ಭಾರತದ ನವೋದ್ಯಮಗಳ ಮೇಲೆ ಸಿಲಿಕಾನ್‌ ವ್ಯಾಲಿ ಪತನದ ಕರಿಛಾಯೆ


Team Udayavani, Mar 13, 2023, 6:00 AM IST

ಭಾರತದ ನವೋದ್ಯಮಗಳ ಮೇಲೆ ಸಿಲಿಕಾನ್‌ ವ್ಯಾಲಿ ಪತನದ ಕರಿಛಾಯೆ

ಹೈಟೆಕ್‌ ತಂತ್ರಜ್ಞಾನ ಕ್ಷೇತ್ರದ ಪ್ರಬಲ ಆರ್ಥಿಕ ಶಕ್ತಿಯಂತಿದ್ದ ಅಮೆರಿಕದ ಸಿಲಿಕಾನ್‌ ವ್ಯಾಲಿ ಬ್ಯಾಂಕ್‌(ಎಸ್‌ವಿಬಿ)ನ ಮಹಾಪತನ ಇಡೀ ತಂತ್ರಜ್ಞಾನ ಕ್ಷೇತ್ರದ ಬುಡವನ್ನು ಅಲುಗಾಡಿಸಿದೆ. ತಂತ್ರಜ್ಞಾನ ಕಂಪನಿಗಳಿಗೆ ಅದರಲ್ಲೂ ಮುಖ್ಯವಾಗಿ ಸ್ಟಾರ್ಟ್‌ ಅಪ್‌(ನವೋದ್ಯಮ)ಗಳಿಗೆ ಭಾರೀ ಪ್ರಮಾಣದಲ್ಲಿ ಸಾಲವನ್ನು ನೀಡುವ ಮೂಲಕ ಕೆಲವೇ ದಶಕಗಳ ಅವಧಿಯಲ್ಲಿ ಅಮೆರಿಕದ ಮುಂಚೂಣಿಯ ಬ್ಯಾಂಕ್‌ ಆಗಿ ಪರಿಗಣಿಸಲ್ಪಟ್ಟಿತ್ತು. ಸಹಜವಾಗಿಯೇ ಗ್ರಾಹಕರು ಈ ಬ್ಯಾಂಕ್‌ನಲ್ಲಿ ಹೂಡಿಕೆಗೆ ಹೆಚ್ಚಿನ ಆಸಕ್ತಿಯನ್ನು ತೋರಿದರು. ಠೇವಣಿ ಹೆಚ್ಚುತ್ತಿದ್ದಂತೆಯೇ ಭಾರೀ ಮೊತ್ತದ ಬಾಂಡ್‌ಗಳನ್ನು ಖರೀದಿಸಿ ವಿವಿಧೆಡೆಗಳಲ್ಲಿ ಬ್ಯಾಂಕ್‌ ಹೂಡಿಕೆ ಮಾಡಲಾರಂಭಿಸಿತು. ಆದರೆ ಕಳೆದೊಂದು ವರ್ಷದಿಂದೀಚೆಗೆ ಅಮೆರಿಕದಲ್ಲಿನ ಆರ್ಥಿಕ ಅನಿಶ್ಚಿತತೆಗಳ ಪರಿಣಾಮ ಬ್ಯಾಂಕ್‌ನ ಸ್ಟಾರ್ಟ್‌ಅಪ್‌ ಫ‌ಂಡಿಂಗ್‌ ಬರಿದಾಯಿತು. ಠೇವಣಿ­ದಾರರಿಗೆ ಹಣ ಮರುಪಾವತಿಸಲೆಂದು ತನ್ನ ಹೂಡಿಕೆಗಳನ್ನು ಮಾರಾಟ ಮಾಡಿದ್ದರಿಂದ 2 ಶತಕೋಟಿ ಡಾಲರ್‌ ನಷ್ಟ ಅನುಭವಿಸಿದ ಬ್ಯಾಂಕ್‌ನ ತಿಜೋರಿ ಖಾಲಿಯಾಯಿತು. ಈಗ ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ ಬಾಗಿಲು ಮುಚ್ಚಿದೆ.

