ಕರ್ನಾಟಕಕ್ಕೆ ಟೆಸ್ಲಾ: ಇವಿ ವಲಯದ ಕಿರೀಟಕ್ಕೆ ಇನ್ನೊಂದು ಗರಿ


Team Udayavani, Feb 15, 2021, 6:50 AM IST

ಕರ್ನಾಟಕಕ್ಕೆ ಟೆಸ್ಲಾ: ಇವಿ ವಲಯದ ಕಿರೀಟಕ್ಕೆ ಇನ್ನೊಂದು ಗರಿ

ಐಷಾರಾಮಿ ಎಲೆಕ್ಟ್ರಿಕ್‌ ಕಾರುಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿ ರುವ ಟೆಸ್ಲಾ ಕಂಪೆನಿ ಕರ್ನಾಟಕದ ಹೆಬ್ಟಾಗಿಲಿನ ಮೂಲಕ ಭಾರತ ಪ್ರವೇಶಿ ಸುತ್ತಿರುವುದು ಹೆಮ್ಮೆಯ ವಿಚಾರ. ಸ್ವತಃ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರೇ ಈ ವಿಷಯವನ್ನು ಪ್ರಕಟಿಸಿದ್ದಾರೆ. ಈಗಾಗಲೇ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಮಾಡಿರುವ ಕರ್ನಾಟಕಕ್ಕೆ ಈಗ ಆಟೊಮೊಬೈಲ್‌ ಕ್ಷೇತ್ರದಲ್ಲಿ ನೆರೆಯ ರಾಜ್ಯಗಳೊಂದಿಗೆ ಪ್ರಬಲ ಸ್ಪರ್ಧೆ ಒಡ್ಡಲು ಇದೊಂದು ಮಹತ್ವದ ಅವಕಾಶ. ಅದರಲ್ಲೂ ವಿದ್ಯುತ್‌ಚಾಲಿತ ವಾಹನ(ಇವಿ)ಗಳ  ಉತ್ಪಾದನೆ ಕ್ಷೇತ್ರದಲ್ಲಿ  ದಾಪುಗಾಲಿಡಲು ಕರ್ನಾಟಕಕ್ಕೆ ಇದೊಂದು ಸುವರ್ಣಾವಕಾಶ.

ಈಗಾಗಲೇ ಟೆಸ್ಲಾ ಇಂಡಿಯಾ ಎಂಬ ಹೆಸರಿನ ಕಂಪೆನಿಯನ್ನು ರೂಪಿಸುವ ಟೆಸ್ಲಾ ಕಂಪೆನಿ, ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿ ತನ್ನ ಕಚೇರಿ ಆರಂಭಿಸಿದೆ. ಈ ಹಿಂದೆ ಟೆಸ್ಲಾ ಸಂಶೋಧನ ಮತ್ತು ಅಭಿವೃದ್ಧಿ ಕೇಂದ್ರವನ್ನು ಬೆಂಗ ಳೂರಿನಲ್ಲಿ ಆರಂಭಿಸುವುದಾಗಿ ಪ್ರಕಟಿಸಿತ್ತು. ಇದೀಗ ಮುಖ್ಯಮಂತ್ರಿ ಗಳು ತಯಾರಿಕಾ ಘಟಕವನ್ನು ಕರ್ನಾಟಕದಲ್ಲಿ ಆರಂಭಿಸುವುದಾಗಿ ಪ್ರಕಟಿಸು ವುದರಿಂದ ರಾಜ್ಯದ ತಯಾರಿಕಾ ವಲಯಕ್ಕೆ ಹೊಸ ಶಕ್ತಿ ಬಂದಿದೆ. ಟೆಸ್ಲಾದಂಥ ಜಾಗತಿಕ ಕಂಪೆನಿ ಕರ್ನಾಟಕ ಪ್ರವೇಶಿಸುತ್ತಿರುವುದು ಸಹಜ ವಾಗಿಯೇ ಜಗತ್ತಿನ ಕಣ್ಣಲ್ಲಿ ನಮ್ಮ ರಾಜ್ಯದ ಮಹತ್ವವನ್ನು ಬಿಂಬಿಸುವಂಥದ್ದು. ಈ ಬಗ್ಗೆ ಹೆಮ್ಮೆಪಡುವುದರ ಜತೆಗೆ ರಾಜ್ಯ ಸರಕಾರ ಔದ್ಯಮಿಕ ವಲಯಗಳ ನಿರೀಕ್ಷೆಯನ್ನು ಈಡೇರಿಸುವ ನಿಟ್ಟಿನಲ್ಲಿ  ಧಾರಾಳಿತನದ ಹೆಜ್ಜೆ ಇಡಬೇಕಾಗಿದೆ.

