ಶಾಂತಿ ಕಾಪಾಡಿ, ಕರುನಾಡಿನ ಮಾನ ಉಳಿಸಿ


Team Udayavani, Feb 22, 2022, 6:00 AM IST

ಶಾಂತಿ ಕಾಪಾಡಿ, ಕರುನಾಡಿನ ಮಾನ ಉಳಿಸಿ

ಧಾರ್ಮಿಕ ಸಂಗತಿಗಳ ವಿಚಾರದಲ್ಲಿ ಇತ್ತೀಚಿನ ದಿನಗಳಲ್ಲಿ ಪದೇ ಪದೆ ರಾಜ್ಯದಲ್ಲಿ ಸಂಘರ್ಷಗಳುಂಟಾಗುತ್ತಿವೆ. ಮೊದಲಿಗೆ ಹಿಜಾಬ್‌ ಧರಿಸುವಿಕೆಯ ವಿವಾದ, ಬಳಿಕ ಕೇಸರಿ ಧ್ವಜ ವಿವಾದ ಈಗ ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತನ ಕೊಲೆ ವಿಚಾರದಲ್ಲಿ ಸಂಘರ್ಷಗಳಾಗುತ್ತಿವೆ. ಈ ಘಟನೆಗಳಿಂದಾಗಿ ಇಡೀ ದೇಶದ ಮುಂದೆ ರಾಜ್ಯ ತಲೆತಗ್ಗಿಸುವಂತಾಗಿದೆ.

ಆರಂಭದಿಂದಲೂ ಕರ್ನಾಟಕದ ಜನತೆ ಎಂದರೆ, ಶಾಂತಿಪ್ರಿಯರು ಎಂಬ ಮಾತಿತ್ತು. ಆದರೆ ಅನಂತರದ ದಿನಗಳಲ್ಲಿ ಕೋಮು ಸಂಘರ್ಷ ರಾಜ್ಯಕ್ಕೆ ಕಾಲಿಟ್ಟುಬಿಟ್ಟಿತು. ಇದು ರಾಜ್ಯದ ಯಾವುದೋ ಒಂದು ಮೂಲೆಯಲ್ಲಿ ಕಾಣಿಸಿಕೊಂಡು ಅಲ್ಲೇ ತಣ್ಣಗಾಗುವ ಪರಿಸ್ಥಿತಿಯೂ ಇತ್ತು. ಆದರೆ ಈಗ ಯಾವುದೇ ರೀತಿಯ ಸಂಘರ್ಷಗಳಿಗೆ ರಾಜಕೀಯ ಬಣ್ಣ ಸಿಕ್ಕಿ, ಇಂಥ ಘಟನೆಗಳು ರಾಜ್ಯವ್ಯಾಪಿ ಪಸರಿಸುತ್ತಿವೆ. ಯಾವುದೇ ನಾಗರಿಕ ಸಮಾಜದಲ್ಲಿ ಸಂಘರ್ಷಕ್ಕೆ ಅವಕಾಶವೇ ಇಲ್ಲ. ಯಾವುದೇ ಧರ್ಮೀಯರಾದರೂ ಸರಿ ಹೊಂದಿಕೊಂಡು ಬಾಳುವುದೇ ಮಾನವ ಧರ್ಮ. ಸಂಘರ್ಷ, ಸಾವು ನೋವುಗಳು ಯಾರಿಗೂ ಒಳ್ಳೆಯ ಹೆಸರನ್ನು ತಂದುಕೊಡುವುದಿಲ್ಲ. ಆದರೆ ಇಂಥ ಘಟನೆಗಳು ರಾಜಕೀಯವಾಗಿ ಒಂದಷ್ಟು ಲಾಭ ತಂದುಕೊಡಬಹುದು. ಹಾಗೆಂದು ರಾಜಕೀಯ ಲಾಭಕ್ಕಾಗಿ ಜನರ ನಡುವೆಯೇ ಕಿಚ್ಚು ಹಚ್ಚುವುದು ಸರ್ವಥಾ ಒಪ್ಪುವಂಥದ್ದಲ್ಲ.

