ಸಾಲ ಮನ್ನಾ ಸರಣಿ ಆರಂಭ: ಇದೊಂದೇ ಅಲ್ಲ ಪರಿಹಾರ


Team Udayavani, Dec 20, 2018, 6:00 AM IST

52.jpg

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಸಾಲಮನ್ನಾದ ವಿಚಾರದ ಮೇಲೆಯೇ ಚುನಾವಣೆ ಎದುರಿಸುವುದು ನಿಚ್ಚಳವಾಗುತ್ತಿದೆ. ಸಾಲಮನ್ನಾ ಭರವಸೆಯ ಮೂಲಕ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್‌, ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಡದಲ್ಲಿ ಭರವಸೆ ಈಡೇರಿಸಿದೆ. ಇತ್ತ ರಾಜಸ್ಥಾನದಲ್ಲೂ ಬುಧವಾರ ಸಾಲ ಮನ್ನಾ ಘೋಷಣೆಯಾಗಿದೆ. ಬೆನ್ನಲ್ಲೇ ಅಸ್ಸಾಂನ ಬಿಜೆಪಿ ಸರ್ಕಾರ ಕೂಡ 600 ಕೋಟಿ ರೂಪಾಯಿ ಸಾಲಮನ್ನಾ ಮಾಡಿರುವುದನ್ನು ಗಮನಿಸಿದಾಗ, ಮುಂಬರುವ ಲೋಕಸಭಾ ಚುನಾವಣೆ ರೈತಕೇಂದ್ರಿತವಾಗಿರಲಿದೆ ಎನ್ನುವುದು ಸ್ಪಷ್ಟವಾಗುತ್ತದೆ.  2019ರ ಚುನಾವಣೆಗಾಗಿ ವಿಷಯಗಳನ್ನು ಹುಡುಕಾಡುತ್ತಿದ್ದ ಕಾಂಗ್ರೆಸ್‌ಗೆ ಈಗ ಪ್ರಬಲ ಅಸ್ತ್ರ ಸಿಕ್ಕಂತಾಗಿದೆ. ನೋಟ್‌ಬಂದಿ, ಜಿಎಸ್‌ಟಿ ವಿಷಯವನ್ನು ಕೇಂದ್ರದ ವಿರುದ್ಧ ಬಳಸಿಕೊಳ್ಳುವ ಅದರ ಪ್ರಯತ್ನ ಅಷ್ಟಾಗಿ ಫ‌ಲಕೊಡಲಿಲ್ಲ. ರಫೇಲ್‌ ಯುದ್ಧ ವಿಮಾನ ಖರೀದಿ ವಿಷಯದಲ್ಲೂ ಅದಕ್ಕೆ ಬಿಜೆಪಿಯನ್ನು ಕಟ್ಟಿಹಾಕಲು ಆಗುತ್ತಿಲ್ಲ.  

ತಮ್ಮ ಪಕ್ಷ 2019ಕ್ಕೆ ಅಧಿಕಾರಕ್ಕೆ ಬಂದರೆ ದೇಶದ ರೈತರ ಸಾಲಮನ್ನಾ ಮಾಡುವುದಾಗಿ ಕಾಂಗ್ರೆಸ್‌ ಹೇಳುತ್ತಿದೆ. ದೇಶದ ಎಲ್ಲಾ ರೈತರ ಸಾಲ ಮನ್ನಾ ಮಾಡುವವರೆಗೆ ನರೇಂದ್ರ ಮೋದಿಯವರಿಗೆ ನಿದ್ರೆ ಮಾಡಲು ಬಿಡುವುದಿಲ್ಲ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್‌,  ತನ್ನದು ಹುಸಿ ಭರವಸೆಯಲ್ಲ ಎಂಬುದನ್ನು ಸಾರಲು ಮಧ್ಯಪ್ರದೇಶ ಮತ್ತು ಛತ್ತೀಸ್‌ಗಡದಲ್ಲಿ ಕೊಟ್ಟ ಮಾತು ಉಳಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಎದುರಿಸುತ್ತಿತ್ತು. ಈ ರಾಜ್ಯಗಳಲ್ಲಿ ಮಾತು ತಪ್ಪಿದ್ದರೆ, ಲೋಕಸಭಾ ಚುನಾವಣೆಯ ಸಮಯದಲ್ಲಿ ತನ್ನ ಸಾಲಮನ್ನಾದ ಮಾತು ಬಲ ಕಳೆದುಕೊಳ್ಳುತ್ತದೆ ಎನ್ನುವುದು ಕಾಂಗ್ರೆಸ್‌ಗೆ ಅರಿವಿದೆ. 

