ಡ್ರಗ್‌ ಮಾಫಿಯಾ ಮೇಲೆ ಕಠಿನ ನಿಯಂತ್ರಣ ಅಗತ್ಯ


Team Udayavani, Mar 7, 2023, 6:00 AM IST

ಡ್ರಗ್‌ ಮಾಫಿಯಾ ಮೇಲೆ ಕಠಿನ ನಿಯಂತ್ರಣ ಅಗತ್ಯ

ಶಾಲಾ- ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ ವೃತ್ತಿಪರರನ್ನೇ ಗುರಿಯಾಗಿಟ್ಟುಕೊಂಡು ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ ಸೇರಿದಂತೆ ರಾಜ್ಯದ ಹಲವು ಕಡೆ “ಡ್ರಗ್‌’ ಮಾಫಿಯಾ ಕಾರ್ಯಾಚರಣೆ ನಡೆಸುತ್ತಿರುವುದು ಹೊಸದೇನಲ್ಲ. ಅದರಲ್ಲೂ ವಿಶೇಷವಾಗಿ ರಾಜಧಾನಿ ಹಾಗೂ ಕರಾವಳಿ ಭಾಗದ ಡ್ರಗ್‌ ಮಾಫಿಯಾ ಕೈಚಳಕ ಬೆಚ್ಚಿಬೀಳಿಸುವಂತಿದೆ. ಚಾಕೋಲೇಟ್‌ನಂತೆ ಮಕ್ಕಳ ಕೈಗೆ ಮಾದಕ ವಸ್ತುಗಳು ಸಿಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಲಕ್ಷಾಂತರ ವಿದ್ಯಾರ್ಥಿಗಳ ಪೋಷಕರ ನೆಮ್ಮದಿ ಹಾಳು ಮಾಡಿದೆ.

ಬೆಂಗಳೂರುವೊಂದರಲ್ಲಿ ವರ್ಷಕ್ಕೆ 136 ಕೋಟಿ ರೂ.ಗಳ ಡ್ರಗ್‌ ವಹಿವಾಟು ನಡೆಯುತ್ತದೆ ಎಂಬ ಅಂಶ ಈ ಜಾಲ ಎಷ್ಟರ ಮಟ್ಟಿಗೆ ಬೇರೂರಿದೆ ಎಂಬುದಕ್ಕೆ ಸಾಕ್ಷಿ.

ಹಲವು ವರ್ಷಗಳ ಹಿಂದೆ ರೀತಿ ಕದ್ದುಮುಚ್ಚಿ ನಡೆಯುತ್ತಿದ್ದ ಈ ಡ್ರಗ್‌ ದಂಧೆ ಇತ್ತೀಚಿನ ದಿನಗಳಲ್ಲಿ ಒಂದು ರೀತಿ ಬಹಿರಂಗ ವ್ಯವಹಾರವಾಗಿ ಮಾರ್ಪಾಟ್ಟಿರುವುದು ಕಾನೂನು ವ್ಯವಸ್ಥೆಯಲ್ಲಿನ ಲೋಪಕ್ಕೆ ಕೈಗನ್ನಡಿ ಹಿಡಿದಂತೆ ಅಗಿದೆ. ಈ ದಂಧೆಕೋರರು ಯಾವುದಕ್ಕೂ ಹೆದರುತ್ತಿಲ್ಲ ಎಂಬುದಕ್ಕೆ ಕ್ವಿಂಟಾಲ್‌ಗ‌ಟ್ಟಲೆ ಗಾಂಜಾ ಮತ್ತಿತರ ಮಾದಕ ವಸ್ತುಗಳನ್ನು ಬೆಂಗಳೂರಿಗೆ ಡಂಪ್‌ ಮಾಡುತ್ತಿರುವುದಕ್ಕೆ ನಿದರ್ಶನ. ಅಲ್ಲೊಂದು-ಇಲ್ಲೊಂದು ಪ್ರಕರಣಗಳು ಬೆಳಕಿಗೆ ಬಂದಾಗ ಎಚ್ಚೆತ್ತುಕೊಳ್ಳುವ ಬದಲಿಗೆ ಪೂರೈಕೆಯ ಮೂಲ ಹಾಗೂ ಮಾರಾಟ ಜಾಲದ ಬಗ್ಗೆ ಸದಾ ಕಣ್ಣಿಡುವ ಅಗತ್ಯವಿದೆ. ದೇಶ ಹಾಗೂ ವಿದೇಶಿ ಡ್ರಗ್‌ ಮಾಫಿಯಾ ವಿರುದ್ಧ ತಕ್ಷಣವೇ ಸಮರ ಸಾರುವ ಅನಿವಾರ್ಯತೆ ಎದುರಾಗಿದೆ.

ಈ ಚಟಕ್ಕೆ ಬಲಿಯಾದ ವಿದ್ಯಾರ್ಥಿಗಳು, ಯುವಕರು ತಮ್ಮ ಜೀವನ ಹಾಳು ಮಾಡಿಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ. ಮಾದಕ ವಸ್ತುಗಳ ಚಟಕ್ಕೆ ದಾಸನಾದರೆ ಅದರಿಂದ ಅವರನ್ನು ಹೊರತರುವುದು ಅಷ್ಟು ಸುಲಭದ ಕೆಲಸವಲ್ಲ. ಅದರಲ್ಲೂ ವಿದ್ಯಾಭ್ಯಾಸದ ವೇಳೆ ಈ ರೀತಿಯ ಚಟಗಳಿಗೆ ಬಿದ್ದು ಕಾಸಿಗಾಗಿ ಅನೇಕ ರೀತಿಯ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳಿಗೇನೂ ಕಡಿಮೆ ಇಲ್ಲ. ಇಂಥ ಮಕ್ಕಳ ಪೋಷಕರ ವ್ಯಥೆ ಹೇಳತೀರದು.
ಮನೋತಜ್ಞರಿಂದ ಕೌನ್ಸೆಲಿಂಗ್‌ ನಡೆಸಿದರೂ ಉಪವಾಗವಾಗದೆ ಅದೆಷ್ಟೋ ಪೋಷಕರು ಕೈಚೆಲ್ಲಿ ಕಣ್ಣೀರಿನಿಂದ ನಿತ್ಯ ಕೈತೊಳೆಯುತ್ತಿರುವ ಉದಾಹರಣೆಗಳು ಸಾಕಷ್ಟಿವೆ.

ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಒಡಿಶಾ ಸೇರಿದಂತೆ ಹಲವು ರಾಜ್ಯಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಪ್ರಮುಖ ನಗರಗಳಿಗೆ ಡ್ರಗ್‌ ಪೂರೈಸುತ್ತಿರುವ ಮಾಫಿಯಾವನ್ನು ಬೇರು ಮಟ್ಟದಲ್ಲೇ ಕತ್ತರಿಸಿ ಹಾಕದಿದ್ದರೆ ಭವಿಷ್ಯದ ದಿನಗಳು ಮತ್ತಷ್ಟು ಆತಂಕಕಾರಿಯಾಗಲಿವೆ. ಇದರ ವಿರುದ್ಧ ಕೇವಲ ಕರ್ನಾಟಕ ಒಂಟಿಯಾಗಿ ಹೋರಾಡಿದರೆ ಸಾಲದು. ಹಲವು ರಾಜ್ಯಗಳು ಜಂಟಿಯಾಗಿ ಹೋರಾಡಲು ಕೈಜೋಡಿಸಬೇಕಿದೆ. ಜತೆಗೆ ತಮ್ಮ ತಮ್ಮ ರಾಜ್ಯಗಳ ಗುಡ್ಡಗಾಡು ಪ್ರದೇಶದಲ್ಲಿ ಅಕ್ರಮವಾಗಿ ಬೆಳೆಯುತ್ತಿರುವ ಗಾಂಜಾವನ್ನು ಪತ್ತೆ ಹಚ್ಚಿ ಭಸ್ಮ ಮಾಡಿದರೆ ಅರ್ಧ ಸಮಸ್ಯೆ ಬಗೆಹರಿದಂತೆ. ಈ ನಿಟ್ಟಿನಲ್ಲಿ ನೆರೆ-ಹೊರೆ ರಾಜ್ಯಗಳು ಒಟ್ಟಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸುವುದು ಅಗತ್ಯವಿದೆ.

ಎಲ್ಲಕ್ಕಿಂತ ಮುಖ್ಯವಾಗಿ ಶಾಲಾ-ಕಾಲೇಜುಗಳು, ಯುವ ಸಮುದಾಯದಲ್ಲಿ ಈ ಬಗ್ಗೆ ತಕ್ಷಣವೇ ಜಾಗೃತಿ ಮೂಡಿಸುವುದು ಅವಶ್ಯಕತೆ ಇದೆ. ಪೊಲೀಸ್‌ ಇಲಾಖೆ ಜತೆಗೆ ವಿವಿಧ ಸಂಘ ಸಂಸ್ಥೆಗಳು ಕೈಜೋಡಿಸಿದರೆ ಮಾತ್ರ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯ. ಕೇವಲ ಸಾಂಕೇತಿಕವಾಗಿ ವರ್ಷಕ್ಕೊಮ್ಮೆ ಜಾಗೃತಿ ಕಾರ್ಯಕ್ರಮ ನಡೆದರೆ ಸಾಲದು, ಇದೊಂದು ರೀತಿ ಅಭಿಯಾನ ಆಗಬೇಕಿದೆ. ಪ್ರತಿ ಎಂಜಿನಿಯರಿಂಗ್‌, ವೈದ್ಯಕೀಯ ಕಾಲೇಜುಗಳು, ಹಾಸ್ಟಲ್‌ಗ‌ಳಲ್ಲಿ ಡ್ರಗ್‌ ವಿರೋಧಿ ಸೆಲ್‌ ತೆರೆದು ವಿದ್ಯಾರ್ಥಿಗಳ ಮೇಲೆ ನಿಗಾ ಇಡಬೇಕಿದೆ. ದಂಧೆಕೋರರ ವಿರುದ್ಧ ಕಾನೂನು ಕುಣಿಕೆಗಳನ್ನು ಮತ್ತಷ್ಟು ಬಲಪಡಿಸಿ ಸಮಾಜಕ್ಕೆ ಒಂದು ಸಂದೇಶ ಕೊಡಬೇಕಿರುವುದು ಸರ್ಕಾರಗಳ ದೊಡ್ಡ ಜವಾಬ್ದಾರಿಯಾಗಿದೆ. ಡ್ರಗ್‌ ಮಾಫಿಯಾ ವಿರುದ್ಧ ಸರ್ಕಾರ ಹಾಗೂ ಸಮಾಜ ಎರಡೂ ಒಟ್ಟಿಗೆ ಹೋದರೆ ಮಾತ್ರ ಸ್ವಲ್ಪಮಟ್ಟಿಗೆ ಯಶ ಕಾಣಬಹುದು. ಇಲ್ಲದಿದ್ದರೆ ಮಾಫಿಯಾ ಕೈಮೇಲಾಗುವುದರಲ್ಲಿ ಎರಡು ಮಾತಿಲ್ಲ.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.