ಸ್ಥಗಿತಗೊಂಡ ಆಡಳಿತ


Team Udayavani, Feb 14, 2019, 12:30 AM IST

f-9.jpg

ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ನಿಜಕ್ಕೂ ಪ್ರಜಾಪ್ರಭುತ್ವವನ್ನು ಅಣಕಿಸುವಂತಿವೆ. ಕಳೆದ ಒಂದೂವರೆ ತಿಂಗಳಿನಿಂದ ಆಪರೇಷನ್‌ ಕಮಲದ ಹೆಸರಿನಲ್ಲಿ ನಡೆಯುತ್ತಿರುವ “ಹೈಡ್ರಾಮ’ ಒಂದು ಕಡೆ, ಸರ್ಕಾರದ ಸಂಖ್ಯಾಬಲ ಕುಸಿಯದಂತೆ ನೋಡಿಕೊಳ್ಳುವ “ಕಸರತ್ತು’ ಮತ್ತೂಂದು ಕಡೆ ಇದರ ನಡುವೆ ರಾಜ್ಯದಲ್ಲಿ ಆಡಳಿತವಂತೂ ಸ್ಥಗಿತಗೊಂಡಿರುವುದು ಸತ್ಯದ ಸಂಗತಿ.

ಜಂಟಿ ಅಧಿವೇಶನ ಫೆ.6 ರಂದು ಪ್ರಾರಂಭವಾಗಿ ಫೆ.8 ರಂದು ಬಜೆಟ್‌ ಮಂಡನೆಯಾದರೂ ಇದುವರೆಗೂ ವಿಧಾನಸಭೆಯಲ್ಲಿ  ಆರು ದಿನ ಕಲಾಪವೇ ನಡೆದಿಲ್ಲ. ರಾಜ್ಯಪಾಲರ ಭಾಷಣದ ಸಂದರ್ಭದಲ್ಲಿ ಸರ್ಕಾರಕ್ಕೆ ಬಹುಮತ ಇಲ್ಲ ಎಂದು ಬಿಜೆಪಿ ಪ್ರತಿಭಟನೆ ಮಾಡಿತ್ತು. ಇನ್ನು ಬಜೆಟ್‌ ಸಂದರ್ಭದಲ್ಲಿ ಬಜೆಟ್‌ ಪ್ರತಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಗದ್ದಲ ಉಂಟಾಗಿತ್ತು. ಇದರ ನಡುವೆ ಆಪರೇಷನ್‌ ಕಮಲ ಕಾರ್ಯಾಚರಣೆಯ ಸಂಬಂಧದಲ್ಲಿ ಯಡಿಯೂರಪ್ಪ ಆಡಿದ ಮಾತುಗಳೂ ಹೊರಬಿದ್ದು ಗದ್ದಲ ಜೋರಾಯಿತು. ಎರಡು ಮೂರು ದಿನ ಇದೇ ವಿಚಾರದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ನಡುವೆ ಹಗ್ಗ ಜಗ್ಗಾಟ ನಡೆದು ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದರೆ ಪ್ರತಿಪಕ್ಷ ಬಿಜೆಪಿ ನ್ಯಾಯಾಂಗ ಅಥವಾ ಸದನ ಸಮಿತಿ ರಚಿಸಿ ಎಂದು ಪಟ್ಟು ಹಿಡಿದು ಕಲಾಪ ನಡೆಯಲಿಕ್ಕೂ ಬಿಡಲಿಲ್ಲ. ಒಟ್ಟಾರೆ ಆರು ದಿನ ಕಲಾಪ ನಡೆಯದಂತಹ ಸ್ಥಿತಿ ನಿರ್ಮಾಣವಾಗಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ. ಈಗ ಹಾಸನ ಶಾಸಕ ಪ್ರೀತಂಗೌಡ ಆಡಿಯೋವೊಂದರಲ್ಲಿ ದೇವೇಗೌಡರು, ಕುಮಾರಸ್ವಾಮಿಯವರ ಬಗ್ಗೆ ಆಡಿದ ಮಾತುಗಳು ಜೆಡಿಎಸ್‌ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದ್ದು ಹಾಸನದಲ್ಲಿ ಪ್ರೀತಂಗೌಡ ಮನೆಯ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿದೆ. 

