ಸಿಡಿ ಪ್ರಕರಣ ಶೀಘ್ರ ಇತ್ಯರ್ಥವಾಗಲಿ


Team Udayavani, Mar 12, 2021, 6:40 AM IST

ಸಿಡಿ ಪ್ರಕರಣ ಶೀಘ್ರ ಇತ್ಯರ್ಥವಾಗಲಿ

ರಾಜ್ಯ ಮತ್ತು ರಾಷ್ಟ್ರ  ಮಟ್ಟದಲ್ಲಿ  ತಲ್ಲಣ ಉಂಟು ಮಾಡಿರುವ ಸಿಡಿ ಪ್ರಕರಣ ಈಚೆಗೆ ರಾಜಕೀಯ ಮತ್ತು ರಾಜಕಾರಣಿಗಳ ಬಗ್ಗೆ ಸಮಾಜದಲ್ಲಿ ಅಸಹ್ಯ ಹುಟ್ಟಿಸುವಂತೆ ಮಾಡಿರುವುದಂತೂ ಸತ್ಯ. ಹಲವು ತಿರುವುಗಳನ್ನು ಪಡೆದುಕೊಂಡ ಪ್ರಕರಣ ಈಗ ತನಿಖೆಯ ಮಟ್ಟಕ್ಕೆ ಮುಟ್ಟಿದೆ.

ಗೌರವಯುತ ಸಮಾಜದಲ್ಲಿ  ಸಾರ್ವಜನಿಕ ಜೀವನದಲ್ಲಿ ಇರುವವರು ಹೇಗೆ ನಡೆದುಕೊಂಡರೂ ಅದು ಸಮಾಜದ ಮೇಲೆ ಪರಿಣಾಮ ಬೀರುತ್ತದೆ. ಇತ್ತೀಚೆಗೆ ಬಿಡುಗಡೆಯಾಗಿರುವ ಅಶ್ಲೀಲ ವೀಡಿಯೋ ಪ್ರಕರಣ ಹಾಗೂ ಇನ್ನಷ್ಟು ಸಿಡಿಗಳಿವೆ ಎಂಬ ಬೆದರಿಕೆಗಳನ್ನು ಗಮನಿಸುತ್ತಾ ಹೋದರೆ, ನಮ್ಮ ಸಾರ್ವಜನಿಕ ಜೀವನ ತಳ ಮುಟ್ಟಿದೆ ಎಂದು ಹೇಳಲೇಬೇಕಾಗುತ್ತದೆ. ಇಡೀ ದೇಶದಲ್ಲಿ ಕರ್ನಾಟಕದ ರಾಜಕಾರಣಿಗಳು ಹಾಗೂ ರಾಜಕೀಯ ನಡೆಗಳು ಎಂದಿಗೂ ಆದರ್ಶವಾದುದು ಎಂಬ ಹೆಗ್ಗಳಿಕೆ ಪಡೆದಿತ್ತು. ಇತಿಹಾಸದಲ್ಲಿ ಕರ್ನಾಟಕದ ರಾಜಕಾರಣ ಘನತೆ ತಪ್ಪಿ ಹೆಜ್ಜೆ ಹಾಕಿದ ಪ್ರಸಂಗಗಳು ಭಾರೀ ಅಪರೂಪ. ಆದರೆ ಇಂಥ ಪ್ರಕರಣಗಳು ರಾಜ್ಯದ ಘನತೆಯನ್ನು ಮೂರಾಬಟ್ಟೆ ಮಾಡಿದೆ.

