ವಿದ್ಯಾರ್ಥಿಗಳಿಗೆ ನೆಮ್ಮದಿ ಕೊಡಿ


Team Udayavani, Mar 20, 2019, 12:30 AM IST

e-21.jpg

ಸರ್ಕಾರಿ ವ್ಯವಸ್ಥೆಯೊಳಗೆ ಶಿಕ್ಷಕರ ಸಮೂಹವೇ ದೊಡ್ಡದು. ಸರ್ಕಾರ ಮತ್ತು ಶಿಕ್ಷಕ, ಉಪನ್ಯಾಸಕ ನಡುವಿನ ಸಮಸ್ಯೆ ಪರಿಹಾರದ ಗುದ್ದಾಟಕ್ಕೂ ದೊಡ್ಡ ಇತಿಹಾಸವಿದೆ. ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ 2 ಲಕ್ಷಕ್ಕೂ ಅಧಿಕ ಶಿಕ್ಷಕರು (ಮುಖ್ಯಶಿಕ್ಷಕರು, ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ಚಿತ್ರಕಲಾ ಇತ್ಯಾದಿ) ಸೇವೆ ಸಲ್ಲಿಸುತ್ತಿದ್ದಾರೆ. ಪದವಿಪೂರ್ವ ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಕಾಲೇಜುಗಳಲ್ಲಿ 12 ಸಾವಿರಕ್ಕೂ ಅಧಿಕ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಸಾರ್ವಕಾಲಿಕ ಸಮಸ್ಯೆ ಎಂಬಂತಾಗಿದೆ. ನಿಯಮಗಳಿಗೆ ತಿದ್ದುಪಡಿ ತಂದರೂ ಅನುಷ್ಠಾನಕ್ಕೆ ನೂರಾರು ವಿಘ್ನಗಳು ಎದುರಾಗುತ್ತಿವೆ. ಮೂರು ವರ್ಷಗಳಿಂದ ಇಡೀ ವರ್ಗಾವಣೆ ಪ್ರಕ್ರಿಯೆಯೇ ನನೆಗುದಿಗೆ ಬಿದ್ದಿದೆ. ವರ್ಗಾವಣೆ ಪ್ರಕ್ರಿಯೆ ನಡೆಸಬೇಕೆಂದು ಶಾಲಾ ಶಿಕ್ಷಕರು ಮತ್ತು ಸಂಘ ಎಲ್ಲ ರೀತಿಯ ಆಗ್ರಹ, ಒತ್ತಡ ಸರ್ಕಾರ ಮೇಲೆ ತಂದಿದ್ದರು. ಆದರೂ ವರ್ಗಾವಣೆ ಪ್ರಕ್ರಿಯೆ ಹಳ್ಳಹತ್ತಿದೆ.

ಇನ್ನು, ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಪ್ರತಿ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಗೂ ಮೊದಲೇ ತಮ್ಮ ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು, ಬಗೆಹರಿಸದೇ ಇದ್ದರೆ ಮೌಲ್ಯಮಾಪನ ಬಹಿಷ್ಕರಿಸುತ್ತೇವೆ ಎಂಬ ನೇರ ಎಚ್ಚರಿಕೆ ನೀಡುತ್ತಾ ಬಂದಿದ್ದಾರೆ. ಸರ್ಕಾರ ಸಮಸ್ಯೆ ಬಗೆಹರಿಸುತ್ತೋ ಇಲ್ಲವೋ ಗೊತ್ತಿಲ್ಲ. ಆದರೆ, ವಿದ್ಯಾರ್ಥಿಗಳು ಮತ್ತು ಪಾಲಕ, ಪೋಷಕರಲ್ಲಿ ಭಯ, ಆತಂಕ ಹಾಗೂ ಗೊಂದಲ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಉತ್ತರ ಪತ್ರಿಕೆ ಮೌಲ್ಯಮಾಪನವೇ ಮಾಡದಿದ್ದರೆ ಮುಂದೇನು ಎಂಬುದು ಪ್ರತಿ ವಿದ್ಯಾರ್ಥಿಯ ಪಾಲಕರಲ್ಲೂ ಕಾಡುತ್ತದೆ. ವಿದ್ಯಾರ್ಥಿಗೂ ಈ ಆತಂಕ ಇರುತ್ತದೆ. ಅದು ಅವರ ಪರೀಕ್ಷೆಯ ಮೇಲೂ ಪರಿಣಾಮ ಬೀರುತ್ತದೆ. ಪ್ರಸಕ್ತ ಸಾಲಿನಲ್ಲೂ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕಾರದ ಎಚ್ಚರಿಕೆಯನ್ನು ಈಗಾಗಲೇ ಸರ್ಕಾರದ ಮುಂದೆ ಇಟ್ಟಿದ್ದಾರೆ. ಉಪನ್ಯಾಸಕರ ಪ್ರಮುಖ 20 ಸಮಸ್ಯೆ ಬಗೆಹರಿಸುವ ಯಾವ ಭರವಸೆಯನ್ನು ಈವರೆಗೂ ಸರ್ಕಾರ ನೀಡಿಲ್ಲ. 

