ಕೋವಿಡ್ ನಡುವೆ ಉಗ್ರವಾದ ಕಟ್ಟೆಚ್ಚರ ಅಗತ್ಯ


Team Udayavani, May 7, 2020, 5:37 AM IST

ಕೋವಿಡ್ ನಡುವೆ ಉಗ್ರವಾದ ಕಟ್ಟೆಚ್ಚರ ಅಗತ್ಯ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹಿಜ್ಬುಲ್‌ ಮುಜಾಹಿದೀನ್‌ ಸಂಘಟನೆಯ ಕಮಾಂಡರ್‌ ರಿಯಾಝ್ ನೈಕೂ ಕೊನೆಗೂ ಸೇನೆಯ ಎನ್‌ಕೌಂಟರ್‌ಗೆ ಬಲಿಯಾಗಿರುವ ಘಟನೆ ಬುಧವಾರ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದಿದೆ.

ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಪುಲ್ವಾಮಾ ಜಿಲ್ಲೆಯ ಬೈಗ್‌ಪುರಾ ಎಂಬಲ್ಲಿ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಮೋಸ್ಟ್‌ ವಾಂಟೆಡ್‌ ಉಗ್ರ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ.

ಇದರಿಂದಾಗಿ ಹಿಜ್ಬುಲ್‌ ಮುಜಾಹಿದ್ದೀನ್‌ನ ಬೆನ್ನೆಲುಬೇ ಮುರಿದಂತಾಗಿದ್ದು, ಭಾರತದಲ್ಲಿ ಹಿಂಸೆ ಹರಡಲು ಪ್ರಯತ್ನಿಸುತ್ತಿರುವ ಆ ಸಂಘಟನೆ ಮತ್ತು ಅದಕ್ಕೆ ಬೆಂಬಲ ನೀಡುತ್ತಿರುವ ಪಾಕಿಸ್ಥಾನಕ್ಕೂ ದೊಡ್ಡ ಪೆಟ್ಟು ಬಿದ್ದಿದೆ.

ಜಮ್ಮು-ಕಾಶ್ಮೀರದಲ್ಲಿ ಲಾಕ್‌ಡೌನ್‌ ಆರಂಭವಾದ ಅನಂತರದಿಂದ ಉಗ್ರ ಕೃತ್ಯಗಳು, ಒಳನುಸುಳುವಿಕೆ ಪ್ರಯತ್ನಗಳು, ನಮ್ಮ ಯೋಧರ ಮೇಲೆ ದಾಳಿಗಳು ಅಧಿಕವಾಗಿವೆ. ಭಾರತೀಯ ಸೇನೆಗೆ ಲಾಕ್‌ಡೌನ್‌ಗೂ ಹಿಂದಿನ ಒಂದು ವರ್ಷದಲ್ಲಿ ಆದ ಹಾನಿಗಿಂತಲೂ, ಲಾಕ್‌ಡೌನ್‌ನ ಈ 40 ದಿನಗಳಲ್ಲಿ ಅಧಿಕ ಹಾನಿಯುಂಟಾಗಿದೆ.

ಸೋಮವಾರ ಜಮ್ಮು-ಕಾಶ್ಮೀರದ ಹಂದ್ವಾರಾದಲ್ಲಿ ಸಿಆರ್‌ಪಿಎಫ್ ಗಸ್ತು ಪಡೆಯ ಮೇಲೆ ನಡೆದ ಉಗ್ರ ದಾಳಿಯಲ್ಲಿ ನಮ್ಮ ಮೂವರು ಯೋಧರು ವೀರಮರಣವಪ್ಪಿದ್ದಾರೆ. ಅದಕ್ಕೂ ಮುನ್ನಾದಿನ ಇದೇ ಪ್ರದೇಶದಲ್ಲಿ ಆತಂಕವಾದಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಕರ್ನಲ್‌, ಮೇಜರ್‌ ಸಮೇತ ಐವರು ಯೋಧರು ಬಲಿಯಾಗಿದ್ದಾರೆ.

