ಹೂಡಿಕೆಸ್ನೇಹಿ ವಾತಾವರಣ ತೃಪ್ತಿಕರ ನಿರ್ವಹಣೆ


Team Udayavani, Sep 30, 2019, 5:43 AM IST

investment

ನವೋದ್ಯಮಗಳಿಗೆ ಸರಕಾರದಿಂದ ಧಾರಾಳ ಉತ್ತೇಜನ ಮತ್ತು ನೆರವು ಸಿಗುತ್ತಿದೆ. ಕಾರ್ಪೊರೇಟ್‌ ತೆರಿಗೆ ದರದಲ್ಲಿನ ಸುಧಾರಣೆಯು ಮುಂದಿನ ದಿನಗಳಲ್ಲಿ ದೇಶವನ್ನು ಉದ್ಯಮ ಸ್ನೇಹಿಯನ್ನಾಗಿಸುತ್ತದೆ.

ಭಾರತದಲ್ಲಿ ಹೂಡಿಕೆಸ್ನೇಹಿ ವಾತಾವರಣ ಇನ್ನಷ್ಟು ಉತ್ತಮಗೊಳ್ಳುತ್ತಿದೆ ಎನ್ನುತ್ತಿದೆ ವಿಶ್ವಬ್ಯಾಂಕ್‌ನ ವರದಿ. ಹೂಡಿಕೆಸ್ನೇಹಿ ವಾತಾವರಣದಲ್ಲಿ ಗಣನೀಯ ಸುಧಾರಣೆಯಾಗುತ್ತಿರುವ 20 ದೇಶಗಳ ಪಟ್ಟಿಯೊಂದನ್ನು ವಿಶ್ವಬ್ಯಾಂಕ್‌ ಬಿಡುಗಡೆ ಮಾಡಿದ್ದು ಇದರಲ್ಲಿ ಭಾರತದ ಹೆಸರು ಇದೆ. ಆರ್ಥಿಕತೆ ಮಂದಗತಿಯಲ್ಲಿರುವ ಸಂದರ್ಭದಲ್ಲಿ ಬಂದಿರುವ ಈ ವರದಿ ಉದ್ಯಮ ವಲಯದ ಅಂತೆಯೇ ನೀತಿನಿರೂಪಕರ ಮನೋಸ್ಥೈರ್ಯವನ್ನು ಖಂಡಿತ ಹೆಚ್ಚಿಸುವಂಥದ್ದು. ಹಾಗೆಂದು ಇದು ಹೂಡಿಕೆ ಸ್ನೇಹಿ ದೇಶಗಳ ಶ್ರೇಯಾಂಕವಲ್ಲ. ಈ ಪಟ್ಟಿಯನ್ನು ವಿಶ್ವಬ್ಯಾಂಕ್‌ ಅ.24ರಂದು ಬಿಡುಗಡೆ ಗೊಳಿಸಲಿದೆ. ಇದಕ್ಕೆ ಪೂರ್ವಭಾವಿಯಾಗಿ ದೇಶಗಳು ಯಾವೆಲ್ಲ ಕ್ಷೇತ್ರದಲ್ಲಿ ಹೂಡಿಕೆಸ್ನೇಹಿಯಾಗುವಂಥ ಸುಧಾರಣಾ ಕ್ರಮಗಳನ್ನು ಕೈಗೊಂಡಿವೆ ಎಂದು ತಿಳಿಸುವ ವರದಿಯಿದು.

ಹೊಸ ಉದ್ಯಮದ ಪ್ರಾರಂಭ, ದಿವಾಳಿತನದ ನಿರ್ಣಯ, ಗಡಿಯಾಚೆಗಿನ ವಾಣಿಜ್ಯ ಮತ್ತು ನಿರ್ಮಾಣ ಪರವಾನಿಗೆ ವಿಭಾಗಗಳಲ್ಲಿ ಭಾರತದ ಸಾಧನೆಯನ್ನು ಪರಿಗಣಿಸಿ ತ್ವರಿತವಾಗಿ ಸುಧಾರಣಾ ಕ್ರಮಗಳನ್ನು ಕೈಗೊಳ್ಳುತ್ತಿರುವ 20 ದೇಶಗಳ ಯಾದಿಯಲ್ಲಿ ಸೇರಿಸಲಾಗಿದೆ.

