ಲಂಕಾ ವಿರುದ್ಧದ ಟೆಸ್ಟ್‌ ಸರಣಿ ಗೆಲುವು ರಮಣೀಯ


Team Udayavani, Mar 15, 2022, 6:00 AM IST

INಲಂಕಾ ವಿರುದ್ಧದ ಟೆಸ್ಟ್‌ ಸರಣಿ ಗೆಲುವು ರಮಣೀಯ

ಕ್ರಿಕೆಟ್‌ನಲ್ಲಿ ಟಿ20 ಪ್ರವೇಶವಾದ ಮೇಲೆ ಟೆಸ್ಟ್‌ ಸರಣಿಗಳ ಮೇಲೆ ಜನರ ಆಸಕ್ತಿ ಕಡಿಮೆಯಾಗಿದೆ ಎಂಬುದು ಸುಳ್ಳಲ್ಲ. ಕೇವಲ ಮೂರ್ನಾಲ್ಕು ಗಂಟೆಗಳಲ್ಲಿ ಮುಗಿದು ಹೋಗುವ ಟಿ20ಯಿಂದಾಗಿ ಒಂದು ರೀತಿಯಲ್ಲಿ ಹೇಳಬೇಕಾದರೆ ಏಕದಿನ ಪಂದ್ಯಗಳ ಮೇಲಿನ ಆಸಕ್ತಿಯೂ ಕಡಿಮೆಯಾಗಿದೆ. ಇಂಥ ಕಾಲದಲ್ಲಿ ಯಾವುದೇ ಕಾರಣಕ್ಕೂ ಟೆಸ್ಟ್‌ ಪಂದ್ಯಗಳು ಬದಿಗೆ ಸರಿಯಬಾರದು. ಕಾಲಕಾಲಕ್ಕೆ ಟೆಸ್ಟ್‌ ಸರಣಿಗಳನ್ನು ಆಯೋಜಿಸುತ್ತಾ ಹೋದರೆ ಪ್ರತಿಯೊಬ್ಬ ಆಟಗಾರ ಕೂಡ ಪಕ್ವವಾಗುತ್ತಾನೆ ಎಂಬುದರಲ್ಲಿ ಸಂದೇಹವಿಲ್ಲ.

ಸೋಮವಾರ ಬೆಂಗಳೂರಿನಲ್ಲಿ ನಡೆದ ಹೊನಲು ಬೆಳಕಿನ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು ಮಣಿಸಿದೆ. ರೋಹಿತ್‌ ಶರ್ಮ ನಾಯಕತ್ವದಲ್ಲಿ ಆಡಿದ ಭಾರತ ತಂಡ ಎಲ್ಲ ವಲಯಗಳನ್ನೂ ಅತ್ಯುತ್ತಮ ಪ್ರದರ್ಶನ ನೀಡಿತು ಎಂದು ನಿಸ್ಸಂದೇಹವಾಗಿ ಹೇಳಬಹುದು. ಇಲ್ಲಿ ಲಂಕಾ ತಂಡ ಕೊಂಚ ದುರ್ಬಲವೆಂದು ಕಂಡು ಬಂದರೂ ಭಾರತೀಯ ಆಟಗಾರರ ಶ್ರೇಷ್ಠ ಪ್ರದರ್ಶನವನ್ನು ತಳ್ಳಿಹಾಕಲು ಸಾಧ್ಯವಿಲ್ಲ.

ರೋಹಿತ್‌ ಶರ್ಮ ಅವರಿಗೆ ಈ ಸರಣಿ ಒಂದು ರೀತಿಯಲ್ಲಿ ಅಗ್ನಿಪರೀಕ್ಷೆಯಂತಿತ್ತು. ಟೆಸ್ಟ್‌ ತಂಡಕ್ಕೆ ಅವರು ಪೂರ್ಣಪ್ರಮಾಣದ ನಾಯಕನಾಗಿ ಆಡಿದ ಮೊದಲ ಸರಣಿ ಇದು. ರೋಹಿತ್‌ ಬ್ಯಾಟ್‌ನಿಂದ ಸಾಕಷ್ಟು ಪ್ರಮಾಣದಲ್ಲಿ ರನ್‌ ಸಿಡಿಯದಿದ್ದರೂ ಅವರ ನಾಯಕತ್ವದ ಗುಣ ಎಲ್ಲರ ಮೆಚ್ಚುಗೆಗೆ ಕಾರಣವಾಯಿತು ಎಂದು ಹೇಳಬಹುದು. ಇಡೀ ಸರಣಿಯಲ್ಲಿ ಯುವ ಆಟಗಾರರು ಮಿಂಚಿದ್ದು ಗಮನಾರ್ಹ. ಶ್ರೇಯಸ್‌ ಅಯ್ಯರ್‌, ಹನುಮ ವಿಹಾರಿ, ರಿಷಭ್‌ ಪಂತ್‌, ಅಕ್ಷರ್‌ ಪಟೇಲ್‌ ಅವರು ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡರು. ಕೆ.ಎಲ್‌. ರಾಹುಲ್‌ ಅವರ ಅನುಪಸ್ಥಿತಿಯೂ ಕಾಡದಂತೆ ಆಡಿದ್ದು ಉತ್ತಮವೆನಿಸಿತು.

