ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಗೆ ಯಶಸ್ಸು: ನಿಗಾ ಇರಲಿ


Team Udayavani, May 9, 2018, 6:00 AM IST

8.jpg

ಉಗ್ರರನ್ನು ಸದೆಬಡೆಯುವ ಜೊತೆಯಲ್ಲೇ, ಯುವಕರನ್ನು ಸರಿದಾರಿಗೆ ತರುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇರಬೇಕು. ಆ ರಾಜ್ಯದ ಶಿಕ್ಷಣ ಸಂಸ್ಥೆಗಳು ಉಗ್ರಗಾಮಿಗಳ ಹೊಸ ಉಗಮಸ್ಥಾನಗಳಾಗದಂತೆ ಎಚ್ಚರ ವಹಿಸುವ ಅಗತ್ಯವಿದೆ.

ಕಳೆದ ಕೆಲವು ತಿಂಗಳಿಂದ ನಮ್ಮ ಭದ್ರತಾ ಪಡೆಗಳು ಕಾಶ್ಮೀರ ಕಣಿವೆಯಲ್ಲಿ ಉಗ್ರವಾದಿಗಳನ್ನು ಹುಡುಕಾಡಿ ಹೊಸಕಿ ಹಾಕುವ ಕಾರ್ಯದಲ್ಲಿ ನಿರತ ವಾಗಿವೆ. ಸೇನೆಯ ಕಾರ್ಯಾಚರಣೆಯಲ್ಲಿ ಅನೇಕ ಉಗ್ರರು ಹತರಾಗಿದ್ದಾರೆ. ಕಳೆದ ಮೂರು ದಿನದಲ್ಲಿ ಭಾರತೀಯ ಸೇನೆ ಶೋಪಿಯಾನ್‌ನಲ್ಲಿ ಹಿಬ್ಜುಲ್‌ ಮುಜಾಹಿದ್ದೀನ್‌ನ ಐವರು ಮತ್ತು ಛತ್ತಬಾಲ್‌ನಲ್ಲಿ ಲಷ್ಕರ್‌ ಎ ತೈಯಬಾದ ಮೂವರು ಆತಂಕವಾದಿಗಳನ್ನು ಹೊಡೆದುರುಳಿಸಿದೆ. ಶೋಪಿ ಯಾನ್‌ ಕಾರ್ಯಾಚರಣೆಯಲ್ಲಿ ಹಿಜ್ಬುಲ್‌ನ ಸ್ಥಾನೀಯ ಕಮಾಂಡರ್‌ ಸದ್ದಾಮ್‌ ಪೈದರ್‌ ಕೂಡ ಸತ್ತಿದ್ದಾನೆ. ಈ ವ್ಯಕ್ತಿ ಬುರ್ಹನ್‌ ವಾನಿಯ ಆಪ್ತವಲಯದಲ್ಲಿ ಒಬ್ಬನಾಗಿದ್ದ ಎಂದು ಹೇಳಲಾಗುತ್ತದೆ. ಈ ಕಾರಣಕ್ಕಾಗಿಯೇ ಸೇನೆಯ ಈ ಕಾರ್ಯಾಚರಣೆ ಕಾಶ್ಮೀರ ಕಣಿವೆಯ ಕ್ರೂರ ಸಂಘಟನೆಗಳ ಬೆನ್ನೆಲುಬಿಗೆ ಮತ್ತೂಮ್ಮೆ ಬಲವಾದ ಪ್ರಹಾರ ಮಾಡಿದೆ ಎನ್ನಬಹುದು. ಇದನ್ನು ನಿಸ್ಸಂದೇಹವಾಗಿ ಸುರಕ್ಷಾ ದಳಗಳ ದೊಡ್ಡ ಗೆಲುವು ಎಂದೂ ಕರೆಯಬಹುದು. ಆದರೆ ಕಾಶ್ಮೀರ ಕಣಿವೆಯಲ್ಲಿ ಯಾವೆಲ್ಲ ಆಯಾಮದಲ್ಲಿ ನಮ್ಮ ಸೈನಿಕರು ಆತಂಕವಾದಿಗಳನ್ನು ಎದುರಿಸುತ್ತಿದ್ದಾರೆ ಎನ್ನುವುದನ್ನು ನೋಡಿದಾಗ, ಉಗ್ರ ಸಂಘಟನೆಗಳಿಗೆ ಸಿಗುತ್ತಿರುವ ಆರ್ಥಿಕ ಮತ್ತು ಇತರೆ ಸಂಪನ್ಮೂಲಗಳ ಪೂರೈಕೆಯನ್ನು ತಡೆಯುವಲ್ಲಿ ನಿರೀಕ್ಷಿಸಿದಷ್ಟು ಯಸಶು ನಮಗಿನ್ನೂ ಸಿಕ್ಕಿಲ್ಲ ಎನ್ನುವುದು ಅರ್ಥವಾಗುತ್ತದೆ. ಬುರ್ಹಾನ್‌ ವಾನಿಯ ಹತ್ಯೆಯ ನಂತರ ವಂತೂ ಕಾಶ್ಮೀರ ಕುದಿಯ ಲಾರಂಭಿಸಿತ್ತು. ತಿಂಗಳುಗಟ್ಟಲೇ ನಮ್ಮ ಸೇನೆ ಕಲ್ಲು ತೂರಾಟ ಗಾರರನ್ನು ಎದುರಿಸಬೇಕಾ ಯಿತು. ಆ ಹೊತ್ತಲ್ಲೇ ಅನೇಕ ಧರ್ಮಾಂಧ ಯುವಕರು ಹಿಬುjಲ್‌ ಸಂಘಟ ನೆ ಯನ್ನು ಹೆಚ್ಚಿನ ಸಂಖ್ಯೆಯಲ್ಲಿ  ಸೇರಿದ್ದರು ಎನ್ನಲಾಗು ತ್ತದೆ. ಇದನ್ನೆಲ್ಲ ತಡೆ ಯುವುದ ಕ್ಕಾಗಿಯೇ ಪ್ರತ್ಯೇಕ ತಾವಾದಿ ಸಂಘಟನೆಗಳಿಗೆ ಸೀಮೆಯಾಚೆ ಗಿರುವ ಸಂಬಂಧ ಮತ್ತು ಅವುಗಳ ಹಣದ ವಹಿವಾಟಿನ ಮೇಲೆ ಗಮನ ವಿಡಲಾಗಿತ್ತು. ಉಗ್ರ ಸಂಘಟನೆಗಳ ಬಲ ಕುಸಿಯಬೇಕೆಂದರೆ ಅವುಗಳಿಗೆ ಸಿಗುತ್ತಿರುವ ಆರ್ಥಿಕ ಬೆಂಬಲಕ್ಕೆ ಕೊಡಲಿಯೇಟು ಕೊಡಬೇಕು, ಆದರೆ ಇದೊಂದರಿಂದಲೇ ಸಮಸ್ಯೆ ಬಗೆಹರಿಯುತ್ತದೆ ಎನ್ನುವಂತಿಲ್ಲ. 

