ದೇಶದ ಭದ್ರತೆಗೆ ಅಪಾಯ: ಹನಿಟ್ರ್ಯಾಪ್‌ ಜಾಲಕ್ಕೆ ಬೀಳದಿರಿ


Team Udayavani, Aug 5, 2017, 7:30 AM IST

05-anakana-3.jpg

ಸೇನೆಯಂತಹ ಅತ್ಯಂತ ಜವಾಬ್ದಾರಿಯುತ ವಿಭಾಗದಲ್ಲಿರುವವರು ಮೈಯೆಲ್ಲ ಕಣ್ಣಾಗಿರುವುದೇ ಹನಿಟ್ರ್ಯಾಪ್‌ ತಡೆವ ದಾರಿ. ಸಾಮಾಜಿಕ ಮಾಧ್ಯಮ ಚಟುವಟಿಕೆಗಳಲ್ಲಿ ಸಾಧ್ಯವಾದಷ್ಟು ತಮ್ಮ ಗುರುತು ರಹಸ್ಯವಾಗಿಡುವುದು ಒಳ್ಳೆಯದು.

ದೇಶದ ಸೇನಾಧಿಕಾರಿಗಳನ್ನು ಹನಿಟ್ರ್ಯಾಪ್‌ ಹೊಂಡಕ್ಕೆ ಬೀಳಿಸುವ ಮೂಲಕ ಬ್ಲ್ಯಾಕ್‌ಮೇಲ್ ಮಾಡಿ ಸೇನಾ ರಹಸ್ಯಗಳನ್ನು ಪಡೆಯಲು ಚೀನ ಮತ್ತು ಪಾಕಿಸ್ತಾನ  ಸಂಚು ಮಾಡಿರುವ ವರದಿ  ಕಳವಳ ಉಂಟುಮಾಡುವಂತಿದೆ. ಸದ್ಯದ ಪರಿಸ್ಥಿತಿಯಲ್ಲಿ ಶತ್ರು ರಾಷ್ಟ್ರಗಳು ಹನಿಟ್ರ್ಯಾಪ್‌ ಸಂಚಿನಲ್ಲಿ ಯಶಸ್ವಿಯಾದರೆ ದೊಡ್ಡ ಗಂಡಾಂತರ ಎದುರಾಗಬಹುದು. ಪಾಕ್‌ ಮತ್ತು ಚೀನ ಈ ಎರಡೂ ದೇಶಗಳ ಜತೆಗಿನ ಸಂಬಂಧ ಸಂಪೂರ್ಣ ಹಳಸಿದೆ. ಅದರಲ್ಲೂ ಚೀನ ಮತ್ತು ಭಾರತ ಸೇನೆ ಡೋಕ್ಲಾಂನಲ್ಲಿ ಮುಖಾಮುಖೀಯಾಗಿ ಎರಡೂ ತಿಂಗಳಾಗುತ್ತಾ ಬಂದಿದ್ದು, ಸದ್ಯಕ್ಕೆ ಈ ವಿವಾದ ಬಗೆಹರಿಯುವ ಸಾಧ್ಯತೆ ಕಾಣಿಸುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಸೇನಾಧಿಕಾರಿಗಳು ಅರಿತೋ ಅರಿಯದೆಯೋ ಹನಿಟ್ರ್ಯಾಪ್‌ ಜಾಲಕ್ಕೆ ಬಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಹಾಗೆಂದು ಹನಿಟ್ರ್ಯಾಪ್‌ ತಂತ್ರ ಹೊಸದೇನೂ ಅಲ್ಲ. ಹಿಂದೆ ರಾಜ ಮಹಾರಾಜರ ಕಾಲದಲ್ಲೂ ಶತ್ರುದೇಶಗಳ ರಹಸ್ಯ ವಿಷಯಗಳನ್ನು ತಿಳಿಯಲು ಇದರ ಬಳಕೆಯಾಗುತ್ತಿತ್ತು. ಸುಂದರ ಯುವತಿಯರನ್ನು ಇದಕ್ಕಾಗಿ ಬಳಸಿಕೊಳ್ಳಲಾಗುತ್ತದೆ. ಶತ್ರು ದೇಶದ ಸೇನಾಧಿಕಾರಿಗಳನ್ನು