ಸುಪ್ರೀಂ ಐತಿಹಾಸಿಕ ಆದೇಶ


Team Udayavani, Nov 3, 2017, 11:12 AM IST

03-11.jpg

ಜನಪ್ರತಿನಿಧಿಗಳ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಕೇಸ್‌ಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸುವ ಸಲುವಾಗಿ ವಿಶೇಷ ನ್ಯಾಯಾಲಯ ಗಳನ್ನು ಸ್ಥಾಪಿಸಲು ಸುಪ್ರೀಂ ಕೋರ್ಟ್‌ ನ.1ರಂದು ನೀಡಿರುವ ಆದೇಶ ರಾಜಕೀಯದ ಅಪರಾಧೀಕರಣವನ್ನು ತಡೆಯುವ ನಿಟ್ಟಿನಲ್ಲಿ ಐತಿಹಾಸಿಕವಾದುದು. ಪ್ರಸ್ತುತ ಅತ್ಯಾಚಾರ ಹಾಗೂ ಇನ್ನಿತರ ಬರ್ಬರ ಅಪರಾಧ ಕೃತ್ಯಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವ ರೂಢಿಯಿದೆ. ಜನಪ್ರತಿನಿಧಿಗಳ ವಿರುದ್ಧವಿರುವ ಕ್ರಿಮಿನಲ್‌ ಕೇಸ್‌ಗಳನ್ನು ಇದೇ ಮಾದರಿಯಲ್ಲಿ ವಿಚಾರಣೆಗೊಳಪಡಿಸಿ ಕಾಲಮಿತಿಯೊಳಗೆ ತೀರ್ಪು ಪ್ರಕಟಿಸುವುದರಿಂದ ಪ್ರಜಾಪ್ರಭುತ್ವಕ್ಕೆ ಮಾತ್ರವಲ್ಲದೆ ಸ್ವತಃ ಜನಪ್ರತಿನಿಧಿಗಳಿಗೂ ಲಾಭವಿದೆ.

ಇತ್ತೀಚೆಗಿನ ವರ್ಷಗಳಲ್ಲಿ ಅಪರಾಧಿ ಹಿನ್ನೆಲೆ ಜನನಾಯಕರು ಸಂಸತ್ತು ಮತ್ತು ವಿಧಾನಸಭೆಗೆ ಆಯ್ಕೆಯಾಗಿ ಹೋಗುವ ಪ್ರವೃತ್ತಿ ಹೆಚ್ಚುತ್ತಿದೆ. ಧನ ಬಲ, ತೋಳ್ಬಲ ಮತ್ತು ಜನ ಬಲ ಇದ್ದವರು ಸುಲಭವಾಗಿ ಚುನಾವಣೆಯಲ್ಲಿ ಗೆದ್ದು ಬರುವಂತಹ ಪರಿಸ್ಥಿತಿ ಇದೆ. ಪೋಲಿ ಫ‌ಟಿಂಗರ ಅಂತಿಮ ತಾಣ ರಾಜಕೀಯ ಎನ್ನುವ ಮಾತನ್ನು ಎಲ್ಲ ರೀತಿಯಲ್ಲೂ ನಿಜಗೊಳಿಸಲು ರಾಜಕೀಯ ಪಕ್ಷಗಳು ಶಕ್ತಿಮೀರಿ ಪ್ರಯತ್ನಿಸುತ್ತಿರುವುದು ಪ್ರಜಾತಂತ್ರದ ಒಟ್ಟು ಆಶಯಗಳಿಗೆ ಗಂಡಾಂತರಕಾರಿಯಾಗಿರುವುದರಿಂದ ಸುಪ್ರೀಂ ಕೋರ್ಟಿನ ಆದೇಶಕ್ಕೆ ಹೆಚ್ಚು ಮಹತ್ವವಿದೆ.  ಪ್ರಸ್ತುತ ಒಂದು ಕೇಸ್‌ ಇತ್ಯರ್ಥವಾಗಲು ಕನಿಷ್ಠ ಎಂದರೂ ಐದಾರು ವರ್ಷ ಹಿಡಿಯುತ್ತದೆ.

