ಆರ್ಟಿಕಲ್‌ 370 ರದ್ದತಿಗೆ ವರ್ಷ ಐತಿಹಾಸಿಕ ದಿನ


Team Udayavani, Aug 5, 2020, 9:10 AM IST

ಆರ್ಟಿಕಲ್‌ 370 ರದ್ದತಿಗೆ ವರ್ಷ ಐತಿಹಾಸಿಕ ದಿನ

ಆರ್ಟಿಕಲ್‌ 370 ಜತೆ 35ಎ ಕೂಡ ಕಳಚಿ ಜಮ್ಮು- ಕಾಶ್ಮೀರದ ಚಹರೆ ಬದಲಾಗಿಬಿಟ್ಟಿದೆ. ಪ್ರತ್ಯೇಕತಾವಾದಿಗಳಿಗೆ, ಭ್ರಷ್ಟ ರಾಜಕಾರಣಿಗಳಿಗೆ ಪೂರಕವಾಗಿದ್ದ ಇವುಗಳ ಅಂತ್ಯ ದೇಶಕ್ಕೆ ಬಲ ತುಂಬಿದೆ.

ಆರ್ಟಿಕಲ್‌ 370. ಜಮ್ಮು-ಕಾಶ್ಮೀರವನ್ನು ಭಾರತ ವಿರೋಧಿ ಕಾರ್ಯಗಳಿಗೆ ಬಳಸಿಕೊಳ್ಳುತ್ತಿದ್ದವರಿಗೆ ದಶಕಗಳಿಂದ ವರ ದಾನವಾಗಿದ್ದ ಆರ್ಟಿಕಲ್‌ 370 ರದ್ದಾಗಿ ಇಂದಿಗೆ ಒಂದು ವರ್ಷ. ಅನುಚ್ಛೇದ 370ರ ರದ್ದತಿಯ ಜತೆಯಲ್ಲೇ ಆರ್ಟಿಕಲ್‌ 35ಎ ಕೂಡ ಕಳಚಿಬಿದ್ದು ಜಮ್ಮು-ಕಾಶ್ಮೀರದ ಚಹರೆಯೇ ಬದಲಾಗಿಬಿಟ್ಟಿದೆ.

ದಶಕಗಳಿಂದ ಕಣಿವೆ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನದ ಫ‌ಲಗಳನ್ನು ಕೊಟ್ಟು, ಪ್ರತ್ಯೇಕತಾ ವಾದಿಗಳಿಗೂ ಪೂರಕವಾಗಿದ್ದ ಈ ವಿಧಿಗಳ ಅಂತ್ಯವು ದೇಶದ ಇತಿಹಾಸದಲ್ಲಿ ನವ ಭಾಷ್ಯ ಬರೆಯಿತು. 2019ರ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಮೋದಿ ನೇತೃತ್ವದ ಬಿಜೆಪಿಯ ಪ್ರಮುಖ ಭರವಸೆಗಳಲ್ಲಿ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ಪ್ರತ್ಯೇಕ ಸ್ಥಾನಮಾನವನ್ನು ತೆಗೆದುಹಾಕುವ ಅಂಶವಿತ್ತು. ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಈ ಐತಿಹಾಸಿಕ ಕ್ರಮಕ್ಕೆ ಮುಂದಾಯಿತು ಕೇಂದ್ರ ಸರಕಾರ. ಈ ತೀರ್ಮಾನದ ಜತೆಗೇ ಕಣಿವೆ ರಾಜ್ಯದ ಭೂಗೋಳ ಹಾಗೂ ರಾಜಕೀಯದಲ್ಲಿ ಮಹತ್ತರ ಬದಲಾವಣೆಗೂ ಕೇಂದ್ರ ಮುನ್ನುಡಿ ಬರೆಯಿತು.

