ಆರ್ಟಿಕಲ್‌ 370 ರದ್ದತಿಗೆ ವರ್ಷ ಐತಿಹಾಸಿಕ ದಿನ


Team Udayavani, Aug 5, 2020, 9:10 AM IST

ಆರ್ಟಿಕಲ್‌ 370 ರದ್ದತಿಗೆ ವರ್ಷ ಐತಿಹಾಸಿಕ ದಿನ

ಆರ್ಟಿಕಲ್‌ 370 ಜತೆ 35ಎ ಕೂಡ ಕಳಚಿ ಜಮ್ಮು- ಕಾಶ್ಮೀರದ ಚಹರೆ ಬದಲಾಗಿಬಿಟ್ಟಿದೆ. ಪ್ರತ್ಯೇಕತಾವಾದಿಗಳಿಗೆ, ಭ್ರಷ್ಟ ರಾಜಕಾರಣಿಗಳಿಗೆ ಪೂರಕವಾಗಿದ್ದ ಇವುಗಳ ಅಂತ್ಯ ದೇಶಕ್ಕೆ ಬಲ ತುಂಬಿದೆ.

ಆರ್ಟಿಕಲ್‌ 370. ಜಮ್ಮು-ಕಾಶ್ಮೀರವನ್ನು ಭಾರತ ವಿರೋಧಿ ಕಾರ್ಯಗಳಿಗೆ ಬಳಸಿಕೊಳ್ಳುತ್ತಿದ್ದವರಿಗೆ ದಶಕಗಳಿಂದ ವರ ದಾನವಾಗಿದ್ದ ಆರ್ಟಿಕಲ್‌ 370 ರದ್ದಾಗಿ ಇಂದಿಗೆ ಒಂದು ವರ್ಷ. ಅನುಚ್ಛೇದ 370ರ ರದ್ದತಿಯ ಜತೆಯಲ್ಲೇ ಆರ್ಟಿಕಲ್‌ 35ಎ ಕೂಡ ಕಳಚಿಬಿದ್ದು ಜಮ್ಮು-ಕಾಶ್ಮೀರದ ಚಹರೆಯೇ ಬದಲಾಗಿಬಿಟ್ಟಿದೆ.

ದಶಕಗಳಿಂದ ಕಣಿವೆ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನದ ಫ‌ಲಗಳನ್ನು ಕೊಟ್ಟು, ಪ್ರತ್ಯೇಕತಾ ವಾದಿಗಳಿಗೂ ಪೂರಕವಾಗಿದ್ದ ಈ ವಿಧಿಗಳ ಅಂತ್ಯವು ದೇಶದ ಇತಿಹಾಸದಲ್ಲಿ ನವ ಭಾಷ್ಯ ಬರೆಯಿತು. 2019ರ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಮೋದಿ ನೇತೃತ್ವದ ಬಿಜೆಪಿಯ ಪ್ರಮುಖ ಭರವಸೆಗಳಲ್ಲಿ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ಪ್ರತ್ಯೇಕ ಸ್ಥಾನಮಾನವನ್ನು ತೆಗೆದುಹಾಕುವ ಅಂಶವಿತ್ತು. ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಈ ಐತಿಹಾಸಿಕ ಕ್ರಮಕ್ಕೆ ಮುಂದಾಯಿತು ಕೇಂದ್ರ ಸರಕಾರ. ಈ ತೀರ್ಮಾನದ ಜತೆಗೇ ಕಣಿವೆ ರಾಜ್ಯದ ಭೂಗೋಳ ಹಾಗೂ ರಾಜಕೀಯದಲ್ಲಿ ಮಹತ್ತರ ಬದಲಾವಣೆಗೂ ಕೇಂದ್ರ ಮುನ್ನುಡಿ ಬರೆಯಿತು.

