ಸವಾಲಿನ ನಡುವೆ ಶಿಕ್ಷಕರ ದಿನಾಚರಣೆ


Team Udayavani, Sep 5, 2020, 6:03 AM IST

ಸವಾಲಿನ ನಡುವೆ ಶಿಕ್ಷಕರ ದಿನಾಚರಣೆ

ಸಾಂದರ್ಭಿಕ ಚಿತ್ರ

ಇಂದು ಸಮಾಜ ಮತ್ತು ಸರಕಾರ ಶಿಕ್ಷಕರಿಗೆ ಬೆನ್ನೆಲುಬಾಗಿ ನಿಲ್ಲಬೇಕಾದ ಅಗತ್ಯವಿದೆ.  ಅವರ ಸಮಸ್ಯೆಗ ಳಿಗೆ ತ್ವರಿತವಾಗಿ ಸ್ಪಂದಿಸಬೇಕಿದೆ. ಶಿಕ್ಷಣ ಕ್ಷೇತ್ರಕ್ಕೆ ಮರುವೇಗ ನೀಡುವ ಈ  ಯೋಧರಿಗೆ ಅಸೌಖ್ಯ, ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ.

ಕೋವಿಡ್‌ ಸಂಕಷ್ಟದ ಕಾಲದಲ್ಲೇ ಶಿಕ್ಷಕರ ದಿನಾಚರಣೆ ಎದುರಾಗಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲೇ ಈ ರೀತಿಯ ಸವಾಲನ್ನು ಶಿಕ್ಷಣ ವಲಯ ಎಂದೂ ಎದುರಿಸಿರಲಿಲ್ಲ. ಖಾಸಗಿ ಶಾಲೆಗಳು, ಸರಕಾರಿ ಶಾಲೆಗಳು, ಕಾಲೇಜುಗಳು… ಒಟ್ಟಾರೆ ಯಾಗಿ ಶೈಕ್ಷಣಿಕ ರಂಗದ ಪ್ರತಿಯೊಂದು ಹಂತಕ್ಕೂ ಸವಾಲೊಡ್ಡಿ ಬಿಟ್ಟಿದೆ ಪುಟ್ಟ ವೈರಸ್‌.

ಶ್ಲಾಘನೀಯ ಸಂಗತಿಯೆಂದರೆ, ಈ ಅತೀವ ಸವಾಲುಗಳ ನಡುವೆಯೇ ನಮ್ಮ ಶಿಕ್ಷಕರು ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ, ಜತೆಗೆ ವೈಯಕ್ತಿಕ ಸಂಕಷ್ಟವನ್ನೂ ಎದುರಿಸುತ್ತಿದ್ದಾರೆ. ಹೊಸ ಸಹಜತೆಯ ಜತೆಗೆ ಹೆಜ್ಜೆಹಾಕಲೇಬೇಕಾದ ಅನಿವಾರ್ಯತೆ ಇದೆ. ಈ ಕಾರಣಕ್ಕಾಗಿಯೇ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗಾಗಿ ಶಿಕ್ಷಣ ಇಲಾಖೆ ವಿದ್ಯಾಗಮದಂಥ ವಿನೂತನ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಇದರಡಿಯಲ್ಲಿ ಶಿಕ್ಷಕರು ಗ್ರಾಮಗಳಿಗೆ ತೆರಳಿ, ವಿದ್ಯಾರ್ಥಿಗಳಿಗೆ ಪಾಠ ಮಾಡಿಬರುತ್ತಿದ್ದಾರೆ. ಸರಕಾರವು ಚಂದನ ವಾಹಿನಿಯ ಮೂಲಕವೂ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಬಿತ್ತರಿಸುತ್ತಿದೆ.

ಈಗಾಗಲೇ ರಾಜ್ಯದ ವಿವಿಧ ಭಾಗಗಳಲ್ಲಿ ಶಿಕ್ಷಕರು ಕೋವಿಡ್‌ಗೆ ತುತ್ತಾಗಿರುವುದರಿಂದ ಸಹಜವಾಗಿಯೇ ಬೋಧಕರಲ್ಲಿ ಆತಂಕವಿದೆ. ಅಗತ್ಯ ಸುರಕ್ಷಾ ಪರಿಕರಗಳ ಅಲಭ್ಯತೆಯೂ ಅವರಲ್ಲಿನ ಆತಂಕವನ್ನು ಹೆಚ್ಚಿಸುತ್ತಿದೆ.

ಇನ್ನೊಂದೆಡೆ ಖಾಸಗಿ ಶಿಕ್ಷಣ ವಲಯಕ್ಕೂ ಇದು ಪರೀಕ್ಷೆಯ ಸಮಯವೇ. ಖಾಸಗಿ ಶಾಲೆಗಳಿಂದು ಆರ್ಥಿಕ ಸಂಕಷ್ಟ ಅನುಭವಿಸುತ್ತಿವೆ. ಇದರ ನೇರ ಪರಿಣಾಮ ಅಲ್ಲಿನ ಶಿಕ್ಷಕರ ಮೇಲೆ ಆಗತೊಡಗಿದೆ. ಕೆಲವು ಶಾಲೆಗಳಲ್ಲಂತೂ ಐದಾರು ತಿಂಗಳಿಂದ ಸಂಬಳವೇ ಸಿಗದೇ, ಶಿಕ್ಷಕರು ಜೀವನಾಧಾರಕ್ಕಾಗಿ ಅನ್ಯ ಕೆಲಸಗಳತ್ತ ಮುಖ ಮಾಡುವಂತಾಗಿದೆ. ಇವರೆಲ್ಲರ ಸಂಕಷ್ಟಗಳಿಗೆ ಸಮಾಧಾನ ಹೇಳುವ ವಿಚಾರದಲ್ಲಿ ಸರಕಾರ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ತ್ವರಿತವಾಗಿಯೇ ಚರ್ಚೆ ನಡೆಸಿ, ಮುಂದಡಿ ಇಡಬೇಕಿದೆ.

