ಭಾಷೆಯ ಹೆಸರಲ್ಲಿ ಹುಡುಗಾಟಿಕೆ ಬೇಡ


Team Udayavani, Mar 31, 2023, 6:01 AM IST

ಭಾಷೆಯ ಹೆಸರಲ್ಲಿ ಹುಡುಗಾಟಿಕೆ ಬೇಡ

ಒಕ್ಕೂಟ ರಾಷ್ಟ್ರದಲ್ಲಿ ಎಲ್ಲ ರಾಜ್ಯಗಳ ಭಾವನೆ, ಆಯಾ ಜನರ ಸಂಸ್ಕೃತಿ, ಆಚಾರ, ವಿಚಾರ, ಭಾಷೆ, ವೈವಿಧ್ಯತೆಗೆ ಪರಸ್ಪರ ಗೌರವ ಕೊಟ್ಟುಕೊಂಡು, ಮುನ್ನಡೆಯುವುದು ಉತ್ತಮವಾದ ಮಾರ್ಗ. ಭಾರತದಂಥ ವೈವಿಧ್ಯಮಯ ದೇಶದಲ್ಲಿ ಎಲ್ಲವೂ ಒಂದೇ ರೀತಿಯಲ್ಲಿರಬೇಕು, ಒಂದೇ ಭಾಷೆ ದೇಶದಲ್ಲಿ ಪ್ರಧಾನವಾಗಿರಬೇಕು ಎಂಬ ಕಲ್ಪನೆಯೇ ಎಲ್ಲೋ ಒಂದು ಕಡೆಯಲ್ಲಿ ತಪ್ಪಾಗಿ ಕಾಣಿಸುತ್ತದೆ.

ಭೌಗೋಳಿಕವಾಗಿ ಭಾರತವನ್ನು ನೋಡುವುದಾದರೆ, ಉತ್ತರ ಭಾರತಕ್ಕಿಂತ ದಕ್ಷಿಣ ಭಾರತವೇ ಸ್ಥಿತಿವಂತ ಪ್ರದೇಶ. ಇಲ್ಲಿನ ಬಹುತೇಕ ರಾಜ್ಯಗಳು ಅಭಿವೃದ್ಧಿಯ ದೃಷ್ಟಿಯಿಂದ ಹೇಳುವುದಾದರೆ, ಉತ್ತರ ಭಾರತದ ರಾಜ್ಯಗಳಿಗಿಂತ ಮುಂದಿವೆ. ಅಲ್ಲದೆ ನಮ್ಮ ತೆರಿಗೆ ಹಣ, ಉತ್ತರ ಭಾರತದ ರಾಜ್ಯಗಳಿಗೆ ಹಂಚಿಕೆಯಾಗುತ್ತಿದೆ. ನಮ್ಮ ಪಾಲಿನ ಹಣ ಬರುತ್ತಿಲ್ಲ ಎಂಬುದು ದಕ್ಷಿಣ ಭಾರತದ ರಾಜ್ಯಗಳ ಆರೋಪ. ಜಿಎಸ್‌ಟಿ ವ್ಯವಸ್ಥೆ ಜಾರಿಯಾದ ಮೇಲಂತೂ ಈ ಸದ್ದು ಇನ್ನಷ್ಟು ಜೋರಾಗಿ ಕೇಳುತ್ತಲೇ ಇದೆ.

ಪರಿಸ್ಥಿತಿ ಹೀಗಿರುವಾಗ ಉತ್ತರ ಮತ್ತು ದಕ್ಷಿಣ ಭಾರತ ರಾಜ್ಯಗಳ ನಡುವೆ ಸಮನ್ವಯ ಹೆಚ್ಚುವ ಕೆಲಸವನ್ನು ಆಳುವ ಸರ್ಕಾರದವರು ಮಾಡಬೇಕು. ಆದರೆ ಕೆಲವೊಮ್ಮೆ ತೆಗೆದುಕೊಳ್ಳುವ ನಿರ್ಧಾರಗಳು ಒಕ್ಕೂಟ ಆಶಯಕ್ಕೆ ವಿರುದ್ಧವಾಗಿರುತ್ತವೆ ಎಂಬುದಕ್ಕೆ ಈಗಿನ “ದಹಿ’ ಪ್ರಕರಣವೇ ಸಾಕ್ಷಿಯಾಗಿದೆ.

ಕೇಂದ್ರ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ(ಎಫ್ಎಸ್‌ಎಸ್‌ಎಐ), ಇತ್ತೀಚೆಗಷ್ಟೇ ಆದೇಶವೊಂದನ್ನು ಹೊರಡಿಸಿ, ಎಲ್ಲ ರಾಜ್ಯಗಳೂ ಮೊಸರು ಪ್ಯಾಕೇಜ್‌ ಮೇಲೆ ಇಂಗ್ಲಿಷ್‌ ಪದ “ಕರ್ಡ್‌’ ಅನ್ನು ತೆಗೆದು ಇದರ ಬದಲಿಗೆ ಹಿಂದಿ ಪದ “ದಹಿ’ಯನ್ನು ಬಳಕೆ ಮಾಡಿ ಎಂದಿತ್ತು. ಇದು ದಕ್ಷಿಣ ರಾಜ್ಯಗಳಲ್ಲಿ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ. ಸುಖಾಸುಮ್ಮನೆ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಹಿಂದಿಯನ್ನು ಏಕೆ ಹೇರಬೇಕು ಎಂಬ ಪ್ರಶ್ನೆಯನ್ನೂ ಸರ್ಕಾರಗಳ ಜತೆಗೆ ಜನಸಾಮಾನ್ಯರೂ ಕೇಳಿದ್ದಾರೆ.

