ಸುಧಾಕರ್‌ಗೆ ಆರೋಗ್ಯ-ಕುಟುಂಬ ಕಲ್ಯಾಣ ಖಾತೆ: ಗೊಂದಲಕ್ಕೆ ಆಸ್ಪದ ಬೇಡ


Team Udayavani, Oct 13, 2020, 6:06 AM IST

ಸುಧಾಕರ್‌ಗೆ ಆರೋಗ್ಯ-ಕುಟುಂಬ ಕಲ್ಯಾಣ ಖಾತೆ: ಗೊಂದಲಕ್ಕೆ ಆಸ್ಪದ ಬೇಡ

ಈಗಿನ ಸಂದರ್ಭದಲ್ಲಿ ಜನರ ಹಿತಾಸಕ್ತಿ, ಕೋವಿಡ್ ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಸಂಘಟಿತ ಹೋರಾಟ ದೃಷ್ಟಿಯಿಂದ ಆಡಳಿತಾತ್ಮಕವಾಗಿ ಯಾವುದೇ ಗೊಂದಲಕ್ಕೆ ಅವಕಾಶ ಇಲ್ಲದಂತೆ ಕ್ರಮಕೈಗೊಳ್ಳುವುದು ಅನಿವಾರ್ಯ. ಹೀಗಾಗಿಯೇ ರಾಜ್ಯ ಸರ್ಕಾರ ಇಂಥದ್ದೊಂದು ತೀರ್ಮಾನ ಕೈಗೊಂಡಿರಬಹುದು.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರಿಗೆ ಶ್ರೀರಾಮುಲು ಅವರ ಬಳಿಯಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ಜವಾಬ್ದಾರಿ ಹೆಚ್ಚುವರಿಯಾಗಿ ವಹಿಸಲಾಗಿದೆ.

ಕೋವಿಡ್ ನಿರ್ವಹಣೆ ವಿಚಾರದಲ್ಲಿ ಮತ್ತಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಎದುರಾಗಿದ್ದ ಗೊಂದಲ ನಿವಾರಿಸಿ ಸುಸೂತ್ರ ಹಾಗೂ ಸುಗಮ ಆಡಳಿತಕ್ಕೆ ಇಂತಹ ಕ್ರಮ ಕೈಗೊಳ್ಳಲಾಗಿದೆ ಎಂಬ ಸಮಜಾಯಿಷಿ ಸಹ ಸರ್ಕಾರ ನೀಡಿದೆ. ಕೊರೊನಾ ವಿಚಾರದಲ್ಲಿ ಆಯಾ ಸಂದರ್ಭದಲ್ಲಿ ಕೈಗೊಳ್ಳುವ ಆದೇಶ, ನಿರ್ಧಾರ, ನಿರ್ಣಯ, ತೀರ್ಮಾನಗಳು ಒಂದೇ ಕಡೆಯಿಂದ ಹೋದರೆ ಸೂಕ್ತ. ಅಧಿಕಾರಿಗಳಿಗೂ ಪಾಲನೆಗೆ ಸುಲಭ. ಸಮನ್ವಯತೆಗೂ ಸಹಕಾರಿ ಎಂಬುದು ಇದರ ಮುಖ್ಯ ಉದ್ದೇಶ ಇರಬಹುದು.

