ತಾಲಿಬಾನ್‌-ಅಫ್ಘಾನ್‌ ಸರಕಾರದ ಮಾತುಕತೆ ಅಪಾಯದ ನೆರಳಲ್ಲಿ


Team Udayavani, Sep 15, 2020, 5:40 AM IST

Taliban-Editorial

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಅಫ್ಘಾನಿಸ್ಥಾನದಲ್ಲಿ ಶಾಂತಿ ಸ್ಥಾಪನೆಗಾಗಿ ಅಫ್ಘಾನ್‌ ಸರಕಾರ ಹಾಗೂ ತಾಲಿಬಾನ್‌ ನಡುವೆ ಕತಾರ್‌ನಲ್ಲಿ ಮಾತುಕತೆ ಆರಂಭವಾಗಿದೆ.

ಆದರೆ ಈ ಮಾತುಕತೆಯಿಂದ ನಿಜಕ್ಕೂ ಪರಿಣಾಮಕಾರಿ ಫ‌ಲಿತಾಂಶಗಳು ಹೊರಬರುತ್ತವೆಯೇ ಎನ್ನುವ ಪ್ರಶ್ನೆಗೆ ಉತ್ತರ ಸಿಗುವುದಿಲ್ಲ.

ಅಫ್ಘಾನಿಸ್ಥಾನದಲ್ಲಿ ಶಾಂತಿ ಸ್ಥಾಪನೆಗಾಗಿ ಇದುವರೆಗೂ ಅನೇಕ ಬಾರಿ ಸಭೆಗಳನ್ನು ನಡೆಸಲಾಗಿದೆ.

ಕೆಲವು ತಿಂಗಳ ಹಿಂದೆ ಅಮೆರಿಕ ಹಾಗೂ ತಾಲಿಬಾನ್‌ ನಡುವೆಯೂ ಇಂಥದ್ದೊಂದು ಸಭೆ ನಡೆದು, ವಿಫ‌ಲವಾಗಿತ್ತು.

ಈ ಶಾಂತಿ ಒಪ್ಪಂದ ಚರ್ಚೆಗಾಗಿ ಅಫ್ಘಾನಿಸ್ಥಾನ ಸರಕಾರ ಹಾಗೂ ತಾಲಿಬಾನ್‌ನ ಪ್ರತಿನಿಧಿಗಳಷ್ಟೇ ಅಲ್ಲದೇ, ಅಮೆರಿಕದ ವಿದೇಶಾಂಗ ಸಚಿವ ಮೈಕ್‌ ಪಾಂಪಿಯೋ ಕೂಡ ಕತಾರ್‌ಗೆ ಬಂದಿದ್ದಾರೆ. ಆದರೆ ಖುದ್ದು ಪಾಂಪಿಯೋ ಅವರಿಗೂ ಈ ವಿಷಯದಲ್ಲಿ ಅಷ್ಟು ಭರವಸೆ ಇಲ್ಲ ಎನ್ನುವುದು ಅವರ ನುಡಿಗಳಿಂದಲೇ ಸ್ಪಷ್ಟವಾಗುತ್ತಿದೆ. ಈ ಶಾಂತಿ ಮಾತುಕತೆಯು ಅಮೆರಿಕದ ಮಧ್ಯಸ್ಥಿಕೆ ಹಾಗೂ ಒತ್ತಡದ ನಡುವೆ ನಡೆಯುತ್ತಿದೆ ಎನ್ನುವುದು ಗುಟ್ಟಾಗಿಯೇನೂ ಉಳಿದಿಲ್ಲ.

ಅಫ್ಘಾನಿಸ್ಥಾನದಿಂದ ತನ್ನ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳುವ ಯೋಚನೆಯಲ್ಲಿರುವ ಅಮೆರಿಕ, ತಾಲಿಬಾನ್‌ ಹಾಗೂ ಅಫ್ಘಾನ್‌ ಸರಕಾರದ ನಡುವೆ ಒಪ್ಪಂದ ಮಾಡಿಸಿ ಹೊರಹೋಗಲು ಬಯಸುತ್ತದೆ. ಆದರೆ ತಾನು ಅಫ್ಘಾನಿಸ್ಥಾನದಿಂದ ಅಡಿ ಹೊರಗೆ ಇಟ್ಟದ್ದೇ ಆದಲ್ಲಿ ತಾಲಿಬಾನ್‌ ತನ್ನ ದುಷ್ಟ ಬುದ್ಧಿಯನ್ನು ಅನಾವರಣಗೊಳಿಸಲಿದೆ ಎನ್ನುವುದು ಅಮೆರಿಕಕ್ಕೆ ತಿಳಿದಿದೆ.

