ಜರ್ಮನಿ, ದ. ಕೊರಿಯಾ ಮಾದರಿಯಾಗಲಿ ; ವ್ಯಾಪಕ ಪರೀಕ್ಷೆ, ಕಟ್ಟು ನಿಟ್ಟಿನ ಕ್ರಮ

ಸಂಪಾದಕೀಯ

Team Udayavani, Apr 8, 2020, 12:58 AM IST

ಜರ್ಮನಿ, ದ. ಕೊರಿಯಾ ಮಾದರಿಯಾಗಲಿ ; ವ್ಯಾಪಕ ಪರೀಕ್ಷೆ, ಕಟ್ಟು ನಿಟ್ಟಿನ ಕ್ರಮ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಪ್ರಪಂಚದಾದ್ಯಂತ 12 ಲಕ್ಷಕ್ಕೂ ಅಧಿಕ ಕೋವಿಡ್ 19 ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈಗಾಗಲೇ 65 ಸಾವಿರಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ. ಅಭಿವೃದ್ಧಿಶೀಲ ರಾಷ್ಟ್ರಗಳು ಇರಲಿ, ಜಾಗತಿಕ ಸೂಪರ್‌ ಪವರ್‌ ಎಂದು ಕರೆಸಿಕೊಳ್ಳುವ ಅಮೆರಿಕದಲ್ಲೇ 3 ಲಕ್ಷಕ್ಕೂ ಅಧಿಕ ಜನ ರಲ್ಲಿ ಸೋಂಕು ಪತ್ತೆಯಾಗಿದ್ದು, 8000ಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಸ್ಥಿತಿ ಮತ್ತಷ್ಟು ಹದಗೆಡಲಿದೆ ಎಂದು ಖುದ್ದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರೇ ಹೇಳುತ್ತಿದ್ದಾರೆ.

ಇಟಲಿ ಮತ್ತು ಸ್ಪೇನ್‌ನಲ್ಲಿ ಸಾವಿನ ಸಂಖ್ಯೆ 10 ಸಾವಿರದ ಗಡಿಯನ್ನು ದಾಟಿಯಾಗಿದೆ. ಯುರೋಪ್‌ನ ಪ್ರಮುಖ ರಾಷ್ಟ್ರ ಜರ್ಮನಿಯ ಪರಿಸ್ಥಿತಿ ಹದಗೆಟ್ಟಿದೆಯಾದರೂ ಅಲ್ಲಿ ಮರಣ ಪ್ರಮಾಣ ಕಡಿಮೆ ಇದೆ. ರವಿವಾರದ ವೇಳೆಗೆ ಆ ದೇಶದಲ್ಲಿ ಸೋಂಕಿತರ ಸಂಖ್ಯೆ 96 ಸಾವಿರವಿದ್ದರೆ, ಮೃತಪಟ್ಟವರ ಸಂಖ್ಯೆ 1,422ರಷ್ಟಿದೆ. ಇದುವರೆಗೆ ಅಲ್ಲಿ 26,400 ಜನರು ಚೇತರಿಸಿಕೊಂಡಿದ್ದಾರೆ.

ಆರೋಗ್ಯ ಸೇವೆಗಳಿಗೆ ಹೆಸರುವಾಸಿಯಾಗಿದ್ದ ಇಟಲಿಯನ್ನಂತೂ ಕೋವಿಡ್ 19 ವೈರಸ್ ಚಿಂತಾಗ್ರಸ್ತ ಸ್ಥಿತಿಗೆ ದೂಡಿದೆ. 1 ಲಕ್ಷ 24 ಸಾವಿರಕ್ಕೂ ಅಧಿಕ ಸೋಂಕಿತರು ಮತ್ತು 15 ಸಾವಿರಕ್ಕೂ ಅಧಿಕ ಮೃತಪಟ್ಟವರಷ್ಟೇ ಅಲ್ಲದೇ, ಚಿಕಿತ್ಸಾ ಸೌಲಭ್ಯ ಸಿಗದೆ ಮನೆಗಳಲ್ಲಿ, ರಸ್ತೆಗಳಲ್ಲಿ ಪ್ರಾಣಬಿಡುತ್ತಿರುವವರ ಸಂಖ್ಯೆ ಅಧಿಕವಿದ್ದು, ಅವೆಲ್ಲ ಲೆಕ್ಕಕ್ಕೆ ಸಿಗುತ್ತಿಲ್ಲ ಎಂದು ವರದಿಯಾಗುತ್ತಿದೆ.

