ಮಾತಿನ ಮೇಲಿರಲಿ ಹಿಡಿತ


Team Udayavani, May 15, 2019, 6:00 AM IST

36
ರಾಜಕೀಯ ಕ್ಷೇತ್ರದ ಬಲು ದೊಡ್ಡ ದುರಂತವೆಂದರೆ ವಿವಾದಾತ್ಮಕ ಮಾತುಗಳಿಂದಾಗಿ ಖಂಡನೆ, ಛೀಮಾರಿಗೆ ಒಳಗಾದರೂ ಕೆಲವರು ತಪ್ಪನ್ನು ತಿದ್ದಿಕೊಳ್ಳಲು ಮನಸ್ಸು ಮಾಡುವುದೇ ಇಲ್ಲ. 2017ರಲ್ಲಿ ನಡೆದಿದ್ದ ಗುಜರಾತ್‌ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್‌ ನಾಯಕ ಮಣಿಶಂಕರ ಅಯ್ಯರ್‌ ಪ್ರಧಾನಿ ಮೋದಿ ಅವರನ್ನು ‘ನೀಚ’ ಎಂದು ಬೈದು ಸುದ್ದಿಯಾಗಿದ್ದರು. ಹೇಳಿಕೆ ಬಿರುಸಾಗುತ್ತಲೇ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಅಯ್ಯರ್‌ ಅವರನ್ನು ಪಕ್ಷದಿಂದ ಅಲ್ಪ ಕಾಲಕ್ಕೆ ಹೊರಹಾಕಿದ್ದರು. 19ರಂದು ಕೊನೆಯ ಹಂತದ ಮತದಾನ ನಡೆಯಲಿದೆ. ಈಗ ಅಯ್ಯರ್‌ ‘ರೈಸಿಂಗ್‌ ಕಾಶ್ಮೀರ್‌’ ಮತ್ತು ‘ದ ಪ್ರಿಂಟ್’ನಲ್ಲಿ ಪ್ರಕಟಿಸಲಾಗಿರುವ ಲೇಖನದಲ್ಲಿ ಪ್ರಧಾನಿ ವಿರುದ್ಧ ವ್ಯಕ್ತಪಡಿಸಿದ್ದ ಅಭಿಪ್ರಾಯಗಳನ್ನು ಮತ್ತೆ ಪುನರುಚ್ಚರಿಸಿದ್ದಾರೆ.

ಅಯ್ಯರ್‌ ಕಾಂಗ್ರೆಸ್‌ನ ಹಳೆಯ ತಲೆಮಾರಿನ ನಾಯಕರು. ಕೇಂಬ್ರಿಡ್ಜ್ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದವರು. ಅಂಥ ಹಿರಿಯ ನಾಯಕರು ಯಾರನ್ನೋ ಮೆಚ್ಚಿಸಲು ಪ್ರಧಾನಿ ವಿರುದ್ಧ ತುಚ್ಛವಾದ ಹೇಳಿಕೆ ನೀಡುವುದರಿಂದ ಆಗುವ ಪ್ರಯೋಜನವಾದರೂ ಏನು ಎನ್ನುವುದನ್ನು ಅರ್ಥ ಮಾಡಿಕೊಳ್ಳದೇ ಇರುವುದು ಪ್ರಶ್ನಾರ್ಹವಾಗುತ್ತದೆ.

