ಉಗ್ರವಾದದ ವಿಚಾರದಲ್ಲಿ ಇಬ್ಬಗೆಯ ನೀತಿ ಸರಿಯೇ?


Team Udayavani, Oct 10, 2022, 6:00 AM IST

ಉಗ್ರವಾದದ ವಿಚಾರದಲ್ಲಿ ಇಬ್ಬಗೆಯ ನೀತಿ ಸರಿಯೇ?

ಪಾಕಿಸ್ಥಾನ ಪ್ರಯೋಜಿತ ಉಗ್ರವಾದದ ಬಗ್ಗೆ ಭಾರತ ಮೊದಲಿನಿಂದಲೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಧ್ವನಿ ಎತ್ತಿಕೊಂಡು ಬರುತ್ತಲೇ ಇದೆ. ಪಾಕಿಸ್ಥಾನವು ಉಗ್ರವಾದವನ್ನು ಸೃಷ್ಟಿಸಿ, ಬೆಳೆಸಿ, ಪೋಷಿಸಿ ಹೆಮ್ಮರವನ್ನಾಗಿ ಮಾಡುತ್ತಿರುವ ಸಂಗತಿ ಇಡೀ ಜಗತ್ತಿಗೇ ಗೊತ್ತಿದೆ. ಅಷ್ಟೇ ಅಲ್ಲ, ಜಗತ್ತಿಗೆ ಕಂಟಕವೆನಿಸಿರುವ ದೊಡ್ಡ ದೊಡ್ಡ ಉಗ್ರ ಸಂಘಟನೆಗಳ ಮೂಲವೂ ಪಾಕಿಸ್ಥಾನದಲ್ಲೇ ಇದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ. ಆದರೆ, ಅಂತಾರಾಷ್ಟ್ರೀಯ ಸಂಬಂಧದ ವಿಚಾರದಲ್ಲಿಯೂ ಉಗ್ರವಾದ, ಆಯಾ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಕ್ಕೆ ತಕ್ಕಂತೆ ರೂಪಿತವಾಗುತ್ತದೆ. ಪಾಕಿಸ್ಥಾನದ ಮಿತ್ರ ದೇಶವೆನಿಸಿರುವ ಚೀನಕ್ಕೆ, ಆ ದೇಶದ ಉಗ್ರವಾದ ಕಂಟಕವೆನಿಸಿಯೇ ಇಲ್ಲ. ಆದರೆ ತನ್ನದೇ ದೇಶದಲ್ಲಿರುವ ವುಯಿಗರ್‌ ಮುಸ್ಲಿಮರಿಗೆ ಕಿರುಕುಳ ಕೊಡುತ್ತ ಬಂದಿರುವ ಚೀನ ಮಾತ್ರ, ಈ ವಿಚಾರದಲ್ಲಿ ದ್ವಂದ್ವ ವಿಚಾರ ಅನುಸರಿಸುತ್ತಿದೆ.

ಇತ್ತೀಚೆಗಷ್ಟೇ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಭೆಯಲ್ಲಿ ಚೀನಾದ ವಿರುದ್ಧ ಮಾನವ ಹಕ್ಕುಗಳ ಉಲ್ಲಂಘನೆ ವಿಚಾರದಲ್ಲಿ ಚರ್ಚೆಯಾಗಬೇಕು ಎಂದು ಮತಕ್ಕೆ ಹಾಕಲಾಗಿತ್ತು. ಆದರೆ ಈ ಮತದಾನದಿಂದ ಭಾರತ ಗೈರುಹಾಜರಾಗಿದ್ದು, ಎಲ್ಲರ ಹುಬ್ಬೇರಿಸುವಂತೆ ಮಾಡಿತ್ತು. ಇದಕ್ಕೆ ಸ್ಪಷ್ಟನೆಯನ್ನೂ ನೀಡಿದ್ದ ವಿದೇಶಾಂಗ ಇಲಾಖೆ, ಯಾವುದೇ ಒಂದು ದೇಶವನ್ನು ಗುರಿಯಾಗಿಸಿಕೊಂಡು ಇಂಥ ಯಾವುದೇ ಚರ್ಚೆ ಮಾಡುವ ವಿಷಯಗಳಿಗೆ ಮೊದಲಿನಿಂದಲೂ ಮತ ಹಾಕಿಲ್ಲ ಎಂದು ಹೇಳಿತ್ತು.