ಆ ರಾಜ್ಯವನ್ನು ವಿಭಜಿಸಿ ಲಡಾಖ್‌ ಮತ್ತು ಜಮ್ಮು-ಕಾಶ್ಮೀರ ವೆಂಬ ಎರಡು ನವ ಕೇಂದ್ರಾಡಳಿತ ಪ್ರದೇಶಗಳನ್ನು ಸ್ಥಾಪಿಸಿ ಬಿಟ್ಟಿತು. ಜಮ್ಮು-ಕಾಶ್ಮೀರದ ಪ್ರತ್ಯೇಕತಾವಾದಿಗಳು ಹಾಗೂ ಕುಟುಂಬ ರಾಜಕಾರಣಕ್ಕೂ ಕೇಂದ್ರದ ಈ ನಡೆ ದೊಡ್ಡ ಪೆಟ್ಟು ನೀಡಿತು. ಕಣಿವೆ ರಾಜ್ಯವು ಕೇಂದ್ರಾಡಳಿತ ಪ್ರದೇಶಗಳಾಗಿ ಬದಲಾದ ಅನಂತರದಿಂದ, ಆ ಭಾಗದಲ್ಲಿ ನಿರಂತರವಾಗಿ ಘಟಿಸುತ್ತಿದ್ದ ಕಲ್ಲು ತೂರಾಟದ ಘಟನೆಗಳು ನಿಂತಿವೆ, ಉಗ್ರ ದಮನ ಕಾರ್ಯಾಚರಣೆಗಳು ಅತ್ಯಂತ ಯಶಸ್ವಿಯಾಗಿ ನಡೆಯಲಾರಂಭಿಸಿವೆ, ಬಹುಮುಖ್ಯವಾಗಿ ಕಾಶ್ಮೀರದ ಮೂಲಭೂತವಾದಿಗಳ ಕ್ರೌರ್ಯ, ರಕ್ತಪಾತ, ಅತ್ಯಾಚಾರಗಳಿಗೆ ಬಲಿಯಾಗಿ, ರಾತೋರಾತ್ರಿ ತಮ್ಮ ಮನೆಗಳನ್ನು ತೊರೆದು ದಶಕಗಳಿಂದ ಸಂತ್ರಸ್ತರಾಗಿದ್ದ ಕಾಶ್ಮೀರಿ ಹಿಂದೂಗಳಿಗೆ ಮತ್ತೆ ಕಣಿವೆ ಭಾಗದಲ್ಲಿ ನೆಲೆ ಒದಗಿಸುವ ಪ್ರಯತ್ನಗಳಿಗೆ ವೇಗ ದೊರೆತಿದೆ.

ಎಲ್ಲಕ್ಕಿಂತ ಮುಖ್ಯವಾಗಿ ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನ ಯುವ ಜನಾಂಗಕ್ಕೆ ಉದ್ಯೋಗ, ಶಿಕ್ಷಣ ನೀಡುವ ಕೈಂಕರ್ಯವನ್ನು ನ ಭೂತೋ ನ ಭವಿಷ್ಯತಿ ಎನ್ನುವಂತೆ ವೃದ್ಧಿಸಲಾಗಿದ್ದು, ಈ ಕಾರ್ಯಗಳೆಲ್ಲ ಜಮ್ಮು-ಕಾಶ್ಮೀರ ಹಾಗೂ ಲಡಾಖ್‌ನ ಚಹರೆಯನ್ನು ಸಂಪೂರ್ಣವಾಗಿ ಬದಲಿಸುವ ಹಾದಿಯಲ್ಲಿವೆ. ನಿಸ್ಸಂಶಯವಾಗಿಯೂ ಸ್ವತಂತ್ರ ಭಾರತದ ಇತಿಹಾಸದಲ್ಲಿ ಆಗಸ್ಟ್‌ 5 ಐತಿಹಾಸಿಕ ದಿನವಾಗಿ ನೆನಪಿನಲ್ಲಿ ಉಳಿಯಲಿದೆ.

ಟಾಪ್ ನ್ಯೂಸ್

ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿಎಂ ಸಿದ್ದರಾಮಯ್ಯ

Karnataka; ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿದ್ದರಾಮಯ್ಯ

m b patil

Vijayapura; ಭ್ರೂಣ ಹತ್ಯೆ ಅಕ್ಷಮ್ಯ ಅಪರಾಧ: ಸಚಿವ ಎಂ.ಬಿ.ಪಾಟೀಲ

Surat ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ನಾಪತ್ತೆಯಾಗಿದ್ದ 7 ಕಾರ್ಮಿಕರ ಶವ ಪತ್ತೆ

Surat: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ: ಸುಟ್ಟು ಕರಕಲಾದ 7 ಕಾರ್ಮಿಕರ ಶವ ಪತ್ತೆ