ಶೋಪಿಯಾನ್‌ ಕಾರ್ಯಾಚರಣೆಯಲ್ಲಿ ಮೃತಪಟ್ಟ ಉಗ್ರರಲ್ಲಿ ಕಾಶ್ಮೀರ ವಿಶ್ವವಿದ್ಯಾಲಯದ ಒಬ್ಬ ಸಹಾಯಕ ಪ್ರೊಫೆಸರ್‌ ಕೂಡ ಇದ್ದ. ಉಗ್ರನಾದ 36 ಗಂಟೆಗಳಲ್ಲೇ ಈ ವ್ಯಕ್ತಿಯ ಹತ್ಯೆಯಾಗಿದೆ. ಉಗ್ರ ಸಂಘಟನೆಗಳು ತಮ್ಮ ಶಕ್ತಿ ಹೆಚ್ಚಿಸಿಕೊಳ್ಳಲು ಯಾವೆಲ್ಲ ಸಂಸ್ಥಾನಗಳಲ್ಲಿ ತಮ್ಮ ವ್ಯಕ್ತಿಗಳನ್ನು ಸೇರಿಸುತ್ತಿವೆ ಅಥವಾ ಸೃಷ್ಟಿಸುತ್ತಿವೆ ಎನ್ನುವುದಕ್ಕೆ ಇದು ನಿದರ್ಶನ. ಇಂಥ ಮತಾಂಧ ಪ್ರೊಫೆಸರ್‌ಗಳು ತಮ್ಮ ಎಷ್ಟು ವಿದ್ಯಾರ್ಥಿಗಳ ಬ್ರೇನ್‌ವಾಶ್‌ ಮಾಡಿರುತ್ತಾರೋ? ಅವಿದ್ಯಾವಂತ ಉಗ್ರನಿಗಿಂತ ವಿದ್ಯಾವಂತ ಉಗ್ರ ಬಹಳ ಅಪಾಯಕಾರಿ ಎನ್ನುವ ಮಾತು ಸುಳ್ಳೇನೂ ಅಲ್ಲ. ಇದು ಸಾಲದೆಂಬಂತೆ ನಿರುದ್ಯೋಗದ ಸಮಸ್ಯೆಯೂ ಕಣಿವೆಯಲ್ಲಿ ಕಾಡುತ್ತಿದೆ. ಪ್ರವಾಸೋದ್ಯಮದ ಮೇಲೆಯೇ ಕಾಶ್ಮೀರ ಹೆಚ್ಚು ಅವಲಂಬಿತವಾಗಿದೆ. ಆದರೆ ಉಗ್ರರ ಉಪಟಳ, ಕಲ್ಲು ತೂರಾಟಗಾರರ ಗದ್ದಲದಿಂದಾಗಿ ಪ್ರವಾಸೋದ್ಯಮಕ್ಕೂ ಪೆಟ್ಟು ಬೀಳುತ್ತಿದೆ. ಈ ಎಲ್ಲಾ ಸಂಗತಿಗಳೂ ಕೆಲಸವಿಲ್ಲದ ಯುವಕರ ಸಂಖ್ಯೆಯನ್ನು ಹೆಚ್ಚಿಸುತ್ತಿವೆ. 

