ರಷ್ಯಾದ ಕೋವಿಡ್ ಕಥನ ; ಮಾದರಿಯಾಗಲಿ ಪ್ರಯತ್ನ


Team Udayavani, Jun 6, 2020, 10:00 AM IST

ರಷ್ಯಾದ ಕೋವಿಡ್ ಕಥನ ; ಮಾದರಿಯಾಗಲಿ ಪ್ರಯತ್ನ

ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ಸೇರಿದಂತೆ ಬಹುತೇಕ ರಾಷ್ಟ್ರಗಳು ತಮ್ಮ ಪೂರ್ಣ ಶಕ್ತಿಯನ್ನು ಉಪಯೋಗಿಸುತ್ತಿವೆಯಾದರೂ, ಈಗಲೂ ಕೂಡ ವೈರಸ್‌ ಅನ್ನು ಹತ್ತಿಕ್ಕುವಂಥ ಲಸಿಕೆಯಾಗಲಿ ಅಥವಾ ವೈರಸ್‌ ರೂಪಾಂತರಗೊಂಡು ದುರ್ಬಲವಾಗುತ್ತಿದೆ ಎಂಬ ಸುದ್ದಿಯಾಗಲಿ ಬರುತ್ತಿಲ್ಲ. ಆರಂಭಿಕ ಸಮಯದಲ್ಲಿ ಯುರೋಪಿಯನ್‌ ರಾಷ್ಟ್ರಗಳಲ್ಲಿ ತಾಂಡವವಾಡಿದ ಈ ವೈರಸ್‌ ಈಗ ಉಳಿದ ದೇಶಗಳಲ್ಲಿ ಹಾವಳಿ ಎಬ್ಬಿಸಲಾರಂಭಿಸಿದೆ. ಆದಾಗ್ಯೂ, ದಕ್ಷಿಣ ಏಷ್ಯಾದಲ್ಲಿ ಈ ಸಾಂಕ್ರಾಮಿಕದ ತೀವ್ರತೆ ಕಡಿಮೆಯಿದೆ ಎನ್ನಲಾಗುತ್ತಿದೆಯಾದರೂ, ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ವಿಷಯದಲ್ಲಿ ಸೋಂಕಿತರ ಸಂಖ್ಯೆ ಗಾಬರಿಹುಟ್ಟಿಸುವಂತೆ ಏರುತ್ತಿದೆ.

ಭಾರತದಲ್ಲಿ ಮಾಸ್ಟರ್‌ಸ್ಟ್ರೋಕ್‌ ಎಂದು ಕರೆಸಿಕೊಂಡ ಲಾಕ್‌ಡೌನ್‌ನಿಂದಾಗಿ ಆರಂಭದಲ್ಲಿ ಎದುರಾಗಬಹುದಾಗಿದ್ದ ಅನಾಹುತ ತಪ್ಪಿದಂತಾಗಿದೆ. ಆದರೆ ಮೇ 18ರಿಂದ ದೇಶದಲ್ಲಿ ನಿತ್ಯ ಸೋಂಕಿತರ ಸಂಖ್ಯೆ ವಿಪರೀತವಾಗಿ ಹೆಚ್ಚುತ್ತಲೇ ಇದೆ. ಆದಾಗ್ಯೂ, ಸ್ಥಿತಿಯನ್ನು ತುಲನಾತ್ಮಕವಾಗಿ ಅರ್ಥಮಾಡಿಕೊಳ್ಳಬೇಕು ಎಂದರೆ, ನಾವು ಬ್ರಿಟನ್‌ ಅಥವಾ ಇಟಲಿಯತ್ತ ನೋಡದೆ, ಅಧಿಕ ಉಪಯುಕ್ತವಾಗುವಂಥ ಉದಾಹರಣೆಗಳನ್ನು ಆಯ್ದುಕೊಳ್ಳಬೇಕಾಗುತ್ತದೆ. ಉದಾಹರಣೆಗೆ, ರಷ್ಯಾ. ಗಮನಾರ್ಹ ಸಂಗತಿಯೆಂದರೆ ಜಾಗತಿಕ ಹಾಟ್‌ಸ್ಪಾಟ್‌ಗಳಲ್ಲಿ ಮೂರನೇ ಸ್ಥಾನದಲ್ಲಿರುವ ರಷ್ಯಾದಲ್ಲಿ ಸೋಂಕಿತರ ಸಂಖ್ಯೆ ಶುಕ್ರವಾರದ ವೇಳೆಗೆ 4 ಲಕ್ಷ 49 ಸಾವಿರಕ್ಕೇರಿದರೂ, ಆ ದೇಶದಲ್ಲಿ ಮೃತಪಟ್ಟವರ ಸಂಖ್ಯೆ ಭಾರತಕ್ಕಿಂತಲೂ ಕಡಿಮೆಯಿದೆ. ಅಲ್ಲಿ 5 ಸಾವಿರಕ್ಕೂ ಅಧಿಕ ಜನ ಮೃತಪಟ್ಟಿದ್ದರೆ, ಏಳನೇ ಸ್ಥಾನದಲ್ಲಿರುವ ಭಾರತದಲ್ಲಿ ಮೃತಪಟ್ಟವರ ಸಂಖ್ಯೆ 6 ಸಾವಿರದ ಗಡಿ ದಾಟಿದೆ. ರಷ್ಯಾ ವ್ಯಾಪಕ ಟೆಸ್ಟಿಂಗ್‌ಗಳ ಮೂಲಕ ಆರಂಭದ ದಿನಗಳಲ್ಲೇ ರೋಗಿಗಳನ್ನು ಪತ್ತೆಹಚ್ಚಲಾರಂಭಿಸಿತು.