ಉದ್ಯಮಸ್ನೇಹಿ ವಾತಾವರಣ ಸೃಷ್ಟಿ ಮಾಡುವುದರ ಜತೆಗೆ ಸ್ಥಳೀಯರಿಗೆ ಉದ್ಯೋಗ ಅವಕಾಶ ಲಭಿಸುವ ಬಗ್ಗೆ ಸರಕಾರ ಗಮನಹರಿಸಬೇಕಾಗಿದೆ. ಈಚೆಗೆ ಬಿಡದಿಯ ಟೊಯೊಟಾ ಘಟಕ ಹಾಗೂ ಕೋಲಾರದ ವಿಸ್ಟ್ರಾ ಘಟಕಗಳಲ್ಲಿ ನಡೆದ ಬೆಳವಣಿಗೆಗಳು ಉದ್ಯಮ ವಲಯದಲ್ಲಿ ರಾಜ್ಯದ ಹೆಸರಿಗೆ ಮಸಿ ಬಳಿದಿವೆ ಎನ್ನುವುದರಲ್ಲಿ ಅನುಮಾನವಿಲ್ಲ. ಉದ್ಯಮ ವಲಯದ ನಿರೀಕ್ಷೆ ಮತ್ತು ಸ್ಥಳೀಯರ ಬೇಡಿಕೆಗಳನ್ನು ಸಮತೋಲನದಿಂದ ತೂಗಿಸಿಕೊಂಡು ಹೋದರೆ ಮಾತ್ರ ಕರ್ನಾಟಕ ಉದ್ಯಮಸ್ನೇಹಿ ಎಂಬ ತನ್ನ ಹೆಗ್ಗಳಿಕೆಯನ್ನು ಉಳಿಸಿಕೊಳ್ಳಬಹುದು ಮತ್ತು ವಿಸ್ತರಿಸಿಕೊಳ್ಳಬಹುದು.

ವಾಹನ ಉದ್ಯಮದಲ್ಲಿ  ದೇಶದಲ್ಲಿ ಕರ್ನಾಟಕ  ನಾಲ್ಕನೇ ಸ್ಥಾನದಲ್ಲಿದ್ದು, ನೆರೆಯ ತಮಿಳುನಾಡು ಮತ್ತು ಆಂಧ್ರಪ್ರದೇಶ-ತೆಲಂಗಾಣ ಸರಕಾರದ ಜತೆ ನಿರಂತರವಾಗಿ ಸ್ಪರ್ಧೆ ಒಡ್ಡುತ್ತಲೇ ಇದೆ. ಅದರಲ್ಲೂ  ವಿದ್ಯುತ್‌ಚಾಲಿತ ವಾಹನ(ಇವಿ)ಗಳ ತಯಾರಿಕಾ ವಲಯದಲ್ಲಿ ಕರ್ನಾಟಕ ಹಿಂದಿನಿಂದಲೂ ತನ್ನ ಪ್ರಾಬಲ್ಯವನ್ನು ಪ್ರದರ್ಶಿಸಿಕೊಂಡೇ ಇದ್ದು, ರೇವಾ ಘಟಕ ರಾಜ್ಯದಲ್ಲಿ ಆರಂಭವಾಗಿತ್ತು ಎನ್ನುವುದು ಇಲ್ಲಿ ಉಲ್ಲೇಖಾರ್ಹ. ಈಗಲಂತೂ ವಿದ್ಯುತ್‌ಚಾಲಿತ ವಾಹನಗಳು ಮತ್ತು ಅವುಗಳ ಬಿಡಿಭಾಗಗಳ ಉತ್ಪಾ³ದನಾ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಮಹೀಂದ್ರಾ ಎಲೆಕ್ಟ್ರಿಕ್‌, ಏಥರ್‌, ಓಲಾ ಎಲೆಕ್ಟ್ರಿಕ್‌ ಮತ್ತು ಬೋಷ್‌ ಕಂಪೆನಿಗಳು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ. ಇದಕ್ಕೆ ಪ್ರಮುಖ ಉತ್ತೇಜನ ಎಂದರೆ ಸರಕಾರದ ಮುಕ್ತ ನಿಲುವು. ಇಡೀ ದೇಶದಲ್ಲಿ  ವಿದ್ಯುತ್‌ಚಾಲಿತ ವಾಹನಗಳ ವಲಯಕ್ಕೆ ಪ್ರತ್ಯೇಕ ನೀತಿ ರೂಪಿಸಿದ ಮೊದಲ ರಾಜ್ಯ ಕರ್ನಾಟಕ. ಇವಿ ವಲಯದಲ್ಲಿ ಕರ್ನಾಟಕವನ್ನು ಕೇಂದ್ರ ಬಿಂದುವಾಗಿಸಬೇಕು ಎಂಬ ಸ್ಪಷ್ಟ ಆಶಯದೊಂದಿಗೆ ರೂಪಿತವಾಗಿರುವ ಈ ನೀತಿಯನ್ನು ಸಮಗ್ರವಾಗಿ ಹಾಗೂ ಪರಿಣಾಮ ಕಾರಿಯಾಗಿ ಜಾರಿಗೆ ತರುವ ಹೊಣೆ ಸರಕಾರದ್ದಾಗಿದೆ. ಹಾಗಿದ್ದಾಗ ಮಾತ್ರ ನಾವು ನೆರೆಯ ರಾಜ್ಯಗಳ ಸ್ಪರ್ಧೆಯನ್ನು ಹಿಂದೂಡಿ,  ಇವಿ ಕ್ಷೇತ್ರದಲ್ಲಿ  ಕರ್ನಾಟಕವೇ ಮುಂದೆ ಎಂಬ ಕಿರೀಟವನ್ನು ನಮ್ಮದಾಗಿಸಿಕೊಳ್ಳಬಹುದು.

