ಸಿದ್ದರಾಮಯ್ಯನವರೂ ಅತಂತ್ರ ಪರಾಮರ್ಶೆಯ ಅಗತ್ಯವಿದೆ


Team Udayavani, May 17, 2018, 6:00 AM IST

cm-ankana.jpg

ತವರು ಕ್ಷೇತ್ರವಾದ ಚಾಮುಂಡೇಶ್ವರಿಯಲ್ಲಿ ಹೀನಾಯವಾಗಿ ಸೋತಿರುವ, ಬಾದಾಮಿಯಲ್ಲಿ ಪ್ರಯಾಸದ ಗೆಲುವು ಸಾಧಿಸಿರುವ ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲಿ ಒಂಟಿಯಾಗುತ್ತಿದ್ದಾರೆಯೇ? ಅವರ ರಾಜಕೀಯ ಭವಿಷ್ಯ ಇಲ್ಲಿಗೆ ಮುಗಿಯಿತೆ? ಹೀಗೊಂದು ಪ್ರಶ್ನೆ ಫ‌ಲಿತಾಂಶ ಪ್ರಕಟವಾದ ಬಳಿಕ ಸುಳಿದಾಡುತ್ತಿದೆ. ಸಿದ್ದರಾಮಯ್ಯ ಮೇಲೆ ಹಿರಿಯ ನಾಯಕ ಕೋಳಿವಾಡ ಹರಿಹಾಯ್ದ ರೀತಿಯನ್ನು ನೋಡುವಾಗ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಮೂಲೆಗುಂಪಾಗಲಿದ್ದಾರೆ ಎಂಬ ಭಾವನೆ ಮೂಡುತ್ತಿದೆ. 

ಕಾಂಗ್ರೆಸ್‌ನ ಹಿನ್ನಡೆಗೆ ಸಿದ್ದರಾಮಯ್ಯನವರೇ ಕಾರಣ ಎಂಬ ದಟ್ಟ ಭಾವನೆಯೊಂದು ಕೆಲವು ಕಾಂಗ್ರೆಸ್‌ ನಾಯಕರಲ್ಲಿದೆ. ಅವರೆಲ್ಲ ಸೇರಿ ಬಿದ್ದವನ ಮೇಲೊಂದು ಕಲ್ಲು ಎಂಬಂತೆ ಸಿದ್ದರಾಮಯ್ಯ ಮೇಲೆ ಮುಗಿಬೀಳಲು ಕಾಯುತ್ತಿದ್ದಾರೆ. ವಲಸೆ ಬಂದ ಸಿದ್ದರಾಮಯ್ಯ ಮೇಲೆ ಕಾಂಗ್ರೆಸ್‌ನ ಹಿರಿ ತಲೆಗಳಿಗೆ ಆರಂಭದಿಂದಲೂ ಒಂದು ರೀತಿಯ ಅಸಮಾಧಾನವಿತ್ತು. ಪಕ್ಷ ಮೂಲ ಕಾಂಗ್ರೆಸ್‌ ಮತ್ತು ವಲಸಿಗರ ಕಾಂಗ್ರೆಸ್‌ ಎಂದು ಇಬ್ಭಾಗವಾಗಿತ್ತು. ಸಿದ್ದರಾಮಯ್ಯ ಮೂಲ ಕಾಂಗ್ರೆಸಿಗರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಅಂತರವನ್ನು ನಿವಾರಿಸುವ ಬದಲು ಅವಕಾಶ ಸಿಕ್ಕಿದಾಗಲೆಲ್ಲ ಮೂಲ ಕಾಂಗ್ರೆಸಿಗರನ್ನು ಹಣಿಯಲು ಪ್ರಯತ್ನಿಸಿದರು. 