ಅನಿವಾರ್ಯತೆ ಏನೇ ಇದ್ದರೂ ಚುನಾವಣೆಗೂ ಮುನ್ನ ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ಒಳ್ಳೆಯ ನಡೆಯೇ. ಸಾಮಾನ್ಯವಾಗಿ ರಾಜಕೀಯ ಪಕ್ಷಗಳು ಚುನಾವಣೆಗೂ ಮುನ್ನ ನೀಡುವ ಭರವಸೆಗಳು, ನಂತರದಲ್ಲಿ ಹುಸಿ ಎಂದೇ ಸಾಬೀತಾಗುತ್ತವೆ. ಸಹಜವಾಗಿಯೇ, ಈ ವಿದ್ಯಮಾನಗಳೆಲ್ಲ ಬಿಜೆಪಿಯು ತನ್ನ ಚುನಾವಣಾ ತಂತ್ರವನ್ನು ಬದಲಿಸಲು ಕಾರಣವಾಗಲಿವೆ. ಸಾಲಮನ್ನಾ ಅದರ ಪ್ರಣಾಳಿಕೆಯಲ್ಲಿ ಪ್ರಧಾನ ಜಾಗ ಪಡೆಯಬಹುದು. 

ಆದರೆ ಎಂದಿನಂತೆ, ಮತ್ತದೇ ಪ್ರಶ್ನೆ ಎದುರುನಿಲ್ಲುತ್ತಿದೆ. ಸಾಲಮನ್ನಾವೇ ಸಂಕಷ್ಟಕ್ಕೆ ಪರಿಹಾರವೇ? ಸಾಲಮನ್ನಾಕ್ಕೆ ಪೇನ್‌ಕಿಲ್ಲರ್‌ನಂತೆ ಕೆಲಸ ಮಾಡುವ ಶಕ್ತಿ ಇದೆ, ಆದರೆ ನೋವು ನಿವಾರಣೆಯಾದ ಮಾತ್ರಕ್ಕೆ ರೋಗ ನಿವಾರಣೆ ಆಗದು. ನೋವು ನಿವಾರಕದ ಶಕ್ತಿ ಕುಂದುತ್ತದೆ, ಮತ್ತೆ ಯಾತನೆ ಮುನ್ನೆಲೆಗೆ ಬರುತ್ತದೆ. ಪರಿಸ್ಥಿತಿ ಹೇಗಿದೆಯೆಂದರೆ, ರೈತ ಒಮ್ಮೆ ಸಾಲದಿಂದ ಮುಕ್ತನಾದರೂ, ಹವಾಮಾನ, ಉತ್ಪಾದನೆ ಮತ್ತು ಬೆಳೆಯ ದರ ಚಕ್ರ ಹೇಗಿದೆಯೆಂದರೆ, ಆತ ಪದೇ ಪದೆ ಸಾಲದ ಸುಳಿಗೆ ಸಿಲುಕುತ್ತಲೇ ಹೋಗಬೇಕಾಗುತ್ತದೆ. ಕಳೆದ ನಾಲ್ಕು ವರ್ಷಗಳಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಉತ್ತರಪ್ರದೇಶ. ಮಹಾರಾಷ್ಟ್ರ, ಪಂಜಾಬ್‌, ರಾಜಸ್ಥಾನ ಮತ್ತು ಕೇರಳ ಸರ್ಕಾರಗಳು ಸಾಲಮನ್ನಾ ಹಾದಿ ತುಳಿದಾಗಿದೆ. ಆದರೆ ದೇಶಾದ್ಯಂತ ರೈತರಲ್ಲಿ ಬ್ಯಾಂಕ್‌ಗಳಿಂದ ಸಾಲ ಪಡೆಯುವವರ ಸಂಖ್ಯೆ ಕೇವಲ 46.2 ಪ್ರತಿಶತವಿದೆ.  ಅಂದರೆ 50 ಪ್ರತಿಶತಕ್ಕಿಂತಲೂ ಕಡಿಮೆ. ಉಳಿದ 50 ಪ್ರತಿಶತದಷ್ಟು ರೈತರು ಸ್ವಸಹಾಯ ಗುಂಪುಗಳಿಂದಲೋ, ಬಡ್ಡಿ ದಂಧೆ ಮಾಡುವವರಿಂದಲೋ ಅಥವಾ ತಮ್ಮ ಸಂಬಂಧಿಕರಿಂದಲೋ ಪಡೆದಿರುತ್ತಾರೆ. ಸರ್ಕಾರಗಳು ಮಾಡುವ ಸಾಲಮನ್ನಾದಿಂದ ಈ ಎರಡನೆಯ ಬಹುದೊಡ್ಡ ವರ್ಗಕ್ಕೆ ನಯಾಪೈಸೆಯೂ ಉಪಯೋಗವಾಗುವುದಿಲ್ಲ. ಇನ್ನು ರಾಜ್ಯಗಳಿಗೆ ಕೇವಲ ಸಹಕಾರಿ ಬ್ಯಾಂಕುಗಳಲ್ಲಿನ ಸಾಲವನ್ನು ಮನ್ನಾ ಮಾಡುವ ಅಧಿಕಾರ ಇರುತ್ತದೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲ ಮನ್ನಾ ಮಾಡಲು ಕೇಂದ್ರದ ಸಹಾಯ ಮತ್ತು ಬಜೆಟ್‌ ಹಂಚಿಕೆಯಲ್ಲಿ ಪಾಲು ಪಡೆಯಬೇಕಾಗುತ್ತದೆ. ಬ್ಯಾಂಕುಗಳ ಬದಲು, ಹೊರಗೆ ಸಾಲ ಪಡೆದ ರೈತರ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳುವುದಿಲ್ಲ. ಇನ್ನು ಸಾವಿರಾರು ಕೋಟಿ ರೂಪಾಯಿಗಳ ಸಾಲಮನ್ನಾದಿಂದ ದೇಶದ ಅರ್ಥವ್ಯವಸ್ಥೆಯ ಮೇಲೆ ಋಣಾತ್ಮಕ ಪರಿಣಾಮ ಉಂಟಾಗುತ್ತದೆ. ಇದರಿಂದ ಅನ್ಯ ಯೋಜನೆಗಳಿಗೂ ಹೊಡೆತ ಬೀಳುತ್ತದೆ. 

