ಅಡುಗೆ ಎಣ್ಣೆ ದರ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಿ


Team Udayavani, May 6, 2022, 6:00 AM IST

Take action to control the cooking oil rate

ಉಕ್ರೇನ್‌ ಮೇಲಿನ ರಷ್ಯಾ ದಾಳಿ ಮತ್ತು ಇಂಡೋನೇಶಿಯಾದಲ್ಲಿ ತಾಳೆ ಎಣ್ಣೆಯ ರಫ್ತಿನ ಮೇಲೆ ಸಂಪೂರ್ಣ ನಿರ್ಬಂಧದಿಂದಾಗಿ ಭಾರತದಲ್ಲಿ ಅಡುಗೆ ಎಣ್ಣೆಯ ದರ ಮತ್ತೆ ಗಗನಮುಖೀಯಾಗುತ್ತಿದೆ. ಭಾರತ ಮೊದಲಿನಿಂದಲೂ ಉಕ್ರೇನ್‌ ಮತ್ತು ಇಂಡೋನೇಶಿಯಾ ಮೇಲೆಯೇ ಅಡುಗೆ ಎಣ್ಣೆಗಾಗಿ ಅವಲಂಬಿತವಾಗಿದೆ. ಯುದ್ಧದ ಕಾರಣದಿಂದಾಗಿ ಉಕ್ರೇನ್‌ ರಫ್ತು ನಿಲ್ಲಿಸಿದ್ದರೆ, ಸ್ಥಳೀಯವಾಗಿ ಬೆಲೆ ಹೆಚ್ಚಿದ್ದರಿಂದ ಇಂಡೋನೇಶಿಯಾ ರಫ್ತು ಬ್ಯಾನ್‌ ಮಾಡಿದೆ. ಹೀಗಾಗಿ ಭಾರತದಲ್ಲಿ ಮತ್ತೆ ದರ ಏರಿಕೆಯ ಬಿಸಿ ತಟ್ಟಿದೆ.

ಬುಧವಾರವಷ್ಟೇ ಹಣದುಬ್ಬರವನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಆರ್‌ಬಿಐ ರೆಪೋದರವನ್ನು ಹೆಚ್ಚಳ ಮಾಡಿತ್ತು. ಈ ಮೂಲಕ ಜನರ ಕೈನಲ್ಲಿ ಹೆಚ್ಚು ಹಣ ಹರಿದಾಡದಿದ್ದರೆ, ಖರೀದಿ ಸಾಮರ್ಥ್ಯ ಇಳಿದು, ಬೇಡಿಕೆ ತಗ್ಗುತ್ತದೆ ಎಂಬ ಕಾರಣದಿಂದಾಗಿ ಈ ನಿರ್ಧಾರ ಕೈಗೊಂಡಿತ್ತು. ಆದರೆ ಈಗ ಅಡುಗೆ ಎಣ್ಣೆಯ ದರವೂ ಹೆಚ್ಚಗತೊಡಗಿರುವುದು ಆರ್‌ಬಿಐನ ತಲೆನೋವಿಗೆ ಕಾರಣವಾಗಿದೆ ಎಂಬುದು ನಿಸ್ಸಂಶಯ.

ಈ ನಿಟ್ಟಿನಲ್ಲಿ ಕೇಂದ್ರ ಸರಕಾರ, ಅಡುಗೆ ಎಣ್ಣೆ ಮೇಲಿನ ಆಮದು ಸುಂಕವನ್ನು ಶೇ.5ರಷ್ಟು ಇಳಿಕೆ ಮಾಡಲು ಚಿಂತನೆ ನಡೆಸಿದೆ. ಒಂದು ವೇಳೆ, ಕೇಂದ್ರ ಸರಕಾರ ಈ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದೇ ಆದರೆ ಜನರ ಬವಣೆಗೆ ಒಂದಷ್ಟಾದರೂ ಪರಿಹಾರ ನೀಡಿದಂತಾಗುತ್ತದೆ.