ಹೈಕಮಾಂಡ್‌ ಕೂಡಾ ಸಿದ್ದರಾಮಯ್ಯನವರ ಮಾತಿಗೇ ಹೆಚ್ಚು ಬೆಲೆ ಕೊಡುತ್ತಾ ಬಂತು. ಅದರಲ್ಲೂ ರಾಹುಲ್‌ ಗಾಂಧಿ ಅಧ್ಯಕ್ಷರಾದ ಬಳಿಕವಂತೂ ಸಿದ್ದರಾಮಯ್ಯನವರ ಮಾತೇ ನಡೆಯುತ್ತಿತ್ತು. ಒಂದು ಹಂತದಲ್ಲಿ ಹೈಕಮಾಂಡನ್ನೇ ಮೀರಿ ನಿಂತರು. ಹೀಗೆ ಸರಕಾರದಲ್ಲೂ, ಪಕ್ಷದಲ್ಲೂ ತನ್ನ ಹಿಡಿತವನ್ನು ಬಲಪಡಿಸಿ ಕೊಂಡ ಸಿದ್ದರಾಮಯ್ಯನವರನ್ನು ಒಪ್ಪಿಕೊಳ್ಳದಿದ್ದರೂ ಸಹಿಸಿಕೊಳ್ಳುವುದು ಮೂಲ ಕಾಂಗ್ರೆಸಿಗರಿಗೆ ಅನಿವಾರ್ಯವಾಗಿತ್ತು. ಆದರೆ ಅವರ ಮೇಲಿನ ಸಿಟ್ಟು ಮಾತ್ರ ಗುಪ್ತಗಾಮಿನಿಯಂತೆ ಹರಿಯುತ್ತಲೇ ಇತ್ತು. 

ಒಟ್ಟಾರೆಯಾಗಿ ಕಾಂಗ್ರೆಸ್‌ನ ಮತ್ತು ವೈಯಕ್ತಿಕವಾಗಿ ಸಿದ್ದರಾಮಯ್ಯ ಸೋಲಿಗೆ ಅವರ ಆಡಳಿತ ಶೈಲಿಯೇ ಕಾರಣ ಎನ್ನುವ ವಾದವನ್ನು ಪರಾಮರ್ಶಿಸಬೇಕು. ಭಾಗ್ಯಗಳ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಳ್ಳಲು ಹೆಚ್ಚು ಗಮನ ಹರಿಸಿದರು, ಜತೆಗೆ ಮೋದಿ ಮತ್ತು ಆರ್‌ಎಸ್‌ಎಸ್‌ನ್ನು ವಿರೋಧಿಸುವ ಭರದಲ್ಲಿ ಬಹುಸಂಖ್ಯಾತರ ಭಾವನೆಗಗಳಿಗೆ ಧಕ್ಕೆ ತಂದರು ಎಂಬ ಆರೋಪವೂ ಇದೆ. ಟಿಪ್ಪು ಜಯಂತಿಯಂತಹ ಕಾರ್ಯಕ್ರಮಗಳು ಬಹುಸಂಖ್ಯಾತ ಭಾವನೆಗಳನ್ನು ಘಾಸಿಗೊಳಿಸುತ್ತಿದೆ ಎಂದು ತಿಳಿದಿದ್ದರೂ ಪುನರ್‌ ವಿಮರ್ಶಿಸುವ ಬುದ್ಧಿವಂತಿಕೆ ತೋರಿಸಲಿಲ್ಲ. ಭ್ರಷ್ಟಾಚಾರದ ಆರೋಪ ಹೊತ್ತಿದ್ದ ಕೆಲವು ಸಚಿವರಿಗೆ ಉದ್ದೇಶಪೂರ್ವಕವಾಗಿಯೇ ರಕ್ಷಣೆ ನೀಡಿದರು. ಆರೋಪ ಬಂದಾಗ ತಕ್ಷಣಕ್ಕೆ ನಿರ್ಧಾರ ಕೈಗೊಳ್ಳುವ ದಿಟ್ಟತವನ್ನು ತೋರಿಸಿದ್ದರೆ ಕನಿಷ್ಠ ಕಟ್ಟುನಿಟ್ಟಿನ ಮುಖ್ಯಮಂತ್ರಿ ಎಂಬ ಹೆಸರಾದರೂ ಬರುತ್ತಿತ್ತು. ಹಾಗೇನೂ ಮಾಡದೆ ತೀರಾ ಒತ್ತಡ ಬಿದ್ದಾಗ ರಾಜೀನಾಮೆ ಪಡೆದು ಅನಂತರ ಕ್ಲೀನ್‌ಚಿಟ್‌ ನೀಡುವ ನಾಟಕವಾಡಿದರು. ಸಿದ್ದರಾಮಯ್ಯ ಸರಕಾರದಲ್ಲಿ ತನಿಖೆ ಎದುರಿಸಿದ ಎಲ್ಲ ಸಚಿವರು ಕ್ಲೀನ್‌ಚಿಟ್‌ ಪಡೆದುಕೊಂಡು ಇದು ಕ್ಲೀನ್‌ಚಿಟ್‌ ಸರಕಾರ ಎಂಬ ಕುಖ್ಯಾತಿಗೆ ಗುರಿಯಾಯಿತು. ಸರಕಾರಿ ಅಧಿಕಾರಿಗಳನ್ನೂ ಕೆಟ್ಟದಾಗಿ ನಡೆಸಿಕೊಂಡ ಆರೋಪ ಸಿದ್ದರಾಮಯ್ಯ ಸರಕಾರ ಮೇಲಿದೆ.