ಶಿಕ್ಷಣವನ್ನು ಆನ್‌ಲೈನ್‌ ಮಾಡುವ ವಿಚಾರದಲ್ಲಿ ಈಗಲೂ ಹಲವಾರು ಅಡ್ಡಿಗಳಿವೆ. ನೆಟ್‌ವರ್ಕ್‌ ಸಮಸ್ಯೆ ಒಂದೆಡೆಯಾ ದರೆ, ರಾಜ್ಯದ ವಿದ್ಯಾರ್ಥಿ ಕುಟುಂಬಗಳ ಬಳಿ ಅಗತ್ಯ ಫೋನ್‌ಗಳು, ಟ್ಯಾಬ್‌ಗಳ ಕೊರತೆ ಕಾಡುತ್ತಿದೆ. ಈ ಸಮಸ್ಯೆಗೆ ತ್ವರಿತವಾಗಿ ಪರಿಹಾರ ಕಂಡುಕೊಳ್ಳಬೇಕಿದೆ.

ಬದಲಾವಣೆಯೆನ್ನುವುದು ಜಗದ ನಿಯಮ ಎನ್ನುವ ನಾಣ್ನುಡಿಯೇ ಇದೆ ಯಾದರೂ, ಹಠಾತ್ತನೆ ಈ ಪ್ರಮಾಣದ ಬದಲಾವಣೆಗೆ ಒಗ್ಗಿಕೊಳ್ಳುವುದು ಸುಲಭದ ಕೆಲಸವಲ್ಲ. ಯಾವುದೇ ಬೃಹತ್‌ ಬದಲಾ ವಣೆಯಿರಲಿ, ಆರಂಭದಲ್ಲಿ ಅದು ಬಹಳ ಅಸೌಖ್ಯವನ್ನುಂಟು ಮಾಡುತ್ತದೆ ಎನ್ನುವುದು ಸತ್ಯ.

ಈ ಕಾರಣಕ್ಕಾಗಿಯೇ, ಇಂದು ಸಮಾಜ ಮತ್ತು ಸರಕಾರ ಶಿಕ್ಷಕರಿಗೆ ಬೆನ್ನೆಲುಬಾಗಿ ನಿಲ್ಲಬೇಕಾದ ಅಗತ್ಯವಿದೆ. ಅವರ ಸಮಸ್ಯೆಗ ಳಿಗೆ ತ್ವರಿತವಾಗಿ ಸ್ಪಂದಿಸಬೇಕಿದೆ. ಶಿಕ್ಷಣ ಕ್ಷೇತ್ರಕ್ಕೆ ಮರುವೇಗ ನೀಡುವ ಈ ಯೋಧರಿಗೆ ಅಸೌಖ್ಯ, ತೊಂದರೆ ಯಾಗದಂತೆ ನೋಡಿಕೊಳ್ಳಬೇಕಿದೆ. ಪಾಠಕ್ಕಿಂತ ಪಠ್ಯೇತರ ಹೊರೆಯೂ ಹೆಚ್ಚಾಗುತ್ತಿದೆ ಎನ್ನುವ ದೂರುಗಳೂ ಕೇಳಿಬರು ತ್ತಿದ್ದು, ಶಿಕ್ಷಕರ ಮೇಲಿಂದ ಈ ಭಾರವನ್ನು ತಗ್ಗಿಸಲು ಸರಕಾರ ಮುಂದಾಗಬೇಕು.

ಕೊರೊನಾ ವಾರಿಯರ್‌ಗಳ ಬಗ್ಗೆ ಚರ್ಚೆ ನಡೆಯುವಾಗಲೆಲ್ಲ ಶಿಕ್ಷಕರ ಹೆಸರು ಕೊನೆಗೆ ಬರುತ್ತಿರುವುದು ಬೇಸರದ ಸಂಗತಿ. ಎಲ್ಲ ಸಂಕಷ್ಟಗಳ ನಡುವೆಯೂ ನವಪೀಳಿಗೆಗೆ ಭದ್ರ ಜ್ಞಾನ ಬುನಾದಿ ಹಾಕಲು ಕಟಿಬದ್ಧರಾಗಿರುವ ಈ ವರ್ಗಕ್ಕೆ ಇಡೀ ಸಮಾಜ ಋಣಿಯಾಗಬೇಕು. ಈಗಿನ ಸಂಕಷ್ಟಗಳೆಲ್ಲ ಆದಷ್ಟು ಬೇಗನೇ ಬಗೆಹರಿಯುವಂತಾಗಲಿ ಎಂದು ಆಶಿಸೋಣ. ಶಿಕ್ಷಕರ ದಿನಾಚರಣೆಯ ಶುಭಾಶಯಗಳು.

ಟಾಪ್ ನ್ಯೂಸ್

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

1-weqeqwe

IPL; ಸಾಯಿ ಸುದರ್ಶನ್ ಹೊಸ ದಾಖಲೆ ; ಗಿಲ್ ಮತ್ತೊಂದು ಶತಕದ ಕಮಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.