ತಾಲಿಬಾನ್‌ ಬಲಿಷ್ಠವಾದರೆ, ಮುಂದೆ ತನಗೂ ಅಪಾಯವಿದೆ ಎಂಬ ಆತಂಕವೂ ಅಮೆರಿಕಕ್ಕೆ ಇದೆ. ಅತ್ತ ಪಾಕಿಸ್ಥಾನ ಬಹಿರಂಗವಾಗಿಯೇ ತಾಲಿಬಾನ್‌ ಅನ್ನು ಬೆಂಬಲಿಸುತ್ತದೆ. ಹೀಗಾಗಿ ತಾಲಿಬಾನ್‌ ಬೆಳೆದುಬಿಟ್ಟರೆ ಪಾಕಿಸ್ಥಾನವು ಅಫ್ಘಾನ್‌ ನೆಲವನ್ನು ಭಾರತ ವಿರೋಧಿ ಚಟುವಟಿಕೆಗಳಿಗೆ ಬಳಸಿಕೊಳ್ಳುವುದರಲ್ಲಿ ಸಂಶಯವಿಲ್ಲ.
ಈ ಕಾರಣಕ್ಕಾಗಿಯೇ, ಭಾರತದ ವಿದೇಶಾಂಗ ಸಚಿವ ಡಾ| ಎಸ್‌. ಜಯಶಂಕರ್‌ ಅವರು ಅಫ್ಘಾನಿಸ್ಥಾನದ ನೆಲ ಭಾರತ ವಿರೋಧಿ ಚಟುವಟಿಕೆಗಳಿಗೆ ಬಳಕೆಯಾಗಬಾರದು ಎಂದು ಈ ಸಭೆಯ ಹಿನ್ನೆಲೆಯಲ್ಲಿ ಶನಿವಾರ ವರ್ಚುವಲ್‌ ಭಾಷಣದಲ್ಲಿ ಹೇಳಿದ್ದಾರೆ.

ನಾಲ್ಕು ದಶಕಗಳಿಂದ ಸಂಘರ್ಷದಲ್ಲೇ ಮುಳುಗಿದ್ದ ಅಫ್ಘಾನಿಸ್ಥಾನದಲ್ಲಿ ಈಗಲೂ ನಿತ್ಯ ರಕ್ತಪಾತ ನಡೆಯುತ್ತಲೇ ಇರುತ್ತದಾದರೂ ತಾಲಿಬಾನ್‌ ಉತ್ತುಂಗದಲ್ಲಿದ್ದ ಸಮಯದಲ್ಲಿದ್ದಂಥ ಕ್ರೌರ್ಯ ಈಗ ತಗ್ಗಿದೆ. ಶರಿಯಾ ಕಾನೂನಿನ ಹೆಸರಿನಲ್ಲಿ ಮಹಿಳೆಯರು ಹಾಗೂ ಅಮಾಯಕ ಜನರ ಮಾರಣ ಹೋಮ ನಡೆಸಿತ್ತು ತಾಲಿಬಾನ್‌.

ಹೀಗಾಗಿ ಶಾಂತಿ ಮಾತುಕತೆಯ ವೇಳೆ ಹೊಂದಿಕೊಂಡು ಹೋಗುತ್ತೇವೆ ಎಂಬ ಧಾಟಿಯಲ್ಲಿ ಸೋಗು ಹಾಕಿ, ಅನಂತರ ತಾಲಿಬಾನ್‌ ತನ್ನ ದುರ್ಗುಣವನ್ನು ಅನಾವರಣಗೊಳಿಸಬಹುದು ಎಂಬ ಭಯ ಅಫ್ಘಾನ್‌ ಸರಕಾರಕ್ಕೆ ಹಾಗೂ ಅಲ್ಲಿನ ಜನರಿಗಿದೆ. ಅಮೆರಿಕದಲ್ಲಿ ಇನ್ನೆರಡು ತಿಂಗಳ ಅನಂತರ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ.

ಕಳೆದ ಚುನಾವಣೆಯಲ್ಲಿ ಟ್ರಂಪ್‌ ಅವರು ಅಫ್ಘಾನಿಸ್ಥಾನದಿಂದ ಅಮೆರಿಕ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳುವ ಭರವಸೆ ನೀಡಿದ್ದರು. ಈ ಕಾರಣಕ್ಕಾಗಿಯೇ, ಈ ಬಾರಿಯ ಚುನಾವಣೆಗೂ ಮುನ್ನ ಈ ವಿಷಯದಲ್ಲಿ ಜನರ ಮನ ಗೆಲ್ಲಬೇಕು ಎನ್ನುವ ಇರಾದೆ ಅವರಿಗಿದೆ. ಆದರೆ ಹಾಗೇನಾದರೂ ಆಗಿಬಿಟ್ಟರೆ, ಅಫ್ಘಾನಿಸ್ಥಾನಕ್ಕಷ್ಟೇ ಅಲ್ಲದೆ ಇಡೀ ಜಗತ್ತಿಗೆ ಅಪಾಯ ಕಟ್ಟಿಟ್ಟ ಬುತ್ತಿ.

ಮಧ್ಯ ಪ್ರಾಚ್ಯದಲ್ಲಿ ನೆಲೆ ಕಳೆದುಕೊಂಡಿರುವ ಐಸಿಸ್‌ ಈಗ ಅಫ್ಘಾನಿಸ್ಥಾನದಲ್ಲಿ ನಿಧಾನಕ್ಕೆ ಹೆಡೆಯೆತ್ತುತ್ತಿದೆ. ಅಮೆರಿಕ ತನ್ನ ಸೈನ್ಯವನ್ನೇನಾದರೂ ಹಿಂದಕ್ಕೆ ಕರೆಸಿಕೊಂಡಿತೆಂದರೆ, ಆಗಬಹುದಾದ ಅನಾಹುತವನ್ನು ಊಹಿಸುವುದಕ್ಕೂ ಕಷ್ಟವಾಗುತ್ತದೆ.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.