ಅಂದರೆ ಇವರೆಲ್ಲ ತಮ್ಮ ಕಾಲ ಮೇಲೆ ತಾವೇ ಕಲ್ಲು ತೂರಿಕೊಳ್ಳುತ್ತಿದ್ದಾರೆ ಎಂದಾಯಿತು! ಉಗ್ರ ಸಂಘಟನೆಗಳು ಇಂಥ ಯುವಕರನ್ನೇ ಟಾರ್ಗೆಟ್‌ ಮಾಡಿ ಅವರಲ್ಲಿ ಆಕ್ರೋಶ ತುಂಬುತ್ತಿವೆ. ಗಡಿ ಭದ್ರತಾ ಪಡೆಗಳನ್ನು ಬಲಿಷ್ಠಗೊಳಿಸುವ ಮೂಲಕ ಗಡಿ ಆಚೆ ಯಿಂದ, ಅಂದರೆ, ಪಾಕಿಸ್ತಾನದಿಂದ ಉಗ್ರರಿಗೆ- ಪ್ರತ್ಯೇಕತಾವಾದಿಗಳಿಗೆ ಸಿಗುತ್ತಿರುವ ಸಹಾಯವನ್ನು  ಸಂಪೂರ್ಣವಾಗಿ ನಿಲ್ಲಿಸಬೇಕಿದೆ. ಆದರೆ ಇದೇ ವೇಳೆಯಲ್ಲೇ ಕಾಶ್ಮೀರದಲ್ಲಿ ಮಡುಗಟ್ಟಿರುವ ಆಕ್ರೋಶವನ್ನು ಶಾಂತಗೊಳಿಸಲು, ಯುವಕರನ್ನು ಅಡ್ಡದಾರಿ ಹಿಡಿಯದಂತೆ ಮಾಡಲು ಸಂಪೂರ್ಣವಾಗಿ ಭಿನ್ನ ಮಾರ್ಗದ ಅಗತ್ಯವೂ ಇದೆ. ಆಶಾದಾಯಕ ಸಂಗತಿಯೆಂದರೆ ಕಾಶ್ಮೀರಿಗಳೊಂದಿಗೆ ಮಾತುಕತೆಯಲ್ಲಿ ತೊಡಗುವ, ಅವರನ್ನು ಮುಖ್ಯವಾಹಿನಿಯಲ್ಲಿ ತರುವ ಕೆಲಸ ಮೋದಿ ಸರ್ಕಾರದಡಿಯಲ್ಲಿ ತುಸು ವೇಗಪಡೆದಿದೆ. ಈ ಮಾತುಕತೆ ಯಾವುದೇ ಕಾರಣಕ್ಕೂ ನಿಲ್ಲದಂತೆ ನೋಡಿಕೊಳ್ಳಬೇಕು. ಉಗ್ರರನ್ನು ಸದೆಬಡೆಯುವ ಜೊತೆಯಲ್ಲೇ, ಯುವಕರನ್ನು ಸರಿದಾರಿಗೆ ತರುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇರಬೇಕು. ಆ ರಾಜ್ಯದ ಶಿಕ್ಷಣ ಸಂಸ್ಥೆಗಳು ಉಗ್ರರ ಹೊಸ ಉಗಮಸ್ಥಾನಗಳಾಗದಂತೆ ಎಚ್ಚರ ವಹಿಸುವ ಅಗತ್ಯವೂ ಇದೆ.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.