ಇಂದಿನಿಂದ ಅಧಿವೇಶನ: ರಚನಾತ್ಮಕವಾದ ಚರ್ಚೆಯಾಗಲಿ


Team Udayavani, Dec 7, 2022, 6:00 AM IST

ಇಂದಿನಿಂದ ಅಧಿವೇಶನ: ರಚನಾತ್ಮಕವಾದ ಚರ್ಚೆಯಾಗಲಿ

ಬುಧವಾರ ಸಂಸತ್‌ ಅಧಿವೇಶನ ಆರಂಭವಾಗಲಿದ್ದು, ಬೆಲೆ ಏರಿಕೆ, ಗಡಿಯಲ್ಲಿ ಚೀನ ಉದ್ಧಟತನ, ಕೇಂದ್ರದಿಂದ ಸರಕಾರಿ ಸಂಸ್ಥೆಗಳ ದುರುಪಯೋಗ ಆರೋಪ ಸಹಿತ ಹಲವಾರು ವಿಚಾರಗಳು ಚರ್ಚೆಗೆ ಬರುವ ಸಾಧ್ಯತೆ ಇದೆ. ಡಿ.7ರಂದು ಆರಂಭವಾಗಲಿರುವ ಅಧಿವೇಶನ, ಡಿ.29ಕ್ಕೆ ಮುಗಿಯಲಿದೆ. ಒಟ್ಟಾರೆಯಾಗಿ 17 ದಿನಗಳ ಕಾಲ ಅಧಿವೇಶನ ನಡೆಯಲಿದೆ.

ಹಾಗೆಯೇ ಕೇಂದ್ರ ಸರಕಾರ ಒಟ್ಟು ಹೊಸದಾಗಿ 16 ಹೊಸ ಮಸೂದೆಗಳನ್ನು ಮಂಡಿಸಲು ಮುಂದಾಗಿದೆ. ಜತೆಗೆ ಹಿಂದಿನ ಮಸೂದೆಗಳ ಸಹಿತ ಒಟ್ಟು 25 ಮಸೂದೆಗಳಿಗೆ ಅಂಗೀಕಾರ ಪಡೆಯುವ ಉದ್ದೇಶ ಇರಿಸಿಕೊಂಡಿದೆ. ಕೇವಲ 17 ದಿನಗಳ ಅಧಿವೇಶನದಲ್ಲಿ ಈ ಪ್ರಮಾಣದ ಮಸೂದೆಗಳಿಗೆ ಅಂಗೀಕಾರ ಪಡೆಯುವ ಅಗತ್ಯವಾದರೂ ಏನಿದೆ ಎಂಬುದು ವಿಪಕ್ಷಗಳ ಪ್ರಶ್ನೆ. ಏಕೆಂದರೆ ವಿಪಕ್ಷಗಳ ಪ್ರಕಾರ ಯಾವುದೇ ಮಸೂದೆ ಅಂಗೀಕಾರವಾಗುವ ಮುನ್ನ ಅದರ ಸಾಧಕ-ಬಾಧಕಗಳ ಬಗ್ಗೆ ಚರ್ಚೆಯಾಗಬೇಕು. ಈ ಬಗ್ಗೆ ಸಂಸತ್‌ನ ಸ್ಥಾಯಿ ಸಮಿತಿಗಳಿಗೆ ಹೋಗಿ, ಅಲ್ಲಿ ಒಂದು ಪರಿಷ್ಕರಣೆ ನಡೆಯಬೇಕು. ಇದಾದ ಬಳಿಕವಷ್ಟೇ ಮಸೂದೆಗಳಿಗೆ ಅನುಮೋದನೆ ಪಡೆಯಬೇಕು ಎಂಬುದು ವಿಪಕ್ಷಗಳ ಅಭಿಪ್ರಾಯ. ಆದರೆ ಇತ್ತೀಚಿನ ದಿನಗಳಲ್ಲಿ ಈ ಪ್ರಕ್ರಿಯೆ ನಡೆಯುತ್ತಿಲ್ಲ. ಸರಕಾರ ಹೇಳುವ ಪ್ರಕಾರ ಈ ಪ್ರಕ್ರಿಯೆಯಿಂದಾಗಿ ಮಸೂದೆಗೆ ಒಪ್ಪಿಗೆ ನೀಡುವ ಅವಧಿಯೇ ಸುದೀರ್ಘ‌ವಾಗಿರುತ್ತದೆ. ಇದರಿಂದ ಕಾಯ್ದೆಗಳನ್ನು ಜಾರಿಗೆ ತರಲು ಸಾಕಷ್ಟು ವಿಳಂಬವಾಗುತ್ತದೆ. ಒಂದು ದೃಷ್ಟಿಕೋನದಿಂದ ಈ ಸಂಗತಿ ಹೌದು ಎನ್ನಿಸಿದರೂ ಯಾವುದೇ ಮಸೂದೆಗಳನ್ನು ಜಾರಿಗೆ ತರಲು ಒಂದಷ್ಟು ಪರಿಷ್ಕರಣೆಯಾಗುವುದು ಅಗತ್ಯ. ಜತೆಗೆ ವಿಪಕ್ಷಗಳ ಬೆಂಬಲ ಪಡೆದು ಸರ್ವಾನುಮತದಿಂದ ಅಂಗೀಕಾರವಾದರೆ ಇನ್ನೂ ಉತ್ತಮ.

