ಶಾಲಾರಂಭ, ಶುಲ್ಕ: ಸರಕಾರ ಶೀಘ್ರ ನಿರ್ಧಾರ ಪ್ರಕಟಿಸಲಿ


Team Udayavani, Jun 11, 2021, 6:20 AM IST

ಶಾಲಾರಂಭ, ಶುಲ್ಕ: ಸರಕಾರ ಶೀಘ್ರ ನಿರ್ಧಾರ ಪ್ರಕಟಿಸಲಿ

ಸಾಂದರ್ಭಿಕ ಚಿತ್ರ

ಒಂದು ಕಡೆ ಸರಕಾರ ಜುಲೈ ಒಂದರಿಂದ ಹೊಸ ಶೈಕ್ಷಣಿಕ ವರ್ಷದ ಆರಂಭ ಎಂದು ಹೇಳುತ್ತಿದ್ದರೆ, ಮತ್ತೂಂದು ಕಡೆ ಈಗಾಗಲೇ ಖಾಸಗಿ ಶಾಲೆಗಳಲ್ಲಿ ಆನ್‌ಲೈನ್‌ ಪಾಠಗಳು ಶುರುವಾಗಿರುವ ಬಗ್ಗೆ ವರದಿಗಳು ಕೇಳಿಬರುತ್ತಿವೆ. ಅಷ್ಟೇ ಅಲ್ಲ, ಜೂ.15ರಿಂದ ಶಾಲಾ ದಾಖಲಾತಿ  ಪ್ರಕ್ರಿಯೆಯನ್ನು ನಡೆಸುವಂತೆಯೂ ಸರಕಾರ ಸೂಚನೆ ನೀಡಿದೆ. ಹಾಗಿದ್ದೂ ಈಗಾಗಲೇ ಮಕ್ಕಳನ್ನು ಶಾಲೆಗೆ ದಾಖಲಿಸಿಕೊಂಡಿರುವ ಶಾಲೆಗಳು, ಆನ್‌ಲೈನ್‌ ತರಗತಿ ಆರಂಭಿಸಿದ್ದು, ಹೆತ್ತವರನ್ನು ಗೊಂದಲಕ್ಕೆ ಸಿಲುಕಿಸಿದೆ. ಜತೆಗೆ ಶುಲ್ಕದ ಬಗ್ಗೆಯೂ ರಾಜ್ಯ ಸರಕಾರ ಇನ್ನೂ ಯಾವುದೇ ತೀರ್ಮಾನ ತೆಗೆದುಕೊಳ್ಳದಿರುವುದು  ಹೆತ್ತವರನ್ನು ಮತ್ತಷ್ಟು ಚಿಂತೆಗೀಡು ಮಾಡಿದೆ.

ಜೂ.4ರಂದೇ ರಾಜ್ಯ ಸರಕಾರ ಶಾಲಾರಂಭದ ಬಗ್ಗೆ ಪ್ರಕಟನೆೆ ಹೊರಡಿಸಿತ್ತು. ಅಂದರೆ, ಜೂ.15ರಿಂದ ಶಾಲಾ ದಾಖಲಾತಿ ಆರಂಭವಾಗಬೇಕು, ಜು.1ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಮೊದಲ ಅವಧಿ ಜು.1ರಿಂದ ಅ. 9ರ ವರೆಗೆ ಇರಲಿದೆ. ಅನಂತರ 10 ದಿನಗಳ ರಜೆ. ಒಟ್ಟು 304 ದಿನಗಳಲ್ಲಿ 66 ರಜಾ ದಿನ, ವಿವೇಚನ ರಜೆ, ದಸರಾ ರಜೆ ಹೊರತುಪಡಿಸಿ ಶಾಲೆಗಳಿಗೆ 223 ದಿನಗಳು ಸಿಗಲಿವೆ ಎಂದಿತ್ತು. ಅಲ್ಲದೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಆಯುಕ್ತರೇ ಅಂದು ಪ್ರಕಟನೆ ಹೊರಡಿಸಿ, ಜೂ. 15ರಿಂದ ಆಗಸ್ಟ್‌ 31ರ ವರೆಗೆ ಪ್ರವೇಶ ಪ್ರಕ್ರಿಯೆ ನಡೆಯಲಿದೆ ಎಂದಿದ್ದರು.

