ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಸುಪ್ರೀಂ ನಿಲುವು ಸ್ವಾಗತಾರ್ಹ


Team Udayavani, Feb 12, 2020, 6:30 AM IST

SUPREME

ಸರ್ಕಾರಿ ಅಧಿಕಾರಿಗಳನ್ನು ಮತ್ತು ನಾಗರಿಕರನ್ನು ಗುರಿಯಾಗಿಸಿಕೊಂಡು ಕಾಯ್ದೆಯ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪದ ಮೇರೆಗೆ ಸುಪ್ರೀಂಕೋರ್ಟ್‌ ಕಾಯ್ದೆಯಲ್ಲಿ ಕೊಂಚ ಬದಲಾವಣೆ ಮಾಡಿತ್ತು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ವಿಚಾರದಲ್ಲಿ ಸುಪ್ರೀಂಕೋರ್ಟ್‌ ತೆಗೆದುಕೊಂಡ ನಿಲುವು ಸ್ವಾಗತಾರ್ಹವಾಗಿದೆ. 2018ರಲ್ಲಿ ತಾನೇ ನೀಡಿದ್ದ ತೀರ್ಪಿಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಸಂಸತ್‌ನಲ್ಲಿ ಇದೇ ಕಾಯ್ದೆಗೆ ಮಾಡಿದ ತಿದ್ದುಪಡಿಗೆ ಸಾಂವಿಧಾನಿಕ ಮಾನ್ಯತೆ ನೀಡಿದೆ. ಈ ವಿಚಾರದಲ್ಲಿ ಸುಪ್ರೀಂಕೋರ್ಟ್‌ ಮತ್ತು ಕೇಂದ್ರ ಸರ್ಕಾರದ ನಡುವೆ ಯಾವುದೇ ಕಾನೂನಿನ ಸಂಘರ್ಷವೇರ್ಪಡದಂತೆ ವರ್ತಿಸಿರುವುದು ಗಮನಾರ್ಹವಾಗಿದೆ.
ಇನ್ನು ಮುಂದೆ ಎಸ್‌ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವ ಮುನ್ನ ಯಾವುದೇ ಪೂರ್ವಭಾವಿ ವಿಚಾರಣೆ ಆಗಬೇಕಾಗಿಲ್ಲ, ಜತೆಗೆ ದೌರ್ಜನ್ಯವೆಸಗಿದ ಸರ್ಕಾರಿ ಅಧಿಕಾರಿಯನ್ನು ಬಂಧಿಸುವ ಮುನ್ನ ಮೇಲಧಿಕಾರಿಯ ಅನುಮತಿ ಪಡೆಯಬೇಕಾಗಿಲ್ಲ. ಆದರೂ, ಈ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆ ಇಟ್ಟಿರುವ ಸುಪ್ರೀಂಕೋರ್ಟ್‌, ಕಾಯ್ದೆಯ ದುರ್ಬಳಕೆ ತಡೆಗೂ ಕೊಂಚ ಅವಕಾಶ ನೀಡಿದೆ. ಕಾಯ್ದೆಯ ದುರ್ಬಳಕೆ ಆಗುತ್ತಿದೆ ಎಂಬುದು ಮನವರಿಕೆಯಾದರೆ ಅಥವಾ ಅಸಾಧಾರಣ ಸಂದರ್ಭದಲ್ಲಿ ಹೈಕೋರ್ಟ್‌ಗಳು ಎಫ್ಐಆರ್‌ ಅನ್ನು ರದ್ದು ಮಾಡಲು ಅವಕಾಶ ನೀಡಿದೆ. ಆದರೆ, ನಿರೀಕ್ಷಣಾ ಜಾಮೀನು ನೀಡುವಂತಿಲ್ಲ ಎಂಬ ಅಂಶಕ್ಕೆ
ಸುಪ್ರೀಂಕೋರ್ಟ್‌ ಮುದ್ರೆ ಸಿಕ್ಕಿದೆ.

