ಗ್ರಾಮೀಣ ಜನರ ಮೊರೆಗೆ ಸ್ಪಂದಿಸಿದ ರಾಜ್ಯ ಸರಕಾರ


Team Udayavani, May 13, 2022, 6:00 AM IST

ಗ್ರಾಮೀಣ ಜನರ ಮೊರೆಗೆ ಸ್ಪಂದಿಸಿದ ರಾಜ್ಯ ಸರಕಾರ

ಪಟ್ಟಣ ಪಂಚಾಯತ್‌, ಪುರಸಭೆ ವ್ಯಾಪ್ತಿಯಲ್ಲಿ ಖಾಸಗಿ ಜಾಗದ ಮಾರಾಟ, ಮನೆ, ಕಟ್ಟಡಗಳ ನಿರ್ಮಾಣಕ್ಕೆ ನಗರ ಯೋಜನೆ ವಿಭಾಗದಿಂದ ಅನುಮತಿ ಪಡೆಯುವುದನ್ನು ಈ ಹಿಂದೆ ಕಡ್ಡಾಯಗೊಳಿಸಿದ್ದ ರಾಜ್ಯ ಸರಕಾರ ಇದೀಗ ಕೊನೆಗೂ ಜನಾಗ್ರಹಕ್ಕೆ ಮಣಿದು ಹಾಲಿ ಕಾಯ್ದೆಗೆ ತಿದ್ದುಪಡಿ ತಂದು ಈ ನಿಯಮದಿಂದ ವಿನಾಯಿತಿ ನೀಡಲು ತೀರ್ಮಾನಿಸಿದೆ.

ಟೌನ್‌ ಪ್ಲಾನಿಂಗ್‌ ಅನುಮತಿ ಕಡ್ಡಾಯ ನಿಯಮ ಜಾರಿಯಾದಂದಿನಿಂದ ಮನೆ, ಕಟ್ಟಡ ನಿರ್ಮಾಣ ಅನುಮತಿ, 11 ಇ-ನಕ್ಷೆ, ಆಸ್ತಿ ಮಾರಾಟಕ್ಕಾಗಿ ಜನರು ನಗರ ಯೋಜನೆ ಪ್ರಾಧಿಕಾರ ಕಚೇರಿ ಇರುವ ನಗರಕ್ಕೆ ಜನರು ಅಲೆದಾಡುವಂತಾಗಿತ್ತು. ಪುರಸಭೆ, ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ ನಗರ ಯೋಜನಾ ಪ್ರಾಧಿಕಾರ ಇರುವುದು ತೀರಾ ವಿರಳವಾಗಿರುವುದರಿಂದ ಜನರು ಇವೆಲ್ಲವುಗಳಿಗೆ ಅನುಮತಿ ಪಡೆಯಲು ಜಿಲ್ಲಾ ಕೇಂದ್ರವನ್ನೇ ಆಶ್ರಯಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿತ್ತು. ಅಷ್ಟು ಮಾತ್ರವಲ್ಲದೆ ಜನರ ಈ ಅರ್ಜಿಗಳಿಗೆ ನಗರ ಯೋಜನೆ ಪ್ರಾಧಿಕಾರ ಒಂದಲ್ಲ ಒಂದು ತಗಾದೆ ತೆಗೆದು ಅದಕ್ಕೆ ಅನುಮತಿ ನೀಡಲು ಸತಾಯಿಸುತ್ತಿದ್ದ ಪ್ರಸಂಗಗಳೂ ಸಾಮಾನ್ಯವಾಗಿದ್ದವು. ಇದೇ ಕಾರಣದಿಂದ ಮನೆ, ಕಟ್ಟಡ ನಿರ್ಮಾಣಕ್ಕಾಗಿ ಜನರು ಸಾಲಕ್ಕಾಗಿ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ದಾಖಲೆಪತ್ರಗಳು ಸಮರ್ಪಕವಾಗಿಲ್ಲ ಎಂಬ ಕಾರಣವೊಡ್ಡಿ ಅರ್ಜಿಯನ್ನು ತಿರಸ್ಕರಿಸುತ್ತಿದ್ದ ಘಟನೆಗಳೂ ನಡೆಯುತ್ತಿದ್ದವು.

