ಸಾಲ ಆ್ಯಪ್‌ ಗಳ ಮೇಲಿನ ಕಡಿವಾಣ ಸ್ವಾಗತಾರ್ಹ ಕ್ರಮ


Team Udayavani, Jun 11, 2022, 6:00 AM IST

thumb-5

ಚೀನ ಮೂಲದ ಸಾಲ ನೀಡುವ ಆ್ಯಪ್‌ ಗಳ ಅಕ್ರಮಗಳು ಆಗಾಗ್ಗೆ ಸುದ್ದಿಯಾಗುತ್ತಲೇ ಇವೆ. ಅದರಲ್ಲೂ ಕಡಿಮೆ ಮೊತ್ತದ ಸಾಲ ನೀಡಿ, ಹೆಚ್ಚಿನ ಬಡ್ಡಿದರ ವಿಧಿಸಿ ಗ್ರಾಹಕರನ್ನು ಶೋಷಿಸುವ ಪ್ರಕರಣಗಳಂತೂ ಇತ್ತೀಚಿನ ದಿನಗಳಲ್ಲಿ ತುಸು ಹೆಚ್ಚೇ ಆಗಿವೆ.

ಭಾರತೀಯ ರಿಸರ್ವ್‌ ಬ್ಯಾಂಕ್‌ ಪ್ರಕಾರವೇ ಇಂಥ ಅದೆಷ್ಟೋ ಆ್ಯಪ್‌ ಗಳು ಯಾವುದೇ ಪರ ವಾನಿಗೆಯನ್ನೇ ಪಡೆದಿರುವುದಿಲ್ಲ. ಆದರೂ ಸಾಲ ನೀಡಿ ಜನರಿಗೆ ಕಿರುಕುಳ ನೀಡುವುದಂತೂ ಎಗ್ಗಿಲ್ಲದೆ ಸಾಗಿದೆ.

ಗುರುವಾರವಷ್ಟೇ ತೆಲಂಗಾಣದ ಯುವಕನೊಬ್ಬ ಇಂಥ ಆ್ಯಪ್‌ ಮೂಲಕ ಸಾಲ ಪಡೆದು, ಅವರ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರ ಣಾಗಿದ್ದಾನೆ. ಇತ್ತೀಚಿನ ದಿನಗಳಲ್ಲಿ ಆ್ಯಪ್‌ನವರು ನೀಡುವ ಕಿರುಕುಳದಿಂದ 15 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವಿವಿಧ ರಾಜ್ಯಗಳ ಪತ್ರಿಕಾ ಮೂಲಗಳು ಹೇಳಿವೆ. ಅದರಲ್ಲಿ ಆ್ಯಪ್‌ನವರು ಸಾಲ ಕೊಡುವ ಮುನ್ನ ಗ್ರಾಹಕರ ಮೊಬೈಲ್‌ನ ಸಂಪರ್ಕ ಸಂಖ್ಯೆ ಪಟ್ಟಿ, ಫೋಟೋಗಳು, ಸ್ಥಳ, ಸಂದೇಶ ಇತ್ಯಾದಿ ರಹಸ್ಯ ವಿಷಯಗಳನ್ನು ನೋಡಲು ಅನುಮತಿ ಕೇಳಿ ಪಡೆದಿರುತ್ತಾರೆ. ಅಲ್ಲದೆ ಆರಂಭದಲ್ಲಿ ಒಂದು ರೀತಿಯ ಬಡ್ಡಿ ಹೇಳಿ, ಸಾಲ ಕೊಟ್ಟ ಅನಂತರದಲ್ಲಿ ಬಡ್ಡಿ ಪ್ರಮಾಣ ಹೆಚ್ಚಿಸಿ, ಗ್ರಾಹಕರಿಂದ ಹೆಚ್ಚಿನ ಹಣ ವಸೂಲಿ ಮಾಡಿರುವ ಪ್ರಕರಣಗಳೂ ಸಾಕಷ್ಟಿವೆ.