2014ರ ಲೋಕಸಭಾ ಚುನಾವಣೆಯಲ್ಲಿ ಮಣಿಶಂಕರ್‌ ಅಯ್ಯರ್‌ ಅವರು ಮೋದಿ ಕುರಿತು ಮಾಡಿದ ಚಾಯ್‌ವಾಲಾ ಟೀಕೆಯು ಕಾಂಗ್ರೆಸ್‌ಗೆ ಬಹುದೊಡ್ಡ ಪೆಟ್ಟನ್ನು ಕೊಟ್ಟಿತ್ತು. ಇಷ್ಟಾದರೂ ಅವರನ್ನು ಸುಮ್ಮನಾಗಿಸುವಲ್ಲಿ ಕಾಂಗ್ರೆಸ್‌ ನಾಯಕತ್ವ ವಿಫ‌ಲವಾಗುತ್ತಿರುವುದೇಕೆ ಎನ್ನುವ ಪ್ರಶ್ನೆ ಏಳುತ್ತದೆ. ಕಾಂಗ್ರೆಸ್‌ನ ಸಾಗರೋತ್ತರ ವಿಭಾಗದ ಮುಖ್ಯಸ್ಥ ಸ್ಯಾಮ್‌ ಪಿತ್ರೊಡಾ 1984ರ ಸಿಖ್‌ ವಿರೋಧಿ ದಂಗೆ ನಡೆದಿತ್ತು, ಆಗಿದ್ದು ಆಯಿತು ಎಂದು ಹೇಳಿದ್ದಷ್ಟೇ ಖಂಡನೀಯ ವಿಚಾರವಿದು. ನಿರ್ದಿಷ್ಟ ವ್ಯಕ್ತಿ, ಪಕ್ಷ ಅಧಿಕಾರಕ್ಕೆ ಬರಲೇಬಾರದು, ಅವರು ಇದ್ದರೆ ಏನೋ ಆಗುತ್ತದೆ ಎಂಬಿತ್ಯಾದಿ ಹುಯಿಲೆಬ್ಬಿಸುವುದು ಸುಲಭ. ಈಗಂತೂ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಹಿತಿಯೇ ಸತ್ಯವಾಗಿಬಿಡುತ್ತದೆ. ಈ ಮೂಲಕ ಚಾರಿತ್ರ್ಯ ಹರಣಕ್ಕೆ ರಹದಾರಿ ಸಿಕ್ಕಿದೆ. ಅಯ್ಯರ್‌ ಬರೆದದ್ದು ಯಾವ ಸಂದರ್ಭಕ್ಕೆ, ಅದರ ಹಿಂದಿನ ಸತ್ಯಾಂಶ ಏನು, ವಾಸ್ತವ ವಿಚಾರ ಏನು ಇತ್ಯಾದಿ ವಿಚಾರಗಳ ಬಗ್ಗೆ ಜನರು ಯೋಚಿಸಲು ಹೋಗುವುದಿಲ್ಲ. ಒಂದು ಸುಳ್ಳನ್ನು ಸಾವಿರ ಬಾರಿ ಹೇಳಿದರೆ ಸತ್ಯವಾಗುತ್ತದೆ ಎಂಬ ನಾಣ್ಣುಡಿಯಂತೆ ಪ್ರಧಾನಿ ವಿರುದ್ಧ ಬರೆದರೆ, ಮಾತನಾಡಿದರೆ ಮಾಧ್ಯಮಗಳಲ್ಲಿ ಹೆಚ್ಚು ಚರ್ಚೆಯಲ್ಲಿರಬಹುದೆಂಬ ಲೆಕ್ಕಾಚಾರವೂ ಕೇಂದ್ರದ ಮಾಜಿ ಸಚಿವರದ್ದು ಇರಬಹುದೇನೋ?

ಲೇಖನದ ಬಗ್ಗೆ ‘ಎಎನ್‌ಐ’ ಸುದ್ದಿಸಂಸ್ಥೆ ಜತೆಗೆ ಮಾತನಾಡಿದ್ದ ಅವರು ‘ಒಂದೊಂದು ಪದಕ್ಕೂ ಬದ್ಧನಿದ್ದೇನೆ. 2017ರಲ್ಲಿ ನಾನು ಏನು ಹೇಳಿದ್ದೆ ಎನ್ನುವುದು ಈಗ ಸರಿಯಾತಲ್ಲವೇ?’ ಎಂದು ಪ್ರಶ್ನೆ ಮಾಡಿದ್ದಾರೆ. ತಮ್ಮ ವಿರುದ್ಧ ಮಿತಿ ಮೀರಿದ ಟೀಕೆ ವ್ಯಕ್ತವಾಗುತ್ತಲೇ ಪ್ರಧಾನಿ ಸೂಕ್ತವಾಗಿ ಅದಕ್ಕೆ ತಿರುಗೇಟು ನೀಡಿದ್ದಾರೆ. ಹೊಲಸು ಬಾಯಿಯ ಪ್ರಧಾನಿ ಮೋದಿ ಎಂದು ಹೇಳಿದ್ದಾರೆ ಅಯ್ಯರ್‌. ಪ್ರಧಾನಿ ಮೋದಿಯವರ ವಿರುದ್ಧ ಪ್ರಯೋಗಿಸಲಾಗಿರುವ ಪದಗಳ ಪಟ್ಟಿ ನೋಡಿದರೆ, ದೇಶದಲ್ಲಿ ಒಬ್ಬ ರಾಜಕೀಯ ನಾಯಕನ ವಿರುದ್ಧ ಇಷ್ಟೊಂದು ದ್ವೇಷಮಯ ಭಾಷೆ ಪ್ರಯೋಗವಾಗುತ್ತದೆಯೇ ಎಂದು ಮುಂದಿನ ದಶಕಗಳಲ್ಲಿ ಓದಿ ತಿಳಿದುಕೊಳ್ಳುವವರಿಗೆ ಅಚ್ಚರಿ ಎನಿಸದೇ ಇರದು.

ಕೆಲ ದಿನಗಳ ಹಿಂದಷ್ಟೇ ‘ಟೈಮ್‌’ ನಿಯತಕಾಲಿಕದಲ್ಲೂ ಕೂಡ ಪ್ರಧಾನಿ ಮೋದಿಯನ್ನು ಡಿವೈಡರ್‌ ಇನ್‌ ಚೀಫ್ ಎಂಬ ಶೀರ್ಷಿಕೆಯಲ್ಲಿ ಸಂಬೋಧಿಸಿದ ಲೇಖನ ಪ್ರಕಟವಾಗಿತ್ತು. ಪಾಶ್ಚಿಮಾತ್ಯ ಮತ್ತು ಐರೋಪ್ಯ ಒಕ್ಕೂಟದ ಕೆಲ ಮಾಧ್ಯಮ ಸಂಸ್ಥೆಗಳು ನಮ್ಮ ದೇಶದ ಬಗ್ಗೆ, ನಾಯಕರ ಬಗ್ಗೆ ಯಾವ ರೀತಿ ಪೂರ್ವ ನಿರ್ಧರಿತ ಅಭಿಪ್ರಾಯಗಳನ್ನು ಹೊಂದಿ ಬರೆಯುತ್ತಾರೆ ಎಂಬ ವಿಚಾರ ಮತ್ತೂಮ್ಮೆ ಜಾಹೀರಾಗಿದೆ.