Raichuru; ಕೋಮು ಸಂಘರ್ಷಕ್ಕೆ ಎಡೆ ಮಾಡಿದ ಮಸೀದಿ ಕಮಾನು

Raichuru; ಕೋಮು ಸಂಘರ್ಷಕ್ಕೆ ಎಡೆ ಮಾಡಿದ ಮಸೀದಿ ಕಮಾನು

hdk

ಡಿಕೆಶಿಗೆ ಹೈಕೋರ್ಟ್ ರಿಲೀಫ್ ಕೊಟ್ಟಿಲ್ಲ, ಇವರೇ ತೆಗೆದುಕೊಂಡಿದ್ದಾರೆ: ಕುಮಾರಸ್ವಾಮಿ

ಮದುವೆ ಮುನ್ನ ವರನಿಗೆ ಡೆಂಗ್ಯೂ: ಆಸ್ಪತ್ರೆಯನ್ನೇ ಮಂಟಪವಾಗಿಸಿ ವಿವಾಹ ಮಾಡಿಸಿದ ಕುಟುಂಬಸ್ಥರು

ಮದುವೆ ಮುನ್ನ ವರನಿಗೆ ಡೆಂಗ್ಯೂ: ಆಸ್ಪತ್ರೆಯನ್ನೇ ಮಂಟಪವಾಗಿಸಿ ವಿವಾಹ ಮಾಡಿಸಿದ ಕುಟುಂಬಸ್ಥರು

New Krishna Bhavan:ಗುಡ್‌ ಬೈ ಹೇಳಿದೆ.. ಮಲ್ಲೇಶ್ವರಂನ 70 ವರ್ಷ ಹಳೆಯ ನ್ಯೂ ಕೃಷ್ಣ ಭವನ್‌

New Krishna Bhavan:ಗುಡ್‌ ಬೈ ಹೇಳಿದೆ.. ಮಲ್ಲೇಶ್ವರಂನ 70 ವರ್ಷ ಹಳೆಯ ನ್ಯೂ ಕೃಷ್ಣ ಭವನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cyber fraud

Cyber: ಸೈಬರ್‌ ಕಳ್ಳರ ನಿಯಂತ್ರಣಕ್ಕೆ ಕಠಿನ ಕಾನೂನು ಬೇಕು

OTT

OTT ವೇದಿಕೆಗಳಿಂದ ತಾರತಮ್ಯ ಎಚ್ಚೆತ್ತುಕೊಳ್ಳಬೇಕಿದೆ ಚಿತ್ರರಂಗ

kannada-and-samskrati

Language, culture; ಕನ್ನಡದ ಕಡತಗಳು ಕರುನಾಡಿಗೆ ಮರಳಲಿ

baby

Shocking…; ನಾಗರಿಕ ಸಮಾಜಕ್ಕೆ ಭ್ರೂಣಹತ್ಯೆ ಶೋಭೆಯಲ್ಲ

1-cssadss

IFFI Film festival: ವಿಗ್ರಹ ಕಳೆಗುಂದದಿರಲಿ

MUST WATCH

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

udayavani youtube

ಗುರುಕಿರಣ್ ರಿಗೆ ಬೆಂಗಳೂರು ಕಂಬಳದ ಮೇಲಿನ ಆಸಕ್ತಿಯ ಹಿಂದಿದೆ ಅದೊಂದು ಕಾರಣ

ಹೊಸ ಸೇರ್ಪಡೆ

ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿಎಂ ಸಿದ್ದರಾಮಯ್ಯ

Karnataka; ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿದ್ದರಾಮಯ್ಯ

Medical College : ವೈದ್ಯಕೀಯ ಕಾಲೇಜು ವೆಚ್ಚದ ತನಿಖೆ ಏನಾಯಿತು?

Medical College : ವೈದ್ಯಕೀಯ ಕಾಲೇಜು ವೆಚ್ಚದ ತನಿಖೆ ಏನಾಯಿತು?

m b patil

Vijayapura; ಭ್ರೂಣ ಹತ್ಯೆ ಅಕ್ಷಮ್ಯ ಅಪರಾಧ: ಸಚಿವ ಎಂ.ಬಿ.ಪಾಟೀಲ

State government: ಮೊಟ್ಟೆಗೆ ಸರ್ಕಾರ ನೀಡುವ ಹಣ ಸಾಲುತ್ತಿಲ್ಲ

State government: ಮೊಟ್ಟೆಗೆ ಸರ್ಕಾರ ನೀಡುವ ಹಣ ಸಾಲುತ್ತಿಲ್ಲ

Surat ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ನಾಪತ್ತೆಯಾಗಿದ್ದ 7 ಕಾರ್ಮಿಕರ ಶವ ಪತ್ತೆ

Surat: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ: ಸುಟ್ಟು ಕರಕಲಾದ 7 ಕಾರ್ಮಿಕರ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.