2018-19ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ತರಗತಿಯನ್ನು ಅವಧಿಗೂ ಒಂದು ತಿಂಗಳು ಮೊದಲೇ ಆರಂಭಿಸಲಾಗಿತ್ತು. ಅದರಿಂದಾದ ಪ್ರಯೋಜನ ಏನೆಂಬುದು ಈ ಬಾರಿಯ ದ್ವಿತೀಯ ಪಿಯುಸಿ ಫ‌ಲಿತಾಂಶದ ನಂತರವೇ ತಿಳಿಯಬೇಕು. 2019-20ನೇ ಸಾಲಿನ ತರಗತಿಯನ್ನು ಮೇ 2 ಅಥವಾ 6ರಿಂದಲೇ ಆರಂಭಿಸಲು ಇಲಾಖೆ ಹಾಗೂ ಸರ್ಕಾರ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿತ್ತು. ಈ ನಿರ್ಧಾರಕ್ಕೆ ಉಪನ್ಯಾಸಕರ ಸಂಘ ಸಂಪೂರ್ಣ ವಿರೋಧ ವ್ಯಕ್ತಪಡಿಸಿತ್ತು. ಸರ್ಕಾರ ತನ್ನ ನಿಲುವಿನಲ್ಲಿ ಬದಲಾವಣೆ ಮಾಡದಿದ್ದರೆ ಮೌಲ್ಯಮಾಪನ ಬಹಿಷ್ಕರಿಸಿ, ಪ್ರತಿಭಟನೆ ನಡೆಸುತ್ತೇವೆ ಎಂದು ಸಂಘ ಘೋಷಿಸಿದೆ. ಸರ್ಕಾರವೀಗ ಮೇ 20ರಿಂದ ತರಗತಿ ಆರಂಭಿಸಲು ನಿರ್ಧರಿಸಿದೆ. 

ಸರ್ಕಾರ ಮತ್ತು ಉಪನ್ಯಾಸಕರ ಈ ಗುದ್ದಾಟದಲ್ಲಿ ವಿದ್ಯಾರ್ಥಿಗಳು ಮತ್ತು ಅವರ ಪಾಲಕ, ಪೋಷಕರು ಸಂಪೂರ್ಣವಾಗಿ ಕುಗ್ಗಿ ಹೋಗಿದ್ದಾರೆ. ಮೌಲ್ಯಮಾಪನಕ್ಕೆ ಉಪನ್ಯಾಸಕರು ಬಾರದೆ, ಪರ್ಯಾಯ ವ್ಯವಸ್ಥೆಯ ಮೂಲಕ ಮೌಲ್ಯಮಾಪನ ಮಾಡುವುದು ವಿಳಂಬವಾದರೆ  ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಏನು? ವೃತ್ತಿಪರ ಹಾಗೂ ಪದವಿ ಕೋರ್ಸ್‌ಗಳ ಆಯ್ಕೆಗೂ ಇದು ಅಡ್ಡಿಯಾಗಿದೆ. ಸರ್ಕಾರ ಅಥವಾ ಉಪನ್ಯಾಸಕರು ಇದಕ್ಕೆ ಹೊಣೆಯಾಗುತ್ತಾರೇ? ಉಪನ್ಯಾಸಕರ ಎಲ್ಲ ಬೇಡಿಕೆ ಈಡೇರಿಸುವುದು ಕಷ್ಟವಾದರೂ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಲವೊಂದು ಹೊಂದಾಣಿಕೆಯ ನಿರ್ಧಾರವಾದರೂ ಸರ್ಕಾರ ತೆಗೆದುಕೊಳ್ಳಬಹುದಲ್ಲವೇ? 

ಹಾಗೆಯೇ ಉಪನ್ಯಾಸಕರು ಕೂಡ ವಿದ್ಯಾರ್ಥಿಗಳ ತಮ್ಮ ನಿಲುವಿನಲ್ಲಿ ಕೊಂಚ ಬದಲಾವಣೆ ಮಾಡಿಕೊಳ್ಳಬಹುದಲ್ಲವೆ?  ಪ್ರತಿ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದ್ದಂತೆ ಈ ಗೋಳು ತಪ್ಪಿದ್ದಲ್ಲ. ವಿದ್ಯಾರ್ಥಿ, ಪಾಲಕ, ಪೋಷಕರ ನೆಮ್ಮದಿ ಕೆಡವಲು ಸರ್ಕಾರ ಹಾಗೂ ಉಪನ್ಯಾಸಕರೇ ಟೊಂಕಕಟ್ಟಿ ನಿಂತಂತಿದೆ. ಸರ್ಕಾರ ಅಥವಾ ಉಪನ್ಯಾಸಕರು ಪಟ್ಟು ಸಡಿಲಿಸದೇ ಇದ್ದರೆ ಸಮಸ್ಯೆ ಬಗೆಹರಿಯುವುದು ಹೇಗೆ ಮತ್ತು ವಿದ್ಯಾರ್ಥಿಗಳಿಗೆ ನೆಮ್ಮದಿ ನೀಡುವುದು ಯಾರು? ಸಾಮಾಜಿಕ ವ್ಯವಸ್ಥೆಯ ಭಾಗವಾಗಿ ಇಬ್ಬರು ಆತ್ಮಾವಲೋಕನ ಮಾಡಬೇಕಲ್ಲವೇ?

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.