ಆನ್‌ಲೈನ್‌ ತರಗತಿ ನಡೆಯಲಿ ವ್ಯವಸ್ಥೆಯೂ ಚೆನ್ನಾಗಿರಲಿ


Team Udayavani, Aug 27, 2020, 6:18 AM IST

ಆನ್‌ಲೈನ್‌ ತರಗತಿ ನಡೆಯಲಿ ವ್ಯವಸ್ಥೆಯೂ ಚೆನ್ನಾಗಿರಲಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಅಕ್ಟೋಬರ್‌ 1ರಿಂದ ರಾಜ್ಯದಲ್ಲಿ ಪದವಿ ತರಗತಿಗಳನ್ನು ಆರಂಭಿಸುವ ಬಗ್ಗೆ ರಾಜ್ಯ ಸರಕಾರ ಘೋಷಣೆ ಮಾಡಿದೆ.

ಜತೆಗೆ ಪದವಿ ಕಾಲೇಜುಗಳು ಸೆಪ್ಟಂಬರ್‌ 1ರಿಂದ ಶೈಕ್ಷಣಿಕ ವರ್ಷದ ಆನ್‌ಲೈನ್‌ ತರಗತಿಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲಿವೆ ಎಂದು ಉನ್ನತ ಶಿಕ್ಷಣ ಸಚಿವ ಉಪಮುಖ್ಯಮಂತ್ರಿ ಡಾ| ಸಿ.ಎನ್‌.ಅಶ್ವತ್ಥ ನಾರಾಯಣ ಅವರು ಪ್ರಕಟಿಸಿದ್ದಾರೆ.

ಈ ಮೂಲಕ ಸರಕಾರ ರಾಜ್ಯದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಂಡಿದೆ.

ಮಾರ್ಚ್‌ನಲ್ಲಿ ಲಾಕ್‌ಡೌನ್‌ ಘೋಷಣೆಯಾದ ದಿನದಿಂದ ಇಂದಿನವರೆಗೂ ಪದವಿ ತರಗತಿಗಳು ಸಮರ್ಪಕವಾಗಿ ನಡೆದಿಲ್ಲ.

ಆನ್‌ಲೈನ್‌ ವೇದಿಕೆಯ ಮೂಲಕ ತರಗತಿಗಳು ನಡೆದಿದ್ದರೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಸಮರ್ಪಕವಾಗಿ ತಲುಪುವುದು ಸಾಧ್ಯವಾಗಿರಲಿಲ್ಲ.

ಅಲ್ಲದೆ, ಪೂರ್ವ ಮುದ್ರಿತ ವೀಡಿಯೋ ತರಗತಿಗಳನ್ನು ಕಾಲೇಜು ಶಿಕ್ಷಣ ಇಲಾಖೆ ಮತ್ತು ಆಯಾ ಕಾಲೇಜಿನ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಿ, ಆ ಮೂಲಕ ವಿದ್ಯಾರ್ಥಿಗಳ ಕಲಿಕೆಗೆ ವ್ಯವಸ್ಥೆ ಮಾಡಲಾಗಿತ್ತು.

ಇನ್ನು ಕೆಲವು ಕಾಲೇಜುಗಳ ಪ್ರಾಧ್ಯಾಪಕರು ಹಾಗೂ ಪ್ರಾಂಶುಪಾಲರು ಯೂ-ಟ್ಯೂಬ್‌ ಚಾನೆಲ್‌ ಮೂಲಕ ಪಠ್ಯ ಬೋಧನೆ ಮಾಡಿದ್ದಾರೆ. ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಯಿಂದ ಇನ್ನಷ್ಟು ಸಂಕಷ್ಟ ಎದುರಿಸಿದ್ದರು. ಪ್ರಾಯೋಗಿಕ ತರಗತಿಗಳು ಆನ್‌ಲೈನ್‌ನಲ್ಲಿ ಅಸಾಧ್ಯವಾಗಿದೆ.

ಇಷ್ಟೆಲ್ಲ ಅಡೆತಡೆಗಳ ನಡುವೆಯೂ ಅನೇಕ ಕಾಲೇಜುಗಳು ಉತ್ತಮ ಪ್ರಯತ್ನ ನಡೆಸಿವೆ. ಆದರೆ ಇದ್ಯಾವುದು ತರಗತಿ ಕೊಠಡಿಯ ಬೋಧನೆಗೆ ಸಮಾನದ ಫ‌ಲಿತಾಂಶ ನೀಡಿಲ್ಲ.