ಈ ಅಧಿವೇಶನ ಆರಂಭದ ಎರಡನೇ ದಿನವೇ ಗುಜರಾತ್‌ ಮತ್ತು ಹಿಮಾಚಲ ಪ್ರದೇಶ ಚುನಾವಣ ಫ‌ಲಿತಾಂಶ ಹೊರಬೀಳಲಿದೆ. ಎರಡೂ ರಾಜ್ಯಗಳ ಫ‌ಲಿತಾಂಶವೂ ಸದನದಲ್ಲಿ ಸದ್ದು ಮಾಡುವ ಸಾಧ್ಯತೆಗಳಿವೆ.

ಕಳೆದ ಮುಂಗಾರು ಅಧಿವೇಶನ ಅಷ್ಟೇನೂ ರಚನಾತ್ಮಕವಾಗಿರಲಿಲ್ಲ. ಗದ್ದಲದಲ್ಲಿಯೇ ಶುರುವಾದ ಗದ್ದಲದಲ್ಲೇ ನಾಲ್ಕು ದಿನ ಮುಂಚೆಯೇ  ಮುಗಿದಿತ್ತು. ಅಧಿವೇಶನ ಕಾಲದಲ್ಲಿಯೇ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತಿತರರಿಗೆ ವಿಚಾರಣೆಗಾಗಿ ಇ.ಡಿ. ನೋಟಿಸ್‌ ನೀಡಿದ್ದು ಗದ್ದಲ ಸೃಷ್ಟಿಸಿತ್ತು.

ಕೇಂದ್ರ ಸರಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ವಿಪಕ್ಷಗಳು ಆರೋಪಿಸಿದ್ದವು. ಹಾಗೆಯೇ ಗದ್ದಲದ ಕಾರಣದಿಂದಾಗಿ 27 ಸಂಸದರನ್ನು ಕಲಾಪದಿಂದ ಅಮಾನತು ಮಾಡಲಾಗಿತ್ತು. ಈ ಎಲ್ಲ ಗದ್ದಲದಿಂದಾಗಿ ಲೋಕಸಭೆಯಲ್ಲಿ 44 ಗಂಟೆಗಳ ಕಾಲ ಅಧಿವೇಶನ ನಡೆದಿದ್ದರೆ ರಾಜ್ಯಸಭೆಯಲ್ಲಿ 38 ಗಂಟೆಗಳ ಕಾಲ ಕಲಾಪ ಆಗಿತ್ತು. ಈ ಬಾರಿಯೂ ಹೆಚ್ಚು ಕಡಿಮೆ ವಿಪಕ್ಷಗಳು ಕಳೆದ ಬಾರಿಯ ವಿಚಾರಗಳನ್ನೇ ಮುಂದಿಟ್ಟುಕೊಂಡಿವೆ.

ಬೆಲೆ ಏರಿಕೆ, ಜಿಎಸ್‌ಟಿ, ಕೇಂದ್ರ ಸಂಸ್ಥೆಗಳ ದುರುಪಯೋಗ, ಗಡಿಯಲ್ಲಿ ಚೀನದ ವರ್ತನೆ, ಕೇಂದ್ರ ಚುನಾವಣ ಆಯೋಗಕ್ಕೆ ಆಯುಕ್ತರ ನೇಮಕ ವಿವಾದ ಸಹಿತ ಹಲವಾರು ವಿಚಾರಗಳ ಬಗ್ಗೆ ಗಮನ ಸೆಳೆಯಲು ವಿಪಕ್ಷಗಳು ಸಜ್ಜಾಗಿವೆ. ಆದರೆ ಇಲ್ಲಿ ಆಡಳಿತದಲ್ಲಿರುವ ಸರಕಾರವಾಗಲಿ ಅಥವಾ ವಿಪಕ್ಷಗಳಾಗಲಿ ತಮ್ಮ ಪಟ್ಟು ಬಿಟ್ಟು ಕಲಾಪ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಸರಕಾರವೂ ಆದಷ್ಟು ಮಟ್ಟಿಗೆ ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು. ಇಲ್ಲದಿದ್ದಲ್ಲಿ ಮತ್ತೆ ಗದ್ದಲದ ಅಧಿವೇಶನವಾಗುವುದರಲ್ಲಿ ಅನುಮಾನವಿಲ್ಲ.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.