ಈ ಅಂಕಿ ಅಂಶಗಳನ್ನೆಲ್ಲ ಗಮನಿಸಿದರೆ ಕೋವಿಡ್ 19 ವೈರಸ್ ನಿಂದ ತಮ್ಮ ಜನರ ಪ್ರಾಣ ಉಳಿಸುವ ವಿಷಯದಲ್ಲಿ ಜರ್ಮನಿ ಇತರ ರಾಷ್ಟ್ರಗಳಿಗಿಂತಲೂ ಮುಂದಿದೆ. ಇದಕ್ಕೆ ಪ್ರಮುಖ ಕಾರಣವೆಂದರೆ, ಅಲ್ಲಿ ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿರುವ ಲಾಕ್‌ ಡೌನ್‌ ನಿಯಮಗಳು ಮತ್ತು ಮುಖ್ಯವಾಗಿ ವ್ಯಾಪಕ ಪ್ರಮಾಣದಲ್ಲಿ ಪರೀಕ್ಷೆಗಳನ್ನು ಕೈಗೊಳ್ಳಲಾಗುತ್ತಿರುವುದು.

ಇನ್ನು ದಕ್ಷಿಣ ಕೊರಿಯಾವಂತೂ ನಿಬ್ಬೆರಗಾಗಿಸುವ ರೀತಿಯಲ್ಲಿ ಪರೀಕ್ಷೆಗಳನ್ನು ನಡೆಸುತ್ತಿದ್ದು, ಎಪ್ರಿಲ್‌ 1ರ ವೇಳೆಗೆ ಆ ರಾಷ್ಟ್ರ 4,12,000 ಜನರ ಪರೀಕ್ಷೆ ನಡೆಸಿದೆ! ಜರ್ಮನಿಯಲ್ಲಿ ಪ್ರತಿ ದಿನ 50 ಸಾವಿರ ಜನರ ಪರೀಕ್ಷೆ ಮಾಡಲಾಗುತ್ತಿರುವುದು ಶ್ಲಾಘನೀಯ ವಿಚಾರವೇ ಹೌದು. ಇದಕ್ಕೆ ಹೋಲಿಸಿದರೆ ಭಾರತದಲ್ಲಿ ಎಪ್ರಿಲ್‌ 1ರ ವೇಳೆಗೆ 53,605 ಜನರನ್ನು ಪರೀಕ್ಷೆ ಮಾಡಲಾಗಿದೆ.

