ನಪ್ಪಿದ್ದು, 845 ಮನೆಗಳಿಗೆ ಹಾನಿಯಾಗಿದೆ. ಕೆಲವೆಡೆಗಳಲ್ಲಿ ಗುಡ್ಡ ಕುಸಿತ, ರಸ್ತೆ ಸಂಪರ್ಕ ಕಡಿತವಾಗಿರುವುದರಿಂದ ಜನರ ಓಡಾಟಕ್ಕೂ ತೊಂದರೆಯಾಗಿರುವ ಬಗ್ಗೆ ವರದಿಯಾಗಿದೆ. ಇದಷ್ಟೇ ಅಲ್ಲ, ಕೆಲವು ಪ್ರದೇಶಗಳಲ್ಲಿ ಮನೆಯೊಳಗಡೆ ಸಿಲುಕಿರುವ ಮಂದಿ ಎರಡು ದಿನಗಳಾದರೂ ಹೊರಗೆ ಬಾರದಿರುವಷ್ಟು ಸಮಸ್ಯೆ ಸೃಷ್ಟಿಯಾಗಿದೆ. ಈ ಪ್ರಮಾಣದ ಮಳೆಯಾಗುತ್ತಿರುವುದರಿಂದ ಅಕ್ಷರಶಃ ಕೊಡಗಿನ ಜನ ದಿಕ್ಕೆಟ್ಟಿದ್ದಾರೆ. 600ಕ್ಕೂ ಹೆಚ್ಚು ಮಂದಿ ನೆರವಾಗಾಗಿ ಅಂಗಲಾಚುತ್ತಿದ್ದಾರೆ. ಕೆಲವೆಡೆ ಭೂಮಿಯೇ ಕೊಚ್ಚಿ ಹೋಗಿದ್ದು ಇದರಲ್ಲಿ ಜನರೂ ಸಿಲುಕಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಸಾವು ನೋವಿನ ಪ್ರಮಾಣ ಹೆಚ್ಚಾಗುವ ಸಂಭವವಿದೆ. 

ಕೊಡಗು ಜಿಲ್ಲೆಯ ಮಾಂದಲ್‌ಪಟ್ಟಿ, ಮಕ್ಕಂದೂರು, ಹಾಲೇರಿ, ಗಾಳಿಬೀಡು, ಜೋಡಪಾಲ, ಹಟ್ಟಿಹೊಳೆ, ಮೇಘತ್ತಾಳ್‌, ತಂತಿಪಾತ, ಮುಕ್ಕೊಟ್ಲು ಬೆಟ್ಟ ಪ್ರದೇಶದಲ್ಲಿರುವ ಜನ ನೆರವಿಗಾಗಿ ಮೊರೆ ಇಡುತ್ತಿದ್ದಾರೆ. ಮಕ್ಕಂದೂರು ಆಸುಹಾಸಿನ ಗ್ರಾಮಗಳಿಗೆ ಗ್ರಾಮಗಳೇ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸರ್ಕಾರವೂ ಈಗಾಗಲೇ ಕೊಡಗು ಜಿಲ್ಲೆಯ ಸಂತ್ರಸ್ತರ ನೆರವಿಗೆ ಧಾವಿಸಿರುವುದು ಸಮಾಧಾನದ ಸಂಗತಿ. ಈಗಾಗಲೇ ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್‌ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ. ಇವರು ಅಧಿಕಾರಿಗಳ ಜತೆ ಮಾತುಕತೆಯನ್ನೂ ನಡೆಸಿದ್ದಾರೆ. ಆದರೆ, ಪರಿಷತ್‌ ಸದಸ್ಯೆ ವೀಣಾ ಅಚ್ಚಯ್ಯ ಅವರೇ ತಮ್ಮ ಗ್ರಾಮದ ಜನರ ರಕ್ಷಣೆಗಾಗಿ ಮೊರೆ ಇಟ್ಟಿರುವುದು ಮಳೆಯ ತೀವ್ರತೆಯನ್ನು ತೋರಿಸುತ್ತದೆ. 

