ರಾಜಸ್ಥಾನ ಬಿಕ್ಕಟ್ಟು: ಬದಲಾಗಲಿ ಮನಸ್ಥಿತಿ


Team Udayavani, Jul 16, 2020, 7:56 AM IST

ರಾಜಸ್ಥಾನ ಬಿಕ್ಕಟ್ಟು: ಬದಲಾಗಲಿ ಮನಸ್ಥಿತಿ

ಕೋವಿಡ್‌-19 ಸಮಯದಲ್ಲಿ ರಾಜಸ್ಥಾನ ರಾಜಕಾರಣದಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟು ನಿಜಕ್ಕೂ ಬೇಸರ ಹುಟ್ಟಿಸುವಂಥದ್ದು. ಅಶೋಕ್‌ ಗೆಹಲೋಟ್ ‌ಮತ್ತವರ ತಂಡ ಸಚಿನ್‌ ಪೈಲಟ್‌ ಅವರನ್ನು ಉಪಮುಖ್ಯಮಂತ್ರಿ ಸ್ಥಾನದಿಂದ, ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಲು ಸಫ‌ಲವಾಗಿದೆ. 2014ರಿಂದ ರಾಜಸ್ಥಾನದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬೇರುಮಟ್ಟದಲ್ಲಿ ಗಟ್ಟಿಯಾಗಿಸಿದ ಸಚಿನ್‌ ಪೈಲಟ್‌, 2018ರಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೇರಲು ಪ್ರಮುಖವಾಗಿ ಕಾರಣವಾದವರು.

ಆ ಸಮಯದಲ್ಲೇ ಅವರನ್ನು ಮುಖ್ಯಮಂತ್ರಿಯಾಗಿಸಬೇಕು ಎಂಬ ಧ್ವನಿಗಳು ಜೋರಾಗಿದ್ದವು. ಆದರೆ ಸಿಎಂ ಕುರ್ಚಿ ಗೆಹಲೋಟ್‌ ಅವರ ಪಾಲಾಯಿತು. ಈಗ ಗೆಹಲೋಟ್‌ ಅವರಿಗೆ ಪಕ್ಷದಲ್ಲಿ ಪ್ರಬಲ ಪ್ರತಿಸ್ಪರ್ಧಿಯಾಗಿರುವವರೆಂದರೆ ಸಚಿನ್‌ಪೈಲಟ್‌ ಮಾತ್ರ, ಹೀಗಾಗಿ ಏನಕೇನ ಅವರನ್ನು ಪಕ್ಷದಿಂದ ದೂರಮಾಡಬೇಕೆಂಬ ಇರಾದೆ ಮುಖ್ಯಮಂತ್ರಿಗಳಿಗಿದೆ ಎಂಬ ವಾದವೂ ಇದೆ.  ಇದೇ ವೇಳೆಯಲ್ಲೇ ಸಚಿನ್‌ ಪೈಲಟ್‌ ತಾವು ಮಾತ್ರ ಕಾಂಗ್ರೆಸ್‌ ಬಿಡುವುದಿಲ್ಲವೆಂದು ಹೇಳಿದ್ದಾರೆ. ಸಚಿನ್‌ ನಿಜಕ್ಕೂ ಪಕ್ಷದಲ್ಲೇ ಇರುತ್ತಾರಾ, ಬಿಜೆಪಿ ಸೇರುತ್ತಾರಾ ಅಥವಾ ಸ್ವಂತ ಪಕ್ಷ ಸ್ಥಾಪಿಸುತ್ತಾರಾ ಎನ್ನುವುದು ಬೇರೆ ವಿಷಯ. ಆದರೆ ಅದೇಕೆ ಕಾಂಗ್ರೆಸ್‌ ತನ್ನ ಕಾಲಿಗೆ ತಾನೇ ಕೊಡಲಿ ಪೆಟ್ಟು ಕೊಟ್ಟುಕೊಳ್ಳುತ್ತಿದೆ ಎನ್ನುವುದು ಮಾತ್ರ ಅಚ್ಚರಿ ಹುಟ್ಟಿಸುವ ಸಂಗತಿ. ಮಧ್ಯಪ್ರದೇಶದಲ್ಲಿ ಕಮಲ್‌ನಾಥ್‌ ಬೆನ್ನಿಗೆ ನಿಂತ ಕಾಂಗ್ರೆಸ್‌ ಹೈಕಮಾಂಡ್‌, ಪಕ್ಷ ಅಧಿಕಾರ ಕ್ಕೇರಲು ಹಗಲಿರುಳು ಶ್ರಮಿಸಿದ ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾರನ್ನು ದೂರ ಮಾಡಿಕೊಂಡಿತು.