ಈ ಸಿಡಿ ಸಂಪೂರ್ಣ ನಕಲಿಯಾಗಿದೆ ಎಂದು ಪ್ರಕರಣದಲ್ಲಿ ಆರೋಪ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ರಮೇಶ್‌ ಜಾರಕಿಹೊಳಿ ಬಹಿರಂಗವಾಗಿಯೇ ಹೇಳಿದ್ದಾರೆ. ಒಬ್ಬ ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿ ಹೆಣ್ಣಿನ ಅಸಹಾಯಕತೆಯನ್ನು ಬಳಸಿಕೊಂಡು ದುರುಪಯೋಗ ಪಡಿಸಿಕೊಳ್ಳುವುದು ಎಷ್ಟು ಅಪರಾಧವೋ, ಒಬ್ಬ ವ್ಯಕ್ತಿಯನ್ನು ರಾಜಕೀಯವಾಗಿ ತೆರೆಗೆ ಸರಿಸಲು ಅವರ ವಿರುದ್ಧ ಷಡ್ಯಂತ್ರ ರೂಪಿಸಿ ಬಲಿಪಶು ಮಾಡುವುದೂ ಕೂಡ ಅಷ್ಟೇ ಗಂಭೀರ ಅಪರಾಧವಾಗುತ್ತದೆ. ಈಗ ಬಿಡುಗಡೆಯಾಗಿರುವ ವೀಡಿಯೋ ಪ್ರಕರಣದ ತನಿಖೆಗೆ ರಾಜ್ಯ ಸರಕಾರ ಎಸ್‌ಐಟಿ ರಚನೆ ಮಾಡಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಈ ಪ್ರಕರಣವನ್ನು ಸರಕಾರ ಎರಡು ಆಯಾಮಗಳಲ್ಲಿ ತನಿಖೆ ನಡೆಸುವ ಅಗತ್ಯವಿದ್ದು, ಅಧಿಕಾರದಾಸೆ ತೋರಿಸಿ ಮಹಿಳೆಯನ್ನು ದುರುಪಯೋಗ ಪಡಿಸಿಕೊಂಡಿದ್ದಾರೆನ್ನುವ ಆರೋಪ ಹಾಗೂ ರಾಜಕೀಯವಾಗಿ ತೇಜೋವಧೆ ಮಾಡಲು ಷಡ್ಯಂತ್ರ ಮಾಡಿ ನಕಲಿ ಸಿಡಿ ಸೃಷ್ಟಿಸಲಾಗಿದೆ ಎನ್ನುವ ಆರೋಪ. ಎರಡೂ ಬೆಳವಣಿಗೆಗಳು ಅನೈತಿಕತೆಯನ್ನೇ ಬಿಂಬಿಸುತ್ತವೆ.

ಈ ರೀತಿಯ ಪ್ರಕರಣಗಳಲ್ಲಿ  ಪ್ರಾಮಾಣಿಕ ತನಿಖೆಯಾಗಿ ಆದಷ್ಟು ಶೀಘ್ರ ಸತ್ಯಾಂಶ ಹೊರಬರಬೇಕಿದೆ.  ಸಿಡಿ ಪ್ರಕರಣದಿಂದ ರಾಜಕೀಯ ವ್ಯವಸ್ಥೆ ಹಾಗೂ ರಾಜಕಾರಣಿಗಳ ಬಗ್ಗೆ  ಜನರಿಗಿರುವ ಕೀಳು ಭಾವನೆ ಯನ್ನು ಹೊಡೆದೋಡಿಸಲು ಈ ತನಿಖೆ ಅತ್ಯಂತ ಮಹತ್ವದ್ದಾಗಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಕೊಡಿಸುವ ಕೆಲಸ ಮಾಡಿದರೆ, ಅಧಿಕಾರಸ್ಥರು ಅಧಿಕಾರದ ದುರುಪಯೋಗ ಪಡಿಸಿಕೊಳ್ಳುವುದು ಹಾಗೂ ಅಧಿಕಾರದಲ್ಲಿರುವವರ ವಿರುದ್ಧ  ತೇಜೋವಧೆ ಮಾಡಲು ಅನೈತಿಕ ರೀತಿಯಲ್ಲಿ ಷಡ್ಯಂತ್ರ ಮಾಡುವುದಕ್ಕೆ ಪಾಠ ಕಲಿಸಿದಂತಾ

ಗುತ್ತದೆ. ಅಲ್ಲದೇ, ಆಗಿರುವ ಬೆಳವಣಿಗೆ ಬಗ್ಗೆ ಸಾರ್ವಜನಿಕರಲ್ಲಿರುವ ಕುತೂಹಲ, ಗೊಂದಲ, ಅನುಮಾನಗಳಿಗೆ ಉತ್ತರ ಸಿಕ್ಕಂತಾಗುತ್ತದೆ.  ಜತೆ ಜತೆಗೆ ಖಾಸಗಿ ವಿಚಾರಗಳನ್ನು ಮುನ್ನೆಲೆಗೆ ತಂದು ರಾಜಕಾರಣದ ಬೇಳೆ ಬೇಯಿಸಿಕೊಳ್ಳುವ ಬ್ಲಾಕ್‌ವೆುàಲ್‌ ಪ್ರವೃತ್ತಿಗೂ ಕಡಿವಾಣ ಹಾಕುವುದು ಈಗಿನ ತುರ್ತು ಅಗತ್ಯವಾಗಿದೆ.

ಟಾಪ್ ನ್ಯೂಸ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.