ನ್ಯಾಯಾಲಯಗಳ ಮೇಲಿರುವ ವ್ಯಾಜ್ಯಗಳ ಹೊರೆಯೇ ಇದಕ್ಕೆ ಕಾರಣ. ಇಂತಹ ಪರಿಸ್ಥಿತಿಯಲ್ಲಿ ಜಿಲ್ಲಾ ನ್ಯಾಯಾಲಯಗಳು ಅಥವಾ ಹೈಕೋರ್ಟುಗಳಲ್ಲಿ ಜನಪ್ರತಿನಿಧಿಗಳು ಅಥವ ರಾಜಕೀಯ ಮುಖಂಡರ ವಿರುದ್ಧ ದಾಖಲಾಗಿರುವ ಪ್ರಕರಣಗಳು ಕ್ಷಿಪ್ರವಾಗಿ ವಿಲೇವಾರಿ ಆಗುತ್ತವೆ ಎಂದು ನಿರೀಕ್ಷಿಸುವುದು ಅಸಾಧ್ಯ. ಭಂಡ ನಾಯಕರು ನ್ಯಾಯಾಂಗದ ಈ ಲೋಪವನ್ನೇ ತಮ್ಮ ಲಾಭಕ್ಕೆ ಬಳಸಿಕೊಳ್ಳುವ ಉದಾಹರಣೆಗಳು ಧಾರಾಳವಾಗಿ ಸಿಗುತ್ತವೆ. ಲಾಲೂ ಪ್ರಸಾದ್‌ ಅವರಂತಹ ರಾಜಕೀಯ ಮುಖಂಡರ ವಿರುದ್ಧ ಹತ್ತಾರು ಕ್ರಿಮಿನಲ್‌ ಕೇಸ್‌ಗಳು ದಾಖಲಾಗಿದ್ದರೂ ಅವರಿನ್ನೂ ರಾಜಕೀಯದಲ್ಲಿ ಬಹಳ ಸಕ್ರಿಯವಾಗಿರುವುದೇ ಇದಕ್ಕೆ ಸಾಕ್ಷಿ. ನ್ಯಾಯಾಲಯಗಳ ಕಣ್ಣಿಗೆ ಮಣ್ಣೆರಚಿ ವಿಚಾರಣೆ ವಿಳಂಬಿಸುವ ವಿದ್ಯೆರಾಜಕೀಯದವರಿಗೆ ಕರಗತವಾಗಿರುವುದರಿಂದ ರಾಜಕೀಯದ ಅಪರಾಧೀಕರಣವನ್ನು ತಡೆಯಲು ಮಾಡಿರುವ ಪ್ರಯತ್ನಗಳು ನಿರೀಕ್ಷಿತ ಫ‌ಲ ನೀಡುತ್ತಿಲ್ಲ.

ಅಪರಾಧ ಸಾಬೀತಾಗಿ 2 ವರ್ಷಕ್ಕೆ ಮೇಲ್ಪಟ್ಟು ಶಿಕ್ಷೆಯಾದವರು ಶಿಕ್ಷೆಯ ಅವಧಿ ಮುಗಿಸಿದ ಬಳಿಕ ಆರು ವರ್ಷ ತನಕ ಚುನಾವಣೆಯಲ್ಲಿ ಸ್ಪರ್ಧಿಸಬಾರದೆಂಬ ನಿಯಮ ಈಗ ಇದೆ. ಆದರೆ ಇಷ್ಟರತನಕ ಈ ನಿಯಮದಡಿ ಚುನಾವಣೆಗೆ ಸ್ಪರ್ಧಿಸಲು ಅನರ್ಹಗೊಂಡಿರುವವರ ಸಂಖ್ಯೆ ಮಾತ್ರ ಬೆರಳೆಣಿಕೆಯಷ್ಟು ಮಾತ್ರ ಇದೆ.  ಹಾಗೆಂದು ಜನಪ್ರತಿನಿಧಿಗಳ ಮೇಲೆ ಕ್ರಿಮಿನಲ್‌ ಕೇಸ್‌ಗಳು ದಾಖಲಾಗಿಲ್ಲ ಎಂದಲ್ಲ. 1,581 ಜನಪ್ರತಿನಿಧಿಗಳ ವಿರುದ್ಧ 13,500 ಕ್ರಿಮಿನಲ್‌ ಕೇಸ್‌ಗಳು ವಿಚಾರಣೆಗೆ ಬಾಕಿ ಇದೆ ಎಂದು ಸ್ವತಃ ನ್ಯಾಯಾಲಯವೇ ಹೇಳಿದೆ. ಮಾಮೂಲು ನ್ಯಾಯಾಲಯಗಳಲ್ಲಿ ಈ ಪ್ರಕರಣಗಳು ಇತ್ಯರ್ಥವಾಗಿ ಅಪರಾಧಿಗಳಿಗೆ ಶಿಕ್ಷೆಯಾಗುವುದು ಯಾವ ಕಾಲಕ್ಕೋ? ಹೀಗಾಗಿ ವಿಶೇಷ ನ್ಯಾಯಾಲಯಗಳ ಸ್ಥಾಪನೆ ಅಪೇಕ್ಷಿತ ನಡೆ. ಇದರಿಂದ ಕ್ರಿಮಿನಲ್‌ ರಾಜಕಾರಣಿಗಳನ್ನು ರಾಜಕೀಯದ ಮುಖ್ಯವಾಹಿನಿಯಿಂದ ದೂರವಿಡಲು ಸಾಧ್ಯವಾಗುತ್ತದೆ. ನ್ಯಾಯಾಲಯವೇ ಆ ಕೆಲಸ ಮಾಡುವುದರಿಂದ ರಾಜಕೀಯವನ್ನು ಸ್ವತ್ಛಗೊಳಿಸುವ ಕೆಲಸವೂ ಸುಲಭವಾಗಲಿದೆ. ಇನ್ನೊಂದು ದೃಷ್ಟಿಯಿಂದ ರಾಜಕಾರಣಿಗಳಿಗೂ ಈ ನಡೆಯಿಂದ ಲಾಭಗಳಿವೆ. ಪ್ರಸ್ತುತ ಚುನಾವಣೆಯ ಮೇಲೆ ದೃಷ್ಟಿಯಿರಿಸಿ ಜನನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದು ಕೇಸುಗಳನ್ನು ದಾಖಲಿಸುವುದು ಮಾಮೂಲಾಗಿದೆ. ಎಲ್ಲ ರಾಜ್ಯಗಳಲ್ಲೂ ಹಿಟ್‌ ಆ್ಯಂಡ್‌ ರನ್‌ ರಾಜಕಾರಣಿಗಳಿರುತ್ತಾರೆ.

