ನಿಲ್ಲದ ಪಾಕ್‌ ಕುತಂತ್ರ ಪಾಠ ಕಲಿಸಿ


Team Udayavani, Jun 25, 2020, 7:23 AM IST

ನಿಲ್ಲದ ಪಾಕ್‌ ಕುತಂತ್ರ ಪಾಠ ಕಲಿಸಿ

ದಿಲ್ಲಿಯಲ್ಲಿನ ಪಾಕಿಸ್ಥಾನಿ ರಾಯಭಾರ ಕಚೇರಿಯಲ್ಲಿ 50 ಪ್ರತಿಶತ ಸಿಬಂದಿಯನ್ನು ಕಡಿಮೆ ಮಾಡುವಂತೆ ಭಾರತೀಯ ವಿದೇಶಾಂಗ ಇಲಾಖೆ ಪಾಕಿಸ್ಥಾನಕ್ಕೆ ಸೂಚನೆ ನೀಡಿರುವುದಷ್ಟೇ ಅಲ್ಲದೇ, 7 ದಿನಗಳಲ್ಲೇ ಈ ಕೆಲಸ ಮಾಡುವಂತೆ ಗಡುವು ನೀಡಿದೆ. ಅಲ್ಲದೇ, ಇಸ್ಲಾಮಾಬಾದ್‌ನಲ್ಲಿರುವ ಭಾರತ ರಾಯಭಾರ ಕಚೇರಿಯ 50 ಪ್ರತಿಶತದಷ್ಟು ಸಿಬಂದಿಯನ್ನು ವಾಪಸ್‌ ಕರೆಸಿಕೊಳ್ಳಲು ಮುಂದಾಗಿದೆ. ನಿರೀಕ್ಷೆಯಂತೆಯೇ, ಭಾರತದ ಈ ನಡೆಗೆ ಪಾಕಿಸ್ಥಾನ ತಗಾದೆ ತೆಗಿದಿದೆ. “ಚೀನದೊಂದಿಗೆ ಗಡಿ ಭಾಗದಲ್ಲಿ ನಡೆದಿರುವ ವಿವಾದದಿಂದ ವಿಪಕ್ಷಗಳ ಗಮನವನ್ನು ಬೇರೆಡೆ ಸೆಳೆಯಲು ಭಾರತ ಸರಕಾರ ಹೀಗೆ ಮಾಡುತ್ತಿದೆ’ ಎಂದು ಪಾಕ್‌ ವಿದೇಶಾಂಗ ಸಚಿವ ಕಿಡಿಕಾರುತ್ತಿದ್ದಾರೆ.

ಪಾಕಿಸ್ಥಾನದ ರಾಯಭಾರ ಕಚೇರಿಯ ಸಿಬಂದಿಯ ಅನುಮಾನಾಸ್ಪದ ಚಲನವಲನಗಳ ಮೇಲೆ ಭಾರತ ಮೊದಲಿನಿಂದಲೂ ಹದ್ದಿನಗಣ್ಣಿಟ್ಟಿತ್ತು. ಇದಕ್ಕೆ ಪುಷ್ಟಿನೀಡುವಂತೆ ಪಾಕ್‌ ರಾಯಭಾರ ಕಚೇರಿಯ ಸಿಬ್ಬಂದಿ ಬೇಹುಗಾರಿಕೆಯಲ್ಲಿ ಭಾಗಿಯಾಗಿದ್ದು ಪತ್ತೆಯಾಗಿತ್ತು. ಆಗ ಸಿಬ್ಬಂದಿಯನ್ನು ಬಂಧಿಸಿ, ಅನಂತರ ಪಾಕಿಸ್ಥಾನಕ್ಕೆ ಕಳುಹಿಸಲಾಗಿತ್ತು. ಒಟ್ಟಲ್ಲಿ ಪಾಕ್‌ನ ದುವ್ಯìವಹಾರಗಳಿಗೆ ಭಾರತ ಕತ್ತರಿಹಾಕುತ್ತಿದ್ದಂತೆಯೇ, ಆ ದೇಶ ಪರದಾಡಿಬಿಡುತ್ತದೆ.

