ಕಾಶ್ಮೀರಿ ಪಂಡಿತರ ಹತ್ಯೆ ತಡೆಗೆ ಸೂಕ್ತ ಕ್ರಮ ತೆಗೆದುಕೊಳ್ಳಲಿ


Team Udayavani, Aug 17, 2022, 6:00 AM IST

ಕಾಶ್ಮೀರಿ ಪಂಡಿತರ ಹತ್ಯೆ ತಡೆಗೆ ಸೂಕ್ತ ಕ್ರಮ ತೆಗೆದುಕೊಳ್ಳಲಿ

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲು ಕಾರಣವಾಗಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡಿದ ಬಳಿಕ ಜಮ್ಮು ಕಾಶ್ಮೀರದಲ್ಲಿ ಜೀವನ ಸ್ಥಿತಿ ಒಂದು ಹಂತಕ್ಕೆ ತಹಬದಿಗೆ ಬಂದಿದೆ. ಮೊದಲಿನ ಹಾಗೆ ಇಲ್ಲಿ ದೊಡ್ಡ ಮಟ್ಟದ ಸ್ಫೋಟಗಳಾಗಲಿ, ಕಲ್ಲು ತೂರಾಟದಂಥ ಘಟನೆಗಳಾಗಲಿ ನಡೆಯುತ್ತಿಲ್ಲ. ಸೇನೆ ಮತ್ತು ಪೊಲೀಸರ ಬಿಗಿ ಬಂದೋಬಸ್ತ್ ಮತ್ತು ಜನತೆಯ ಬದಲಾದ ಮನೋಭಾವದಿಂದಾಗಿ ಕಾಶ್ಮೀರ ಸಾಮಾನ್ಯ ಸ್ಥಿತಿಗೆ ಮರಳುತ್ತಿರುವುದು ಒಂದು ಲೆಕ್ಕಾಚಾರದಲ್ಲಿ ಸಮಾಧಾನಕರ ವಿಚಾರ.

ಆದರೆ ಪಾಕಿಸ್ಥಾನ ಪ್ರಚೋದಿತ ಉಗ್ರರು ಈಗ ಬೇರೊಂದು ಮಾರ್ಗ ಹಿಡಿದಿದ್ದಾರೆ. ಪ್ರದೇಶವೊಂದರಲ್ಲಿ ಬಾಂಬ್‌ ಸ್ಫೋಟಿಸಿ ಅಲ್ಲಿ ಹೆಚ್ಚು ಸಾವು ನೋವು ಉಂಟಾಗುವಂತೆ ಮಾಡುತ್ತಿದ್ದ ಉಗ್ರರಿಗೆ ಈಗ ಈ ಕೆಲಸಗಳು ಸುಲಭವಾಗುತ್ತಿಲ್ಲ. ಇದಕ್ಕೆ ಕಾರಣ ಬಿಗಿ ಭದ್ರತೆ. ಹೀಗಾಗಿಯೇ ಪೊಲೀಸರು, ಸೇನಾ ಸಿಬಂದಿ ಮತ್ತು ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದಾರೆ. ಇದರಿಂದಾಗಿ ಇಂಥವರ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆಡೆ ಮಾಡಿದೆ.

