ದಿಗ್ಗಜರ ಅನುಪಸ್ಥಿತಿಯಲ್ಲೂ ದಿಟ್ಟತನ ತೋರಿದ ಟೀಂ ಇಂಡಿಯಾ!


Team Udayavani, Dec 30, 2020, 5:38 AM IST

ದಿಗ್ಗಜರ ಅನುಪಸ್ಥಿತಿಯಲ್ಲೂ ದಿಟ್ಟತನ ತೋರಿದ ಟೀಂ ಇಂಡಿಯಾ!

ನಾನು ಬದಲಾದ ದ ಪ್ರತಿನಿಧಿ ಮಾತ್ರ ಎಂದು ವಿರಾಟ್‌ ಕೊಹ್ಲಿ ಆಸ್ಟ್ರೇಲಿಯ ವಿರುದ್ಧ ಟೆಸ್ಟ್‌ ಸರಣಿ ಆರಂಭಕ್ಕೂ ಮುನ್ನ ಹೇಳಿದ್ದರು. ಆ ಮಾತನ್ನು ಆಗ ಯಾರೂ ಗಂಭೀರವಾಗಿ ಪರಿಗಣಿಸಿರಲಿಲ್ಲ. ಅದರ ಆಳಕ್ಕೂ ಹೋಗಿರಲಿಲ್ಲ. ಆದ್ದರಿಂದಲೇ ಅದರ ಅರ್ಥ ಆಗಿರಲಿಲ್ಲ. ಆ ಮಾತಿನ ಮರ್ಮ ಮಂಗಳವಾರ ಸರಿಯಾಗಿ ಅರ್ಥವಾಗಿದೆ. ಅದರಲ್ಲೂ ಆಸ್ಟ್ರೇಲಿಯ ಕ್ರಿಕೆಟ್‌ ತಂಡಕ್ಕೆ, ಅಲ್ಲಿನ ದುರಹಂಕಾರಿ ಮಾಜಿ ಕ್ರಿಕೆಟಿಗರಿಗೆ, ಮಾಧ್ಯಮಗಳಿಗೆ ಸ್ಪಷ್ಟವಾಗಿ ಗೊತ್ತಾಗಿದೆ. ವರ್ತಮಾನ ಕ್ರಿಕೆಟ್‌ನ ಸರ್ವಶ್ರೇಷ್ಠ ಬ್ಯಾಟ್ಸ್‌ಮನ್‌ ವಿರಾಟ್‌ ಕೊಹ್ಲಿ ಇಲ್ಲ, ಇನ್ನೊಬ್ಬ ವಿಶ್ವವಿಖ್ಯಾತ ಆಟಗಾರ ರೋಹಿತ್‌ ಶರ್ಮ ಇಲ್ಲ, ಅದ್ಭುತ ವೇಗಿಗಳಾದ ಮೊಹಮ್ಮದ್‌ ಶಮಿ, ಇಶಾಂತ್‌ ಶರ್ಮ ಕೂಡಾ ಇಲ್ಲ.

ಇಷ್ಟೆಲ್ಲ ಇಲ್ಲಗಳ ನಡುವೆ ಅಜಿಂಕ್ಯ ರಹಾನೆ ನೇತೃತ್ವದ ಭಾರತೀಯ ಕ್ರಿಕೆಟ್‌ ತಂಡ, ಎದುರಾಳಿ ಆಸ್ಟ್ರೇಲಿಯ ತಂಡ ವನ್ನು ಅದರ ತವರು ನೆಲದಲ್ಲೇ ಸೋಲಿಸಿದೆ. ಅದರಲ್ಲೂ ಮೆಲ್ಬರ್ನ್ ನಲ್ಲಿ ನಡೆದ ಬಾಕ್ಸಿಂಗ್‌ ಡೇ ಟೆಸ್ಟ್‌ನಲ್ಲಿ. ಇದರಲ್ಲಿ ಅದೃಷ್ಟದಾಟದ ಪಾತ್ರವೇನೂ ಇಲ್ಲ. ಇಡೀ ತಂಡ ಅತ್ಯಂತ ಯೋಜನಾ ಬದ್ಧವಾಗಿ, ಆಕ್ರಮಣಕಾರಿಯಾಗಿ, ಧೈರ್ಯವಾಗಿ ಆಡಿದ್ದರಿಂದ ಇಂತಹ ಜಯ ಸಾಧ್ಯವಾಯಿತು.

