ಸೂರತ್‌ ಕೋರ್ಟ್‌ ತೀರ್ಪು ನಾಯಕರಿಗೆ ಪಾಠವಾಗಲಿ


Team Udayavani, Mar 24, 2023, 6:00 AM IST

ಸೂರತ್‌ ಕೋರ್ಟ್‌ ತೀರ್ಪು ನಾಯಕರಿಗೆ ಪಾಠವಾಗಲಿ

2019ರ ಏ.13ರಂದು ಕರ್ನಾಟಕದ ಕೋಲಾರದಲ್ಲಿ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ನೀಡಿದ್ದ ಅವಹೇಳನಕಾರಿ ಹೇಳಿಕೆಯ ಸಂಬಂಧ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಮಾನನಷ್ಟ ಪ್ರಕರಣದ ವಿಚಾರಣೆ ನಡೆಸಿದ ಸೂರತ್‌ನ ಚೀಫ್ ಜ್ಯುಡಿಶಿಯಲ್‌ ಮ್ಯಾಜಿಸ್ಟೇಟ್‌ ನ್ಯಾಯಾಲಯ ರಾಹುಲ್‌ರನ್ನು ದೋಷಿ ಎಂದು ಘೋಷಿಸಿದೆ. ಅಲ್ಲದೆ ಈ ಸಂಬಂಧ ರಾಹುಲ್‌ ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ಮತ್ತು 15,000 ರೂ. ದಂಡವನ್ನು ವಿಧಿಸಿದೆ. ಇದೇ ವೇಳೆ ಶಿಕ್ಷೆಯ ಜಾರಿಯನ್ನು 30 ದಿನಗಳವರೆಗೆ ತಡೆ ಹಿಡಿದಿರುವ ನ್ಯಾಯಾಧೀಶರು ಅಲ್ಲಿಯವರೆಗೆ ರಾಹುಲ್‌ಗೆ ಜಾಮೀನು ಮಂಜೂರು ಮಾಡಿದ್ದು ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದ್ದಾರೆ.

ಸೂರತ್‌ ನ್ಯಾಯಾಲಯದ ಈ ತೀರ್ಪು ಇದೀಗ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದು ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗತೊಡಗಿವೆ. ನಾಯಕರೊಬ್ಬರು ನೀಡಿದ ರಾಜಕೀಯ ಹೇಳಿಕೆಗೆ ನ್ಯಾಯಾಲಯ ಇಷ್ಟೊಂದು ಮಹತ್ವ ನೀಡಿರುವ ಕುರಿತಂತೆಯೂ ಜನಸಾಮಾನ್ಯನಿಂದ ಹಿಡಿದು ಕಾನೂನು ಪಂಡಿತರವರೆಗೂ ಚರ್ಚೆಗಳು ನಡೆಯತೊಡಗಿದೆ. ಇನ್ನು ರಾಜಕೀಯ ವಲಯದಲ್ಲಂತೂ ಈ ತೀರ್ಪು ಬಿರುಗಾಳಿಯನ್ನೇ ಎಬ್ಬಿಸಿದೆ. ಕಾಂಗ್ರೆಸ್‌ ಅಂತೂ ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಸರಕಾರದ ವಿರುದ್ಧ ಹರಿಹಾಯ್ದಿದೆ. ವಿಪಕ್ಷಗಳನ್ನು ಹಣಿಯಲು ಬಿಜೆಪಿ, ತನಿಖಾ ಸಂಸ್ಥೆಗಳನ್ನು ಛೂ ಬಿಟ್ಟ ಬಳಿಕ ಈಗ ನ್ಯಾಯಾಲಯದಲ್ಲಿ ಅನವಶ್ಯಕ ಎಫ್ಐಆರ್‌ಗಳನ್ನು ದಾಖಲಿಸಿ ವಿಪಕ್ಷ ನಾಯಕರಿಗೆ ವಿನಾಕಾರಣ ಕಿರುಕುಳ ನೀಡುತ್ತಿದೆ. ಮಾತ್ರವಲ್ಲದೆ ಈ ಪ್ರಕರಣಗಳ ವಿಚಾರಣೆಗಳಲ್ಲೂ ಹಸ್ತಕ್ಷೇಪ ನಡೆಸುತ್ತಿದೆ ಎಂದು ಕಾಂಗ್ರೆಸ್‌ ನಾಯಕರು ಗಂಭೀರ ಆರೋಪ ಮಾಡಿದ್ದಾರೆ. ಆದರೆ ಬಿಜೆಪಿ ಮಾತ್ರ ಈ ಎಲ್ಲ ಆರೋಪಗಳನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು ತನ್ನ ನಾಯಕನಿಗೆ ಶಿಕ್ಷೆ ವಿಧಿಸಿದ್ದನ್ನು ಸಹಿಸಿಕೊಳ್ಳಲಾಗದೆ ಕಾಂಗ್ರೆಸ್‌, ಸರಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿದೆ. ರಾಹುಲ್‌ ಗಾಂಧಿ ಅವರು ಹೋದಲ್ಲಿ ಬಂದಲ್ಲಿ ತಮ್ಮ ನಾಲಗೆಯನ್ನು ಹರಿಯಬಿಡುವ ಮೂಲಕ ತೀರಾ ಬಾಲಿಶವಾಗಿ ವರ್ತಿಸುತ್ತಲೇ ಬಂದಿದ್ದು ಇದಕ್ಕೆ ಸೂಕ್ತ ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದೆ ಎಂದು ಪ್ರತಿಪಾದಿಸಿದೆ.