ಆದರೆ ಕೊಡಗಿನಲ್ಲಿ ಸುರಿಯುತ್ತಿರುವ ಮಳೆ ರಕ್ಷಣಾ ಕಾರ್ಯಕ್ಕೂ ಅನುವು ಮಾಡಿಕೊಡುತ್ತಿಲ್ಲ. ಆದರೂ, ಸೇನೆಯ 60, ನೌಕಾಪಡೆಯ 73 ಯೋಧರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇದರಲ್ಲಿ ನೌಕಾಪಡೆಯ 12 ತಜ್ಞ ಡೈವರ್‌ಗಳೂ° ಬಳಸಿಕೊಳ್ಳಲಾಗಿದೆ. ರಾಷ್ಟ್ರೀಯ ವಿಪತ್ತು ನಿಯಂತ್ರಣ ಪ್ರಾಧಿಕಾರದ 31 ಸಿಬ್ಬಂದಿ, ರಾಜ್ಯ ವಿಪತ್ತು ನಿಯಂತ್ರಣ ಪ್ರಾಧಿಕಾರದ 30 ಸಿಬ್ಬಂದಿಯೂ ರಕ್ಷಣಾ ಕಾರ್ಯಾಚರಣೆಗೆ ಕೈಜೋಡಿಸಿದ್ದಾರೆ. ನಾಗರಿಕರ ರಕ್ಷಣೆ(ಕ್ಯೂಆರ್‌ಟಿ), ಅಗ್ನಿಶಾಮಕ ದಳದ 200 ಸಿಬ್ಬಂದಿಯೂ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.  

ಇದುವರೆಗಿನ ಮುಂಗಾರು ಮಳೆಯಿಂದಾಗಿ ರಾಜ್ಯದಲ್ಲಿ ಹೆಚ್ಚೇ ಅನಾಹುತಗಳು ಸಂಭವಿಸಿವೆ. ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ 7,500 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಆಸ್ತಿ-ಪಾಸ್ತಿ ನಷ್ಟವಾಗಿದೆ. ಇದು 12 ರಿಂದ 15 ಸಾವಿರ ಕೋಟಿ ರೂ.ಗಳಿಗೂ ಹೆಚ್ಚುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಕೊಡಗು, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ. ಭಾರೀ ಪ್ರಮಾಣದಲ್ಲಿ ಮಳೆಯಾಗದಿದ್ದರೂ ಕೇರಳದಲ್ಲಾಗುತ್ತಿರುವ ಮಳೆಯಿಂದಾಗಿ ಮೈಸೂರು ಭಾಗದಲ್ಲಿ ಕಾವೇರಿ ಮತ್ತು ಕಪಿಲಾ ನದಿಗಳು ಉಕ್ಕಿ ಹರಿಯುತ್ತಿದ್ದು, ಇದರಿಂದಲೂ ಹೆಚ್ಚು ನಷ್ಟವುಂಟಾಗಿದೆ. ಆದರೆ ಈ ಭಾಗದಲ್ಲಿ ಎಷ್ಟು ನಷ್ಟವಾಗಿದೆ ಎಂದು ಹೇಳಲು ಸಾಧ್ಯವಾಗುತ್ತಿಲ್ಲ. ಈ ಏಳು ಜಿಲ್ಲೆಗಳಲ್ಲಿ ಒಂದೂವರೆ ಸಾವಿರ ಮನೆಗಳಿಗೆ ಹಾನಿಯಾಗಿದ್ದು, ನೂರಾರು ಮನೆಗಳೂ ಸಂಪೂರ್ಣ ಕುಸಿದಿವೆ. ಹೀಗಾಗಿ ನಷ್ಟದ ಪ್ರಮಾಣ 15 ಸಾವಿರ ಕೋಟಿ ರೂ.ಗಳಿಗೆ ಮುಟ್ಟಬಹುದು ಎಂದು ಅಂದಾಜಿಸಲಾಗಿದೆ. 