ಟಾಪ್ ನ್ಯೂಸ್

Indian Navy rescues 23 Pakistani nationals attacked by pirates

Indian Navy; ಕಡಲ್ಗಳ್ಳರಿಂದ ದಾಳಿಗೊಳಗಾದ 23 ಪಾಕ್ ಪ್ರಜೆಗಳನ್ನು ರಕ್ಷಿಸಿದ ನೌಕಾಪಡೆ

IPL 2024: ಹೀಗೆ ಆದರೆ ಆರ್ ಸಿಬಿ ಐಪಿಎಲ್ ಗೆಲ್ಲಲು ಸಾಧ್ಯವಿಲ್ಲ…: ಮೈಕಲ್ ವಾನ್

IPL 2024: ಹೀಗೆ ಆದರೆ ಆರ್ ಸಿಬಿ ಐಪಿಎಲ್ ಗೆಲ್ಲಲು ಸಾಧ್ಯವಿಲ್ಲ…: ಮೈಕಲ್ ವಾನ್

Actor daniel balaji passes away

Daniel Balaji; ಕಿರಾತಕ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದ ಡ್ಯಾನಿಯಲ್ ಬಾಲಾಜಿ ಇನ್ನಿಲ್ಲ

ಸೋತು ಸೋತು ಸಾಕಾಗಿದೆ, ನನ್ನ ಗೆಲ್ಲಿಸಿ ಮುಖ್ಯಮಂತ್ರಿಯ ಕೊರಗು ನಿವಾರಿಸಿ: ಎಂ.ಲಕ್ಷ್ಮಣ್‌

ಸೋತು ಸೋತು ಸಾಕಾಗಿದೆ, ನನ್ನ ಗೆಲ್ಲಿಸಿ ಮುಖ್ಯಮಂತ್ರಿಯ ಕೊರಗು ನಿವಾರಿಸಿ: ಎಂ.ಲಕ್ಷ್ಮಣ್‌

1-24-saturday

Daily Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ, ದಿನವಿಡೀ ಬಿಡುವಿಲ್ಲದ ಚಟುವಟಿಕೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Lok Sabha Election: ಕಾಂಗ್ರೆಸ್‌ ಸೋಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ: ದೇವೇಗೌಡ

Lok Sabha Election: ಕಾಂಗ್ರೆಸ್‌ ಸೋಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ: ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

2-davangere

Lok Sabha Election: ಮೋದಿ ಕೈ ಬಲಪಡಿಸಲು ಬಿಜೆಪಿಗೆ ಮತ ಹಾಕಿ

Indian Navy rescues 23 Pakistani nationals attacked by pirates

Indian Navy; ಕಡಲ್ಗಳ್ಳರಿಂದ ದಾಳಿಗೊಳಗಾದ 23 ಪಾಕ್ ಪ್ರಜೆಗಳನ್ನು ರಕ್ಷಿಸಿದ ನೌಕಾಪಡೆ

IPL 2024: ಹೀಗೆ ಆದರೆ ಆರ್ ಸಿಬಿ ಐಪಿಎಲ್ ಗೆಲ್ಲಲು ಸಾಧ್ಯವಿಲ್ಲ…: ಮೈಕಲ್ ವಾನ್

IPL 2024: ಹೀಗೆ ಆದರೆ ಆರ್ ಸಿಬಿ ಐಪಿಎಲ್ ಗೆಲ್ಲಲು ಸಾಧ್ಯವಿಲ್ಲ…: ಮೈಕಲ್ ವಾನ್

Actor daniel balaji passes away

Daniel Balaji; ಕಿರಾತಕ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದ ಡ್ಯಾನಿಯಲ್ ಬಾಲಾಜಿ ಇನ್ನಿಲ್ಲ

ಸೋತು ಸೋತು ಸಾಕಾಗಿದೆ, ನನ್ನ ಗೆಲ್ಲಿಸಿ ಮುಖ್ಯಮಂತ್ರಿಯ ಕೊರಗು ನಿವಾರಿಸಿ: ಎಂ.ಲಕ್ಷ್ಮಣ್‌

ಸೋತು ಸೋತು ಸಾಕಾಗಿದೆ, ನನ್ನ ಗೆಲ್ಲಿಸಿ ಮುಖ್ಯಮಂತ್ರಿಯ ಕೊರಗು ನಿವಾರಿಸಿ: ಎಂ.ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.