ಚುನಾವಣೆ ಘೋಷಣೆಯಾದ ಮೇಲೂ ಸಚಿವರೊಬ್ಬರು ಜಿಲ್ಲಾಧಿಕಾರಿಯ ವಿರುದ್ಧ ಬಹಿರಂಗ ಹೋರಾಟಕ್ಕೆ ನಿಂತಾಗ ಅದನ್ನು ಸರಿಪಡಿಸುವ ಗೋಜಿಗೆ ಸಿದ್ದರಾಮಯ್ಯ ಹೋಗಲಿಲ್ಲ. ಜತೆಗೆ ಸಿದ್ದರಾಮಯ್ಯ ಸುತ್ತಲಿದ್ದ ಸಲಹೆಗಾರರು ಕಾಲಕಾಲಕ್ಕೆ ಅವರ ದಾರಿ ತಪ್ಪಿಸುವ ಕೆಲಸವನ್ನು ಮಾಡಿದರು. ಈ ಎಲ್ಲ ಅಂಶಗಳು ರಾಜ್ಯದಲ್ಲಿ ಸಿದ್ದರಾಮಯ್ಯ ವಿರೋಧಿ ಅಲೆಯನ್ನು ಹುಟ್ಟು ಹಾಕಿತ್ತು. ಆದರೆ ಕೊನೆಯವರೆಗೂ ಅದು ಅವರಿಗೆ ಅರ್ಥವಾಗಲೇ ಇಲ್ಲ. ದೇವರಾಜ ಅರಸು ಅಥವಾ ರಾಮಕೃಷ್ಣ ಹೆಗಡೆ ಅವರಂತೆ ಶಾಶ್ವತವಾಗಿ ಜನರ ಬದುಕನ್ನು ಬದಲಾಯಿಸುವ ಯಾವ ಉತ್ತಮ ಕಾರ್ಯಕ್ರಮವಾಗಲಿ, ಯೋಜನೆಯಾಗಲಿ ಸಿದ್ದರಾಮಯ್ಯ ಸರಕಾರದಿಂದ ಬರಲಿಲ್ಲ. ಅವರ ಒಟ್ಟು ಆಡಳಿತವನ್ನು ಜನಪ್ರಿಯ ಆಡಳಿತ ಎನ್ನಬಹುದೇ ಹೊರತು ಜನಪರವಾದ ಆಡಳಿತ ಎನ್ನಲು ಸಾಧ್ಯವಿಲ್ಲ. ಸಮರ್ಥ, ದೂರದೃಷ್ಟಿಯ ಮುಖ್ಯಮಂತ್ರಿ ಎಂಬ ಹೆಸರು ಸಂಪಾದಿಸುವ ಎಲ್ಲ ಅವಕಾಶ ಇದ್ದರೂ ಅದನ್ನು ಅವರು ಬಳಸಿಕೊಳ್ಳಲಿಲ್ಲ. ತುಸು ದಾಷ್ಟéì, ಒಂದಿಷ್ಟು ಅಹಂ ಜನತಾಪರಿವಾರ ಮೂಲದ ನಾಯಕರ ಸಹಜ ಗುಣ. ಆದರೆ ಪಕ್ಷ ಬದಲಾದಾಗ ಅಲ್ಲಿನ ಪರಿಸ್ಥಿತಿಗೆ ತಕ್ಕಂತೆ ಈ ಸ್ವಭಾವದಲ್ಲಿ ಕೊಂಚ ಹೊಂದಾಣಿಕೆ ಮಾಡಿಕೊಂಡಿದ್ದರೆ ಸಿದ್ದರಾಮಯ್ಯ ಕುರಿತು ಇನ್ನಷ್ಟು ಉತ್ತಮ ಅಭಿಪ್ರಾಯ ರೂಪುಗೊಳ್ಳುತ್ತಿತ್ತು. ಬಹುಮತ, ಸ್ವಾತಂತ್ರ್ಯ, ಬೆಂಬಲ ಎಲ್ಲ ಇದ್ದರೂ ವಿಫ‌ಲಗೊಂಡ ಸಿದ್ದರಾಮಯ್ಯ ಮುಂದಿನ ನಾಯಕರಿಗೆ ಪಾಠವಾಗಬೇಕು. 

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.