ಈ ಪ್ರಮಾಣದ ಅನಾಹುತ ಸಂಭವಿಸಿದಾಗ ಸರ್ಕಾರಗಳು ಅತಿ ಬೇಗನೇ ನೆರವಿಗೆ ಧಾವಿಸಬೇಕು. ಈಗಾಗಲೇ ಕೊಡಗು ಸೇರಿದಂತೆ ಉಳಿದ ಭಾಗಗಳ ಮಳೆ ಅನಾಹುತಗಳ ಬಗ್ಗೆ ವರದಿ ಪಡೆದಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಕ್ಷಣಕ್ಕಾಗಿ 200 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಇದರ ಜತೆಯಲ್ಲಿ ಜಿಲ್ಲೆಗಳ ಕಡೆಯಿಂದ ಮಳೆ ಹಾನಿ ವರದಿಯನ್ನು ತರಿಸಿಕೊಂಡು ಅತಿ ಶೀಘ್ರದಲ್ಲೇ ಮತ್ತಷ್ಟು ಹಣ ನೀಡುವ ಮೂಲಕ ನೆರವಿಗೆ ಧಾವಿಸಬೇಕಾಗಿದೆ. 

Ad

ಟಾಪ್ ನ್ಯೂಸ್

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

1

ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್‌

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water

Editorial: ಜಲಗಣತಿ ದೇಶದ ನೀರಾವರಿ ಸಮಸ್ಯೆಗೆ ಪರಿಹಾರ ಸೂಚಿಸಲಿ

9

Editorial: ಗ್ರಾಮೀಣ ಸರಕಾರಿ ಸಾರಿಗೆ ವ್ಯವಸ್ಥೆ ಶೀಘ್ರ ಸುಧಾರಣೆಯಾಗಲಿ

1

ನಗರ ಭಾಗದಲ್ಲಿ ಎಸ್‌ಟಿಪಿಗಳ ಅನುಷ್ಠಾನಕ್ಕೆ ನಿರ್ದೇಶನ ಅಗತ್ಯ

heart attack

ಯುವ ಹೃದಯಗಳಿಗೆ ಆಘಾತ ಪ್ರಾಮಾಣಿಕ ಅಧ್ಯಯನ ನಡೆಯಲಿ

China

ಭಾರತದ ಪ್ರಗತಿಯ ನಾಗಾಲೋಟ ತಡೆಯಲು ಚೀನದಿಂದ ಷಡ್ಯಂತ್ರ

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

Arrested: ಕರೆ ಮಾಡಲು ಕೊಟ್ಟ ಮೊಬೈಲ್‌ ವಾಪಸ್‌ ಕೇಳಿದ್ದಕ್ಕೆ ಹಲ್ಲೆ: ಬಂಧನ

Arrested: ಕರೆ ಮಾಡಲು ಕೊಟ್ಟ ಮೊಬೈಲ್‌ ವಾಪಸ್‌ ಕೇಳಿದ್ದಕ್ಕೆ ಹಲ್ಲೆ: ಬಂಧನ

ರಸ್ತೆಯಲ್ಲಿ ಕಾರು ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ

ರಸ್ತೆಯಲ್ಲಿ ಕಾರು ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ

Bengaluru: ವರದಕ್ಷಿಣೆ‌: ಡಿವೈಎಸ್ಪಿ ವಿರುದ್ಧ ಕೇಸ್‌

Bengaluru: ವರದಕ್ಷಿಣೆ‌: ಡಿವೈಎಸ್ಪಿ ವಿರುದ್ಧ ಕೇಸ್‌

High Court: ಗಾರ್ಡನ್‌ ಅಲ್ಲ, ಫ್ಲೆಕ್ಸ್‌ ಸಿಟಿ: ಹೈಕೋರ್ಟ್‌ ಚಾಟಿ

High Court: ಗಾರ್ಡನ್‌ ಅಲ್ಲ, ಫ್ಲೆಕ್ಸ್‌ ಸಿಟಿ: ಹೈಕೋರ್ಟ್‌ ಚಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.