ನೇಪಾಲದ ಮೃದು ಮಾತು; ಬಿಕ್ಕಟ್ಟು ಶಮನವಾಗಲಿ


Team Udayavani, Aug 19, 2020, 6:24 AM IST

ನೇಪಾಲದ ಮೃದು ಮಾತು; ಬಿಕ್ಕಟ್ಟು ಶಮನವಾಗಲಿ

ಕಳೆದ ಕೆಲವು ತಿಂಗಳಿಂದ ಭಾರತ ವಿರುದ್ಧ ಟೀಕಾಸ್ತ್ರಗಳನ್ನು, ತಂತ್ರಗಳನ್ನು ಹೆಣೆಯುತ್ತಾ ಬಂದಿದ್ದ ನೇಪಾಲದ ಆಡಳಿತವೀಗ ಪಾಠ ಕಲಿತಂತೆ ಕಾಣುತ್ತಿದೆ. ಆಗಸ್ಟ್‌ 15ರಂದು ನೇಪಾಲದ ಪ್ರಧಾನಿ ಕೆ.ಪಿ. ಓಲಿಯವರು ಭಾರತಕ್ಕೆ ಶುಭ ಹಾರೈಸಿ, ಪ್ರಧಾನಿ ಮೋದಿಯವರೊಂದಿಗೆ ಮಾತುಕತೆ ನಡೆಸಿದ ಬೆನ್ನಲ್ಲೇ, ಈಗ ಸೋಮವಾರ ಎರಡೂ ರಾಷ್ಟ್ರಗಳ ನಡುವಿನ ಉನ್ನತಾಧಿಕಾರಿಗಳ ಸಮಿತಿಯ ನಡುವೆ ಸಭೆ ನಡೆದಿದೆ. ನೇಪಾಲದ ಅನೇಕ ಯೋಜನೆಗಳಿಗೆ ಭಾರತ ಸಹಾಯ ಹಾಗೂ ಹೂಡಿಕೆ ಮಾಡಿದ್ದು, ಈ ಯೋಜನೆಗಳ ಸ್ಥಿತಿಗತಿಯನ್ನು ಅವಲೋಕಿಸಲು ಈ ಸಭೆಯನ್ನು ನಡೆಸಲಾಗಿದೆ. ರೈಲ್ವೇ ಲಿಂಕ್‌ಗಳು, ಪೆಟ್ರೋಲಿಯಂ ಪೈಪ್‌ಲೈನ್‌, ರಸ್ತೆಗಳು, ಸೇತುವೆಗಳು, ವಿದ್ಯುತ್‌, ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಭಾರತದ ಸಹಭಾಗಿತ್ವದಲ್ಲಿ, ಮಾರ್ಗದರ್ಶನದಲ್ಲಿ ನೇಪಾಲದಲ್ಲಿ ಯೋಜನೆಗಳು ಕಾರ್ಯರೂಪದಲ್ಲಿವೆ. ಮೇಲ್ನೋಟಕ್ಕೆ ಈ ಸಭೆ, ಕೇವಲ ಅಭಿವೃದ್ಧಿ ಯೋಜನೆಯ ಕುರಿತ ಅವಲೋಕನವೆಂದಷ್ಟೇ ಅನಿಸುತ್ತದಾದರೂ, ರಕ್ಷಣೆ-ರಾಜಕೀಯ ವಿಶ್ಲೇಷಕರು ಇದನ್ನು ಕೆಲವು ಸಮಯದಿಂದ ಸೃಷ್ಟಿಯಾಗಿರುವ ಬಿಕ್ಕಟ್ಟನ್ನು ಶಮನಗೊಳಿಸುವ ಪ್ರಯತ್ನದಲ್ಲಿ ದೊಡ್ಡ ಹೆಜ್ಜೆ ಎಂದು ಕರೆಯುತ್ತಿದ್ದಾರೆ.