2017ರಲ್ಲಿ ಮಣಿಶಂಕರ್‌ ಅಯ್ಯರ್‌ ಅವರ ನೀಚ ಎಂಬ ಹೇಳಿಕೆ ವಿವಾದಕ್ಕೊಳಾಗುತ್ತಿದ್ದಂತೆಯೇ, ತಮಗೆ ಹಿಂದಿ ಭಾಷೆಯ ಇರುವ ಹಿಡಿತ ಸೀಮಿತವಾದದ್ದು ಎಂದು ಯಾರೂ ಸ್ವೀಕರಿಸದ ಸಮಜಾಯಿಷಿ ಕೊಟ್ಟಿದ್ದರು. ಈ ಬಾರಿ ಸದ್ಯದ ಮಟ್ಟಿಗೆ ಒಂದೊಂದು ಪದಕ್ಕೂ ಬದ್ಧನಿದ್ದೇನೆಂದು ಹೇಳಿಕೊಂಡಿದ್ದಾರೆ. ಹಾಗಿದ್ದರೆ ಅಂದು ಅವರು ತಮಗೆ ಹಿಂದಿ ಭಾಷೆಯ ಮೇಲೆ ಅಷ್ಟಾಗಿ ಹಿಡಿತವಿಲ್ಲ ಎಂದು ಹೇಳಿದ್ದು ಸುಳ್ಳೆಂದು ಆಯಿತಲ್ಲವೇ? ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಗಳು ಹೀಗೆ ವರ್ತಿಸುವುದು ಎಷ್ಟು ಸರಿ ಎನ್ನುವ ಪ್ರಶ್ನೆಯೂ ಏಳುತ್ತದೆ.

ಸಾಮಾಜಿಕ ಜಾಲತಾಣಗಳಲ್ಲಿ ಅಯ್ಯರ್‌ ವಿರುದ್ಧ ಕಟುವಾಗಿಯೇ ಆಕ್ರೋಶ ವ್ಯಕ್ತವಾಗಿದೆ. ಗುಜರಾತ್‌ ಚುನಾವಣೆ ವೇಳೆ ಅವರು ಹೇಳಿದ್ದ ಮಾತುಗಳಿಂದ ಕಾಂಗ್ರೆಸ್‌ಗೆ ಯಾವ ರೀತಿ ನಷ್ಟವಾಗಿದೆ ಎನ್ನುವುದು ಗೊತ್ತಿದೆ. ಹಿಂದಿನ ತಪ್ಪನ್ನೇ ಮತ್ತೆ ಪುನರಾವರ್ತನೆ ಮಾಡಿದ್ದಾರೆ ಎಂದು ಟ್ವೀಟಿಗರೊಬ್ಬರು ಬರೆದುಕೊಂಡಿದ್ದಾರೆ. ಇದೊಂದು ಉದಾಹರಣೆಯಷ್ಟೇ. ಯಾರಿಂದಲೇ ಆಗಲಿ ತಪ್ಪುಗಳು ಆಗುತ್ತವೆ. ಆದರೆ ಮತ್ತೆ ಮತ್ತೆ ಅದನ್ನೇ ಪುನರಾವರ್ತಿಸುವ ನಾಯಕರ ವರ್ತನೆ ಖಂಡನಾರ್ಹ. ಈ ವಿಚಾರದಲ್ಲಿ ಕಾಂಗ್ರೆಸ್‌ ನಾಯಕರಷ್ಟೇ ಅಲ್ಲ, ಬಿಜೆಪಿ ಸೇರಿದಂತೆ ಬಹುತೇಕ ಎಲ್ಲಾ ಪಕ್ಷಗಳ ನಾಯಕರನ್ನೂ ಪ್ರಶ್ನಿಸಲೇಬೇಕಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ಹೀಗೆ ಕೀಳುಮಟ್ಟದ ಭಾಷಾಪ್ರಯೋಗಕ್ಕೆ ಮುಂದಾದರೆ ಹೇಗೆ? ಜನರು ತಮ್ಮನ್ನು ನೋಡುತ್ತಿದ್ದಾರೆ, ತಮ್ಮ ಮಾತುಗಳು ಪ್ರಬುದ್ಧವಾಗಿರಬೇಕು ಎನ್ನುವ ಕನಿಷ್ಠ ಜ್ಞಾನ ಎಲ್ಲರಲ್ಲೂ ಇರಲೇಬೇಕು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.