ಜೂನ್‌ 5ರ ವೇಳೆಗೆ ಆ ದೇಶದಲ್ಲಿ 1 ಕೋಟಿ 20 ಲಕ್ಷ ಟೆಸ್ಟ್‌ಗಳನ್ನು ನಡೆಸಲಾಗಿದ್ದರೆ, ಭಾರತದಲ್ಲಿ 43 ಲಕ್ಷ ಟೆಸ್ಟ್‌ಗಳನ್ನು ನಡೆಸಲಾಗಿದೆ. ಇದೇನೇ ಇದ್ದರೂ, ರಷ್ಯಾ ಕೋವಿಡ್‌-19 ಚಿಕಿತ್ಸೆಗೆ ಎವಿಫ‌ವಿರ್‌ ಎಂಬ ಡ್ರಗ್‌ ಬಳಸುತ್ತಿದ್ದು, ಈ ಔಷಧ ನಿಜಕ್ಕೂ ಪರಿಣಾಮಕಾರಿಯೇ, ಕೊರೊನಾ ವಿರುದ್ಧದ ಹೋರಾಟಕ್ಕೆ ಪ್ರಬಲ ಅಸ್ತ್ರವಾಗಬಲ್ಲದೇ ಎನ್ನುವ ಚರ್ಚೆ ಆರಂಭವಾಗಿದೆ. ಎವಿಫ‌ವಿರ್‌ ಅನ್ನು ಆರಂಭಿಕ ಸಮಯದಲ್ಲೇ ಬಳಸುವುದರಿಂದ, ರೋಗ ಉಲ್ಬಣಿಸುವ ಸಾಧ್ಯತೆಯನ್ನು 50 ಪ್ರತಿಶತದಷ್ಟು ಕಡಿತಗೊಳಿಸಬಹುದು ಎಂದು ಆ ದೇಶದ ಸಂಶೋಧನಾ ವರದಿಗಳು ಹೇಳುತ್ತಿವೆ. ಭಾರತದಲ್ಲಿ ಎವಿಫ‌ವಿರ್‌ ಪರಿವಾರದ್ದೇ ಒಂದು ಔಷಧ ಇದ್ದು ಇದರ ಮೇಲೀಗ ಪರೀಕ್ಷೆಗಳು ನಡೆದಿವೆ. ಮರಣ ಪ್ರಮಾಣ ತಗ್ಗಿಸುವಲ್ಲಿ ಅದು ಪರಿಣಾಮಕಾರಿ ಎಂದು ತಿಳಿದರೆ ಅದಕ್ಕಿಂತ ಶುಭಸುದ್ದಿ ಮತ್ತೂಂದಿಲ್ಲ. ಏನೇ ಇದ್ದರೂ, ಸೋಂಕಿತರ ಸಂಖ್ಯೆ ಭಯಹುಟ್ಟಿಸುವ ರೀತಿಯಲ್ಲಿ ಬೆಳೆಯುತ್ತಿರುವುದರಿಂದ ಮುಂದಿನ ದಿನಗಳಲ್ಲಿ ದೇಶದಲ್ಲಿ ಮರಣ ಪ್ರಮಾಣವೂ ಹೆಚ್ಚುತ್ತದೆ. ಆದಷ್ಟು ಹಾನಿಯನ್ನು ತಪ್ಪಿಸುವ ನಿಟ್ಟಿನಲ್ಲಿ ದೇಶದ ಸಂಶೋಧನಾ ವಲಯವು ನಡೆಸಿರುವ ಪ್ರಯತ್ನ ಸಫ‌ಲವಾಗಲಿ.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.