ಪ್ರಜಾಪ್ರಭುತ್ವಕ್ಕೆ ಮಸಿ ಬಳಿಯುವ ಕೃತ್ಯ: ಇದು ನಾಚಿಕೆಗೇಡು


Team Udayavani, May 10, 2018, 6:00 AM IST

12.jpg

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಸಾವಿರಾರು ಮತದಾನ ಗುರುತಿನ ಚೀಟಿ ಸಂಗ್ರಹಿಸಿ ಇಟ್ಟುಕೊಂಡಿರುವುದು ಇಡೀ ಪ್ರಜಾಪ್ರಭುತ್ವಕ್ಕೆ ಮಸಿ ಬಳಿಯುವಂಥ ಘಟನೆ. ಇಲ್ಲಿ ಸಿಕ್ಕಿರುವ ಎಲ್ಲಾ ಗುರುತಿನ ಚೀಟಿಗಳು ಅಸಲಿಯಾಗಿದ್ದೇ ಆದರೆ, ಅವು ಬಂದದ್ದು ಎಲ್ಲಿಂದ ಎಂಬುದು ಮೂಲಭೂತ ಪ್ರಶ್ನೆ. ಒಂದು ವೇಳೆ ರಾಜಕೀಯ ನಾಯಕರು ಮತದಾರರಿಗೆ ಆಮಿಷ ನೀಡುವ ಸಲುವಾಗಿಯೇ ಈ ಗುರುತಿನ ಚೀಟಿಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡಿದ್ದಾದರೆ ಇಡೀ ಚುನಾವಣಾ ಪ್ರಕ್ರಿಯೆ ಮೇಲೆ ಕರಿನೆರಳು ಬೀಳುವುದು ಖಂಡಿತ. 

ಇದುವರೆಗಿನ ಚುನಾವಣಾ ಅಕ್ರಮಗಳು ಹಣ, ಹೆಂಡ, ಚಿನ್ನ, ಸೀರೆ ಸೇರಿದಂತೆ ವಿವಿಧ ವಸ್ತುಗಳ ಹಂಚಿಕೆ ರೂಪದಲ್ಲಿ ವರದಿಯಾಗುತ್ತಿದ್ದವು. ಆದರೆ, ಈ ವೋಟರ್‌ ಐಡಿ ಅಕ್ರಮ ಹೊಸ ಮಾದರಿಯದ್ದಾಗಿದ್ದು ಮತದಾರ ತನ್ನ ಹಕ್ಕನ್ನೇ ಕಳೆದುಕೊಳ್ಳುವ ಅಥವಾ ಇದುವರೆಗೆ ಆತ ತನ್ನ ಮತದ ಹಕ್ಕಿನ ಮೇಲೆ ಇಟ್ಟಿರುವ ನಂಬಿಕೆಗೆ ಕೊಡಲಿಪೆಟ್ಟು ನೀಡುವಂಥದ್ದಾಗಿದೆ. ಹೀಗಾಗಿ ಚುನಾವಣಾ ಆಯೋಗ ಯಾವುದೇ ಮೀನಮೇಷ ಎಣಿಸದೇ, ಯಾವುದೇ ರಾಜಕೀಯ ಪ್ರಭಾವಕ್ಕೂ ಒಳಗಾಗದೇ ಕೂಲಂಕಶ ತನಿಖೆ ನಡೆಸಿ ಚುನಾವಣಾ ಪ್ರಕ್ರಿಯೆ ಮುಂದುವರೆಸುವ ಅಥವಾ ಸ್ಥಗಿತಗೊಳಿಸುವ ನಿರ್ಧಾರ ಕೈಗೊಳ್ಳಬೇಕಾಗಿದೆ.    