ಸರಣಿಯಲ್ಲಿ ಆರಂಭಿಕ ಆಟಗಾರರಿಗಿಂತ ಮಧ್ಯಮ ಕ್ರಮಾಂಕದ ಆಟಗಾರರೇ ಹೆಚ್ಚು ಮಿಂಚಿದ್ದು ವಿಶೇಷ. ಅಂದರೆ ರಿಷಭ್‌ ಪಂತ್‌, ಶ್ರೇಯಸ್‌ ಅಯ್ಯರ್‌ ತಂಡದ ಕಷ್ಟಕಾಲದಲ್ಲೂ ನಾವು ಆಡಬಲ್ಲೆವು ಎಂಬುದನ್ನು ತೋರಿಸಿಕೊಟ್ಟರು. ಅಲ್ಲದೆ ದ್ವಿತೀಯ ಟೆಸ್ಟ್‌ನಲ್ಲಿ ಶ್ರೇಯಸ್‌ ಅಯ್ಯರ್‌ ಅವರು, ಎರಡು ದ್ವಿಶತಕ ಬಾರಿಸಿ, ಈ ಸಾಧನೆ ಮಾಡಿದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೂ ಪಾತ್ರವಾದರು.

ಅತ್ತ ಮೊದಲ ಟೆಸ್ಟ್‌ನಲ್ಲಿ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡರಲ್ಲೂ ಮಿಂಚಿದ್ದು ಜಗತ್ತಿನ ಅಗ್ರ ಶ್ರೇಯಾಂಕದ ಆಲ್‌ರೌಂಡರ್‌ ಜಡೇಜ. ಬ್ಯಾಟಿಂಗ್‌ನಲ್ಲಿ 175 ರನ್‌ ಬಾರಿಸಿದ್ದೂ ಅಲ್ಲದೇ ಬೌಲಿಂಗ್‌ನಲ್ಲಿ 41 ರನ್‌ ನೀಡಿ 5 ವಿಕೆಟ್‌ ತೆಗೆದುಕೊಂಡಿದ್ದು ಬಹುದೊಡ್ಡ ಸಾಧನೆಯಾಯಿತು.

ಅತ್ತ ಬೌಲಿಂಗ್‌ ವಿಭಾಗದಲ್ಲಿ ವೇಗಿ ಬೂಮ್ರಾ ಚೆನ್ನಾಗಿಯೇ ಮಿಂಚಿದರು. ಮೊದಲ ಟೆಸ್ಟ್‌ನಲ್ಲಿ ಸ್ಪಿನ್‌ ಬೌಲಿಂಗ್‌ ವಿಭಾಗ ಗೆಲುವಿಗೆ ವಿಶೇಷ ಕಾಣಿಕೆ ನೀಡಿದರೆ, ಇಲ್ಲಿ ವೇಗಿಗಳು ಮತ್ತು ಸ್ಪಿನ್ನರ್‌ಗಳು ಇಬ್ಬರೂ ಲಂಕಾ ಬ್ಯಾಟರ್‌ ಗಳನ್ನು ಕಾಡಿದರು. ಇದುವರೆಗೆ ಭಾರತ ತವರಿನಲ್ಲಿ ಮೂರು ಬಾರಿ ಪಿಂಕ್‌ ಬಾಲ್‌ ಟೆಸ್ಟ್‌ ಆಡಿದೆ. ವಿಶೇಷವೆಂದರೆ ಮೂರನ್ನೂ ಗೆದ್ದಿದೆ. ಜತೆಗೆ ಇದುವರೆಗೆ ಭಾರತ ತವರಿನಲ್ಲಿ 15 ಟೆಸ್ಟ್‌ ಸರಣಿಗಳನ್ನು ಗೆಲ್ಲುತ್ತಾ ಬಂದಿದೆ. 2012ರಲ್ಲಿ ಇಂಗ್ಲೆಂಡ್‌ ವಿರುದ್ಧ ಸರಣಿ ಸೋತದ್ದೇ ಕೊನೆ.

ಏನೇ ಆಗಲಿ ಟಿ20 ಯುಗದಲ್ಲಿಯೂ ಭಾರತ ತಂಡಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವುದು ಗಮನಾರ್ಹವಾಗಿದೆ. ಇದೇ ಜಯದ ಓಟವನ್ನು ಮುಂದುವರಿಸಿಕೊಂಡು ಹೋಗಲಿ ಎಂಬುದೇ ಎಲ್ಲರ ಹಾರೈಕೆ.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.