ಪಟಾಕಿಗೆ ಲಗಾಮು 


Team Udayavani, Oct 25, 2018, 2:09 PM IST

25541.jpg

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸುಡುವುದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ವಿವೇಚನಾಯುಕ್ತ ಮಾತ್ರವಲ್ಲದೆ ಸಂತುಲಿತವೂ ಆಗಿದೆ. ಹೀಗಾಗಿ ಈ ತೀರ್ಪು ಮಾತ್ರ ಎಲ್ಲರಿಂದ ಸ್ವಾಗತಿಸಲ್ಪಟ್ಟಿದೆ.ಹಬ್ಬದ ವೇಳೆ ಪಟಾಕಿ ಸುಡುವುದರಿಂದ ವಾಯುಮಾಲಿನ್ಯ ಉಂಟಾಗುವ ಕಾರಣ ಪಟಾಕಿಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಆಗ್ರಹಿಸಿ ಕೆಲವರು ನ್ಯಾಯಾಂಗ ಮೆಟ್ಟಿಲೇರಿದ್ದರು. ಕಳೆದ ವರ್ಷವೂ ಇದೇ ರೀತಿಯ ದಾವೆ ಸುಪ್ರೀಂ ಕೋರ್ಟಿನಲ್ಲಿತ್ತು. 

ಕಳೆದ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ದಿಲ್ಲಿಗೆ ಸಂಬಂಧಪಟ್ಟಂತೆ ನೀಡಿದ ತೀರ್ಪನಲ್ಲಿ ಎಲ್ಲೂ ಪಟಾಕಿ ಸುಡಬಾರದು ಎಂದು ಕಟ್ಟುನಿಟ್ಟಿನ ಆದೇಶ ನೀಡಲಾಗಿತ್ತು. ಆದರೆ ಈ ಆದೇಶವನ್ನು ದಿಲ್ಲಿಯ ಜನತೆ ಸಾರಾಸಗಟಾಗಿ ಉಲ್ಲಂ ಸಿದ್ದರು. ಒಂದರ್ಥದಲ್ಲಿ ಇದು ನ್ಯಾಯಾಲಯದ ಆದೇಶವನ್ನು ಬಹಿರಂಗವಾಗಿ ಉಲ್ಲಂ ಸಿದಂತಾಗುತ್ತದೆ. ಅಲ್ಲದೆ ಈ ತೀರ್ಪು ಧಾರ್ಮಿಕ ನೆಲೆಯಲ್ಲಿ ಭಾರೀ ಟೀಕೆಗೂ ಗುರಿಯಾಗಿತ್ತು. ಪಟಾಕಿ ಸುಡುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ ಎನ್ನುವುದರಲ್ಲಿ ಯಾರಿಗೂ ತಕರಾರಿಲ್ಲ. ಆದರೆ ಒಂದು ಸಮುದಾಯದ  ಹಬ್ಬಕ್ಕೆ ಮಾತ್ರ ನಿರ್ಬಂಧಗಳನ್ನು ಹೇರುವುದು ಏಕೆ ಎಂಬ ಪ್ರಶ್ನೆ ಸಾಮಾಜಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಗೀಡಾಗಿತ್ತು.
 
 ಈ ಎಲ್ಲ ಅಂಶಗಳನ್ನು ಪರಿಗಣಿಸಿರುವ ಸುಪ್ರೀಂ ಕೋರ್ಟ್‌ ಈ ಸಲ ಪಟಾಕಿ ಸುಡುವುದನ್ನು ಸಂಪೂರ್ಣ ನಿಷೇಧಿಸದಿದ್ದರೂ ಕೆಲವೊಂದು ಕಟ್ಟುನಿಟ್ಟಿನ ಶರತ್ತುಗಳನ್ನು ವಿಧಿಸಿದೆ. ಆ ಪ್ರಕಾರ ದೀಪಾವಳಿ ಹಬ್ಬದ ವೇಳೆ ರಾತ್ರಿ 8ರಿಂದ 10 ಗಂಟೆಯ ಒಳಗಾಗಿ ಪಟಾಕಿ ಸುಡಬೇಕು ಎಂದು ಹೇಳಿದೆ. ಕ್ರಿಸ್‌ಮಸ್‌ ಮತ್ತು ಹೊಸ ವರ್ಷಾಚರಣೆ ಸಂದರ್ಭದಲ್ಲಿ ರಾತ್ರಿ 11.55ರಿಂದ 12.30ರ ತನಕ ಮಾತ್ರ ಪಟಾಕಿ ಸುಡಲು ಅವಕಾಶ ನೀಡುವ ಮೂಲಕ ಒಂದು ಧರ್ಮಕ್ಕೆ ಮಾತ್ರ ಕಟ್ಟುಪಾಡು ವಿಧಿಸಲಾಗುತ್ತದೆ ಎಂಬ ಆರೋಪಕ್ಕೆ ಅವಕಾಶ ಇಲ್ಲದಂತೆ ಮಾಡಿರುವುದು ಸಮುಚಿತವಾದ ನಿರ್ಧಾರ. 