ಇದರಿಂದಾಗಿ ಇಡೀ ಪ್ರಕರಣ ಮತ್ತೂಂದು ತಿರುವು ಪಡೆದಿದೆ. ಪ್ರತಿಪಕ್ಷ ನಾಯಕ ಯಡಿಯೂರಪ್ಪ ಅವರು ಶಾಸಕರ ಜತೆಗೂಡಿ ಹಾಸನಕ್ಕೆ ಖಂಡಿಸಲು ಹೋಗಿದ್ದಾರೆ. ಪ್ರೀತಂಗೌಡ ಅವರ ಮನೆಯ ಮೇಲೆ ನಡೆದಿರುವ ದಾಳಿಯು ರಾಜ್ಯದ ಕಾನೂನು ಸುವ್ಯವಸ್ಥೆಯ ಮೇಲೆ ಪ್ರಶ್ನೆಗಳು ಉದ್ಭವಿಸುವಂತೆ ಮಾಡಿವೆ. ರಾಜಕೀಯ ವಲಯದಲ್ಲಿನ ತಿಕ್ಕಾಟಗಳು ಸಾರ್ವಜನಿಕವಾಗಿಯೂ ಪ್ರತಿಬಿಂಬಿಸಲು ಆರಂಭವಾಗಿದೆಯೇ ಎಂಬ ಆತಂಕ ಕಾಡುವಂತಾಗಿದೆ. ಅತ್ತ ಕಾಂಗ್ರೆಸ್‌ನ ನಾಲ್ವರು ಶಾಸಕರು ಅಧಿವೇಶನ ಆರಂಭವಾದಾಗಿನಿಂದ ಸದನಕ್ಕೆ ಬಾರದೆ ಮುಂಬೈನ ಹೋಟೆಲ್‌ನಲ್ಲಿದ್ದದ್ದು ಮತ್ತಷ್ಟು ಶಾಸಕರು ಅವರ ಜತೆಗೂಡಲಿದ್ದಾರೆ ಎಂಬ ಮಾತುಗಳಿಂದ ಸರ್ಕಾರಕ್ಕೂ ಆತಂಕ ಎದುರಾಗಿತ್ತು. ಆದರೆ, ರಮೇಶ್‌ ಜಾರಕಿಹೊಳಿ, ನಾಗೇಂದ್ರ, ಮಹೇಶ್‌ ಕುಮಟಳ್ಳಿ, ಉಮೇಶ್‌ ಜಾಧವ್‌ ಬುಧವಾರ ವಿಧಾನಸಭೆಯಲ್ಲಿ ಹಾಜರಾಗಿ ಅಚ್ಚರಿ ಮೂಡಿಸಿದ್ದಾರೆ. ಜತೆಗೆ ಜೆಡಿಎಸ್‌ನ ನಾರಾಯಣಗೌಡ ಸಹ ಪ್ರತ್ಯಕ್ಷವಾಗಿ ನಾನು ಆರೋಗ್ಯ ಸಮಸ್ಯೆ ಇದ್ದ ಕಾರಣ ತಪಾಸಣೆಗೆ ಹೋಗಿದ್ದೆ ಎಂದು ಸಮಜಾಯಿಷಿ ನೀಡಿದ್ದಾರೆ. ಇವೆಲ್ಲರೂ ಎಲ್ಲಿದ್ದರು, ಈಗೇಕೆ ಬಂದರು ಎಂಬುವ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಒಟ್ಟಲ್ಲಿ ರಾಜ್ಯದ ಆಡಳಿತ ಯಂತ್ರ ಈ ಎಲ್ಲಾ ಅಡೆತಡೆಗಳಿಂದ ಚಲನೆ ಕಳೆದುಕೊಂಡಿದ್ದು, ಅದು ಯಾವಾಗ ಚಲಿಸುತ್ತದೋ ಎಂಬ ಚಿಂತೆ 

ನಾಗರಿ ಕರನ್ನು ಕಾಡಲಾರಂಭಿಸಿದೆ. ಆದರೆ ನಡೆ-ನುಡಿಗಳಲ್ಲಿ ಹಾದಿತಪ್ಪಿರುವ ಜನನಾಯಕರಿಗೆ ಸಾರ್ವಜನಿಕರ ಈ ಪ್ರಶ್ನೆಗಳು ಕಿವಿಗೆ ಬೀಳದಿರುವುದು ಸದ್ಯದ ದುರಂತ. 
 

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.