ಸಂಪರ್ಕಿಸುವಂತೆ ಮಾಡಿ ಅವರ ಸ್ನೇಹ ಸಂಪಾದಿಸುವುದು, ಅನಂತರ ಅವರ ಜತೆಗೆ ಲೈಂಗಿಕ ಕ್ರಿಯೆ ನಡೆಸಿ ಭಾವನಾತ್ಮಕವಾಗಿ ಅವರನ್ನು ಬ್ಲ್ಯಾಕ್‌ವೆುàಲ್‌ ಮಾಡುತ್ತಾ ರಹಸ್ಯಗಳನ್ನು ತಿಳಿದುಕೊಳ್ಳುವುದು ಒಂದು ವಿಧಾನವಾದರೆ, ಖಾಸಗಿ ಕ್ಷಣಗಳ ವೀಡಿಯೊ, ಫೊಟೊಗಳನ್ನು ತೋರಿಸಿ ಬಹಿರಂಗಪಡಿಸುವ ಬೆದರಿಕೆಯೊಡ್ಡಿ ಬಲವಂತವಾಗಿ ರಹಸ್ಯಗಳನ್ನು ಬಾಯಿ ಬಿಡುವಂತೆ ಮಾಡುವುದು ಇನ್ನೊಂದು ವಿಧಾನ. ಸಂಪರ್ಕ ಮಾಧ್ಯಮದಲ್ಲಾದ ಕ್ರಾಂತಿಯಿಂದಾಗಿ ಈಗ ಯಾರದ್ದೇ ಆದರೂ ಸ್ನೇಹ ಸಂಪಾದಿಸುವುದು ದೊಡ್ಡ ವಿಷಯವೇ ಅಲ್ಲ. ಫೇಸ್‌ಬುಕ್‌, ವಾಟ್ಸಪ್‌, ಟ್ವಿಟ್ಟರ್‌, ಇನ್‌ಸ್ಟಾಗ್ರಾಮ್‌ ಮತ್ತಿತರ ಸಂಪರ್ಕ ಆ್ಯಪ್‌ಗ್ಳು ಜಗತ್ತಿನ ಒಂದು ಮೂಲೆಯಲ್ಲಿರುವ ವ್ಯಕ್ತಿಯನ್ನು ಇನ್ನೊಂದು ಮೂಲೆಯಲ್ಲಿರುವ ವ್ಯಕ್ತಿಯೊಂದಿಗೆ ಕೆಲವೇ ಕ್ಷಣಗಳಲ್ಲಿ ಸಂಪರ್ಕಿಸಿ ಕೊಡುತ್ತವೆ. ಪ್ರಸ್ತುತ ಚೀನ ಮತ್ತು ಪಾಕಿsಸ್ತಾನ ಉರ್ದು ಮತ್ತು ಇಂಗ್ಲಿಷ್‌ ಭಾಷೆಯನ್ನು ನಿರರ್ಗಳವಾಗಿ ಮಾತನಾಡುವ ಕೆಲವು ಬೆಡಗಿಯರನ್ನು ಈ ಉದ್ದೇಶಕ್ಕಾಗಿ ನೇಮಿಸಿಕೊಂಡಿವೆ. ಸಾಮಾನ್ಯವಾಗಿ ಸೇನೆಯ ಅಥವ ಸರಕಾರದ ಉನ್ನತ ಅಧಿಕಾರಿಗಳೇ ಹನಿಟ್ರ್ಯಾಪ್‌ ಮೋಹಿನಿಯರ ಗುರಿಯಾಗಿರುತ್ತವೆ. ಏಕೆಂದರೆ ಕೆಳಹಂತದ ಅಧಿಕಾರಿಗಳಿಗೆ ಎಲ್ಲ ರಹಸ್ಯಗಳು ತಿಳಿದಿರುವುದಿಲ್ಲ. ಉನ್ನತ ಅಧಿಕಾರಿಗಳಾದರೆ ಹೆಚ್ಚು ಮಾಹಿತಿ ಪಡೆಯಲು ಸಾಧ್ಯವಾಗುವುದಲ್ಲದೆ ಸೇನೆಯ ನೈತಿಕತೆಯನ್ನು ಕುಸಿಯುವಂತೆ ಮಾಡಲು ಸಾಧ್ಯವಾಗುತ್ತದೆ. ಹೀಗಾಗಿ ಗುಪ್ತಚರ ಪಡೆ ಅಪರಿಚಿತ ಯುವತಿಯರಿಂದ ಬರುವ ಫ್ರೆಂಡ್‌ಶಿಪ್‌ ರಿಕ್ವೆಸ್ಟ್‌ ಬಗ್ಗೆ ಬಹಳ ಜಾಗರೂಕವಾಗಿರಬೇಕೆಂದು ಎಚ್ಚರಿಕೆಯನ್ನು ನೀಡಿದೆ. 