ಈ ವೋಟರ್‌ ಐಡಿ ಸಂಗ್ರಹದ ಪ್ರಕರಣ ಬಯಲಾದ ನಂತರ ನಡೆದ ರಾಜಕೀಯ ಹೈಡ್ರಾಮಾಗಳು ಜನರ ಮನಸ್ಸಿಗೆ ಆಘಾತ ಉಂಟು ಮಾಡುವಂಥದ್ದು. ಗುರುತಿನ ಚೀಟಿ ಸಿಕ್ಕಿರುವ ಆರ್‌ಆರ್‌ ನಗರ ಕ್ಷೇತ್ರ ವ್ಯಾಪ್ತಿಯ ಜಾಲಹಳ್ಳಿಯ ಎಸ್‌ಎಲ್‌ವಿ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ ಯಾರಿಗೆ ಸೇರಿದ್ದು ಎಂಬ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿವೆ. ಅಪಾರ್ಟ್‌ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಇದು ಕಾಂಗ್ರೆಸ್‌ಗೆ ಸೇರಿದ್ದು ಎಂದು ಹೇಳಿದ್ದರೆ, ಕಾಂಗ್ರೆಸ್‌ ನಾಯಕರು ಫ್ಲ್ಯಾಟ್‌ ಬಿಜೆಪಿ ಮುಖಂಡರಿಗೇ ಸೇರಿದ್ದು ಎಂದು ಪ್ರತಿಸವಾಲು ಹಾಕಿದ್ದಾರೆ. ಆದರೆ, ಪಕ್ಷಗಳ ನಡುವಿನ ಈ ವಾಕ್ಸಮರ ಜನರಲ್ಲಿ ಇನ್ನಷ್ಟು ಗೊಂದಲಕ್ಕೆ ಕಾರಣವಾಗಿ ಚುನಾವಣಾ ವ್ಯವಸ್ಥೆ ಮೇಲಿನ ಅವರ ನಂಬಿಕೆ ಕಡಿಮೆಯಾಗಲು ಕಾರಣವಾಗಬಾರದು. ಹಾಗೆಯೇ ಮತದಾನಕ್ಕೆ ಕೇವಲ ಎರಡೇ ದಿನ ಬಾಕಿ ಇರುವಾಗ ಇಂಥ ಗೊಂದಲಗಳು ಹೆಚ್ಚಾಗಬಾರದು. 9,746 ಅಸಲಿ ಮತಪತ್ರಗಳು ಒಂದೇ ಕಡೆ ಸಿಗುತ್ತವೆ ಮತ್ತು ಅವುಗಳನ್ನು ಯಾರೋ ಒಬ್ಬ ವ್ಯಕ್ತಿ ಸಂಗ್ರಹಿಸಿದ್ದಾರೆ ಎನ್ನುವುದು ದೊಡ್ಡ ಅಪರಾಧ. ಪ್ರತಿಯೊಬ್ಬರ ಮತಚೀಟಿಗಳು ಅವರ ಬಳಿ ಇರಬೇಕೇ ಹೊರತು, ಈ ಪ್ರಮಾಣದಲ್ಲಿ ಬೇರೊಬ್ಬರು ಸಂಗ್ರಹಿಸಿ ಇಟ್ಟುಕೊಳ್ಳಬಾರದು. ಅಲ್ಲದೆ, 9,746 ಎಂಬುದು ಪುಟ್ಟ ಸಂಖ್ಯೆಯೇನಲ್ಲ. ಈ ಸಂಖ್ಯೆ ಇಡೀ ಕ್ಷೇತ್ರದ ಫ‌ಲಿತಾಂಶವನ್ನೇ ಬದಲಿಸುವ ಶಕ್ತಿಯುಳ್ಳದ್ದೂ ಆಗಿದೆ. ಇಂಥ ವಿಚಾರದಲ್ಲಿ ಚುನಾವಣಾ ಆಯೋಗ ಕೂಡ ತ್ವರಿತಗತಿಯಲ್ಲೇ ನಿರ್ಧಾರ ತೆಗೆದುಕೊಳ್ಳಬೇಕು.  ಚುನಾವಣಾ ಅಕ್ರಮ ವಿಚಾರದಲ್ಲಿ ಇದುವರೆಗೆ ಕರ್ನಾಟಕ ತೀರಾ ಕೆಟ್ಟ ರೀತಿಯ ಅನುಭವ ಎದುರಿಸಿಲ್ಲ. ಆದರೆ ನೆರೆಯ ತಮಿಳುನಾಡಿನಲ್ಲಿ ಚುನಾವಣಾ ಅಕ್ರಮಗಳು ರಾಜಾರೋಷವಾಗಿ ನಡೆದು ಚುನಾವಣಾ ಪ್ರಕ್ರಿಯೆಗಳೇ ರದ್ದಾದ ಉದಾಹರಣೆಗಳು ಸಾಕಷ್ಟಿವೆ. ಜಯಲಲಿತಾ ಸಾವಿನ ನಂತರ ನಡೆದ ಆರ್‌.ಕೆ.ನಗರ ಕ್ಷೇತ್ರದ ಉಪಚುನಾವಣೆ ಕೂಡ ಇಂಥದ್ದೇ ಚುನಾವಣಾ ಅಕ್ರಮಗಳಿಗೆ ಸಾಕ್ಷಿಯಾಗಿ ರದ್ದಾಗಿತ್ತಲ್ಲದೇ ಏಳೆಂಟು ತಿಂಗಳುಗಳ ಕಾಲ ಮತದಾನವೇ ನಡೆಯಲಿಲ್ಲ. 2016ರಲ್ಲೂ ತಂಜಾವೂರು ಮತ್ತು ಅರವ್‌ಕುರುಚಿ ಕ್ಷೇತ್ರಗಳ ಚುನಾವಣೆಯನ್ನೂ ಭಾರಿ ಹಣದ ಹಂಚಿಕೆಯ ಆರೋಪದ ಮೇಲೆ ಕೇಂದ್ರ ಚುನಾವಣಾ ಆಯೋಗ ರದ್ದು ಮಾಡಿತ್ತು. ಈ ಮೂರು ಘಟನೆಗಳೂ ತಮಿಳುನಾಡಿನ ರಾಜಕೀಯ ವಿದ್ಯಮಾನವನ್ನೇ ಸಂದೇಹಿಸುವಂಥದ್ದಕ್ಕೆ ಕಾರಣವಾಗಿದ್ದವು.  

ಇದೀಗ ಕರ್ನಾಟಕದಲ್ಲೂ ಇಂಥದ್ದೇ ಅವಮಾನಕಾರಿ ಪ್ರಸಂಗ ಎದುರಾಗಿದೆ. ಈ ಮತಚೀಟಿಗಳ ಅಕ್ರಮ ಸಂಗ್ರಹ ಘಟನೆ ರಾಜ್ಯದ ಹೆಸರಿಗೆ ಮಸಿ ಬಳಿದಿದೆ. ಕರ್ನಾಟಕದ ಮರ್ಯಾದೆ ಉಳಿವ ಸಲುವಾಗಿಯಾದರೂ ಚುನಾವಣಾ ಆಯೋಗ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಈ ಮತಚೀಟಿಗಳು ಅಲ್ಲಿ ಬಂದು ಸೇರಿದ್ದು ಹೇಗೆ ಎಂಬ ಬಗ್ಗೆ ಆಯೋಗವೇ ಜನರಿಗೆ ಮನವರಿಕೆ ಮಾಡಿಕೊಡಬೇಕಾಗಿದೆ. 

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.