ಪಠ್ಯಪುಸ್ತಕ ಪರಿಷ್ಕರಣೆ ಗೊಂದಲ ಶೀಘ್ರ ಬಗೆಹರಿಯಲಿ


Team Udayavani, Jun 22, 2022, 6:00 AM IST

ಪಠ್ಯಪುಸ್ತಕ ಪರಿಷ್ಕರಣೆ ಗೊಂದಲ ಶೀಘ್ರ ಬಗೆಹರಿಯಲಿ

ರಾಜ್ಯದಲ್ಲಿ ಕಳೆದೊಂದು ತಿಂಗಳಿನಿಂದೀಚೆಗೆ ತೀವ್ರ ಚರ್ಚೆ ಮತ್ತು ವಿವಾದಕ್ಕೆ ಕಾರಣವಾಗಿರುವ ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಶೀಘ್ರವೇ ಬಗೆಹರಿಯಬೇಕಿದೆ. ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ನಾಯಕರು ನೀಡುತ್ತಿರುವ ಹೇಳಿಕೆ, ಪ್ರತಿಹೇಳಿಕೆಗಳು, ಪ್ರತಿಭಟನೆಯ ಹೆಸರಲ್ಲಿ ಪಕ್ಷಗಳು ಮತ್ತು ಸಂಘಟನೆಗಳ ನಾಯಕರು ಹಾಗೂ ಕಾರ್ಯಕರ್ತರು ತೋರುತ್ತಿರುವ ವರ್ತನೆಗಳು ಇಡೀ ರಾಜ್ಯದ ಮಾನವನ್ನು ಹರಾಜು ಹಾಕುತ್ತಿವೆ.

ಶಾಲಾ ಮಕ್ಕಳ ಪಠ್ಯ ಪುಸ್ತಕಗಳ ಪರಿಷ್ಕರಣೆ ಹೊಸದೇನಲ್ಲ. ಕಾಲಕಾಲಕ್ಕೆ ಪಠ್ಯಗಳ ಪರಿಷ್ಕರಣೆ, ಬದಲಾವಣೆ ಕಾರ್ಯ ನಡೆಯುತ್ತಲೇ ಬಂದಿವೆ. ಪ್ರತಿಯೊಂದೂ ಬಾರಿಯೂ ಪಠ್ಯ ಪರಿಷ್ಕರಣೆಯ ಸಂದರ್ಭದಲ್ಲಿ ಸಮಿತಿಯಿಂದ ಒಂದಿಷ್ಟು ತಪ್ಪುಗಳಾಗಿರುವುದು ಸಹಜ. ಅವನ್ನು ಸರಿಪಡಿಸಿಕೊಂಡು ಮಕ್ಕಳ ಕಲಿಕೆಗೆ ಅಡ್ಡಿಯಾಗದಂತೆ ಆಯಾಯ ಸರಕಾರಗಳು ಕ್ರಮಕೈಗೊಂಡಿದ್ದವು. ಈ ಬಾರಿ ಪರಿಷ್ಕೃತ ಪಠ್ಯಗಳಲ್ಲಿನ ಲೋಪಗಳು ಭಾರೀ ವಿವಾದಕ್ಕೆ ಕಾರಣವಾಗಿವೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿಗಳೇ ಹೇಳಿಕೆ ನೀಡಿ ಪರಿಷ್ಕೃತ ಪಠ್ಯದಲ್ಲಿನ ಲೋಪದೋಷಗಳನ್ನು ಸರಿಪಡಿಸುವ ಭರವಸೆ ನೀಡಿ ವಾರಗಳೇ ಕಳೆದಿವೆ. ಆದರೆ ಈ ನಿಟ್ಟಿನಲ್ಲಿ ಈವರೆಗೆ ಯಾವುದೇ ಪ್ರಯತ್ನ ನಡೆದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮತ್ತು ಕಾರ್ಯಾಂಗ ಸಂಪೂರ್ಣವಾಗಿ ಅತ್ತ ಗಮನ ಹರಿಸಿದ್ದರಿಂದಾಗಿ ಪಠ್ಯಪುಸ್ತಕದಲ್ಲಿನ ಲೋಪದೋಷಗಳನ್ನು ಸರಿಪಡಿಸುವ ಕಾರ್ಯ ವಿಳಂಬವಾಗಿರಬಹುದು. ಆದರೆ ಇದೀಗ ಪ್ರಧಾನಿ ಅವರ ರಾಜ್ಯ ಭೇಟಿ ಮುಕ್ತಾಯಗೊಂಡಿದ್ದು ಇನ್ನಾದರೂ ಸರಕಾರ ಪಠ್ಯಪುಸ್ತಕ ಗೊಂದಲಕ್ಕೆ ಪರಿಹಾರ ಕಂಡುಕೊಳ್ಳುವುದಕ್ಕೆ ಮೊದಲ ಆದ್ಯತೆ ನೀಡಿ ಶಾಲೆಗಳಲ್ಲಿ ಸುಗಮವಾಗಿ ಪಾಠಪ್ರವಚನಗಳು ನಡೆಯುವಂತಾಗಲು ಅವಕಾಶ ಮಾಡಿಕೊಡಬೇಕಿದೆ. ಇದೇ ವೇಳೆ ಬುಧವಾರದಂದು ಶಿಕ್ಷಣ ಇಲಾಖೆಯ ಸಚಿವರು ಮತ್ತು ಉನ್ನತ ಅಧಿಕಾರಿಗಳ ಸಭೆ ನಡೆಸಿ ಪಠ್ಯಪುಸ್ತಕದಲ್ಲಿನ ಲೋಪಗಳನ್ನು ಸರಿಪಡಿಸಲು ಅಗತ್ಯವಿರುವ ಕ್ರಮ ಕೈಗೊಳ್ಳುವುದಾಗಿಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹೀಗಾಗಿ ಸದ್ಯ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಪಠ್ಯಪುಸ್ತಕ ಪರಿಷ್ಕರಣೆ ಗೊಂದಲ ಶೀಘ್ರದಲ್ಲಿಯೇ ಬಗೆಹರಿದೀತು ಎಂಬ ಆಶಾಭಾವನೆ ಮೂಡಿದೆ.