2021ರ ಅಕ್ಟೋಬರ್‌ನಿಂದ ಕಣಿವೆ ರಾಜ್ಯದಲ್ಲಿ ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ದಾಳಿ ನಡೆಯುವ ಕೆಲಸ ಆರಂಭವಾಗಿದೆ. ಇದಕ್ಕೂ ಮುನ್ನ ಪಾಕಿಸ್ಥಾನದಿಂದ ಬಂದ ಉಗ್ರರು ಅಥವಾ ಪಾಕ್‌ ಪ್ರಚೋದಿತ ಉಗ್ರರು ಕಾಶ್ಮೀರಿ ಪಂಡಿತರ ಮೇಲೆ ದಾಳಿ ನಡೆಸಿ ಅವರನ್ನು ಕಣಿವೆ ರಾಜ್ಯ ಬಿಟ್ಟುಹೋಗುವಂತೆ ಮಾಡಿದ್ದರು. ಆದರೆ 370ನೇ ವಿಧಿ ರದ್ದಾದ ಮೇಲೆ ಕಾಶ್ಮೀರಿ ಪಂಡಿತರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. 2021ರ ಅ.6ರಂದು ಮಖಾನ್‌ ಲಾಲ್‌ ಬಿಂದ್ರೂ ಎಂಬ ಪಂಡಿತರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಯಿತು. ಅ.5ರಂದು ವೀರೇಂದ್ರ ಪಾಸ್ವಾನ್‌, ಅ.7ರಂದು ಸತೀಂದರ್‌ ಕೌರ್‌ ಮತ್ತು ದೀಪಕ್‌ ಚಾಂದ್‌ ಎಂಬ ಶಿಕ್ಷಕರು, ಅ.17ರಂದು ಗೋಲ್‌ಗೊಪ್ಪಾ ವ್ಯಾಪಾರಿ ಅರವಿಂದ್‌ ಸಿಂಗ್‌ ಸಾಹ್‌, 2022ರ ಎ.13ರಂದು ಸುರೀಂದರ್‌ ಕುಮಾರ್‌ ಸಿಂಗ್‌, ಮೇ 12ರಂದು ರಾಹುಲ್‌ ಭಟ್‌, ಮೇ 17ರಂದು ರಂಜಿತ್‌ ಸಿಂಗ್‌, ಮೇ 31ರಂದು ರಜ್ನಿ ಬಾಲಾ, ಜೂ.2ರಂದು ವಿಜಯಕುಮಾರ್‌ ಅವರನ್ನು ಉಗ್ರರು ಹತ್ಯೆ ಮಾಡಿದ್ದಾರೆ.

ಇದಷ್ಟೇ ಅಲ್ಲ, ಕಾಶ್ಮೀರಿ ಪಂಡಿತರ ಜತೆಗೆ ಪೊಲೀಸರು ಮತ್ತು ಸೇನೆಗೆ ಸಹಕಾರ ನೀಡಿದರು ಎಂಬ ಕಾರಣಕ್ಕಾಗಿ ಉಗ್ರರು ಹಲವಾರು ಮುಸ್ಲಿಂ ನಾಗರಿಕರನ್ನೂ ಹತ್ಯೆ ಮಾಡಿದ್ದಾರೆ. ಕಳೆದ ವರ್ಷ 39 ಮಂದಿ, ಈ ವರ್ಷ 18 ಮಂದಿಯನ್ನು ಪಾಕ್‌ ಮೂಲದ ಉಗ್ರಗಾಮಿಗಳು ಹತ್ಯೆ ಮಾಡಿದ್ದಾರೆ. ಕಾಶ್ಮೀರಿ ಪಂಡಿತರನ್ನೇ ಗುರಿಯಾಗಿ ನಡೆಸುವ ಹತ್ಯೆ ಕುರಿತಂತೆ ಇತ್ತೀಚೆಗಷ್ಟೇ ಭಾರೀ ಆಕ್ರೋಶವೂ ವ್ಯಕ್ತವಾಗಿತ್ತು. ಭದ್ರತಾ ಭೀತಿಯಿಂದಾಗಿ ಕಣಿವೆ ತೊರೆಯುವುದಾಗಿ ಪಂಡಿತರು ಬೆದರಿಕೆ ಯನ್ನೂ ಹಾಕಿದ್ದರು. ಇದಾದ ಮೇಲೆ ಭದ್ರತೆ ಹೆಚ್ಚಿಸಲಾಗಿತ್ತು. ಆದರೆ ಮಂಗಳವಾರ ಸೇಬು ತೋಟದಲ್ಲಿ ಕೆಲಸ ಮಾಡುತ್ತಿದ್ದ ಮತ್ತೂಬ್ಬ ಕಾಶ್ಮೀರಿ ಪಂಡಿತರನ್ನು ಉಗ್ರರು ಹತ್ಯೆ ಮಾಡಿದ್ದಾರೆ.

ಇಂಥ ನಿರ್ದಿಷ್ಟ ಗುರಿಯ ಹತ್ಯೆಗಳಿಂದಾಗಿ ಜನರಲ್ಲಿ ಭದ್ರತೆ ಕುರಿತಂತೆ ಆತಂಕವೂ ಹೆಚ್ಚಾಗಬಹುದು. ಆದಷ್ಟು ಬೇಗ ಕಾಶ್ಮೀರಿ ಪಂಡಿತರ ಮೇಲಿನ ದಾಳಿ ನಿಯಂತ್ರಣಕ್ಕೆ ಸೇನೆ ಮತ್ತು ಅಲ್ಲಿನ ಪೊಲೀಸರು ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಮತ್ತಷ್ಟು ಆತಂಕದ ವಾತಾವರಣ ಸೃಷ್ಟಿಯಾದೀತು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.