ಆದಾಗ್ಯೂ, ಬಿಕ್ಕಟ್ಟನ್ನು ಸೃಷ್ಟಿಸಿದ್ದು ನೇಪಾಲವೇ ಎನ್ನುವುದು ನಿರ್ವಿವಾದ. ಚೀನದ ಕುಮ್ಮಕ್ಕಿನಿಂದಾಗಿ ಭಾರತದೊಂದಿಗೆ ಗಡಿ ತಗಾದೆ ತೆಗೆದ ಕೆ.ಪಿ. ಓಲಿ, ಭಾರತದ ಪ್ರದೇಶಗಳಾದ ಲಿಪುಲೇಖ್‌, ಲಿಂಪಿಯಾಧುರಾ, ಕಾಲಾಪಾನಿ ಪ್ರದೇಶಗಳು ನೇಪಾಲಕ್ಕೆ ಸೇರಿದವೆಂದು ಸಾರುತ್ತಾ, ಜೂನ್‌ ತಿಂಗಳಲ್ಲಿ ಹೊಸ ನಕ್ಷೆಯನ್ನೂ ಬಿಡುಗಡೆ ಮಾಡಿದರು. ತಮ್ಮ ರಾಷ್ಟ್ರದಲ್ಲಿ ಕೋವಿಡ್‌ ಹೆಚ್ಚಾದದ್ದಕ್ಕೆ ಭಾರತವೇ ಕಾರಣ ಎಂದು ಆರೋಪಿಸಿದರು, ಭಾರತವನ್ನು ಮನದಲ್ಲಿಟ್ಟುಕೊಂಡೇ ನೇಪಾಲದ ವಿವಾಹ ಕಾನೂನಿನಲ್ಲಿ ಬದಲಾಣೆ ತಂದರು. ಇಷ್ಟಕ್ಕೆ ನಿಲ್ಲದೆ, ನಿಜವಾದ ರಾಮಜನ್ಮಭೂಮಿ ನೇಪಾಲದಲ್ಲಿದೆ ಎನ್ನುವ ಮೂಲಕ ಭಾರತೀಯರ ಹಾಗೂ ನೇಪಾಲಿಯರ ಮುನಿಸಿಗೆ ಪಾತ್ರರಾದರು. ಮೊದಲಿಂದಲೂ ಓಲಿ ನೇತೃತ್ವದ ಕಮ್ಯುನಿಸ್ಟ್‌ ಸರಕಾರ‌ ಚೀನಪರ ಧೋರಣೆಯನ್ನೇ ಪ್ರದರ್ಶಿಸುತ್ತಾ ಬರುತಿತ್ತಾದರೂ, ಅದು ಹಿಂದೆಂದೂ ಈ ರೀತಿಯಲ್ಲಿ ಭಾರತ ವಿರೋಧಿ ಮನಃಸ್ಥಿತಿಯನ್ನು ಪ್ರದರ್ಶಿಸಿರಲಿಲ್ಲ. ಓಲಿಯವರ ಈ ವರ್ತನೆ ಭಾರತಕ್ಕಷ್ಟೇ ಅಲ್ಲ, ಖುದ್ದು ನೇಪಾಳಿಯರಲ್ಲಿ ಹಾಗೂ ಆಡಳಿತ ಪಕ್ಷದ ನಾಯಕರಲ್ಲೇ ಅಚ್ಚರಿ-ಅಸಮಾಧಾನಕ್ಕೆ ಕಾರಣವಾಗಿದೆ. ಬಹುಕಾಲದಿಂದಲೂ ನೇಪಾಲಕ್ಕೆ ಸಕಲ ರೀತಿಯಲ್ಲೂ ಸಹಾಯ ಮಾಡುತ್ತಾ ಬಂದ, ಸರ್ವಋತು ಮಿತ್ರನೆಂದು ಕರೆಸಿಕೊಳ್ಳುವ ಭಾರತದಿಂದ ದೂರವಾಗಿ, ಚೀನದ ಜೋಳಿಗೆಗೆ ನೇಪಾಲವನ್ನು ಹಾಕುವ ಪ್ರಯತ್ನವಿದು ಎಂದೇ ಜೋರಾಗಿ ಅಸಮಾಧಾನ ಭುಗಿಲೆದ್ದಿದೆ. ಈ ಅಸಮಾಧಾನವು ಓಲಿಯವರನ್ನು ಕುರ್ಚಿ ಕಳೆದುಕೊಳ್ಳುವ ಹಂತಕ್ಕೆ ಹೋಗಿ ನಿಲ್ಲಿಸಿದೆ.

ಹೀಗಾಗಿ ಓಲಿ ಭಾರತದ ಕುರಿತು ಮೃದು ಧೋರಣೆ ತೋರಿಸುತ್ತಿರುವುದು ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಎಂದು ಪರಿಣತರು ವಿಶ್ಲೇಷಿಸುತ್ತಿದ್ದಾರೆ. ಏನೇ ಇದ್ದರೂ ಭಾರತ ಮತ್ತು ನೇಪಾಲ ನಡುವೆ ರಾಜತಾಂತ್ರಿಕ ಮಟ್ಟದಲ್ಲಷ್ಟೇ ಅಲ್ಲದೇ, ಶತಮಾನಗಳ ಧಾರ್ಮಿಕ ಮತ್ತು ಸಾಂಸ್ಕೃತಿಕ ಬಾಂಧವ್ಯವಿದೆ, ಇತಿಹಾಸವಿದೆ. ಇದನ್ನೆಲ್ಲ ಬಲಿಕೊಟ್ಟು ಡ್ರ್ಯಾಗನ್‌ ರಾಷ್ಟ್ರದ ತಾಳಕ್ಕೆ ಕುಣಿಯುವ ತಪ್ಪನ್ನು ಮುಂದುವರಿಸಿದರೆ, ಓಲಿ ಆಡಳಿತ ಪತನಗೊಳ್ಳುವುದರಲ್ಲಿ ಸಂದೇಹವಿಲ್ಲ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.