ಈಗ ಆಗಿರುವ ಘಟನೆಯನ್ನೇ ತೆಗೆದುಕೊಂಡರೆ ರವಿವಾರ ಸಂಜೆವರೆಗೂ ಮಲೆನಾಡು ಭಾಗದ ಪ್ರಮುಖ ಜಿಲ್ಲೆ ಶಿವಮೊಗ್ಗ ಶಾಂತಿಯುತ

ವಾಗಿಯೇ ಇತ್ತು. ರಾತ್ರಿ ವೇಳೆಗೆ ಹಿಂದೂ ಸಂಘಟನೆಯೊಂದರ ಯುವಕ ಹರ್ಷ ಎಂಬಾತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದರು. ಇದಾದ ಕೆಲವೇ ಹೊತ್ತಿನಲ್ಲಿ ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ಕಂಡು ಬಂದಿತು. ರವಿವಾರ ರಾತ್ರಿಯಿಂದ ಬೂದಿಮುಚ್ಚಿದ ಕೆಂಡಂದಂತಿದ್ದ ಶಿವಮೊಗ್ಗ, ಸೋಮವಾರ ಬೆಳಗ್ಗೆ ದಿಗ್ಗನೇ ಹೊತ್ತಿಕೊಂಡಿತು. ಅದರಲ್ಲೂ ಮೆಗ್ಗಾನ್‌ ಆಸ್ಪತ್ರೆಯಿಂದ ಮೃತ ಯುವಕನ ನಿವಾಸಕ್ಕೆ ಮೆರವಣಿಗೆಯಲ್ಲೇ ಪಾರ್ಥಿವ ಶರೀರ ತೆಗೆದುಕೊಂಡು ಹೋಗಲಾಯಿತು. ಈ ವೇಳೆ ಕೆಲವು ದುಷ್ಕರ್ಮಿಗಳು, ದಾರಿಯಲ್ಲಿ ಸಿಕ್ಕ ಸಿಕ್ಕ ಅಂಗಡಿಗಳು, ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿದರು. ಸಂಜೆ ವೇಳೆಗೆ ಪೊಲೀಸ್‌ ಜೀಪೊಂದಕ್ಕೆ ಬೆಂಕಿ  ಹಚ್ಚಿದರು.

ಹಿಂದೂ ಯುವಕ ಹರ್ಷನ ಕೊಲೆ ವಿಚಾರ ಈಗ ದೇಶಾದ್ಯಂತ ಸುದ್ದಿಯಾಗಿದೆ. ಶಿವಮೊಗ್ಗ ಹೊತ್ತಿ ಉರಿದದ್ದೂ ರಾಷ್ಟ್ರೀಯ ಸುದ್ದಿಯಾಗಿದೆ. ಕಳೆದ ಕೆಲವು ದಿನಗಳಿಂದ ಹಿಜಾಬ್‌ ಮತ್ತು ಕೇಸರಿ ಧ್ವಜ ವಿಚಾರ ಸಂಬಂಧ ಕೋಮು ಘರ್ಷಣೆಯಂಥ ಸುದ್ದಿಯಲ್ಲೇ ಇದ್ದ ರಾಜ್ಯ ಈಗ ಮತ್ತೂಂದು ಅಂಥದ್ದೇ ಸುದ್ದಿಗೆ ಕುಖ್ಯಾತಿ ಪಡೆದುಕೊಂಡಿತು.

ಇಂಥ ಸೂಕ್ಷ್ಮ ವಿಚಾರಗಳನ್ನು ನಿಭಾಯಿಸುವ ವಿಚಾರದಲ್ಲಿ ಸರಕಾರಗಳು ಮತ್ತು ವಿಪಕ್ಷಗಳು ತೀರಾ ಜಾಗ್ರತೆಯಿಂದ ಹೆಜ್ಜೆ ಇಡಬೇಕಾದ ಅನಿವಾರ್ಯ ಸ್ಥಿತಿ ಸದ್ಯದ ಮಟ್ಟಿಗಂತೂ ಇದ್ದೇ ಇದೆ. ಈ ಘಟನೆಯ ಆರೋಪಿಗಳನ್ನು ಬಂಧಿಸಿ ಕಾನೂನಿನಡಿ ಶೀಘ್ರ ಅಗತ್ಯ ಕ್ರಮ ಕೈಗೊಳ್ಳಬೇಕು. ಜಾಗತಿಕವಾಗಿ ಬೆಂಗಳೂರಿನ ಮೂಲಕ ಗುರುತಿಸಿಕೊಂಡಿರುವ ರಾಜ್ಯಕ್ಕೆ ಕೆಟ್ಟ ಹೆಸರು ಬರುವುದು ಬೇಡ. ಹೀಗಾಗಿ ಎಲ್ಲ ರಾಜಕೀಯ ಪಕ್ಷಗಳು, ಇಂಥ ವಿಚಾರದಲ್ಲಿ ರಾಜಕೀಯ ಮಾಡದೇ ಬೇಗನೇ ಪರಿಸ್ಥಿತಿಯನ್ನು ಶಾಂತಗೊಳಿಸುವ ಪ್ರಯತ್ನಕ್ಕೆ ಮುಂದಾಗಬೇಕು. ಆಗಷ್ಟೇ ರಾಜ್ಯದ ಮರ್ಯಾದೆ ಉಳಿಯಲು ಸಾಧ್ಯ.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.