ಈ ಗೆಲುವು ಭಾರತಕ್ಕೆ ಒಲಿಯುವ ಮುಂಚೆ ಎಂಥ ಸ್ಥಿತಿಯಿತ್ತು ಗೊತ್ತೇ? ಮೊದಲ ಟೆಸ್ಟ್‌ನ ಎರಡನೇ ಇನಿಂಗ್ಸ್‌ನಲ್ಲಿ ಭಾರತ ಕೇವಲ 36 ರನ್‌ಗಳಿಗೆ ಆಲೌಟಾಗಿತ್ತು. ಭಾರತದಂತಹ ಕ್ರಿಕೆಟ್‌ ಜಗತ್ತಿನ ಅತ್ಯಂತ ಬಲಿಷ್ಠ ತಂಡಕ್ಕೆ ಇದು ಘೋರ ಅವಮಾನ. ಆಗ ಎದುರಾದ ಸೋಲಿನ ಅನಂತರ ಆಗಿನ ನಾಯಕ ಕೊಹ್ಲಿ, ದಯವಿಟ್ಟು ಹುತ್ತವನ್ನು ಪರ್ವತ ಮಾಡಬೇಡಿ. ನಾವು ಸೋತಿದ್ದೇವೆ ಅಂದರೆ ಎಲ್ಲವೂ ಮುಗಿದುಹೋಯಿತು ಎಂದರ್ಥವಲ್ಲ ಎಂದಿದ್ದರು. ಅದನ್ನು ಹೌದೆಂದು ಅಜಿಂಕ್ಯ ರಹಾನೆ ಪಡೆ ಸಾಬೀತುಪಡಿಸಿದೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದರಿಂದ ಕೊಹ್ಲಿ ಮೊದಲ
ಟೆಸ್ಟ್‌ ಮುಗಿದ ಅನಂತರ ಭಾರತಕ್ಕೆ ಮರಳಿದರು. ಆಗ ರಹಾನೆಗೆ ಸಾರಥ್ಯ ಒಲಿಯಿತು. ಸಾಮಾನ್ಯವಾಗಿ ನಾಯಕತ್ವವನ್ನು ಎಲ್ಲರೂ ಸಂಭ್ರಮಿಸುತ್ತಾರೆ. ರಹಾನೆ ಮಾತ್ರ ಅಂಥ ಸ್ಥಿತಿಯಲ್ಲಿರಲಿಲ್ಲ. ಹಲವು ದಿಗ್ಗಜರ ಅನುಪಸ್ಥಿತಿಯಲ್ಲಿ ಅವರು ಮುಳ್ಳಿನ ಕಿರೀಟ ಹೊತ್ತುಕೊಂಡಿದ್ದರು. ಅಂತಹ ಸ್ಥಿತಿಯನ್ನು ಅವರು ಎಷ್ಟು ಶಾಂತವಾಗಿ ನಿಭಾಯಿಸಿದರೆಂದರೆ ಖಾಯಂ ನಾಯಕ ಕೊಹ್ಲಿ ಸೇರಿದಂತೆ ಕ್ರಿಕೆಟ್‌ ಜಗತ್ತೇ ಅವರನ್ನು ಹೊಗಳಿತು. ಹಾವಭಾವದಲ್ಲಿ ತಣ್ಣಗಿದ್ದ ಅವರು, ತನ್ನ ನಿರ್ಧಾರ ಗಳಲ್ಲಿ, ಆಟದಲ್ಲಿ ಆಕ್ರಮಣಕಾರಿಯಾಗಿದ್ದರು. ಸ್ವತಃ ಬ್ಯಾಟಿಂಗ್‌ ಮಾಡುವಾಗ ಉಳಿದವರಿಗೆ ಮಾದರಿಯಾದರು. ಶತಕ ಬಾರಿಸಿ ತಂಡದ ಗೆಲುವಿಗೆ ಆಧಾರವಾದರು. ಪಂದ್ಯಶ್ರೇಷ್ಠ ಗೌರವ ಅವರಿಗೆ ಒಲಿದುಬಂತು.

ಟೆಸ್ಟ್‌ ಸರಣಿ 1-1ರಿಂದ ಸಮಬಲವಾಯಿತು. ಇನ್ನೂ ಎರಡು ಟೆಸ್ಟ್‌ ಬಾಕಿಯಿದೆ. ರಹಾನೆಯ ನಾಯಕತ್ವದ ಶೈಲಿ ನೋಡಿದರೆ ಇಲ್ಲೂ ಭಾರತ ಗೆದ್ದರೆ ಅಚ್ಚರಿಯಿಲ್ಲ. ಆದರೆ ಗಮನಿಸಲೇಬೇಕಾದ ಕೆಲವು ಸಂಗತಿಗಳಿವೆ. ಚೇತೇಶ್ವರ ಪೂಜಾರ, ಮಾಯಾಂಕ್‌ ಅಗರ್ವಾಲ್‌ ತಮ್ಮ ವೈಫ‌ಲ್ಯದಿಂದ ಹೊರಬರಬೇಕು, ಭಾರತೀಯ ಆಟಗಾರರು ತಮ್ಮ ದೈಹಿಕ ಕ್ಷಮತೆಯನ್ನು ಮೊದಲ ಆದ್ಯತೆಯಾಗಿಟ್ಟುಕೊಳ್ಳಬೇಕು. ಇಲ್ಲದೇ ಹೋದರೆ ಈಗ ಆಗಿರುವಂತೆ ಗಾಯಾಳುಗಳ ಸಂಖ್ಯೆ ಏರುತ್ತದೆ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.