ಕರ್ನಾಟಕದಲ್ಲಿ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ, ಕಾಂಗ್ರೆಸ್‌ ನಾಯಕರು, ಕನ್ನಡ ಸಂಘಟನೆಗಳ ನಾಯಕರು, ತಮಿಳುನಾಡಿನಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌, ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕೂಡ ಈ ಆದೇಶದ ಅಗತ್ಯತೆಯನ್ನೇ ಪ್ರಶ್ನಿಸಿದ್ದಾರೆ.

ಈ ಆಕ್ಷೇಪ ಸರಿಯಾಗಿಯೇ ಇದೆ. ಆಯಾ ರಾಜ್ಯಗಳ ಆಹಾರ ವಸ್ತುಗಳ ಪ್ಯಾಕೇಟ್‌ ಮೇಲೆ ಎದ್ದುಕಾಣುವ ರೀತಿಯಲ್ಲಿ ಆಯಾ ಪ್ರಾದೇಶಿಕ ಭಾಷೆಗಳು ಇರಬೇಕು. ಇದರ ಜತೆಗೆಯಲ್ಲಿ ಪ್ರಾದೇಶಿಕ ಭಾಷೆ ಬರದೇ ಇರುವವರಿಗೆ ಅಥವಾ ಹೊರಗಿನಿಂದ ಬಂದವರಿಗೆ ಇಂಗ್ಲಿಷ್‌ವೊಂದಿದ್ದರೆ ಸಾಕು. ಆದರೆ ದಿಢೀರನೇ ದಹಿ ಎಂಬ ಪದವನ್ನು ಎಳೆತಂದದ್ದು ಏಕೆ ಎಂಬ ಪ್ರಶ್ನೆಯೂ ಉದ್ಭವವಾಗುತ್ತದೆ. ಅಲ್ಲದೆ ಇದರ ಅಗತ್ಯತೆಯೂ ಕೂಡ ಯಾವ ದೃಷ್ಟಿಕೋನದಲ್ಲಿಯೂ ಕಾಣಿಸುವುದಿಲ್ಲ. ಯಾವುದೇ ಭಾಷೆಯನ್ನು ಯಾರ ಮೇಲಾದರೂ ಒತ್ತಾಯಪೂರ್ವಕವಾಗಿ ಹೇರಲು ಹೊರಡುವುದು ಸರಿಯಾದ ನಡೆ ಅಲ್ಲವೇ ಅಲ್ಲ. ಭಾಷೆ ಕಲಿಯುವುದು ಅವರ ಆಸಕ್ತಿಗೆ ಬಿಟ್ಟ ವಿಚಾರ. ಆಯಾ ರಾಜ್ಯಗಳ ಜನ ತಮ್ಮ ಮಾತೃಭಾಷೆಯ ಜತೆಗೆ ಹಿಂದಿಯನ್ನಾದರೂ ಕಲಿಯಲಿ, ಇಂಗ್ಲಿಷ್‌ ಅನ್ನಾದರೂ ಕಲಿಯಲಿ ಅಥವಾ ವಿದೇಶಿ ಭಾಷೆಯನ್ನಾದರೂ ಕಲಿಯಲಿ. ಅದು ಮೊದಲೇ ಹೇಳಿದ ಹಾಗೆ, ಅವರಿಷ್ಟದ ವಿಚಾರವೇ ಹೌದು. ಇದಕ್ಕೆ ಬದಲಾಗಿ, ನೀವು ಇಂಥದ್ದೇ ಭಾಷೆಯನ್ನೇ ಕಲಿಯಿರಿ ಎನ್ನುವುದು ಅಥವಾ ಇಂಥ ಭಾಷೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಹೇಳುವುದು ಸರಿಯಾದ ನಡೆ ಅಲ್ಲವೇ ಅಲ್ಲ. ಅಷ್ಟಕ್ಕೂ ಮೊಸರಿನ ಮೇಲೆ ಹಿಂದಿ ಪದ ದಹಿ ಎಂಬುದು ಏಕೆ ಇರಬೇಕು? ಇದಕ್ಕೆ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರವೇಹೇಳಬೇಕು.

ಏನೇ ಆಗಲಿ ಭಾಷೆಯಂಥ ಸೂಕ್ಷ್ಮ ವಿಚಾರದಲ್ಲಿ ಆಳುವ ಸರಕಾರಗಳು, ಸಂಸ್ಥೆಗಳು ತೀರಾ ಎಚ್ಚರಿಕೆಯಿಂದ ಇರಬೇಕು. ವಿರೋಧ ವ್ಯಕ್ತವಾದ ಮೇಲೆ ಎಫ್ಎಸ್‌ಎಸ್‌ಎಐ ತನ್ನ ಆದೇಶವನ್ನೇನೋ ಹಿಂದಕ್ಕೆ ಪಡೆದಿದೆ. ಆದರೆ ಭಾಷೆ ಕುರಿತಂತೆ ದೇಶಮಟ್ಟದಲ್ಲಿ ಆದ ವಿವಾದ ಏಕತೆಯ ದೃಷ್ಟಿಯಿಂದ ಒಳ್ಳೆಯದು ಅಲ್ಲವೇ ಅಲ್ಲ. ಈ ಬಗ್ಗೆ ಆಲೋಚಿಸಿ ಹೆಜ್ಜೆ ಇಡಬೇಕಾದ ಅಗತ್ಯ ಎಲ್ಲರಲ್ಲೂ ಇದೆ.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

14-editorial

Campaigns: ಪ್ರಚಾರದಲ್ಲಿ ದ್ವೇಷ ಭಾಷಣ: ಸ್ವಯಂ ನಿಯಂತ್ರಣ ಅಗತ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.