ಕಳೆದ ವರ್ಷಾಂತ್ಯಕ್ಕೆ ಬ್ಯಾಂಕ್‌ನ ಒಟ್ಟಾರೆ 175 ಶತಕೋಟಿ ಬಿಲಿಯನ್‌ ಡಾಲರ್‌ ಠೇವಣಿ ಮೊತ್ತದ ಪೈಕಿ ಶೇ. 89ರಷ್ಟು ಠೇವಣಿ ವಿಮೆರಹಿತವಾಗಿದ್ದು ಈ ಎಲ್ಲ ಗ್ರಾಹಕರು ಈಗ ತಮ್ಮ ಹಣದ ಭದ್ರತೆಯ ಕುರಿತಂತೆ ತೀವ್ರ ಆತಂಕದಲ್ಲಿದ್ದಾರೆ. ಎಸ್‌ವಿಬಿ ನೆಲಕಚ್ಚುತ್ತಿದ್ದಂತೆಯೇ ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಭಾರೀ ತಲ್ಲಣಗಳು ಸೃಷ್ಟಿಯಾಗಿವೆ. ಒಂದೆಡೆಯಿಂದ ಹೂಡಿಕೆದಾರರು ಆತಂಕದಲ್ಲಿದ್ದರೆ ಮತ್ತೂಂದೆಡೆಯಲ್ಲಿ ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ ಅನ್ನು ಅವಲಂಬಿಸಿ ವ್ಯವಹಾರ ನಡೆಸುತ್ತಿದ್ದ ಕಂಪನಿಗಳ ಷೇರುಗಳು ಕೂಡ ಕುಸಿಯತೊಡಗಿದ್ದು ಒಟ್ಟಾರೆ ಷೇರು ಮಾರುಕಟ್ಟೆಯಲ್ಲಿ ನಡುಕ ಸೃಷ್ಟಿಸಿದೆ.

ಎಸ್‌ವಿಬಿಯಲ್ಲಿ ವಿಶ್ವಾದ್ಯಂತದ ಹೈಟೆಕ್‌ ಕಂಪನಿಗಳು, ಅದರಲ್ಲೂ ಮುಖ್ಯವಾಗಿ ನವೋದ್ಯಮ ಕಂಪನಿಗಳು ತಮ್ಮ ಖಾತೆಗಳನ್ನು ಹೊಂದಿದ್ದು ಇವೆಲ್ಲದರ ವ್ಯವಹಾರವೂ ಈಗ ಅನಿಶ್ಚಿತತೆಯ ಸುಳಿಯಲ್ಲಿ ಸಿಲುಕಿದೆ. ನವೋದ್ಯಮ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಇಸ್ರೇಲ್‌ ಈ ಬೆಳವಣಿಗೆಯ ಬಗೆಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದು ತಂತ್ರಜ್ಞಾನ ಜಗತ್ತಿನಲ್ಲಿ ಬಲುದೊಡ್ಡ ಬಿಕ್ಕಟ್ಟನ್ನು ಇದು ಸೃಷ್ಟಿಸಲಿದೆ ಎನ್ನುವ ಮೂಲಕ ಈ ಆರ್ಥಿಕ ವಿಪ್ಲವದ ಪಶ್ಚಾತ್‌ ಪರಿಣಾಮಗಳ ಬಗೆಗೆ ಮುನ್ನೆಚ್ಚರಿಕೆ ನೀಡಿದೆ. ಬ್ಯಾಂಕ್‌ ಪತನದಿಂದ ಟೆಕ್‌ ಕಂಪನಿಗಳಿಗೆ ನಗದು ಹರಿವಿನ ಕೊರತೆ ಎದುರಾಗುವ ಎಲ್ಲ ಸಾಧ್ಯತೆಗಳಿವೆ.