ಪರಿಸರಕ್ಕೆ ಹೆಚ್ಚು ಹಾನಿ ಮಾಡದ ಹಸಿರು ಪಟಾಕಿಗಳನ್ನು ಬಳಸಬೇಕೆಂದು ಹೇಳಿರುವುದರ ಹಿಂದಿನ ಉದ್ದೇಶ ಉತ್ತಮವಾಗಿದ್ದರೂ ಅದರ ಪ್ರಾಯೋಗಿಕ ಪರಿಣಾಮಗಳನ್ನು ಗ್ರಹಿಸಿದಂತೆ ಕಾಣಿಸುತ್ತಿಲ್ಲ. ಈಗಾಗಲೇ ಪಟಾಕಿ ತಯಾರಕರು ಹಬ್ಬಕ್ಕಾಗಿ ಪಟಾಕಿ ತಯಾರಿಸಿಯಾಗಿದೆ. ಇದೀಗ ಅವುಗಳನ್ನು ಬಳಸಬಾರದು, ಕಡಿಮೆ ಹಾನಿಯುಂಟು ಮಾಡುವ ಪಟಾಕಿ ಬಳಸಬೇಕೆಂದು ಹೇಳಿದರೆ ತಯಾರಿಸಿರುವ ಪಟಾಕಿಯನ್ನು ಏನು ಮಾಡುವುದು ಎಂಬ ಪ್ರಶ್ನೆ ಉದ್ಭವಿಸುತ್ತದೆ.
 ಪಟಾಕಿ ಉದ್ಯಮ ಲಕ್ಷಾಂತರ ಜನರಿಗೆ ನೇರವಾಗಿ ಮತ್ತು ಪರೋಕ್ಷವಾಗಿ ಉದ್ಯೋಗವಕಾಶ ಕೊಡುತ್ತಿದೆ. ಏಕಾಏಕಿ ನ್ಯಾಯಾಲಯ ಪಟಾಕಿಯನ್ನು ನಿಷೇಧಿಸಿದ್ದರೆ ಅವರ ಬದುಕಿನ ಮೇಲೆ ಗಂಭೀರವಾದ ಪರಿಣಾಮವಾಗುತ್ತಿತ್ತು. ಈ ನೆಲೆಯಲ್ಲೂ ನ್ಯಾಯಾಲಯ ತೀರ್ಪು ನೀಡುವಾಗ ಸಂಯಮವನ್ನು ಪಾಲಿಸಿದೆ. 
ಚಳಿಗಾಲದಲ್ಲಿ ನಿರ್ದಿಷ್ಟವಾಗಿ ಉತ್ತರ ಭಾರತದಲ್ಲಿ ಹವಾಮಾನ ದುಸ್ತರವಾಗುತ್ತದೆ. ದಿಲ್ಲಿ ನಗರವಂತೂ ಅಕ್ಷರಶಃ ಗ್ಯಾಸ್‌ ಚೇಂಬರ್‌ ಆಗುವುದನ್ನು ಪ್ರತಿವರ್ಷ ನೋಡುತ್ತಿದ್ದೇವೆ. ಪಂಜಾಬ್‌, ಹರ್ಯಾಣ ಮತ್ತಿತರ ರಾಜ್ಯಗಳ ರೈತರು ಅಪಾರ ಪ್ರಮಾಣದ ಬೈಹುಲ್ಲು ಸುಡುವುದು ಉತ್ತರ ಭಾರತದಲ್ಲಿ ಭಾರೀ ಪ್ರಮಾಣದ ವಾಯುಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಇದೇ ವೇಳೆ ದೀಪಾವಳಿ ಹಬ್ಬವೂ ಬರುವುದರಿಂದ ಪಟಾಕಿಯ ಮಾಲಿನ್ಯವೂ ಸೇರಿಕೊಳ್ಳುತ್ತದೆ. ಹೀಗೆ ಎಲ್ಲೆಡೆಯ ಒತ್ತಡದಿಂದ ಆ ಭಾಗದ ವಾತಾವರಣ ಕಲುಷಿತಗೊಂಡು ಜನರು ಉಸಿರಾಡುವುದಕ್ಕೂ ಕಷ್ಟಪಡುತ್ತಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಪಟಾಕಿ ಸುಡುವುದಕ್ಕೆ ವಿಧಿಸಿರುವ ನಿರ್ಬಂಧಗಳು ಒಂದಿಷ್ಟಾದರೂ ನಿರಾಳತೆಯನ್ನು ಒದಗಿಸಬಹುದು. 

ಆದರೆ ಕಾನೂನಿಂದಲೇ ಎಲ್ಲವನ್ನೂ ನಿಯಂತ್ರಿಸಲಾಗದು. ಕಾನೂನು ಇರುವುದೇ ಉಲ್ಲಂ ಸಲು ಎಂಬ ಭಾವನೆಯಿರುವ ಜನರೂ ಇರುವುದರಿಂದ ನಿಷೇಧವೊಂದರಿಂದಲೇ ಪಟಾಕಿ ಬಳಕೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಈ ಕುರಿತು ಜನರಲ್ಲಿ ಸ್ವಯಂ ಅರಿವು ಮೂಡಬೇಕು. ನೀತಿ ರೂಪಿಸುವುದು ಮತ್ತು ಅದನ್ನು ಜಾರಿಗೊಳಿಸುವ ಶಾಸಕಾಂಗ ಮತ್ತು ಕಾರ್ಯಾಂಗದ ಹೊಣೆಗಾರಿಕೆ. ಇದರಲ್ಲಿ ಲೋಪವಾದರೆ ಮಾತ್ರ ನ್ಯಾಯಾಂಗ ಮಧ್ಯ ಪ್ರವೇಶ ಮಾಡಬೇಕು. ಸರಕಾರ ಮತ್ತು ಸಮಾಜವೇ ಪಟಾಕಿಯಿಂದಾಗುವ ಹಾನಿಯನ್ನು ಅರಿತುಕೊಂಡು ಅದರ ಬಳಕೆಯಿಂದ ದೂರವಾದರೆ ಉತ್ತಮ. ಜನರಲ್ಲಿ ಪಟಾಕಿಯ ಹಾನಿಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಎಲ್ಲ ಸಮುದಾಯಗಳ ಮುಖಂಡರು ನೇತೃತ್ವ ವಹಿಸಿಕೊಂಡರೆ ಅನುಕೂಲವಾಗುತ್ತಿತ್ತು. 

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.