Sanitary Napkins ಶುಚಿ ಯೋಜನೆಗೆ ಮರುಚಾಲನೆ ಗುಣಮಟ್ಟದಲ್ಲಿ ರಾಜಿ ಬೇಡ


Team Udayavani, Jan 16, 2024, 6:00 AM IST

1-wddsad

ರಾಜ್ಯದ ಪ್ರೌಢ ಮತ್ತು ಪದವಿಪೂರ್ವ ಶಾಲೆಗಳಲ್ಲಿ ಕಲಿಯುತ್ತಿರುವ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ನ್ಯಾಪ್‌ಕಿನ್‌ ವಿತರಿಸುವ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗೆ ಮರುಚಾಲನೆ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಅದರಂತೆ ಮುಂದಿನ ಎರಡು ವಾರಗಳಲ್ಲಿ ರಾಜ್ಯದ 17.45 ಲಕ್ಷ ಹೆಣ್ಣುಮಕ್ಕಳಿಗೆ ಸ್ಯಾನಿಟರಿ ನ್ಯಾಪ್‌ಕಿನ್‌ ವಿತರಿಸಲಾಗುವುದು. ಹೆಣ್ಣು ಮಕ್ಕಳ ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಪ್ರದೇಶದ ಹದಿ ಹರೆಯದ ಹೆಣ್ಣು ಮಕ್ಕಳಲ್ಲಿ ಮಾಸಿಕ ಋತುಸ್ರಾವದ ಸಂದರ್ಭದಲ್ಲಿ ಶುಚಿತ್ವ ಕಾಯ್ದುಕೊಳ್ಳುವ ಬಗೆಗೆ ಅರಿವು ಮೂಡಿಸುವ ಜತೆಯಲ್ಲಿ ಅವರಲ್ಲಿ ಆರೋಗ್ಯ ರಕ್ಷಣೆಯ ಕಾಳಜಿ ಮೂಡಿಸುವ ಮಹತ್ತರ ಉದ್ದೇಶದೊಂದಿಗೆ ಆರಂಭಿಸಲಾಗಿದ್ದ ಯೋಜನೆಗೆ ಮರುಚಾಲನೆ ನೀಡುವ ರಾಜ್ಯ ಸರಕಾರದ ನಿರ್ಧಾರ ಅತ್ಯಂತ ಸ್ವಾಗತಾರ್ಹ ಮತ್ತು ಸಮುಚಿತವಾದುದಾಗಿದೆ.

ಮಾಸಿಕ ಋತುಸ್ರಾವದ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಹೆಣ್ಣು ಮಕ್ಕಳು ಅವೈಜ್ಞಾನಿಕ ವಿಧಾನಗಳನ್ನು ಅನುಸರಿಸುತ್ತಿರುವುದರಿಂದಾಗಿ ಅವರನ್ನು ವಿವಿಧ ಆರೋಗ್ಯ ಮತ್ತು ಮಾನಸಿಕ ಸಮಸ್ಯೆಗಳು ಕಾಡುತ್ತಿವೆ. ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಸುಧಾರಣೆಗಳಾಗಿದ್ದರೂ, ವಿಷಯದಲ್ಲಿ ಹೆಣ್ಣು ಮಕ್ಕಳು ಕೀಳರಿಮೆಯ ಮನೋಭಾವವನ್ನು ಹೊಂದಿದ್ದಾರೆ. ಇದೇ ವೇಳೆ ಮಕ್ಕಳ ಹೆತ್ತವರು ಮತ್ತು ಹಿರಿಯರು ಕೂಡ ಮುಟ್ಟಿನ ಸ್ರಾವದ ನಿರ್ವಹಣೆಗೆ ಹಿಂದಿನಂತೆ ಹಳೆಯ ಬಟ್ಟೆ ಬಳಕೆಯಂತಹ ಅವೈಜ್ಞಾನಿಕ ವಿಧಾನಗಳ ಬಳಕೆಗೆ ಹೆಚ್ಚಿನ ಆಸಕ್ತಿ ತೋರುತ್ತಿರುವುದರಿಂದಾಗಿ ಹದಿಹರೆಯದ ಹೆಣ್ಮಕ್ಕಳು ಅನಿವಾರ್ಯವಾಗಿ ಇದೇ ವಿಧಾನಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಮತ್ತೂಂದೆಡೆ ಋತುಸ್ರಾವದ ಕುರಿತಂತೆ ಸಮರ್ಪಕ ತಿಳಿವಳಿಕೆ ಇಲ್ಲದಿರುವುದರಿಂದಾಗಿ ಅವರು ಶುಚಿತ್ವವನ್ನು ನಿರ್ಲಕ್ಷಿಸುವುದೂ ಇದೆ. ಇದರಿಂದಾಗಿ ಹೆಣ್ಣುಮಕ್ಕಳನ್ನು ವಿವಿಧ ತೆರನಾದ ಅನಾರೋಗ್ಯ ಕಾಡುವಂತಾಗಿದೆ.