ದೇಶದಲ್ಲಿ ಹೊಸ ಉದ್ಯಮ ಪ್ರಾರಂಭಿಸಲು ಈಗ ಸಾಕಷ್ಟು ಉತ್ತೇಜನ ಸಿಗುತ್ತಿದೆ ಎನ್ನುವುದು ಢಾಳಾಗಿಯೇ ಗೋಚರಿಸುತ್ತಿದೆ. ಜಟಿಲ ಲೈಸೆನ್ಸ್‌ ರಾಜ್‌ ವ್ಯವಸ್ಥೆಯನ್ನು ಸುಧಾರಿಸಲು ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದೆ.

ಹಳೆ ನಿಯಮಗಳನ್ನು ರದ್ದುಗೊಳಿಸಿ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ. ಅದರ ಪರಿಣಾಮವಾಗಿ ಹೂಡಿಕೆದಾರರಲ್ಲಿ ಹೊಸ ಉತ್ಸುಕತೆ ಕಾಣಿಸಿಕೊಂಡಿದೆ.

ಸ್ವತಹ ಪ್ರಧಾನಿಯೇ ದೇಶವನ್ನು ಉದ್ಯಮಸ್ನೇಹಿಯನ್ನಾಗಿಸುವುದನ್ನು ಸವಾಲಾಗಿ ಸ್ವೀಕರಿಸಿದ್ದಾರೆ. ಅದರಲ್ಲೂ ನವೋದ್ಯಮಗಳಿಗೆ ಸರಕಾರದ ವತಿಯಿಂದ ಧಾರಾಳ ಉತ್ತೇಜನ ಮತ್ತು ನೆರವು ಸಿಗುತ್ತಿದೆ. ಕಾರ್ಪೊರೇಟ್‌ ತೆರಿಗೆ ದರದಲ್ಲಿ ಮಾಡಿರುವ ಇತ್ತೀಚೆಗಿನ ಸುಧಾರಣೆಯಿಂದ ಕಾರ್ಪೋರೇಟ್‌ ವಲಯದವರು ಬಹಳ ಖುಷಿಯಾಗಿದ್ದು, ಮುಂದಿನ ದಿನಗಳಲ್ಲಿ ಇದು ದೇಶವನ್ನು ಇನ್ನಷ್ಟು ಉದ್ಯಮಸ್ನೇಹಿಯನ್ನಾಗಿ ಮಾಡಲಿದೆ.

ಹಲವು ಸರಕಾರಿ ಏಜೆನ್ಸಿಗಳನ್ನು ಸಂಯೋಜಿಸಿದ್ದು ಮತ್ತು ಆನ್‌ಲೈನ್‌ ವ್ಯವಸ್ಥೆಗೆ ಹೆಚ್ಚು ಒತ್ತುಕೊಟ್ಟಿರುವುದು ಹೂಡಿಕೆಗೆ ಪೂರಕವಾಗಿರುವ ಇನ್ನೊಂದು ಕ್ರಮ. ಸಾಗಾಟ ವ್ಯವಸ್ಥೆಯಲ್ಲಾಗಿರುವ ಸುಧಾರಣೆ, ಕಾರ್ಮಿಕ ಕಾನೂನಿನ ಮಾರ್ಪಾಡು ಇತ್ಯಾದಿ ಕ್ರಮಗಳ ಮೂಲಕ ಸರಕಾರ ಉದ್ಯಮಗಳಿಗೆ ಪೂರಕವಾಗಿರುವ ವಾತಾವರಣವನ್ನು ಕಲ್ಪಿಸಿದೆ.

