ಅಸ್ತಿತ್ವಕ್ಕಾಗಿ ಕಾಶ್ಮೀರಿ ನಾಯಕರ ಪ್ರಯತ್ನ; ದಾಳವಾಗಿ ಬದಲಾಗದಿರಲಿ


Team Udayavani, Oct 15, 2020, 6:09 AM IST

ಅಸ್ತಿತ್ವಕ್ಕಾಗಿ ಕಾಶ್ಮೀರಿ ನಾಯಕರ ಪ್ರಯತ್ನ; ದಾಳವಾಗಿ ಬದಲಾಗದಿರಲಿ

ಜಮ್ಮು-ಕಾಶ್ಮೀರದಿಂದ ಆರ್ಟಿಕಲ್‌ 370 ಮತ್ತು 35ಎ ರದ್ದಾಗಿ ಕೇಂದ್ರಾಡಳಿತ ಪ್ರದೇಶವಾಗಿ ಬದಲಾದ ಅನಂತರದಿಂದ ಕಣಿವೆಯ ರಾಜಕೀಯ ಚಿತ್ರಣದಲ್ಲಿ ಅಪಾರ ಬದಲಾವಣೆಗಳು ಆಗಿವೆ. ಆ ರಾಜ್ಯಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡಿದಾಗ, ಸಾರ್ವಜನಿಕ ಸುರಕ್ಷತ ಕಾಯ್ದೆಯಡಿ ಪ್ರಮುಖ ರಾಜಕೀಯ ಪಕ್ಷಗಳಾದ ಪಿಡಿಪಿ ಹಾಗೂ ನ್ಯಾಶನಲ್‌ ಕಾನ್ಫರೆನ್ಸ್‌ ನಾಯಕರನ್ನು ಗೃಹ ಬಂಧನದಲ್ಲಿಡಲಾಗಿತ್ತು. ಈಗ ಪಿಡಿಪಿಯ ಮುಖ್ಯಸ್ಥೆ, ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರ ಬಿಡುಗಡೆಯೊಂದಿಗೆ ಪ್ರಮುಖ ನಾಯಕರೆಲ್ಲ ಹೊರಬಂದಂತಾಗಿದೆ.

ಆದರೆ ಗೃಹ ಬಂಧನದಿಂದ ಹೊರ­ಬಂದದ್ದೇ ಮುಫ್ತಿ, ವಿಶೇಷ ಸ್ಥಾನಮಾನದ ಮರುಸ್ಥಾಪನೆಗೆ ಹೋರಾಡುವುದಾಗಿ ಘೋಷಿಸಿ­ದ್ದಾರೆ. ಇನ್ನೊಂದೆಡೆ ಮಾರ್ಚ್‌ ತಿಂಗಳಲ್ಲಿ ಗೃಹಬಂಧನದಿಂದ ಬಿಡುಗಡೆ ಹೊಂದಿರುವ ನ್ಯಾಶ‌ನಲ್‌ ಕಾನ್ಫರೆನ್ಸ್‌ನ ಫಾರೂಕ್‌ ಅಬ್ದುಲ್ಲಾ ಹಾಗೂ ಓಮರ್‌ ಅಬ್ದುಲ್ಲಾ ಸಹ ಕಣಿವೆಗೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿಯ ನಿರ್ಧಾರದ ವಿರುದ್ಧ ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿ¨ªಾರೆ. ಇವರಿಬ್ಬರೂ ಈಗ ಮುಫ್ತಿಯ ವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದಷ್ಟೇ ಅಲ್ಲದೇ, ಈ ಕುರಿತು ಮತ್ತಷ್ಟು ಚರ್ಚೆ ನಡೆಸಲು ಗುರುವಾರ ಸಭೆ ಕರೆದಿದ್ದಾರೆ.

ಇತ್ತೀಚೆಗೆ ಫಾರೂಕ್‌ ಅಬ್ದುಲ್ಲಾ ಅಂತೂ “”ಚೀನದ ಸಹಕಾರದಿಂದ ಆರ್ಟಿಕಲ್‌ 370 ಮರು ಸ್ಥಾಪಿಸುವ ಆಶಾಭಾವನೆಯಿದೆ” ಎಂಬ ದೇಶದ್ರೋಹದ ಮಾತನಾಡಿದ್ದರು. ಈ ವಿಚಾರ ವಿವಾದಕ್ಕೀಡಾಗುತ್ತಿದ್ದಂತೆಯೇ, “ಫಾರೂಕ್‌ರ ಮಾತನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ’ ಎಂದು ತೇಪೆ ಹಚ್ಚುವ ಕೆಲಸವನ್ನು ಅವರ ಪಕ್ಷ ಮಾಡುತ್ತಿದೆ. ಅಧಿಕಾರ ಹಾಗೂ ಅಸ್ತಿತ್ವ ಕಳೆದುಕೊಂಡಿರುವ ಈ ನಾಯಕರು ದಿಕ್ಕುತೋಚದೇ ಈ ರೀತಿ ಮಾತನಾಡುತ್ತಿದ್ದಾರೆ ಎನ್ನುವುದರಲ್ಲಿ ಸಂಶಯವಿಲ್ಲ.