ಹಾಲಿ ಪಟ್ಟಣ ಪಂಚಾಯತ್‌ ಮತ್ತು ಪುರಸಭೆ ಮುಂದಿನ ದಿನಗಳಲ್ಲಿ ಬೇಕಾಬಿಟ್ಟಿಯಾಗಿ ಅಭಿವೃದ್ಧಿ ಹೊಂದಿದಲ್ಲಿ ಈಗಿನ ನಗರಗಳು ಎದುರಿಸುತಿ¤ರುವ ಸಮಸ್ಯೆಯನ್ನೇ ಈ ಪಟ್ಟಣಗಳೂ ಎದುರಿಸಬೇಕಾಗಿ ಬರಬಹುದು ಎಂಬ ದೂರದೃಷ್ಟಿಯಿಂದ ಸರಕಾರ ಈ ನಿಯಮವನ್ನು ಜಾರಿಗೊಳಿಸಿತ್ತಾದರೂ ಈ ಪಟ್ಟಣಗಳಲ್ಲಿನ ವಾಸ್ತವ ಸ್ಥಿತಿಯನ್ನು ಅರಿಯುವ ಕನಿಷ್ಠ ಪ್ರಯತ್ನವನ್ನೂ ಮಾಡದೆ ಏಕಾಏಕಿಯಾಗಿ ನಿಯಮ ಜಾರಿಗೊಳಿಸಿದ್ದರಿಂದಾಗಿ ನಗರೇತರ ಪ್ರದೇಶಗಳ ಜನರು ತೀವ್ರ ಸಂಕಷ್ಟ ಅನುಭವಿಸುವಂತಾಗಿತ್ತು. ಅಷ್ಟು ಮಾತ್ರವಲ್ಲದೆ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಅರಣ್ಯ ಪ್ರದೇಶಗಳಲ್ಲಿ ಮನೆ ನಿರ್ಮಿಸಿಕೊಳ್ಳುವ ಪಟ್ಟಾ ಜಮೀನುಗಳಿಗೂ ಟೌನ್‌ ಪ್ಲಾನಿಂಗ್‌ ನಿಯಮ ಅನ್ವಯವಾಗುತ್ತಿದ್ದುದರಿಂದ ಮನೆ ನಿರ್ಮಾಣ ಇವರ ಪಾಲಿಗೆ ಕನಸಿನ ಮಾತಾಗಿ ಬಿಟ್ಟಿತ್ತು. ಈ ಗೊಂದಲಕಾರಿ ನಿಯಮದಿಂದಾಗಿ ಗ್ರಾ. ಪಂ. ಮಟ್ಟದಲ್ಲಿ ಮನೆ, ಕಟ್ಟಡ ನಿರ್ಮಾಣ ಕಾರ್ಯಗಳು ಬಹುತೇಕ ಸ್ಥಗಿತವಾಗಿದ್ದವು. ಸಹಜ ವಾಗಿ ನಗರ ಯೋಜನೆ ಪ್ರಾಧಿಕಾರದ ಕಚೇರಿಗಳಲ್ಲಿ ಇಂಥ ಅರ್ಜಿಗಳ ರಾಶಿಯೇ ಬೀಳುವಂತಾಗಿತ್ತಲ್ಲದೆ ಅಗತ್ಯ ಸಿಬಂದಿಯ ಕೊರತೆಯಿಂದಾಗಿ ಅರ್ಜಿಗಳ ವಿಲೇವಾರಿಯೂ ಆಮೆಗತಿಯಲ್ಲಿ ಸಾಗಿತ್ತು. ಈ ಎಲ್ಲ ಸಮಸ್ಯೆಗಳಿಂದ ರೋಸಿ ಹೋಗಿದ್ದ ಜನತೆ ನಿರಂತರವಾಗಿ ಈ ನಿಯಮ ದಿಂದ ಗ್ರಾಮ ಪಂಚಾಯತ್‌, ಪಟ್ಟಣ ಪಂಚಾಯತ್‌ ಮತ್ತು ಪುರಸಭೆ ಗಳನ್ನು ಹೊರಗಿಡುವಂತೆ ಮನವಿ ಸಲ್ಲಿಸುತ್ತಲೇ ಬಂದಿದ್ದರು.

ಈಗ ರಾಜ್ಯ ಸಚಿವ ಸಂಪುಟ ಕೊನೆಗೂ ಕಾಯ್ದೆಗೆ ತಿದ್ದುಪಡಿ ತರಲು ಸಮ್ಮತಿಸಿದೆ. ಆದರೆ ಈ ವ್ಯಾಪ್ತಿಯಲ್ಲಿ ಒಂದು ಎಕ್ರೆಗಿಂತ ಹೆಚ್ಚಿನ ಪ್ರದೇಶ ದಲ್ಲಿ ಬಡಾವಣೆ ನಿರ್ಮಾಣ, ನಿವೇಶನ, ಕಟ್ಟಡ ನಿರ್ಮಾಣ ಮಾಡ ಬೇಕಾದರೆ ನಗರ ಯೋಜನೆ ಪ್ರಾಧಿಕಾರದ ಅನುಮತಿಯನ್ನು ಪಡೆದು ಕೊಳ್ಳುವುದು ಕಡ್ಡಾಯವಾಗಿದೆ. ಒಟ್ಟಾರೆ ರಾಜ್ಯ ಸರಕಾರದ ಈ ನಿರ್ಧಾರದಿಂದ ಗ್ರಾಮೀಣ ಮತ್ತು ಅರೆ ನಗರ ಪ್ರದೇಶದ ಜನರು ನಿಟ್ಟುಸಿರು ಬಿಡುವಂತಾಗಿದೆ.

 

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.