ಇದಾದ ಬಳಿಕ, ವುಯಿಗರ್‌ನಲ್ಲಿನ ಮುಸ್ಲಿಮರ ವಿರುದ್ಧದ ಚೀನ ಕಿರುಕುಳದ ಬಗ್ಗೆ ಆತಂಕವನ್ನೂ ಭಾರತ ವ್ಯಕ್ತಪಡಿಸಿತ್ತು. ಅಲ್ಲದೆ ಈ ಜನರ ಹಕ್ಕುಗಳ ಬಗ್ಗೆ ಮಾತನಾಡಿತ್ತು. ಯಾವುದೇ ದೇಶದಲ್ಲೇ ಆಗಲಿ ನಾಗರಿಕರಿಗೆ ಸುಖಾಸುಮ್ಮನೆ ಕಿರುಕುಳ ನೀಡುವುದು ತರವಲ್ಲ ಎಂದೂ ಹೇಳಿತ್ತು. ಈ ಸಂಬಂಧ ಚೀನ ಸ್ಪಷ್ಟನೆಯನ್ನು ನೀಡಿದ್ದು, ವುಯಿಗರ್‌ ಮುಸ್ಲಿಮರ ವಿರುದ್ಧದ ಕಾರ್ಯಾಚರಣೆ ಭಯೋತ್ಪಾದನೆಯ ಒಂದು ಭಾಗ ಎಂದು ಹೇಳಿಕೊಂಡಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ನಡೆಸುತ್ತಿರುವುದು ನಮಗೆ ಗೊತ್ತಾಗಿದೆ. ಆದರೆ ಕ್ಸಿಂಗಿಯಾಂಗ್‌ನ ವುಯಿಗರ್‌ ಮುಸಲ್ಮಾನರ ಹಿಂಸಾತ್ಮಕ ಉಗ್ರವಾದ, ಮೂಲಭೂತವಾದ ಮತ್ತು ಪ್ರತ್ಯೇಕತಾವಾದವನ್ನು ತಡೆಯುವ ಸಲುವಾಗಿ ಈ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದೆ. ವಿಚಿತ್ರವೆಂದರೆ ಭಾರತ ಈ ಕುರಿತ ವಿಶ್ವಸಂಸ್ಥೆಯಲ್ಲಿನ ಚರ್ಚೆಯ ಮತದಿಂದ ಗೈರಾಗಿದ್ದ ವಿಚಾರ ಸಂಬಂಧ ಯಾವುದೇ ಹೇಳಿಕೆ ನೀಡದೇ ಮೌನಕ್ಕೆ ಶರಣಾಗಿದೆ.

ವುಯಿಗರ್‌ ಮುಸಲ್ಮಾನರ ವಿಚಾರದಲ್ಲಿ ಚೀನ ಅನುಸರಿಸುತ್ತಿರುವ ಧೋರಣೆ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ತಾನು ಅನುಸರಿಸುತ್ತಿರುವ ನೀತಿಗೂ ಅಜಗಜಾಂತರವಿದೆ. ವಿಶ್ವಸಂಸ್ಥೆ, ಅಮೆರಿಕ, ಭಾರತವು ಸೇರಿದಂತೆ ಹಲವಾರು ದೇಶಗಳು ಪಾಕ್‌ನಲ್ಲಿನ ಭಯೋತ್ಪಾದಕ ಸಂಘಟನೆಗಳ ಮುಖ್ಯಸ್ಥರನ್ನು ಅಂತಾರಾಷ್ಟ್ರೀಯ ಭಯೋತ್ಪಾದಕರ ಪಟ್ಟಿಗೆ ಸೇರಿಸಲು ಶ್ರಮ ಪಡುತ್ತಿವೆ. ಆದರೆ ಭದ್ರತಾ ಮಂಡಳಿಯಲ್ಲಿ ವಿಟೋ ಅಧಿಕಾರ ಹೊಂದಿರುವ ಚೀನ, ಇದಕ್ಕೆ ಮೊದಲಿನಿಂದಲೂ ಅಡ್ಡಗಾಲು ಹಾಕಿಕೊಂಡೇ ಬರುತ್ತಿದೆ. ಅಲ್ಲದೆ, ಪಾಕಿಸ್ಥಾನದ ಉಗ್ರರು ನಡೆಸುತ್ತಿರುವ ಹಿಂಸಾಕೃತ್ಯಗಳು ಹೊರಜಗತ್ತಿಗೆ ಕಾಣುವಂತೆ ಇದ್ದರೂ, ಇಂಥ ಉಗ್ರ ಸಂಘಟನೆಗಳ ವಿರುದ್ಧ ಸಾಕ್ಷ್ಯ ಕೇಳುವಂಥ ಕೆಲಸವನ್ನೂ ಮಾಡುತ್ತಿದೆ. ಹೀಗಾಗಿ ಚೀನದ ಈ ಇಬ್ಬಗೆ ನೀತಿ ಸರಿಯಾದ ಕ್ರಮವೇ ಅಲ್ಲ ಎಂಬುದನ್ನು ಖಂಡತುಂಡವಾಗಿ ಹೇಳಬೇಕಾಗುತ್ತದೆ.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.