ಮುಂದಿನ ದಿನಗಳಲ್ಲಿ ಈ ತೀರ್ಪಿನ ವಿರುದ್ಧ ರಾಹುಲ್‌ ಗಾಂಧಿ ಸಲ್ಲಿಸಲಿರುವ ಮೇಲ್ಮನವಿಯ ವಿಚಾರಣೆ ನಡೆಸುವ ಉನ್ನತ ನ್ಯಾಯಾಲಯಗಳೂ ಈ ತೀರ್ಪನ್ನು ಎತ್ತಿಹಿಡಿದಲ್ಲಿ ರಾಹುಲ್‌ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದಾಗಲಿದೆ ಮಾತ್ರವಲ್ಲದೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ ಬಳಿಕದ ಆರು ವರ್ಷಗಳ ಕಾಲ ಅವರು ಯಾವುದೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಇವೆಲ್ಲವನ್ನು ಮುಂದಿನ ಕಾನೂನು ಹೋರಾಟದ ಫ‌ಲಿತಾಂಶ ನಿರ್ಧರಿಸಲಿವೆ.

ಇವೆಲ್ಲವನ್ನು ಒಂದಿಷ್ಟು ಪಕ್ಕಕ್ಕಿಟ್ಟು ನೋಡಿದಾಗ ಇಡೀ ಪ್ರಕರಣ ಮತ್ತು ನ್ಯಾಯಾಲಯ ನೀಡಿದ ತೀರ್ಪು ಎಲ್ಲ ಪಕ್ಷಗಳ ನಾಯಕರಿಗೆ ಎಚ್ಚರಿಕೆಯ ಕರೆಗಂಟೆ ಎನ್ನಬಹುದು. ರಾಹುಲ್‌ ಗಾಂಧಿ ಅವರ ಮಟ್ಟಿಗಂತೂ ಈ ತೀರ್ಪು ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾದುದಾಗಿದೆ.

ಈ ತೀರ್ಪನ್ನು ಅತ್ಯಂತ ಸೂಕ್ಷ್ಮವಾಗಿ ಅವಲೋಕಿಸಿದ್ದೇ ಆದಲ್ಲಿ ರಾಜಕೀಯ ನಾಯಕರೆಲ್ಲರಿಗೂ ಇದೊಂದು ಚಾಟಿ ಏಟು. ನಾಯಕನಾದವ ತನ್ನ ಮಾತು, ಕೃತಿ, ವರ್ತನೆಗಳಲ್ಲಿ ಎಷ್ಟೊಂದು ಜಾಗರೂಕನಾಗಿರಬೇಕು ಎಂಬುದನ್ನು ಇದು ಬೆಟ್ಟು ಮಾಡಿ ತೋರಿಸಿದೆ. ಉನ್ನತ ಸ್ಥಾನದಲ್ಲಿರುವ ನಾಯಕನಿಂದ ಹಿಡಿದು ತಳಹಂತದ ನಾಯಕನಾದವನಿಗೂ ಈ ತೀರ್ಪು ಅನ್ವಯವಾಗುತ್ತದೆ. ಸೂರತ್‌ ನ್ಯಾಯಾಧೀಶರು ನೀಡಿರುವ ತೀರ್ಪು, ಉಲ್ಲೇಖೀಸಿರುವ ಅಂಶಗಳು ಪಕ್ಷಾತೀತವಾಗಿ ಪ್ರತಿಯೊಬ್ಬ ನಾಯಕನ ಹೊಣೆಗಾರಿಕೆಯನ್ನು ನೆನಪಿಸಿಕೊಟ್ಟಿದೆ.

ರಾಜಕೀಯ ನಾಯಕರು ತಮ್ಮ ನಾಲಗೆಯನ್ನು ಹರಿಯ ಬಿಡುವುದಕ್ಕೂ ಎಚ್ಚರ ವಹಿಸುವುದು ಅತ್ಯಗತ್ಯ ಎಂಬುದನ್ನು ಮತ್ತೂಮ್ಮೆ ನೆನಪಿಸಿಕೊಟ್ಟಿದೆ. ಅದೆಷ್ಟೇ ಉನ್ನತ, ಜನಪ್ರಿಯ ನಾಯಕನಾಗಿರಲಿ; ಆರೋಪ, ಟೀಕೆ, ವ್ಯಂಗ್ಯ, ವಿಡಂಬನೆಯ ಮಾತು ಬಂದಾಗ ಇವೆಲ್ಲವೂ ತಮ್ಮ ಇತಿಮಿತಿ, ಚೌಕಟ್ಟಿನ ಪರಿಧಿಯೊಳಗೆ ಇದ್ದರೆ ಮಾತ್ರ ಸೊಗಸು. ಇಲ್ಲವಾದಲ್ಲಿ ಆ ನಾಯಕನ ಸಾಧನೆ, ವರ್ಚಸ್ಸು, ಜನಪ್ರಿಯತೆ ಎಲ್ಲವೂ ನೀರ ಮೇಲಿಟ್ಟ ಹೋಮದಂತೆಯೇ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

14-editorial

Campaigns: ಪ್ರಚಾರದಲ್ಲಿ ದ್ವೇಷ ಭಾಷಣ: ಸ್ವಯಂ ನಿಯಂತ್ರಣ ಅಗತ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.