ಎಲ್ಲಾ ಪ್ರಕರಣಗಳಲ್ಲೂ ನಿರೀಕ್ಷಣಾ ಜಾಮೀನು ನಿರಾಕರಿಸುವಂತಿಲ್ಲ ಎಂಬ ಅಂಶವನ್ನೂ ತೀರ್ಪಿನಲ್ಲಿ ಉಲ್ಲೇಖೀಸಲಾಗಿದೆ. ನ್ಯಾ. ಎಸ್‌. ರವೀಂದ್ರ ಭಟ್‌ ಅವರು ಪ್ರತ್ಯೇಕ ತೀರ್ಪು ಬರೆದಿದ್ದು, ಅಸಾಧಾರಣ ಸಂದರ್ಭಗಳಲ್ಲಿ ನಿರೀಕ್ಷಣಾ ಜಾಮೀನು ನೀಡಬಹುದು. ಏಕೆಂದರೆ, ಜಾಮೀನು ನಿರಾಕರಣೆಯಿಂದಾಗಿ ಕಾನೂನಿನ ತಪ್ಪು ವಿಲೇವಾರಿಯಾಗಬಾರದು ಎಂಬ ಅಭಿಪ್ರಾಯ ಮಂಡಿಸಿದ್ದಾರೆ.

ಸರ್ಕಾರಿ ಅಧಿಕಾರಿಗಳನ್ನು ಮತ್ತು ನಾಗರಿಕರನ್ನು ಗುರಿಯಾಗಿಸಿಕೊಂಡು ಕಾಯ್ದೆಯ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪದ ಮೇರೆಗೆ ಸುಪ್ರೀಂಕೋರ್ಟ್‌ ಕಾಯ್ದೆಯಲ್ಲಿ ಕೊಂಚ ಬದಲಾವಣೆ ಮಾಡಿತ್ತು. ದೂರು ಸಲ್ಲಿಕೆಯಾದ ಕೂಡಲೇ ವ್ಯಕ್ತಿಯನ್ನು ಬಂಧಿಸಬಾರದು ಮತ್ತು ಎಫ್ಐಆರ್‌ ಅನ್ನೂ ಹಾಕಬಾರದು. ಇದಕ್ಕೆ ಮುನ್ನ ತನಿಖೆ ನಡೆಸಬೇಕು ಎಂದಿತ್ತು. ಜತೆಗೆ ದೌರ್ಜನ್ಯವೆಸಗಿದ ಆರೋಪಹೊತ್ತ ಸರ್ಕಾರಿ ಅಧಿಕಾರಿಗಳ ಬಂಧನಕ್ಕೆ ಮುಂಚೆ ಮೇಲಧಿಕಾರಿಗಳ ಒಪ್ಪಿಗೆ ಪಡೆಯಬೇಕು ಎಂದೂ ಕೋರ್ಟ್‌ 2018ರ ಮಾರ್ಚ್‌ 3 ರಂದು ತೀರ್ಪು ನೀಡಿತ್ತು.

ಈ ತೀರ್ಪಿನ ನಂತರ ದೇಶಾದ್ಯಂತ ದೊಡ್ಡ ಪ್ರತಿಭಟನೆಗಳೇ ಆಗಿ ಭಾರೀ ಹಿಂಸಾಚಾರ ನಡೆದಿತ್ತು. ಈ ಘರ್ಷಣೆಯಲ್ಲಿ ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದರು ಕೂಡ. ನಂತರದಲ್ಲಿ ಎನ್‌ಡಿಎ ಸರ್ಕಾರದಲ್ಲೇ ಇದ್ದ ಹಿಂದುಳಿದ ನಾಯಕರ ಒತ್ತಾಯದ ಮೇರೆಗೆ ಕೇಂದ್ರ ಸರ್ಕಾರ ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಕುರಿತ ತೀರ್ಪಿಗೆ ತಿದ್ದುಪಡಿ ತಂದು ಸಂಸತ್‌ನಲ್ಲಿ ಒಪ್ಪಿಗೆಯನ್ನೂ ಪಡೆದಿತ್ತು. ಜತೆಗೆ ಕೇಂದ್ರ ಸರ್ಕಾರದ ಮನವಿ ಮೇರೆಗೆ ಸುಪ್ರೀಂಕೋರ್ಟ್‌ ತನ್ನ ತೀರ್ಪನ್ನೇ ವಾಪಸ್‌ ಪಡೆದಿತ್ತು.