ಇದರ ಮಧ್ಯೆಯೇ ಸರಕಾರ ಪ್ರಕಟಿಸಿರುವಂತೆಯೇ ಶಾಲಾ ದಾಖಲಾತಿ ಆರಂಭಕ್ಕೆ ಇನ್ನು ಕೇವಲ ನಾಲ್ಕು ದಿನಗಳು ಮಾತ್ರ ಉಳಿದಿವೆ. ಈಗಾಗಲೇ ಪೋಷಕರು, ಶಾಲಾಡಳಿತ ಮಂಡಳಿಗಳು ಶುಲ್ಕವನ್ನು ನಿಗದಿ ಪಡಿಸುವಂತೆ ಹಲವಾರು ಬಾರಿ ಮನವಿ ಮಾಡಿಕೊಂಡಿದ್ದರೂ, ಸರಕಾರ ಮಾತ್ರ ಇನ್ನೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಕಳೆದ ವರ್ಷವೂ ಅಳೆದು, ತೂಗಿ ಸರಕಾರ ಬಹಳಷ್ಟು ತಡವಾಗಿ ಶಾಲಾ ಶುಲ್ಕ ನಿಗದಿ ಮಾಡಿತ್ತು. ಶೇ.30ರಷ್ಟು ಶುಲ್ಕವನ್ನು ಕಡಿತಗೊಳಿಸುವಂತೆ ಶಾಲಾಡಳಿತ ಮಂಡಳಿಗಳಿಗೆ ಸೂಚನೆ ನೀಡಿತ್ತು. ವಿಚಿತ್ರವೆಂದರೆ ಆ ಹೊತ್ತಿಗಾಗಲೇ ಎಷ್ಟೋ ಶಾಲೆಗಳು ಪೂರ್ಣ ಶುಲ್ಕವನ್ನು ವಸೂಲಿ ಮಾಡಿಕೊಂಡಿದ್ದವು. ಈಗ ಮತ್ತೆ ಅದೇ ರೀತಿಯಲ್ಲಿ ತಡ ಮಾಡಿದರೆ, ಶಾಲೆಗಳು ಪೂರ್ಣ ಶುಲ್ಕ ಕಟ್ಟುವಂತೆ  ಹೆತ್ತವರ ಮೇಲೆ ಒತ್ತಡ ತರಬಹುದು. ಹೀಗಾಗಿ, ಆದಷ್ಟು ಬೇಗ ಸರಕಾರ ಶುಲ್ಕ ನಿಗದಿ ಮಾಡಬೇಕಿದೆ.

ಕಳೆದ ವರ್ಷದಂತೆ ಈಗಲೂ ಕೊರೊನಾ ಹೋಗಿಲ್ಲ. ಸದ್ಯ ಲಾಕ್‌ಡೌನ್‌ ಜಾರಿಯಲ್ಲಿದ್ದು  ಹೆತ್ತವರು ಕೆಲಸ ಕಳೆದುಕೊಂಡು, ದುಡಿಮೆ ಇಲ್ಲದೇ ಕಷ್ಟ ಅನುಭವಿಸಿದ್ದಾರೆ. ಇಂಥ ಸಂದರ್ಭದಲ್ಲಿ ಶುಲ್ಕ ನಿಗದಿ ಮಾಡುವ ಜತೆಗೇ, ಶುಲ್ಕ ಕಡಿತದಂಥ ಕ್ರಮಕ್ಕೂ ಮುಂದಾಗಬೇಕು. ಕನಿಷ್ಠ ಪಕ್ಷ ಕಳೆದ ಬಾರಿಯಂತೆಯೇ ಶೇ.30ರಷ್ಟು ಶುಲ್ಕವನ್ನಾದರೂ ಕಡಿತ ಮಾಡಬೇಕು. ಸದ್ಯ ಶಾಲೆಗಳು ಕೂಡ ತಾವು ನಷ್ಟಕ್ಕೀಡಾಗಿದ್ದೇವೆ, ಶುಲ್ಕ ಕಡಿತ ಬೇಡ ಎಂದು ಸರಕಾರದ ಮುಂದೆ ಬೇಡಿಕೆ ಸಲ್ಲಿಸಿವೆ. ಆದರೆ, ಸರಕಾರ  ಹೆತ್ತವ‌ರ ಕಷ್ಟವನ್ನೂ ಮನಸ್ಸಿನಲ್ಲಿ ಇರಿಸಿಕೊಂಡು ಶುಲ್ಕ ನಿಗದಿ ಮಾಡಬೇಕು.

ಶಾಲಾರಾಂಭ ಮತ್ತು ಶುಲ್ಕ ನಿಗದಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಯಾರ ಒತ್ತಡಕ್ಕೂ ಮಣಿಯದೇ ರಾಜ್ಯ ಸರಕಾರ ಶೀಘ್ರವಾಗಿ ನಿರ್ಧಾರ ತೆಗೆದುಕೊಳ್ಳಬೇಕು. ಈ ನಿರ್ಧಾರದಿಂದ ಯಾರಿಗೂ ಅನ್ಯಾಯವಾಗಬಾರದು ಎಂಬುದೂ ಮನಸಿನಲ್ಲಿರಬೇಕು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.