ಒಂದು ವೇಳೆ ಇವರು ಹೇಳಿದಷ್ಟು ಹಣ ನೀಡದೇ ಹೋದಾಗ ಗ್ರಾಹಕರ ಫೋಟೋಗಳನ್ನು ಕದ್ದು, ಇವುಗಳನ್ನು ಅಸಭ್ಯ ರೀತಿಯಂತೆ ಚಿತ್ರಿಸಿ ಅವುಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಡುವ ಪ್ರಕರಣಗಳೂ ಹೆಚ್ಚಾಗಿವೆ. ಇದರಿಂದಲೇ ಬಹಳಷ್ಟು ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಎಲ್ಲ ಪ್ರಕರಣಗಳನ್ನು ಅರಿತಿರುವ ಆರ್‌ಬಿಐ, ಈಗ ಸಾಲ ನೀಡುವ ಆ್ಯಪ್‌ಗಳ ಮೇಲೆ ಕಠಿನ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಆನ್‌ಲೈನ್‌ ಸಾಲ ವಂಚಕರ ವಿರುದ್ಧ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಎಂಬ ವಿಚಾರದಲ್ಲಿ ನಿಯಮಗಳನ್ನು ರೂಪಿಸುತ್ತಿದ್ದೇವೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಹೇಳಿದ್ದಾರೆ. ಒಂದು ರೀತಿಯಲ್ಲಿ ಆರ್‌ಬಿಐನ ಈ ಕ್ರಮ ಸ್ವಾಗತಾರ್ಹವೇ ಆಗಿದೆ.

ಆ್ಯಪ್‌ನಲ್ಲಿ ಸಾಲ ನೀಡುವ ಮಂದಿ ಏನಾದರೂ ಅಕ್ರಮವಾಗಿ ನಡೆದುಕೊಂಡರೆ ಅಥವಾ ಹೆಚ್ಚು ಕಿರುಕುಳ ಕೊಟ್ಟರೆ ಪೊಲೀಸರಿಗೆ ದೂರು ನೀಡಲು ಅವಕಾಶವಿದೆ. ಆದರೆ ಬಹಳಷ್ಟು ಪ್ರಕರಣಗಳಲ್ಲಿ ಜನ ತಮ್ಮ ಖಾಸಗಿತನ ಬಯಲಾಗುತ್ತದೆ ಎಂಬ ಕಾರಣಕ್ಕೆ ಪೊಲೀಸರಿಗೆ ದೂರು ನೀಡದೆ ಹಾಗೇ ಉಳಿದುಬಿಡುತ್ತಾರೆ. ಇದರಿಂದಾಗಿಯೇ ಸಾಲ ನೀಡುವವರು ಹೆಚ್ಚು ಕಿರುಕುಳ ನೀಡಲು ಸಾಧ್ಯವಾಗುತ್ತಿದೆ.

ಇದಕ್ಕಿಂತ ಮುಖ್ಯವಾದ ಸಂಗತಿ ಎಂದರೆ, ಇಲ್ಲಿ ಆ್ಯಪ್‌ಗಳನ್ನು ದೂರುವುದಕ್ಕಿಂತ, ಸುಲಭವಾಗಿ ಸಾಲ ಕೊಡುತ್ತಾರೆ ಎಂಬ ಕಾರಣಕ್ಕಾಗಿ ಇಂಥ ಆ್ಯಪ್‌ಗಳ ಜಾಲಕ್ಕೆ ಬೀಳದಿರುವುದು ಉತ್ತಮ. ಹಣಕಾಸಿನ ವಿಚಾರದಲ್ಲಿ ಖಾಸಗಿತನ ಉಳಿಸಿಕೊಂಡಷ್ಟು ಒಳ್ಳೆಯದು. ಪ್ರತಿದಿನವೂ ಎಲ್ಲ ಕಡೆಗಳಲ್ಲಿ ಇಂಥ ಸಾಲದ ಆ್ಯಪ್‌ಗಳ ಕುರಿತಾಗಿ ಅಸಂಖ್ಯಾಕ ಜಾಹೀರಾತುಗಳು ಕಾಣಿಸುತ್ತಲೇ ಇವೆ. ಇವುಗಳಿಗೆ ಬಲಿಯಾದರೆ ಕಷ್ಟವಂತೂ ಕಟ್ಟಿಟ್ಟ ಬುತ್ತಿ. ಅಲ್ಲದೆ ಯಾವುದೇ ಆಧಾರವಿಲ್ಲದೆ ಸಾಲ ಕೊಡುತ್ತಾರೆ ಎಂದರೆ ಒಂದೊಮ್ಮೆ ಯೋಚಿಸುವುದು ಉತ್ತಮ. ಗೂಗಲ್‌ ಪ್ಲೇಸ್ಟೋರ್‌ ಮತ್ತು ಆ್ಯಪಲ್‌ ಸ್ಟೋರ್‌ನವರೂ ಇಂಥ ಆ್ಯಪ್‌ಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಒಂದು ವೇಳೆ, ಸಂಶಯ ಬಂದರೆ ಅವುಗಳನ್ನು ಡಿಲೀಟ್‌ ಮಾಡುವಂತಹ ಕೆಲಸವೂ ಆಗಬೇಕು.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.