ಆ ರಾಜ್ಯವನ್ನು ವಿಭಜಿಸಿ ಲಡಾಖ್‌ ಮತ್ತು ಜಮ್ಮು-ಕಾಶ್ಮೀರ ವೆಂಬ ಎರಡು ನವ ಕೇಂದ್ರಾಡಳಿತ ಪ್ರದೇಶಗಳನ್ನು ಸ್ಥಾಪಿಸಿ ಬಿಟ್ಟಿತು. ಜಮ್ಮು-ಕಾಶ್ಮೀರದ ಪ್ರತ್ಯೇಕತಾವಾದಿಗಳು ಹಾಗೂ ಕುಟುಂಬ ರಾಜಕಾರಣಕ್ಕೂ ಕೇಂದ್ರದ ಈ ನಡೆ ದೊಡ್ಡ ಪೆಟ್ಟು ನೀಡಿತು. ಕಣಿವೆ ರಾಜ್ಯವು ಕೇಂದ್ರಾಡಳಿತ ಪ್ರದೇಶಗಳಾಗಿ ಬದಲಾದ ಅನಂತರದಿಂದ, ಆ ಭಾಗದಲ್ಲಿ ನಿರಂತರವಾಗಿ ಘಟಿಸುತ್ತಿದ್ದ ಕಲ್ಲು ತೂರಾಟದ ಘಟನೆಗಳು ನಿಂತಿವೆ, ಉಗ್ರ ದಮನ ಕಾರ್ಯಾಚರಣೆಗಳು ಅತ್ಯಂತ ಯಶಸ್ವಿಯಾಗಿ ನಡೆಯಲಾರಂಭಿಸಿವೆ, ಬಹುಮುಖ್ಯವಾಗಿ ಕಾಶ್ಮೀರದ ಮೂಲಭೂತವಾದಿಗಳ ಕ್ರೌರ್ಯ, ರಕ್ತಪಾತ, ಅತ್ಯಾಚಾರಗಳಿಗೆ ಬಲಿಯಾಗಿ, ರಾತೋರಾತ್ರಿ ತಮ್ಮ ಮನೆಗಳನ್ನು ತೊರೆದು ದಶಕಗಳಿಂದ ಸಂತ್ರಸ್ತರಾಗಿದ್ದ ಕಾಶ್ಮೀರಿ ಹಿಂದೂಗಳಿಗೆ ಮತ್ತೆ ಕಣಿವೆ ಭಾಗದಲ್ಲಿ ನೆಲೆ ಒದಗಿಸುವ ಪ್ರಯತ್ನಗಳಿಗೆ ವೇಗ ದೊರೆತಿದೆ.

ಎಲ್ಲಕ್ಕಿಂತ ಮುಖ್ಯವಾಗಿ ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನ ಯುವ ಜನಾಂಗಕ್ಕೆ ಉದ್ಯೋಗ, ಶಿಕ್ಷಣ ನೀಡುವ ಕೈಂಕರ್ಯವನ್ನು ನ ಭೂತೋ ನ ಭವಿಷ್ಯತಿ ಎನ್ನುವಂತೆ ವೃದ್ಧಿಸಲಾಗಿದ್ದು, ಈ ಕಾರ್ಯಗಳೆಲ್ಲ ಜಮ್ಮು-ಕಾಶ್ಮೀರ ಹಾಗೂ ಲಡಾಖ್‌ನ ಚಹರೆಯನ್ನು ಸಂಪೂರ್ಣವಾಗಿ ಬದಲಿಸುವ ಹಾದಿಯಲ್ಲಿವೆ. ನಿಸ್ಸಂಶಯವಾಗಿಯೂ ಸ್ವತಂತ್ರ ಭಾರತದ ಇತಿಹಾಸದಲ್ಲಿ ಆಗಸ್ಟ್‌ 5 ಐತಿಹಾಸಿಕ ದಿನವಾಗಿ ನೆನಪಿನಲ್ಲಿ ಉಳಿಯಲಿದೆ.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.