ಒತ್ತಡ, ಗೊಂದಲ ಸೃಷ್ಟಿಯಾಗುವುದು ಬೇಡ: ಪರೀಕ್ಷೆ ಸುಸೂತ್ರ ನಡೆಸಿ 


Team Udayavani, Mar 8, 2017, 9:25 AM IST

08-ANKANA-3.jpg

ಈಗ ಶಾಲಾ ಪರೀಕ್ಷೆಗಳು ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆಯಲ್ಲ. ಅವರ ಜತೆಗೆ ಹೆತ್ತವರಿಗೆ ಮತ್ತು ಪರೀಕ್ಷೆ ನಡೆಸುವ ಮಂಡಳಿಗೂ ಅಗ್ನಿಪರೀಕ್ಷೆ. ಕಳೆದ ವರ್ಷ ಎರಡೆರಡು ಸಲ ರಸಾಯನ ಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆಯಾಗಿ ರಾಷ್ಟ್ರಮಟ್ಟದಲ್ಲಿ ಮುಜಗರ ಅನುಭವಿಸಿದ ಬಳಿಕ ಸರಕಾರ ಶಾಲಾ ಪರೀಕ್ಷೆಗಳನ್ನು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಗುರುವಾರದಿಂದ ಪ್ರಾರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ವ್ಯಾಪಕವಾದ ತಯಾರಿ ನಡೆಸಲಾಗಿದೆ. ಕಳೆದ ವರ್ಷದ ಕಹಿ ಅನುಭವದ ಬಳಿಕ ಪರೀಕ್ಷಾ ನಿಯಮಗಳನ್ನು ಇನ್ನಷ್ಟು ಬಿಗುಗೊಳಿಸುವ ಸಲುವಾಗಿ ಕರ್ನಾಟಕ ಶಿಕ್ಷಣ (ತಿದ್ದುಪಡಿ) ವಿಧೇಯಕವನ್ನು ಸಿದ್ಧಪಡಿಸಿದ್ದರೂ ಅದಕ್ಕಿನ್ನೂ ಅಂಗೀಕಾರ ಸಿಕ್ಕಿಲ್ಲ. ಹೀಗಾಗಿ ಈ ವರ್ಷ ಹಳೆ ನಿಯಮಗಳಡಿಯಲ್ಲೇ ಸುಸೂತ್ರವಾಗಿ ಪರೀಕ್ಷೆಗಳನ್ನು ನಡೆಸುವ ಜವಾಬ್ದಾರಿ ಶಿಕ್ಷಣ ಸಚಿವ ತನ್ವೀರ್‌ ಸೇs… ಮೇಲಿದೆ. ಪಿಯುಸಿ ಪರೀಕ್ಷೆ ಸಂದರ್ಭದಲ್ಲೇ ವಿಧಾನಮಂಡಲ ಅಧಿವೇಶನವೂ ನಡೆಯಲಿದ್ದು, ಪರೀಕ್ಷೆಯಲ್ಲಿ ಲೋಪವಾದರೆ ಸರಕಾರವನ್ನು ಟೀಕಿಸಲು ವಿಪಕ್ಷದ ಕೈಗೆ ಬ್ರಹ್ಮಾಸ್ತ್ರ ಸಿಗುತ್ತದೆ. ಈ ಅಂಶವನ್ನೂ ಸರಕಾರ ಗಮನದಲ್ಲಿಟ್ಟುಕೊಂಡಿದೆ. 

ಪರೀಕ್ಷೆ ಸಂದರ್ಭದಲ್ಲಿ ಎದುರಾಗುವ ವಿವಿಧ ಬಗೆಯ ಗೊಂದಲಗಳಿಂದ ಕಡೇ ಕ್ಷಣದಲ್ಲಿ ವಿದ್ಯಾರ್ಥಿಗಳು ಅಧೀರರಾಗುವುದನ್ನು ತಪ್ಪಿಸುವ ಸಲುವಾಗಿ ಸರಕಾರ ಪರೀಕ್ಷೆಗಿಂತ ಮೂರು ದಿನ ಮೊದಲೇ ಸಹಾಯವಾಣಿ ಪ್ರಾರಂಭಿಸಿದೆ. ಇದೊಂದು ಉತ್ತಮ ಕ್ರಮ. ಪರೀಕ್ಷೆ ಒತ್ತಡದಲ್ಲಿರುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಈ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಕಾಲೇಜು, ಶಿಕ್ಷಣ ಕಚೇರಿ ಎಂದು ಅಲೆದಾಡಿ ಸಮಯ ವ್ಯರ್ಥವಾಗುವುದು ತಪ್ಪುತ್ತದೆ. 