ಭಾರತವು ವಾರ್ಷಿಕವಾಗಿ 24 ಮಿಲಿಯನ್‌ ಟನ್‌ ಅಡುಗೆ ಎಣ್ಣೆಯನ್ನು ಬಳಕೆ ಮಾಡಲಾಗುತ್ತದೆ. ಇಂಡೋನೇಶಿಯಾದಿಂದಲೇ 4.5 ಮಿಲಿಯನ್‌ ಟನ್‌ನಷ್ಟು ಎಣ್ಣೆಯನ್ನು ಆಮದು ಮಾಡಿಕೊಳ್ಳುತ್ತದೆ. ಜತೆಗೆ ಭಾರತದಲ್ಲಿ ಒಟ್ಟಾಗಿ ಬಳಕೆ ಮಾಡುವ ಶೇ.55ರಷ್ಟನ್ನು ಹೊರದೇಶದಿಂದಲೇ ತರಿಸಿಕೊಳ್ಳಲಾಗುತ್ತಿದೆ. ಇದಕ್ಕಾಗಿ ವಾರ್ಷಿಕವಾಗಿ 1.17 ಲಕ್ಷ ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಇದೆಲ್ಲದರ ನಡುವೆ ಇಡೀ ಜಗತ್ತಿನ ಶೇ.84ರಷ್ಟು ಪಾಮ್‌ ಆಯಿಲ್‌ ಅನ್ನು ಇಂಡೋನೇಶಿಯಾ ಮತ್ತು ಮಲೇಶಿಯಾ ದೇಶಗಳೇ ಉತ್ಪಾದನೆ ಮಾಡುತ್ತವೆ. ಹೀಗಾಗಿ ಈ ದೇಶದ ರಫ್ತಿನ ಮೇಲೆ ಭಾರತವಷ್ಟೇ ಅಲ್ಲ, ಇಡೀ ಜಗತ್ತೇ ಅವಲಂಬಿತವಾಗಿದೆ ಎಂದರೆ ತಪ್ಪಾಗಲಾರದು.

ಇನ್ನು ಉಕ್ರೇನ್‌ ದೇಶದಿಂದ ಭಾರತ ಸೂರ್ಯಕಾಂತಿ ಎಣ್ಣೆಯನ್ನು ಆಮದು ಮಾಡಿಕೊಳ್ಳುತ್ತಿದೆ. ಇದು ಕೂಡ ನಿಂತುಹೋಗಿರುವುದರಿಂದ ಭಾರತ ತೀರಾ ಅಸಹಾಯಕ ಸ್ಥಿತಿಯಲ್ಲಿದೆ ಎಂದು ಹೇಳಬಹುದು.

ಇಂಥ ಕಷ್ಟದ ಸನ್ನಿವೇಶದಲ್ಲೂ ಭಾರತ ಅಡುಗೆ ಎಣ್ಣೆಯನ್ನು ಬೇರೆ ಬೇರೆ ಕಡೆಗಳಿಂದ ತರಿಸಿಕೊಳ್ಳುತ್ತಿದೆ. ಇತ್ತ ದೇಶದ ಒಳಗೂ ಅಡುಗೆ ಎಣ್ಣೆಗೆ ಭಾರೀ ಬೇಡಿಕೆ ಇದೆ. ಹೀಗಾಗಿಯೇ ಅಡುಗೆ ಎಣ್ಣೆಯ ದರ ಗಗನಮುಖೀಯಾಗಿದೆ. ಈ ದರ ನಿಯಂತ್ರಣಕ್ಕಾಗಿ ಶೇ.5ರಷ್ಟು ಆಮದು ಸುಂಕ ಕಡಿಮೆ ಮಾಡಲು ಮುಂದಾಗಿರುವುದು ಸೂಕ್ತ ಕ್ರಮವೇ ಆಗಿದೆ.

ಇದರ ಜತೆಗೆ ಆಂತರಿಕವಾಗಿಯೂ ಅಡುಗೆ ಎಣ್ಣೆ ಉತ್ಪಾದನೆಯಲ್ಲಿ ಭಾರತ ಸ್ವಾವಲಂಬಿಯಾಗಬೇಕಾಗಿದೆ. ಹೆಚ್ಚಾಗಿ ಬಳಕೆ ಮಾಡುವ ವಸ್ತುಗಳಿಗಾಗಿ ಬೇರೆ ದೇಶಗಳ ಮೇಲೆ ಅವಲಂಬನೆ ಒಳ್ಳೆಯದಲ್ಲ. ಸೂರ್ಯಕಾಂತಿ ಸೇರಿದಂತೆ ಅಡುಗೆ ಎಣ್ಣೆಗೆ ಬೇಕಾಗಿರುವ ಉತ್ಪನ್ನಗಳನ್ನು ಹೆಚ್ಚಾಗಿ ಬೆಳೆಯಲು ಆಸ್ಪದ ನೀಡಬೇಕಾಗಿದೆ. ಅಲ್ಲದೆ ಸದ್ಯ ಮಾರುಕಟ್ಟೆ ಮೇಲೂ ಕಣ್ಣಿರಿಸಿ, ಅಕ್ರಮವಾಗಿ ಅಡುಗೆ ಎಣ್ಣೆ ಸಂಗ್ರಹಿಸುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕಾಗಿದೆ. ಆಗ ಮಾತ್ರ ಅಡುಗೆ ಎಣ್ಣೆಯ ದರ ಇಳಿಕೆಯಾಗಲು ಸಾಧ್ಯ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.