ಗ್ರಾಮೀಣ ಭಾಗದಲ್ಲಿ ಇಂದಿಗೂ ಇಂಟರ್‌ನೆಟ್‌, ನೆಟ್‌ವರ್ಕ್‌ ಹಾಗೂ ಇತರೆ ತಾಂತ್ರಿಕ ಸಮಸ್ಯೆಗಳು ಜೀವಂತವಾಗಿವೆ. ಸರಕಾರದ ಬಹುತೇಕ ಪ್ರಥಮ ದರ್ಜೆ ಪದವಿ ಕಾಲೇಜುಗಳು ಗ್ರಾಮೀಣ ಭಾಗದಲ್ಲಿವೆ.
ಇಲ್ಲಿ ವ್ಯಾಸಂಗ ಮಾಡುವ ಹೆಚ್ಚಿನ ವಿದ್ಯಾರ್ಥಿಗಳು ಮಾಸಿಕ ದುಬಾರಿ ವೆಚ್ಚ ಮಾಡಿ ಮೊಬೈಲ್‌ ಇಂಟರ್‌ನೆಟ್‌ ಖರೀದಿಸಿ, ಕಲಿಯುವಷ್ಟು ಆರ್ಥಿಕವಾಗಿಯೂ ಶಕ್ತರಾಗಿಲ್ಲ. ಸರಕಾರ ಪದವಿ ತರಗತಿಗಳನ್ನು ಆನ್‌ಲೈನ್‌ ಮೂಲಕ ಪೂರ್ಣಪ್ರಮಾಣದಲ್ಲಿ ಆರಂಭಿಸುವ ಜತೆಗೆ ಅದಕ್ಕೆ ಬೇಕಾದ ಅಗತ್ಯ ಮತ್ತು ಕನಿಷ್ಠ ಸೌಲಭ್ಯವನ್ನಾದರೂ ವಿದ್ಯಾರ್ಥಿಗಳಿಗೆ ಹಾಗೂ ಕಾಲೇಜುಗಳಿಗೆ ಒದಗಿಸಬೇಕು.

ಪದವಿ ತರಗತಿಗಳನ್ನು ಆನ್‌ಲೈನ್‌ ಮೂಲಕ ಪೂರ್ಣ ಪ್ರಮಾಣದಲ್ಲಿ ಆರಂಭಿಸುವಷ್ಟು ಸುಸಜ್ಜಿತ ವ್ಯವಸ್ಥೆಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಸರಕಾರ ಮೊದಲು ಒದಗಿಸಬೇಕು. ಅನೇಕ ಕಾಲೇಜುಗಳಲ್ಲಿ ಇಂಟರ್‌ನೆಟ್‌ ಸಮಸ್ಯೆಯಿದೆೆ. ಇದನ್ನು ಸರಿಪಡಿಸಿಕೊಂಡು ಆನ್‌ಲೈನ್‌ ತರಗತಿ ನಡೆಸಬೇಕು.

ಹಲವು ಕಾರಣಗಳಿಗಾಗಿ ಅನೇಕ ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಹೀಗಾಗದಂತೆ ಸರಕಾರ ಹಾಗೂ ಶಿಕ್ಷಣ ಇಲಾಖೆ ಎಚ್ಚರ ವಹಿಸಬೇಕು. ಯೂ-ಟ್ಯೂಬ್‌ ಮೂಲಕ ತರಗತಿ ನಡೆಸಿದರೆ, ವಿದ್ಯಾರ್ಥಿಗಳು ಸಕ್ರಿಯವಾಗಿ ಅದನ್ನು ಕೇಳುತ್ತಿದ್ದಾರೆ ಅಥವಾ ಭಾಗವಹಿಸಿದ್ದಾರೆ ಎಂಬುದನ್ನು ನಿಗಾವಹಿಸಲು ಸಾಧ್ಯವಿಲ್ಲ. ಆನ್‌ಲೈನ್‌ ವೇದಿಕೆ ಮೂಲಕ ತರಗತಿ ನಡೆಸಿದರೆ, ವಿದ್ಯಾರ್ಥಿಗಳು ಅದರಲ್ಲಿ ಭಾಗಿಯಾಗಿರುವುದು ತಿಳಿಯುತ್ತದೆ.

ಈ ವ್ಯವಸ್ಥೆಯಲ್ಲಿ ಎಲ್ಲ ವಿದ್ಯಾರ್ಥಿಗಳು ತಾವಿರುವ ಪ್ರದೇಶದಿಂದಲೇ ಭಾಗವಹಿಸಲು ಸಾಧ್ಯವೇ ಎಂಬುದನ್ನು ಖಚಿತಪಡಿಸಿಕೊಂಡು, ಶಿಕ್ಷಣ ದಿಂದ ಯಾವೊಬ್ಬ ವಿದ್ಯಾರ್ಥಿಯೂ ವಂಚತರಾಗದ ರೀತಿಯಲ್ಲಿ ಆನ್‌ಲೈನ್‌ ತರಗತಿಗಳನ್ನು ನಡೆಸಬೇಕು. ಇಲ್ಲವಾದರೆ, ಅನೇಕ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಯ ಲಾಭ ಪಡೆದುಕೊಳ್ಳಲು ಸಾಧ್ಯವಾಗದೇ ಇರಬಹುದು.

ಸಮಾನ ಸೌಲಭ್ಯ ಆನ್‌ಲೈನ್‌ ತರಗತಿ ಬೋಧನೆ ಹಾಗೂ ಕಲಿಕೆಗೂ ನೀಡಬೇಕು. ಆನ್‌ಲೈನ್‌ ಶಿಕ್ಷಣ ತರಗತಿ ಕೊಠಡಿಯೊಳಗಿನ ಬೋಧನೆಗೆ ಪರ್ಯಾಯವಲ್ಲದೇ ಇದ್ದರೂ ನಗರ, ಗ್ರಾಮೀಣ ಪ್ರದೇಶದ ಭೇದವಿಲ್ಲದೆ ಪ್ರತಿ ವಿದ್ಯಾರ್ಥಿಯೂ ಇದರ ಉಪಯೋಗ ಪಡೆಯುವಂತಾಗಬೇಕು.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.