ಇನ್ನೊಂದೆಡೆ ಭಾರತವೂ ತನ್ನದೇ ಆದ ರೀತಿಯಲ್ಲಿ ಈ ವೈರಸ್‌ ವಿರುದ್ಧ ಸಮರ ಸಾರಿದೆ. ವಿಶ್ವ ಆರೋಗ್ಯ ಸಂಸ್ಥೆಯು ಕೋವಿಡ್ 19 ವೈರಸ್ ವಿರುದ್ಧದ ಭಾರತದ ಪ್ರಯತ್ನಗಳನ್ನು ಶ್ಲಾಘಿಸಿದೆ. ಕೋವಿಡ್‌-19 ವಿಷಯದಲ್ಲಿ ಭಾರತ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ಮಾತನಾಡುತ್ತಾ ಡಬ್ಲ್ಯುಎಚ್‌ಒನ ವಿಶೇಷ ಪ್ರತಿ ನಿಧಿ ಡಾ| ಡೇವಿಡ್‌ ನವಾರೋ, ಭಾರತವು ಸರಿಯಾದ ಸಮಯದಲ್ಲಿ ಲಾಕ್‌ ಡೌನ್‌ ಜಾರಿಗೆ ತಂದಿದೆ ಎಂದು ಹೇಳಿದ್ದಾರೆ. ಅಲ್ಲದೇ, ಒಂದೆಡೆ ಅಮೆರಿಕ ಮತ್ತು ಬಹುತೇಕ ಐರೋಪ್ಯ ರಾಷ್ಟ್ರಗಳ ಸರ್ಕಾರಗಳು ಲಾಕ್‌ ಡೌನ್‌ ವಿಚಾರದಲ್ಲಿ ಬಹಳ ತಡ ಮಾಡಿದವು, ಆದರೆ ಭಾರತ ಬೇಗನೆ ನಿರ್ಧಾರಕ್ಕೆ ಬಂದಿದೆ ಎಂದು ಹೇಳಿದ್ದಾರೆ.

ಹಾಗೆಂದು ಆಗಬೇಕಾದ ಕೆಲಸ ಇಷ್ಟೇ ಇಲ್ಲ. ನಮ್ಮ ವೈದ್ಯರು, ನರ್ಸ್‌ಗಳು ಮತ್ತು ಉಳಿದ ಮೆಡಿಕಲ್‌ ಸಿಬಂದಿಯ ಬಳಿ ಸಾಕಷ್ಟು ಸುರಕ್ಷತಾ ಉಪಕರಣಗಳು ಇಲ್ಲ. ಕೋವಿಡ್ 19 ವೈರಸ್ ಸೋಂಕಿತರನ್ನು ಪತ್ತೆ ಹಚ್ಚಲು ಪ್ರಯತ್ನಿಸುತ್ತಿರುವ ವೈದ್ಯರು, ಪೊಲೀಸರು, ಆರೋಗ್ಯ ಸಿಬಂದಿ ಮತ್ತು ಆಶಾಕಾರ್ಯಕರ್ತೆಯರಂಥ ಪರಿಶ್ರಮಿಗಳಿಗೂ ಸುರಕ್ಷತಾ ಸಾಮಗ್ರಿಗಳು ಅಗತ್ಯ ಪ್ರಮಾಣದಲ್ಲಿ ಸಿಗುತ್ತಿಲ್ಲ,.

ಇವೆಲ್ಲದರ ನಡುವೆಯೇ ನಿಜಾಮುದ್ದೀನ್‌ನಂಥ ಘಟನೆಗಳು ನಡೆದು, ಇಡೀ ಯಂತ್ರದ ಪ್ರಯತ್ನದ ಮೇಲೆ ಮತ್ತಷ್ಟು ಒತ್ತಡ ಬೀಳಲಾರಂಭಿಸಿದೆ. ಆದಾಗ್ಯೂ ಭಾರತವು ಲಾಕ್‌ ಡೌನ್‌ನಿಂದಾಗಿ ರೋಗ ಹರಡುವಿಕೆಯ ವೇಗವನ್ನು ತಗ್ಗಿಸಿರುವುದಂತೂ ಸುಳ್ಳಲ್ಲ. ಇನ್ನು ಟೆಸ್ಟಿಂಗ್‌ ವಿಚಾರದಲ್ಲಿ ನಾವು ದಕ್ಷಿಣ ಕೊರಿಯಾ, ಜರ್ಮನಿಯಂಥ ರಾಷ್ಟ್ರಗಳನ್ನು ಸರಿಗಟ್ಟುವುದು ಅಸಾಧ್ಯವೇನೋ ಅನ್ನಿಸಿದರೂ, ಮುಂದಿನ ದಿನಗಳಲ್ಲಾದರೂ ಆ ಹಾದಿಯಲ್ಲಿ ನಾವು ಬಹಳಷ್ಟು ಪ್ರಯತ್ನ ಮಾಡಲೇಬೇಕಿದೆ.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.