ಏತನ್ಮಧ್ಯೆ ಅಮೆರಿಕದಲ್ಲಿನ ಭಾರತದ ಕೆಲವು ಕಂಪನಿಗಳು ಕೂಡ ಎಸ್‌ವಿಬಿಯಲ್ಲಿ ಖಾತೆಯನ್ನು ಹೊಂದಿದ್ದರೆ ಮತ್ತೆ ಕೆಲವೊಂದು ಸ್ಟಾರ್ಟ್‌ಅಪ್‌ಗ್ಳು ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ನಲ್ಲಿ ವ್ಯವಹಾರವನ್ನು ಹೊಂದಿರುವ ಕಂಪನಿಗಳೊಂದಿಗೆ ಸಹಭಾಗಿತ್ವ ಹೊಂದಿವೆ. ಈ ಎಲ್ಲ ಕಂಪನಿಗಳು ನಕಾರಾತ್ಮಕ ಪರಿಣಾಮವನ್ನು ಎದುರಿಸುವ ಭೀತಿಯಲ್ಲಿವೆ. ದೇಶದ ತಂತ್ರಜ್ಞಾನ ಮತ್ತು ನವೋದ್ಯಮ ಕ್ಷೇತ್ರದ ಮೇಲೆ ಎಸ್‌ವಿಬಿ ಪತನ ಪರಿಣಾಮ ಬೀರಲಿದೆ ಎಂದು ಹೂಡಿಕೆದಾರರು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ದೇಶದ ತಂತ್ರಜ್ಞಾನ ಕಂಪನಿಗಳ ಮೇಲೆ ಹೇಳಿಕೊಳ್ಳುವಂತಹ ಪರಿಣಾಮವೇನೂ ಆಗಲಾರದು ಎಂದು ಬಹುತೇಕ ಪರಿಣತರು ಅಭಿಪ್ರಾಯಪಟ್ಟಿದ್ದಾರೆ. ಸೋಮವಾರದಂದು ದೇಶದ ಷೇರು ಮಾರುಕಟ್ಟೆಯ ಮೇಲೆ ಈ ಬೆಳವಣಿಗೆ ಯಾವ ತೆರನಾದ ಪರಿಣಾಮ ಬೀರಲಿದೆ ಎಂಬ ಸೂಚನೆ ಸಿಗಲಿದೆ. ಇದಕ್ಕೆ ಪೂರಕವಾಗಿ ರವಿವಾರ ರಾತ್ರಿ(ಅಮೆರಿಕದಲ್ಲಿ ಬೆಳಗ್ಗೆ) ವೇಳೆಗೆ ಅಮೆರಿಕ, ಯೂರೋಪ್‌ ದೇಶಗಳ ಷೇರು ಮಾರುಕಟ್ಟೆಗಳಲ್ಲಿ ಕುಸಿತ ಶುರುವಾಗಿದೆ.

ಈ ಸಂಬಂಧ ಈಗಾಗಲೇ ಭಾರತದ ಕೆಲವೊಂದು ಕಂಪೆನಿಗಳು ರಕ್ಷಣೆಗಾಗಿ ಕೇಂದ್ರ ಸರಕಾರದ ಮೊರೆ ಹೋಗಿವೆ. ಇದಕ್ಕೆ ಸ್ಪಂದಿಸಿರುವ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಹಾಯಕ ಸಚಿವ ರಾಜೀವ್‌ ಚಂದ್ರಶೇಖರ್‌ ತುರ್ತು ಸಭೆ ನಡೆಸಿ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ.

ಕೇಂದ್ರ ಸರಕಾರ ಆರಂಭದಿಂದಲೂ ತಂತ್ರಜ್ಞಾನ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಸ್ಟಾರ್ಟ್‌ಅಪ್‌ಗ್ಳ ಸ್ಥಾಪನೆಗೆ ಉತ್ತೇಜನ ನೀಡುತ್ತಲೇ ಬಂದಿರುವು­ದರಿಂದ ಭಾರತ ಈ ಕ್ಷೇತ್ರದಲ್ಲಿ ಮುನ್ನಡೆಯುತ್ತಿದೆ. ಇಂಥ ಸಂದರ್ಭದಲ್ಲಿ ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ ಪತನಗೊಂಡಿರುವುದರಿಂದ ನವೋದ್ಯಮ ಸಹಿತ ತಂತ್ರಜ್ಞಾನ ಕ್ಷೇತ್ರದ ಮೇಲೆ ಕರಿಛಾಯೆ ಆವರಿಸಿದೆ. ಸಂಕಷ್ಟದ ಸಂದರ್ಭದಲ್ಲಿ ಟೆಕ್‌ ಕಂಪನಿಗಳ ರಕ್ಷಣೆಗೆ ಸರಕಾರ ನಿಂತಲ್ಲಿ ಮಾತ್ರವೇ ತಂತ್ರಜ್ಞಾನ ಕ್ಷೇತ್ರದಲ್ಲಿನ ತನ್ನ ನಾಗಾಲೋಟವನ್ನು ಮುಂದುವರಿಸಲು ಸಾಧ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಲ್ಲಾ ಮಾರ್ಗೋಪಾಯಗಳನ್ನು ಹುಡುಕಿಕೊಳ್ಳಬೇಕಾಗಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.