ಅದಾಗ್ಯೂ ಕೆಲವು ಸುಧಾರಣೆಗಳಲ್ಲಿ ದೇಶ ಇನ್ನೂ ಹಿಂದುಳಿದಿದೆ ಎನ್ನುವ ವಾಸ್ತವ ಕೂಡ ನಮ್ಮ ಎದುರು ಇದೆ. ಆಸ್ತಿಗಳ ನೋಂದಣಿ ಈ ಪೈಕಿ ಮುಖ್ಯವಾದದ್ದು. ದೇಶದಲ್ಲಿ ಒಂದು ಆಸ್ತಿ ನೋಂದಣಿ ಮಾಡಿಕೊಳ್ಳಲು ಸುಮಾರು 60 ದಿನಗಳು ಹಿಡಿಯುತ್ತವೆ ಹಾಗೂ ಆಸ್ತಿಮೌಲ್ಯದ ಶೇ. 8 ಖರ್ಚು ತಗಲುತ್ತದೆ. ಉದ್ಯಮ ಸ್ನೇಹಿತ ಪಟ್ಟಿಯಲ್ಲಿ ಅಗ್ರಸ್ಥಾನಗಳಲ್ಲಿರುವ ಕೆಲವು ದೇಶಗಳಲ್ಲಿ 20 ದಿನಗಳೊಳಗೆ ಆಸ್ತಿ ನೊಂದಣಿಯಾಗುತ್ತದೆ ಹಾಗೂ ಖರ್ಚು ಕೂಡ ನಮ್ಮ ಅರ್ಧದಷ್ಟು. ನ್ಯೂಜಿಲ್ಯಾಂಡ್‌ನ‌ಲ್ಲಿ ಬರೀ ಒಂದು ದಿನದಲ್ಲಿ ಆಸ್ತಿ ನೋಂದಣಿ ಮಾಡಿಕೊಳ್ಳಬಹುದು. ಹಾಂಕಾಂಗ್‌ನಲ್ಲಿ ವ್ಯಾಪಾರಿಗಳು ವರ್ಷಕ್ಕೆ ಮೂರು ಪಾವತಿಗಳನ್ನು ಮಾಡಿದರೆ ಸಾಕು. ಸಿಂಗಾಪುರದಲ್ಲಿ ತೆರಿಗೆ ಪಾವತಿಸಲು 40 ತಾಸುಗಳು ಸಾಕು ಎಂಬಂಥ ಕೆಲವು ಉದಾಹರಣೆಗಳು ಇವೆ. ಹೂಡಿಕೆಸ್ನೇಹಿ ದೇಶಗಳ ಪಟ್ಟಿಯಲ್ಲಿ ಅಗ್ರ 50ಕ್ಕೇರುವುದು ಮೋದಿ ಸರಕಾರದ ಗುರಿ. ಇದು ಸಾಧ್ಯವಾಗಬೇಕಾದರೆ ಅಗ್ರಸ್ಥಾನದಲ್ಲಿರುವ ದೇಶಗಳ ವ್ಯವಸ್ಥೆಯತ್ತ ಕಣ್ಣಾಡಿಸುವುದು ಅಗತ್ಯ.

ಹೂಡಿಕೆಸ್ನೇಹಿ ವಾತಾವರಣದ ಪಟ್ಟಿಯಲ್ಲಿ ದೇಶ ವರ್ಷದಿಂದ ವರ್ಷಕ್ಕೆ ಸುಧಾರಣೆ ಕಾಣುತ್ತಿದೆ ಎನ್ನುವುದು ಸ್ವಾಗತಾರ್ಹವಾದ ಅಂಶ. 2018ರಲ್ಲಿ ದೇಶ 23 ಸ್ಥಾನಗಳ ಜಿಗಿತ ದಾಖಲಿಸಿ 77ನೇ ಸ್ಥಾನಕ್ಕೇರಿತ್ತು. ಸುಧಾರಣಾ ಕ್ರಮಗಳನ್ನು ಇದೇ ವೇಗದಲ್ಲಿ ಜಾರಿಯಲ್ಲಿಟ್ಟರೆ ಅಗ್ರ 50 ದೇಶಗಳ ನಡುವೆ ಸ್ಥಾನ ಪಡೆದುಕೊಳ್ಳುವುದು ಕಷ್ಟವೇನಲ್ಲ. ಈ ನಿಟ್ಟಿನಲ್ಲಿ ಸರಕಾರ ನಿರಂತರವಾಗಿ ಪ್ರಯತ್ನಶೀಲವಾಗಿರುವುದರಿಂದ ಅಕ್ಟೋಬರ್‌ನಲ್ಲಿ ಪ್ರಕಟವಾಗಲಿರುವ ವರದಿಯಲ್ಲಿ ಖಂಡಿತ ಇನ್ನಷ್ಟು ಸ್ಥಾನಗಳ ಜಿಗಿತವನ್ನು ನಿರೀಕ್ಷಿಸಬಹುದು.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mob

OTT; ಅಸಭ್ಯ ಒಟಿಟಿ ನಿಯಂತ್ರಣ: ಶಾಶ್ವತ ಕಡಿವಾಣ ಅಗತ್ಯ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.