ಒಂದು ಕಡೆಯಿಂದ ನೋಡಿದರೆ ಇದು ಸೂಕ್ತವೂ ಹೌದು. ಏಕೆಂದರೆ, ಕೊರೊನಾ ಪ್ರಾರಂಭದಿಂದ ಇದುವರೆಗಿನ ಬೆಳವಣಿಗೆ ಗಮನಿಸಿ ದರೆ ಕೆಲವು ಸಲ ಒಮ್ಮತದ ತೀರ್ಮಾನವಾಗದೆ ಸಮಸ್ಯೆಗಳು ಎದುರಾಗಿದ್ದೂ ಉಂಟು. ಇದೇ ಕಾರಣಕ್ಕೆ ಕೋವಿಡ್ ಹೊಣೆಗಾರಿಕೆ ಇತರೆ ಸಚಿವರಿಗೂ ಕೆಲ ಸಮಯ ನೀಡಲಾಗಿತ್ತು. ಆರೋಗ್ಯ ಸೇವೆ ವಿಚಾರದಲ್ಲಿ ಅದರಲ್ಲೂ ಕೊರೊನಾ ಸಂದರ್ಭದಲ್ಲಿ ಒಂದೇ ಇಲಾಖೆ ಅಥವಾ ಸಚಿವ ನಿಭಾಯಿಸುವುದು ಆಡಳಿತಾತ್ಮಕ ದೃಷ್ಟಿಯಿಂದ ಸೂಕ್ತ.

ಆದರೆ, ದಿಢೀರ್‌ ಕ್ರಮದಿಂದ ರಾಜಕೀಯವಾಗಿ ಬೇರೆ ಅರ್ಥಗಳಿಗೆಕಾರಣವಾಗಬಹುದು ಜತೆಗೆ, ಇಷ್ಟು ದಿನ ಕೊರೊನಾ ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗಿರಲಿಲ್ಲವೇ ಎಂಬ ಪ್ರಶ್ನೆಯೂ ಮೂಡಬಹುದು. ಆದರೆ, ಈಗಿನ ಸಂದರ್ಭದಲ್ಲಿ ಜನರ ಹಿತಾಸಕ್ತಿ, ಕೊರೊನಾ ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಸಂಘಟಿತ ಹೋರಾಟ ದೃಷ್ಟಿಯಿಂದ ಆಡಳಿತಾತ್ಮಕವಾಗಿ ಯಾವುದೇ ಗೊಂದಲಕ್ಕೆ ಅವಕಾಶ ಇಲ್ಲದಂತೆ ಕ್ರಮಕೈಗೊಳ್ಳುವುದು ಅನಿವಾರ್ಯ.

ಹೀಗಾಗಿಯೇ ರಾಜ್ಯ ಸರ್ಕಾರ ಇಂಥದ್ದೊಂದು ತೀರ್ಮಾನ ಕೈಗೊಂಡಿ ರಬಹುದು. ಆರೋಗ್ಯ ಮತ್ತು ಕುಟಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಎರಡೂ ಸೇರಿದರೆ ದೊಡ್ಡ ವ್ಯಾಪ್ತಿ. ಸಮುದಾಯ ಆರೋಗ್ಯ ಕೇಂದ್ರದಿಂದ ಹಿಡಿದು ವೈದ್ಯಕೀಯ ಕಾಲೇಜು ಆಸ್ಪತ್ರೆಗಳವರೆಗೆ ಕಾರ್ಯ ನಿರ್ವಹಣೆ ಮಾಡಬೇಕಾಗುತ್ತದೆ. ವೈದ್ಯರು, ನರ್ಸ್‌ಗಳು, ತಜ್ಞ ವೈದ್ಯರು ಹೀಗೆ ಬೃಹತ್‌ ಸಿಬ್ಬಂದಿ ಜತೆಗೂಡಿಸಿಕೊಂಡು ಕೆಲಸ ಮಾಡಬೇಕಾಗುತ್ತದೆ. ಹೀಗಾಗಿ, ಡಾ.ಕೆ.ಸುಧಾಕರ್‌ ಅವರಿಗೂ ಇದು ಸವಾಲೇ ಸರಿ. ಆದರೂ ಸ್ವತಃ ವೈದ್ಯರೂ ಆಗಿರುವ ಡಾ.ಕೆ.ಸುಧಾಕರ್‌ ಎಲ್ಲವನ್ನೂ ಸರಿದೂಗಿಸಿಕೊಂಡು ವಹಿಸಿರುವ ಜವಾಬ್ದಾರಿ ಯಾವ ರೀತಿ ಸಮರ್ಥವಾಗಿ ನಿಭಾಯಿಸುತ್ತಾರೆ ಎಂಬುದು ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.