ಕಾರಣದಿಂದಾಗಿಯೇ ರಾಜ್ಯ ಸರಕಾರಶುಚಿಯೋಜನೆಯನ್ನು ಜಾರಿಗೊಳಿ  ಸಿತ್ತು. ಆದರೆ ಕೊರೊನಾ ಸಾಂಕ್ರಾಮಿಕ ವಕ್ಕರಿಸಿ, ಆನ್‌ಲೈನ್‌ ತರಗತಿಗಳು ಚಾಲ್ತಿಗೆ ಬಂದ ಸಂದರ್ಭದಲ್ಲಿ ಯೋಜನೆಗೆ ಗ್ರಹಣ ಬಡಿದಿತ್ತು. ಒಂದೂವರೆ ವರ್ಷದ ಬಳಿಕ ಶಾಲಾ ತರಗತಿಗಳು ಆರಂಭಗೊಂಡರೂ ಯೋಜನೆ ಪುನರಾರಂಭಗೊಂಡಿರಲಿಲ್ಲ. ಕೊನೆಗೂ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರಶುಚಿಯೋಜನೆಗೆ ಮರುಚಾಲನೆ ನೀಡಲು ಮುಂದಾಗಿದೆ. ಅದರಂತೆ ಟೆಂಡರ್‌ ಪ್ರಕ್ರಿಯೆಯಾದಿಯಾಗಿ ಬಹುತೇಕ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು ಅಂತಿಮ ಹಂತದ ತಪಾಸಣೆಯನ್ನು ಪೂರ್ಣಗೊಳಿಸಿ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ನ್ಯಾಪ್‌ಕಿನ್‌ಗಳನ್ನು ಪೂರೈಕೆ ಮಾಡಲು ಭರದ ಸಿದ್ಧತೆ ನಡೆದಿದೆ.

ಶಾಲಾಕಾಲೇಜುಗಳಿಗೆ ಪೂರೈಸಲುದ್ದೇಶಿಸಿರುವ ಸ್ಯಾನಿಟರಿ ನ್ಯಾಪ್‌ಕಿನ್‌ ಅನ್ನು ಪರೀಕ್ಷಿಸಿಯೇ ಮಕ್ಕಳಿಗೆ ವಿತರಿಸಲು ಸರಕಾರ ಕ್ರಮ ಕೈಗೊಂಡಿದೆಯಾದರೂ ಬಗ್ಗೆ ಇನ್ನಷ್ಟು ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವ ಆವಶ್ಯಕತೆ ಇದೆ. ನ್ಯಾಪ್‌ಕಿನ್‌ಗಳ ಗುಣಮಟ್ಟದಲ್ಲಿ ಎಲ್ಲೂ ರಾಜಿ ಮಾಡಿಕೊಳ್ಳದೆ ಅತ್ಯಂತ ಸುರಕ್ಷಿತ ಮತ್ತು ನಿಗದಿಪಡಿಸಲಾದ ಮಾನದಂಡಗಳಿಗನುಗುಣವಾಗಿ ತಯಾರಿಸಲ್ಪಟ್ಟ ನ್ಯಾಪ್‌ಕಿನ್‌ಗಳೇ ಶಾಲಾಕಾಲೇಜುಗಳಿಗೆ ಸರಬರಾಜಾಗುವಂತೆ ಕಟ್ಟೆಚ್ಚರ ವಹಿಸಬೇಕು. ಬಳಕೆ ಅವಧಿ ಮುಗಿದಿರುವ, ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ನ್ಯಾಪ್‌ಕಿನ್‌ಗಳ ಬಳಕೆ ಕೂಡ ಹೆಣ್ಣು ಮಕ್ಕಳಿಗೆ ಕಿರಿಕಿರಿ ಉಂಟು ಮಾಡುವ ಮತ್ತು ಅವರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಇತ್ತ ಸರಕಾರ ಗಂಭೀರ ಲಕ್ಷ್ಯ ಹರಿಸಬೇಕು. ಇದರ ಜತೆಯಲ್ಲಿ ತರಬೇತಿ ಪಡೆದ ಆರೋಗ್ಯ ಸಿಬಂದಿಯಿಂದ ನ್ಯಾಪ್‌ಕಿನ್‌ಗಳ ಸಮರ್ಪಕ ಬಳಕೆ ಮತ್ತು ಇದರ ಪ್ರಯೋಜನಗಳ ಕುರಿತಂತೆ ಹೆಣ್ಣು ಮಕ್ಕಳಲ್ಲಿ ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.

ಟಾಪ್ ನ್ಯೂಸ್

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.