ದ್ವೇಷ ಸಾಧನೆಗಾಗಿ ದಾಖಲಾಗುವ ಇಂತಹ ಕೇಸ್‌ಗಳಿಂದ ರಾಜಕೀಯ ಬದುಕು ಮುಗಿದುಹೋಗುವ ಸಾಧ್ಯಯಿದೆ. ಈ ಮಾದರಿಯ ಕೇಸುಗಳು ವಿಶೇಷ ನ್ಯಾಯಾಲಯಗಳಲ್ಲಿ ಕ್ಷಿಪ್ರವಾಗಿ ವಿಚಾರಣೆಗೆ ಬಂದರೆ ರಾಜಕಾರಣಿಗಳಿಗೆ ತಮ್ಮನ್ನು ಸಮರ್ಥಿಸಿಕೊಳ್ಳಲು ಒಂದು ಅವಕಾಶ ಸಿಗುತ್ತದೆ. ಒಂದು ವೇಳೆ ಕ್ಷಿಪ್ರವಾಗಿ ಇತ್ಯರ್ಥಗೊಂಡು ನಿರ್ದೋಷಿ ಎಂದು ಸಾಬೀತಾದರೆ ಜನರೆದುರು ಮತ್ತೆ ತಲೆಎತ್ತಿ ನಿಲ್ಲಬಹುದು.  ಶಿಕ್ಷೆಯಾದ ಜನಪ್ರತಿನಿಧಿಗಳಿಗೆ ಆಜೀವ ಪರ್ಯಂತ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ನಿಷೇಧ ಹೇರಬೇಕೆಂಬ ಬೇಡಿಕೆಯೂ ರಾಜಕೀಯ ವನ್ನು ಅಪರಾಧಿಗಳಿಂದ ಸ್ವತ್ಛಗೊಳಿಸುವ ಇನ್ನೊಂದು ಉತ್ತಮ ಕ್ರಮ. ಚುನಾವಣಾ ಆಯೋಗ ಈ ಕುರಿತಾಗಿ ನ್ಯಾಯಾಲಯಕ್ಕೆ ತನ್ನ ನಿಲುವು ಸ್ಪಷ್ಟಪಡಿಸಿದೆ. ಆದರೆ ಸರಕಾರದ ಕಡೆಯಿಂದ ಇನ್ನೂ ಸಕಾರಾತ್ಮಕವಾದ ಪ್ರತಿಕ್ರಿಯೆ ಬಂದಿಲ್ಲ. ಸ್ವತ್ಛ ಆಡಳಿತ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೇರಿರುವ ನರೇಂದ್ರ ಮೋದಿ ಸರಕಾರ ಈ ವಿಚಾರದಲ್ಲಿ ಮೀನಮೇಷ ಎಣಿಸದೆ ನಿಲುವು ಸ್ಪಷ್ಟಪಡಿಸಬೇಕು. ಈ ವಿಚಾರದಲ್ಲಿ ಸರಕಾರ ಯಾವುದೇ ಒತ್ತಡಕ್ಕೆ ಮಣಿದರೆ ಅದರಿಂದ ಪ್ರಜಾಪ್ರಭುತ್ವಕ್ಕೆ ಬಲು ದೊಡ್ಡ ಹಾನಿಯಾಗಲಿದೆ.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.