ಮಕ್ಕಳ ಶಿಕ್ಷಣದಲ್ಲೂ ರಾಜಕೀಯ ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆಸಿರುವುದು ಸರಿಯಲ್ಲ. ಅಲ್ಲದೆ ವಿವಾದವನ್ನು ಇಷ್ಟೊಂದು ಸುದೀರ್ಘ‌ ಕಾಲ ಜೀವಂತವಾಗಿರಿಸಿದುದು ಒಳ್ಳೆಯ ಬೆಳವಣಿಗೆಯಲ್ಲ. ಪಠ್ಯಪುಸ್ತಕ ಪರಿಷ್ಕರಣೆಯ ಸಂದರ್ಭದಲ್ಲಿ ಒಂದಿಷ್ಟು ಲೋಪಗಳಾಗಿರಬಹುದು. ಅದನ್ನೊಂದು ಬಲುದೊಡ್ಡ ವಿವಾದವನ್ನಾಗಿಸಿ ವಿನಾಕಾರಣ ಹಾದಿಬೀದಿ ರಂಪಾಟ ಮಾಡಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನಕ್ಕೆ ರಾಜಕೀಯ ಪಕ್ಷಗಳು ಮುಂದಾದುದು ತೀರಾ ಬೇಸರದ ಸಂಗತಿ. ಅಷ್ಟು ಮಾತ್ರವಲ್ಲದೆ ಈ ವಿಚಾರವನ್ನು ಇತ್ತಂಡಗಳೂ ಪ್ರತಿಷ್ಠೆಯ ಪ್ರಶ್ನೆಯಾಗಿಸಿಕೊಂಡಿದ್ದು, ಜಾತಿ-ಸಮುದಾಯಗಳ ನಡುವೆ ಬಿರುಕು ಸೃಷ್ಟಿಸುವ ಪ್ರಯತ್ನ ನಡೆಸಿದ್ದು, ವಾಸ್ತವಾಂಶವನ್ನೂ ಅರಿತುಕೊಳ್ಳುವ ಪ್ರಯತ್ನ ನಡೆಸದೆ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡಿದ್ದು, ಈ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಏನೇನೋ ಗೀಚಿ ವಿವಾದಕ್ಕೆ ತುಪ್ಪ ಸುರಿದುದು ಈ ಎಲ್ಲ ನಡವಳಿಕೆಗಳು ಸಮಾಜದಲ್ಲಿ ನಾಯಕರೆಂದು ಗುರುತಿಸಿಕೊಂಡವರಿಗೆ ಒಂದಿಷ್ಟೂ ಶೋಭೆ ತರಿಸದು.

ಬುಧವಾರ ನಡೆಯಲಿರುವ ಸಭೆಯಲ್ಲಿ ಮುಖ್ಯಮಂತ್ರಿ ಅವರು ಪಠ್ಯ ಪುಸ್ತಕ ಪರಿಷ್ಕರಣೆಯ ವೇಳೆ ಆಗಿದೆ ಎನ್ನಲಾಗಿರುವ ಲೋಪದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಬೇಕಿದೆ. ವ್ಯಕ್ತಿಗತ, ಸೈದ್ಧಾಂತಿಕ, ರಾಜಕೀಯ ಪ್ರತಿಷ್ಠೆಗಳೆಲ್ಲವನ್ನೂ ಬದಿಗಿರಿಸಿ ವಿವಾದಕ್ಕೆ ಇತಿಶ್ರೀ ಹಾಡಬೇಕಿದೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

Climate Change: ಹವಾಮಾನ ವೈಪರೀತ್ಯ… ಆರೋಗ್ಯದ ಮೇಲಿರಲಿ ಕಾಳಜಿ

Climate Change: ಹವಾಮಾನ ವೈಪರೀತ್ಯ… ಆರೋಗ್ಯದ ಮೇಲಿರಲಿ ಕಾಳಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.