ಕಳೆದ ವರ್ಷ ಜಮ್ಮು- ಕಾಶ್ಮೀರದಿಂದ ಆರ್ಟಿಕಲ್‌ 370 ಹಿಂಪಡೆದು, ಅದನ್ನು ಕೇಂದ್ರಾಡಳಿತ ಪ್ರದೇಶವಾಗಿಸಿದ ಅನಂತರದಿಂದ, ಪಾಕಿಸ್ಥಾನಕ್ಕೆ ಹುಚ್ಚುಹಿಡಿದಂತಾಗಿದೆ. ಈ ಕಾರಣದಿಂದಲೇ, ನಿರಂತರವಾಗಿ ಅದು ಜಮ್ಮು-ಕಾಶ್ಮೀರಕ್ಕೆ ಉಗ್ರರನ್ನು ನುಗ್ಗಿಸುವ ಪ್ರಯತ್ನ ನಡೆಸಿದೆ. ಜಮ್ಮು-ಕಾಶ್ಮೀರದಲ್ಲಿ ಲಾಕ್‌ಡೌನ್‌ ಸಡಿಲವಾಗುತ್ತಿದ್ದಂತೆಯೇ ಉಗ್ರರ ಹಾವಳಿ ಅಧಿಕವಾಗಲಾರಂಭಿಸಿದೆ. ಉಗ್ರರು ಹಳ್ಳಿ-ಹಳ್ಳಿಯಲ್ಲೂ ತಮ್ಮ ನೆಟ್‌ವರ್ಕ್‌ ಮಾಡಿಕೊಂಡಿದ್ದು, ಗ್ರಾಮಸ್ಥರನ್ನು ಹೆದರಿಸಿ-ಬೆದರಿಸಿ ಅಥವಾ ಅವರನ್ನು ಬಂಧಿಯಾಗಿಸಿ ಅವರಿಂದ ಅಗತ್ಯ ಮಾಹಿತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಸೇನೆಯ ಪ್ರಕಾರ, ಉಗ್ರವಾದ ಘಟನೆಗಳ ವೃದ್ಧಿಯ ಹಿಂದೆ ಬೇಸಗೆಯೂ ಕಾರಣವಿರಬಹುದು. ಬಿಸಿಲು ಹೆಚ್ಚುತ್ತಿದ್ದಂತೆಯೇ, ನಿಯಂತ್ರಣ ರೇಖೆಯ ಬಳಿಯ ಹಿಮ ಕರಗಲಾರಂಭಿಸುತ್ತದೆ. ಆಗ ಉಗ್ರರಿಗೆ ಒಳನುಸುಳಲು ಸುಲಭವಾಗುತ್ತದೆ. ಚಳಿಗಾಲದ ಸಮಯದಲ್ಲಿ ಬಹುತೇಕ ಮಾರ್ಗಗಳು ಹಿಮಾವೃತವಾಗಿರುತ್ತವೆ.

ಇದೇನೇ ಇದ್ದರೂ ಹಿಜ್ಬುಲ್‌ ಕಮಾಂಡರ್‌ನನ್ನು ಹೊಡೆದುರುಳಿಸುವ ಮೂಲಕ ಭಾರತೀಯ ಸೇನೆ, ಉಗ್ರರಿಗೆ ಮತ್ತು ಪಾಕಿಸ್ಥಾನಕ್ಕೆ ಬಲವಾದ ಸಂದೇಶವನ್ನು ಕಳುಹಿಸಿದೆ. ಗುಪ್ತಚರ ಇಲಾಖೆಯ ಪ್ರಕಾರ, ಗಡಿ ನಿಯಂತ್ರಣ ರೇಖೆಯಾಚೆ, ಅಂದರೆ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ 300ಕ್ಕೂ ಅಧಿಕ ಉಗ್ರವಾದಿಗಳು ಭಾರತದಲ್ಲಿ ನುಸುಳಲು ಸಿದ್ಧರಾಗಿದ್ದಾರೆ. ಈ ಕಾರಣಕ್ಕಾಗಿಯೇ, ಸೇನೆಯ ಗಮನವನ್ನು ಬೇರೆಡೆ ಸೆಳೆಯಲು ಪಾಕ್‌ ಸೇನೆ ನಿರಂತರವಾಗಿ ಗಡಿಯಾಚೆಗಿಂದ ಗುಂಡಿನ ದಾಳಿ ನಡೆಸುತ್ತಲೇ ಇದೆ.

ಇದು ನಮ್ಮ ಸೇನೆಗೆ ಅತ್ಯಂತ ಸವಾಲಿನ ಸಮಯವೂ ಹೌದು. ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳ ಹಾವಳಿಯನ್ನು ತಡೆಯುವ ಜತೆಗೆ, ಉಗ್ರರನ್ನೂ ಹತ್ತಿಕ್ಕುವ ಸವಾಲು ಅವರೆದುರಿಗಿದೆ. ಕೊರೊನಾ ಸೋಂಕಿನಿಂದ ಖುದ್ದು ಬಚಾವಾಗಿ, ದೇಶವನ್ನೂ ರಕ್ಷಿಸಲು ಹೋರಾಡುತ್ತಿರುವ ನಮ್ಮ ಸೇನೆಯ ಮನೋಬಲ ಹೆಚ್ಚಿಸಬೇಕಿದೆ. ಇದೇ ವೇಳೆಯಲ್ಲೇ, ಪಾಕಿಸ್ಥಾನವನ್ನು ರಾಜತಾಂತ್ರಿಕವಾಗಿ ಕಟ್ಟಿಹಾಕುವ ಕೆಲಸವನ್ನೂ ಭಾರತ ಸರ್ಕಾರ ಮಾಡಬೇಕಿದೆ.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.