ರೈತರ ಸಾಲಮನ್ನಾ ವಿಷಯದಲ್ಲಿ ನೀತಿ ಆಯೋಗ, ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ ಮತ್ತು ಅರ್ಥಶಾಸ್ತ್ರಜ್ಞರು ಅನೇಕ ಬಾರಿ ಪ್ರಶ್ನೆ ಎತ್ತಿದ್ದಾರೆ. ಬುಧವಾರ ನೀತಿ ಆಯೋಗ “ರೈತನ ಸಮಸ್ಯೆಗಳಿಗೆ’ ಸಾಲಮನ್ನಾ ಪರಿಹಾರವಲ್ಲ ಎಂದು ಹೇಳಿದೆ. ದೀರ್ಘ‌ದೃಷ್ಟಿಯಿಂದ ನೋಡಿದಾಗ ರೈತರ ಸಾಲಮನ್ನಾಕ್ಕಿಂತಲೂ ಅವರ ಆದಾಯವನ್ನು ದ್ವಿಗುಣಗೊಳಿಸಬೇಕೆಂಬ ಮೋದಿ ಸರ್ಕಾರದ ದೃಷ್ಟಿಕೋನ ಸರಿಯಾಗಿಯೇ ಇದೆ. ಆದರೆ, ಇದಕ್ಕೆ ತಕ್ಕಂಥ ನೀತಿಗಳು ರೂಪಪಡೆದು, ಅವು ಯಶಸ್ವಿಯಾಗಿ ಅನುಷ್ಠಾನಕ್ಕೆ ಬರುವುದೂ ಅಷ್ಟೇ ಮುಖ್ಯ. 

ಟಾಪ್ ನ್ಯೂಸ್

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.