ಈಗ ರಾಜಸ್ಥಾನದಲ್ಲಿ ಗೆಹಲೋಟ್‌ ಅವರ ಮಾತನ್ನಷ್ಟೇ ಕೇಳಿಸಿಕೊಳ್ಳುತ್ತಾ ಪೈಲಟ್‌ ಅವರನ್ನು ಅವಗಣಿಸುತ್ತಿದೆ. ಎಲ್ಲವೂ ತಹಬದಿಗೆ ಬರಬಹುದು ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರಾದರೂ ಪರಿಸ್ಥಿತಿ ಯಾವಾಗ ತಿರುವುಮುರುವಾಗುತ್ತದೋ ತಿಳಿಯದು. ಕಾಂಗ್ರೆಸ್‌ನ ಈ ತಪ್ಪುಹೆಜ್ಜೆಗಳ ಬಗ್ಗೆ ಈಗ ಖುದ್ದು ಆ ಪಕ್ಷದ ಕೆಲವು ಹಿರಿಯ ನಾಯಕರೂ ಸಹ ಎಚ್ಚರಿಕೆ ನೀಡಲಾರಂಭಿಸಿದ್ದಾರೆ. ದೇಶಾದ್ಯಂತ ಕಾಂಗ್ರೆಸ್‌ ಪಕ್ಷದ ಸ್ಥಿತಿ ಹೇಳಿಕೊಳ್ಳುವಂತೇನೂ ಇಲ್ಲ. ಯಾವ ರಾಜ್ಯಗಳಲ್ಲಿ ಆ ಪಕ್ಷ ಬಹಳ ಸಮಯದಿಂದ ಅಧಿಕಾರದಿಂದ ದೂರವಿದೆಯೋ ಅಲ್ಲಿ ಅದರ ಪರಿಸ್ಥಿತಿ ಹದಗೆಟ್ಟಿದೆ. ಇನ್ನು ಯಾವ ರಾಜ್ಯದಲ್ಲಿ ಅದು ಯಾವುದೇ ರೀತಿಯಲ್ಲಿ ಅಧಿಕಾರದಲ್ಲಿ ದೆಯೋ ಅಲ್ಲಿಯೂ ಅದಕ್ಕೆ ಸಂಕಷ್ಟವಿದೆ. ಇಂಥ ರಾಜ್ಯಗಳಲ್ಲಿ ಸರಕಾರವನ್ನು ಉಳಿಸುವುದು, ನಾಯಕರನ್ನು ಹಿಡಿದಿಡುವುದೇ ಅದಕ್ಕೆ ಬೃಹತ್‌ ಸವಾಲಾಗಿಬಿಟ್ಟಿದೆ. ಕಾಂಗ್ರೆಸ್‌ ನಾಯಕರ ರಾಜೀನಾಮೆಗಳು ಈಗಾಗಲೇ ಅನೇಕ ರಾಜ್ಯಗಳಲ್ಲಿ ರಾಜ್ಯಸಭೆ ಚುನಾವಣೆಯ ಸಮೀಕರಣವನ್ನೇ ಹಾಳು ಮಾಡಿದ್ದನ್ನು ನೋಡಿದ್ದೇವೆ.

2014ರಿಂದ ದೇಶದಲ್ಲಿ ರಾಜಕೀಯ ಶಕ್ತಿ ಸಮೀಕರಣದ ಸ್ವರೂಪವೇ ಬದಲಾಗಿದೆ. ಇವಿಷ್ಟೂ ವರ್ಷಗಳಲ್ಲಿ ಬಿಜೆಪಿ ಸೇರಿದಂತೆ ಕೆಲವು ಪಕ್ಷಗಳಲ್ಲಿ ಯುವ ನಾಯಕತ್ವಕ್ಕೆ ಬಲ ತುಂಬುವ ಕೆಲಸಗಳಾಗುತ್ತಿವೆ. ಆದರೆ ಕಾಂಗ್ರೆಸ್‌ ಮಾತ್ರ, ಏಕೆ ತನ್ನಲ್ಲಿನ ಯುವ ನಾಯಕರನ್ನು ಹೀಗೆ ನಡೆಸಿಕೊಳ್ಳುತ್ತಿದೆಯೋ ತಿಳಿ ಯದು. ಪಕ್ಷದಲ್ಲಿ ಬೇರೆ ಯಾವ ಯುವ ನಾಯಕತ್ವವೂ ಪರ್ಯಾಯವಾಗಿ ಬೆಳೆಯ ಬಾರದೆಂಬ ಕಾರಣಕ್ಕೇನು?, ಅಲ್ಲ ಎನ್ನುವುದು ಉತ್ತರವಾಗಿದ್ದರೆ ಈ ವಿಚಾರದಲ್ಲಿ ಕಾಂಗ್ರೆಸ್‌ ಈಗಲೇ ಎಚ್ಚೆತ್ತುಕೊಳ್ಳುವುದು ಒಳಿತು.

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.