ಸೋಮವಾರದ ಈ ತೀರ್ಪಿನ ಬಳಿಕ ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಕುರಿತಂತೆ ಇದ್ದ ಎಲ್ಲಾ ವಿವಾದಗಳು ಬಗೆಹರಿದಂತಾಗಿವೆ. ಅಷ್ಟೇ ಅಲ್ಲ, 2018ರ ಮಾರ್ಚ್‌ 3ರ ತೀರ್ಪು ಕೂಡ ಅಸಿಂಧುವಾಗಿದೆ. ಈ ವಿವಾದ ಅಂತ್ಯವಾಗಿದೆ ಎಂದು ಸಮಾಧಾನ ಪಟ್ಟುಕೊಳ್ಳುವಾಗಲೇ ಇದೇ ಎಸ್‌ಸಿ-ಎಸ್‌ಟಿ ವರ್ಗದವರ ಮೀಸಲಾತಿ ಸಂಬಂಧ ಸುಪ್ರೀಂಕೋರ್ಟ್‌ ತೀರ್ಪೊಂದು ವಿವಾದ ಸೃಷ್ಟಿಸಿದೆ.

ಮೀಸಲಾತಿ ನೀಡುವುದು ರಾಜ್ಯಗಳ ವಿವೇಚನಾಧಿಕಾರ ಎಂಬ ಸುಪ್ರೀಂಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ಮತ್ತೆ ಹಿಂದುಳಿದ ವರ್ಗಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈಗಾಗಲೇ ಪ್ರತಿಪಕ್ಷಗಳು ಈ ಸಂಬಂಧ ಕೋರ್ಟ್‌ನಲ್ಲಿ ಪ್ರಬಲವಾಗಿ ವಾದ ಮಂಡಿಸಬೇಕು, ಪುನರ್‌ ಪರಿಶೀಲನಾ ಅರ್ಜಿ ದಾಖಲಿಸಬೇಕು ಎಂದು ಒತ್ತಾಯಿಸುತ್ತಿವೆ.

ಈ ಎರಡೂ ಪ್ರಕರಣಗಳನ್ನು ಗಮನಿಸಿದಾಗ ಒಂದಂತೂ ವೇದ್ಯವಾಗುತ್ತದೆ. ಯಾವುದೇ ಕೋರ್ಟ್‌ ವಕೀಲರ ವಾದ-ಪ್ರತಿ ವಾದದ ನಂತರವೇ ತೀರ್ಪು ನೀಡಲು ಸಾಧ್ಯ. 2012ರಲ್ಲಿ ರಾಜ್ಯ ಸರ್ಕಾರವೊಂದು ಮೀಸಲು ಕಾಯ್ದೆಯಲ್ಲಿ ಬದಲಾವಣೆಗೆ ಅರ್ಜಿ ಸಲ್ಲಿಸಿದೆ. ಆ ಸರ್ಕಾರದ ವಾದ-ಪ್ರತಿವಾದವನ್ನು ಕೇಳಿಯೇ ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ. ಇದಕ್ಕೂ ಮುನ್ನವೇ ಸರ್ಕಾರಗಳೇ ಸ್ವಲ್ಪ ವಿವೇಚನೆಯಿಂದ ವರ್ತಿಸಿ, ಮೂಲ ಕಾಯ್ದೆಗಳ ಬದಲಾವಣೆಗಾಗಿ ಅರ್ಜಿ ಸಲ್ಲಿಸದೇ ಇರುವುದೇ ಒಳ್ಳೆಯದು. ಇದರಲ್ಲಿ ಕೋರ್ಟ್‌ನ ದೂರುವುದು ಸರಿಯಲ್ಲ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.