ಸತ್ಯವೇನೆಂದರೆ, ಭಾರತಕ್ಕೆ ತೊಂದರೆ ಉಂಟುಮಾಡುವುದನ್ನೇ ತನ್ನ ಧ್ಯೇಯೋದ್ದೇಶ ಮಾಡಿಕೊಂಡಿರುವ ಪಾಕಿಸ್ಥಾನಕ್ಕೆ ಕಳೆದ ಕೆಲವು ವರ್ಷಗಳಿಂದ ಭಾರತ ದೊಡ್ಡ ಪಾಠಗಳನ್ನೇ ಕಲಿಸಲಾರಂಭಿಸಿದೆ. ಅದರಲ್ಲೂ ಕಾಶ್ಮೀರದಲ್ಲಿ ಆರ್ಟಿಕಲ್‌ 370 ರದ್ದತಿಯಾಗಿದ್ದು ಹಾಗೂ ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿರುವುದನ್ನು ಪಾಕಿಸ್ಥಾನಕ್ಕೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಲೇ ಇಲ್ಲ. ಈ ಕಾರಣಕ್ಕಾಗಿಯೇ, ಗಡಿ ಭಾಗದಲ್ಲಿ ಉಗ್ರರು ಅಥವಾ ತನ್ನ ಸೇನೆಯ ಮೂಲಕ ನಿತ್ಯ ತೊಂದರೆಯೊಡ್ಡಲು ಪ್ರಯತ್ನಿಸುತ್ತಲೇ ಇರುತ್ತದೆ. ಗಡಿ ಭಾಗದಲ್ಲಂತೂ ನಿತ್ಯವೂ ಗುಂಡಿನ ದಾಳಿ ನಡೆಸುತ್ತಲೇ ಇರುತ್ತದೆ. ಸೋಮವಾರ ರಾಜೌರಿ ಮತ್ತು ನೌಶಾರಾ ಭಾಗದಲ್ಲಿ ಪಾಕ್‌ ಸಿಡಿಸಿದ ಮೋರ್ಟಾರ್‌ಗಳಿಂದಾಗಿ ಭಾರತೀಯ ಯೋಧರೊಬ್ಬರು ಮೃತಪಟ್ಟಿದ್ದಾರೆ.

ಭಾರತದಲ್ಲಿ ಪಾಕ್‌ ಉಗ್ರರನ್ನು ನುಸುಳಿಸಲು ಪ್ರಯತ್ನಿಸುವಾಗೆಲ್ಲ ಹೀಗೆ ಗುಂಡಿನ ದಾಳಿ ಮಾಡುತ್ತಿರುತ್ತದೆ. ಆದರೆ, ಕಳೆದ 2 ವರ್ಷಗಳಿಂದ ನಮ್ಮ ಸೇನೆ ಹಾಗೂ ಗುಪ್ತಚರ ಏಜೆನ್ಸಿಗಳ ಸಹಭಾಗಿತ್ವದ ಕಾರ್ಯಾಚರಣೆಗಳು ಎಷ್ಟು ಪರಿಣಾಮಕಾರಿಯಾಗಿ ಬದಲಾಗಿವೆಯೆಂದರೆ, ಪಾಕ್‌ನ ತಂತ್ರಗಳೆಲ್ಲ ನೆಲಕಚ್ಚುತ್ತಿವೆ, ಅದು ಪೋಷಿಸಿದ ಉಗ್ರರೆಲ್ಲ ನಾಶವಾಗುತ್ತಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ, ಕೇಂದ್ರ ಸರಕಾರವೀಗ ಕಾಶ್ಮೀರದ ಪ್ರತ್ಯೇಕತಾವಾದಿಗಳನ್ನು ಕಟ್ಟಿಹಾಕಿದೆ. ಪಾಕಿಸ್ಥಾನದ ಕುಮ್ಮಕ್ಕಿನಿಂದಾಗಿ ಈ ಪ್ರತ್ಯೇಕತಾವಾದಿ ನಾಯಕರು ಸ್ಥಳೀಯ ಯುವಕರನ್ನು ದೇಶದ ವಿರುದ್ಧ ಎತ್ತಿಕಟ್ಟುವ ಪ್ರಯತ್ನ ಮಾಡುತ್ತಾ ಬಂದಿದ್ದರು. ಈಗ ಅವರೆಲ್ಲರೂ ಮೆತ್ತಗಾಗಿರುವುದರ ಪರಿಣಾಮವಾಗಿಯೇ, ಕಲ್ಲುತೂರಾಟ ಘಟನೆಗಳೂ ನಿಂತಿವೆ. ಸಹಜವಾಗಿಯೇ, ಇದೆಲ್ಲದರಿಂದಾಗಿ ಪಾಕಿಸ್ತಾನಿ ಸೇನೆ ಹುಚ್ಚುಹಿಡಿದಂತೆ ವರ್ತಿಸುತ್ತಿದೆ.

ಒಟ್ಟಲ್ಲಿ ಪಾಕ್‌ನ ಕುತಂತ್ರಗಳನ್ನೆಲ್ಲ ಭಾರತವು ಅತ್ಯಂತ ಚಾಣಾಕ್ಷವಾಗಿ ಬೇರುಮಟ್ಟದಲ್ಲೇ ತುಂಡರಿಸುತ್ತಾ ಸಾಗುತ್ತಿರುವುದು ನಿಜಕ್ಕೂ ಶ್ಲಾಘನೀಯ ವಿಚಾರವೇ ಸರಿ. ಆದರೂ, ಹೀಗೆ ಗಡಿಯಾಚೆಯಿಂದ ಪಾಕಿಸ್ಥಾನ ನಡೆಸುವ ದಾಳಿಗಳಿಂದಾಗಿ ನಮ್ಮ ಸೈನಿಕರ ಜೀವಹಾನಿಯಾಗುತ್ತಿರುವುದನ್ನು ತಪ್ಪಿಸಬೇಕಾಗಿದೆ.

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.