ಪ್ರಶ್ನೆಪತ್ರಿಕೆ ಸೋರಿಕೆ ಈಗ ಅತಿ ದೊಡ್ಡ ಪಿಡುಗು. ಪರೀಕ್ಷೆಯ ಪಾವಿತ್ರ್ಯವನ್ನು ಉಳಿಸುವ ಸಲುವಾಗಿ ಪ್ರಶ್ನೆಪತ್ರಿಕೆ ಸೋರಿಕೆಯಾದ ಸಣ್ಣ ಅನುಮಾನ ಇದ್ದರೂ ಮರುಪರೀಕ್ಷೆ ನಡೆಸಬೇಕೆಂದು ಕೆಲ ವರ್ಷಗಳ ಹಿಂದೆ ಸುಪ್ರೀಂ ಕೋರ್ಟು ತೀರ್ಪಿತ್ತಿದೆ. ಈ ಸಲ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಸರಕಾರ ಭಾರೀ ಮುಂಜಾಗರೂಕತಾ ಕ್ರಮ ಕೈಗೊಂಡಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಎಲ್ಲ ಜೆರಾಕ್ಸ್‌ ಅಂಗಡಿಗಳನ್ನು ಮುಚ್ಚಲು ಆದೇಶಿಸಿದೆ. ಆದರೆ ಜೆರಾಕ್ಸ್‌ ಮಾಡಿ ಪ್ರಶ್ನೆಪತ್ರಿಕೆ ಹಂಚುವ ಕಾಲ ಇದಲ್ಲ, ಸಾಮಾಜಿಕ ಮಾಧ್ಯಮಗಳಲ್ಲಿ ಕ್ಷಣಾರ್ಧದಲ್ಲಿ ಪ್ರಶ್ನೆಪತ್ರಿಕೆಗಳು ರವಾನೆಯಾಗುತ್ತವೆ. 

ಈ ನಡುವೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಆರಂಭದಲ್ಲೇ ಸರಕಾರ ಗೊಂದಲ ಮಾಡಿಕೊಂಡಿದೆ. ಹೊಸ ಪದ್ಧತಿಯಲ್ಲಿ ಪರೀಕ್ಷೆ ನಡೆಸುತ್ತೇವೆ ಎಂದು ಹೇಳಿದ್ದ ಸರಕಾರ ಪೂರ್ವಭಾವಿ ಪರೀಕ್ಷೆಯನ್ನು ಮಾತ್ರ ಹಳೇ ಪದ್ಧತಿಯಲ್ಲಿ ನಡೆಸಿದೆ. ಇದರಿಂದಾಗಿ ಸೋಮವಾರ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಗಲಿಬಿಲಿಗೊಂಡಿದ್ದಾರೆ. ಎಸ್‌ಎಲ್‌ಎಲ್‌ಸಿ ಮುಖ್ಯ ಪರೀಕ್ಷೆಗೆ ಪೂರ್ವಭಾವಿ ಪರೀಕ್ಷೆ ಮಾದರಿ. ಹೊಸ ಪರೀಕ್ಷಾ ಪದ್ಧತಿಯನ್ನು ಅಳವಡಿಸುವುದಾಗಿ ಹೇಳಿರುವ ಶಿಕ್ಷಣ ಇಲಾಖೆ ಪೂರ್ವಭಾವಿ ಪರೀಕ್ಷೆಯನ್ನು ಹಳೇ ಪದ್ಧತಿಯಲ್ಲಿ ನಡೆಸುತ್ತಿರುವುದು ಯಾವ ನ್ಯಾಯ? ಇದರಿಂದ ವಿದ್ಯಾರ್ಥಿಗಳಿಗಾಗುವ ಗೊಂದಲಕ್ಕೆ ಯಾರು ಹೊಣೆ? 

ಮಾರ್ಚ್‌ನಿಂದ ಜೂನ್‌ ತನಕದ ದಿನಗಳು ಲಕ್ಷಾಂತರ ವಿದ್ಯಾರ್ಥಿಗಳ ಪಾಲಿಗೆ ಅತ್ಯಂತ ನಿರ್ಣಾಯಕ. ಇದು ಅವರ ಭವಿಷ್ಯದ ಬದುಕನ್ನು ನಿರ್ಧರಿಸುವ ದಿನಗಳು. ವಿದ್ಯಾರ್ಥಿಗಳ ಜತೆಗೆ ಅವರ ಹೆತ್ತವರೂ ಬಹಳ ಒತ್ತಡದಲ್ಲಿರುತ್ತಾರೆ. ಪರೀಕ್ಷೆ ಎದುರಿಸಲು ಸಮರೋಪಾದಿಯ ಸಿದ್ಧತೆಗಳಾಗುತ್ತವೆ. ಮನೆಯಲ್ಲಿ ಅನೇಕ ನಿರ್ಬಂಧಗಳು ಹೇರಲ್ಪಡುತ್ತವೆ. ದೈನಿಕ ಚಟುವಟಿಕೆಗಳಿಗೆ ಬ್ರೇಕ್‌ ಬೀಳುತ್ತದೆ. ಹೆತ್ತವರು ಸತತವಾಗಿ ಒತ್ತಡ ಹಾಕುತ್ತಾರೆ. ಆದರೆ ಈ ವಿಧಾನದಿಂದ ಅಂಕಗಳನ್ನು ಹೆಚ್ಚಿಸಿಕೊಳ್ಳುವುದು ಅಸಾಧ್ಯ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಯಾವುದೇ ಭಯವಿಲ್ಲದೆ ಎದುರಿಸಬೇಕು. ಪರೀಕ್ಷೆಗಾಗಿ ನಿತ್ಯದ ಚಟುವಟಿಕೆಗಳ ನಿಗ್ರಹಿಹ ಸರಿಯಲ್ಲ. ಪ್ರಸ್ತುತ ಸಂದರ್ಭದಲ್ಲಿ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳಿಗಿಂತ ಅವರ ಹೆತ್ತವರಿಗೆ ತರಬೇತಿ ನೀಡುವ ಅಗತ್ಯವಿದೆ. ಜೀವನದ ಪಥ ಬದಲಾಯಿಸುವ ಪರೀಕ್ಷೆ ಜೀವ ಕಸಿಯಬಾರದು. ಈ ಬಗೆಗೂ ಎಚ್ಚರ ಎಲ್ಲರಲ್ಲಿ ಇರಲಿ.

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.