ಪಾಶ್ಚಾತ್ಯ ದೇಶಗಳಂತೆ ಭಾರತದಲ್ಲಿ ಹನಿಟ್ರ್ಯಾಪ್‌ ಸಫ‌ಲವಾಗಿಲ್ಲ. ಹಾಗೆಂದು ಇಂತಹ ಪ್ರಕರಣವೇ ಇಲ್ಲ ಎಂದಲ್ಲ. ಆರು ವರ್ಷದ ಹಿಂದೆ ಇನ್‌ಫ್ಯಾಂಟ್ರಿ ಯುನಿಟ್‌ನ ಲೆಫ್ಟಿನೆಂಟ್‌ ಕರ್ನಲ್‌ ದರ್ಜೆಯ ಅಧಿಕಾರಿಯೊಬ್ಬರು ಬಾಂಗ್ಲಾದೇಶಕ್ಕೆ ಮಿಲಿಟರಿ ಅಕಾಡೆಮಿಯ ತರಬೇತಿ ಕಾರ್ಯಕ್ರಮಕ್ಕೆ ಹೋದ ವೇಳೆ ಪಾಕ್‌ ಗುಪ್ತಚರ ಪಡೆ ಐಎಸ್‌ಐ ಅವರನ್ನು ಹನಿಟ್ರ್ಯಾಪ್‌ಗೆ ಬೀಳಿಸಿ ಬ್ಲ್ಯಾಕ್‌ಮೇಲ್ ಮಾಡಿತ್ತು. ಆದರೆ ತನ್ನ ಕೃತ್ಯದಿಂದ ಪಶ್ಚಾತ್ತಾಪಗೊಂಡ ಈ ಅಧಿಕಾರಿ ಮರುದಿನ ಭಾರತೀಯ ದೂತವಾಸಕ್ಕೆ ಹೋಗಿ ನೈಜ ವಿಷಯ ತಿಳಿಸಿದ್ದರು. ಇದರಿಂದ ಭವಿಷ್ಯ ಮಂಕಾದರೂ ಪರವಾಗಿಲ್ಲ, ದೇಶ ದ್ರೋಹವಾಗಬಾರದು ಎಂಬುದು ಅವರ ಉದ್ದೇಶವಾಗಿತ್ತು. ಅನಂತರ ಈ ಅಧಿಕಾರಿಯನ್ನು ತತ್‌ಕ್ಷಣ ವಾಪಸು ಕರೆಸಿಕೊಂಡು ಕೋರ್ಟ್‌ ಮಾರ್ಶಲ್‌ಗೊಳಪಡಿಸಲಾಗಿತ್ತು. ಐಎಸ್‌ಐ ಪದೇ ಪದೇ ಹನಿಟ್ರ್ಯಾಪ್‌ ತಂತ್ರಗಳನ್ನು ಪ್ರಯೋಗಿಸಿದ್ದರೂ ಹೆಚ್ಚಿನ ಯಶಸ್ಸು ಪಡೆದಿಲ್ಲ. ಹೆಚ್ಚಾಗಿ ಕೆಳದರ್ಜೆಯ ಅಧಿಕಾರಿಗಳೇ ಅದರ ಹನಿಟ್ರ್ಯಾಪ್‌ನೊಳಗೆ ಬೀಳುತ್ತಿದ್ದದ್ದು ಇದಕ್ಕೆ ಕಾರಣ. ಸೇನೆಯಂತಹ ಅತ್ಯಂತ ಜವಾಬ್ದಾರಿಯುತ ವಿಭಾಗದಲ್ಲಿರುವವರು ಮೈಯೆಲ್ಲ ಕಣ್ಣಾಗಿರುವುದೇ ಇದನ್ನು ತಡೆಯುವ ದಾರಿ. ಸಾಮಾಜಿಕ ಮಾಧ್ಯಮ ಚಟುವಟಿಕೆಗಳಲ್ಲಿ ಸಾಧ್ಯವಾದಷ್ಟು ತಮ್ಮ ಗುರುತು ರಹಸ್ಯವಾಗಿಡುವುದು ಒಳ್ಳೆಯದು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.