ದಶಕಗಳಿಂದ ಜಮ್ಮು-ಕಾಶ್ಮೀರ ಅಬ್ದುಲ್ಲಾ ಮತ್ತು ಮುಫ್ತಿ ಕುಟುಂಬದ ಹಿಡಿತದಲ್ಲೇ ಇತ್ತು. ಈ ನಾಯಕರು ತಮ್ಮಿಡೀ ರಾಜಕೀಯವನ್ನು ಕೇವಲ ಕಾಶ್ಮೀರ ಕೇಂದ್ರಿತವಾಗಿಸಿಕೊಂಡೇ ಬಂದಿದ್ದರು. ಕಾಶ್ಮೀರದ ಸಮಸ್ಯೆಯನ್ನೇ ಇಡೀ ಜಮ್ಮು-ಕಾಶ್ಮೀರದ ಸಮಸ್ಯೆ ಎಂಬಂತೆ ಭಾವಿಸುತ್ತಿದ್ದರು. ಜಮ್ಮು ಮತ್ತು ಲಡಾಖ್‌ ಪ್ರಾಂತ್ಯದ ಶ್ರೇಯೋಭಿವೃದ್ಧಿ ಅಥವಾ ಹಿತಚಿಂತನೆಯ ಬಗ್ಗೆ ಇವರು ಗಮನವನ್ನೂ ಹರಿಸುತ್ತಿರಲಿಲ್ಲ. ಈ ಕಾರಣಕ್ಕಾಗಿಯೇ, ಪಿಡಿಪಿ ಹಾಗೂ ನ್ಯಾಶ‌ನಲ್‌ ಕಾನ್ಫರೆನ್ಸ್‌ ತಮ್ಮ ಬಗ್ಗೆ ಮಲತಾಯಿ ಧೋರಣೆ ತೋರಿಸುತ್ತಿವೆ ಎನ್ನುವ ಅಸಮಾಧಾನ ಹಿಂದೂ ಬಾಹುಳ್ಯದ ಜಮ್ಮು ಪ್ರಾಂತ್ಯಕ್ಕೆ ಹಾಗೂ ಬೌದ್ಧ ಬಾಹುಳ್ಯದ ಲಡಾಖ್‌ ಕ್ಷೇತ್ರಕ್ಕೆ ಇತ್ತು. ಲಡಾಖ್‌ನ ಜನರಂತೂ ತಮ್ಮನ್ನು ಕೇಂದ್ರಾಡಳಿತ ಪ್ರದೇಶ­ವಾಗಿಸಬೇಕು ಎಂದು ವರ್ಷಗಳಿಂದ ಆಗ್ರಹಿಸುತ್ತ ಬಂದಿದ್ದರು.

ಒಟ್ಟಲ್ಲಿ ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿ ಬದಲಾದ ನಂತರ­ದಿಂದ ಈ ಪಕ್ಷಗಳ ಅಸ್ತಿತ್ವವೇ ಬುಡಮೇಲಾಗಿದೆ. ಹೀಗಾಗಿ, ಬಹುಕಾಲದ ವೈರಿಗ­ಳಾ­ಗಿದ್ದ ಪಿಡಿಪಿ ಮತ್ತು ನ್ಯಾಶನಲ್‌ ಕಾನ್ಫರೆನ್ಸ್‌ ಮತ್ತೆ ನೆಲೆ ಸದೃಢಗೊಳಿಸಿ­ಕೊಳ್ಳುವುದಕ್ಕಾಗಿ ಕೈಜೋಡಿಸಲು ಮುಂದಾಗಿವೆ. ಹಾಗೆಂದು, ಅವುಗಳ ಪ್ರಯತ್ನ ಅಸಾಂವಿಧಾನಿಕವೇನೂ ಅಲ್ಲ. ಆದರೆ, ನೆಲೆ ಕಂಡು­ಕೊಳ್ಳುವ ಪ್ರಯತ್ನದಲ್ಲಿ ಅವು ಭಾರತ ವಿರೋಧಿ ನಡೆ ಇಡುವಂತಾಗಬಾರದು. ಕಾಶ್ಮೀರ ಹಾಗೂ ಲಡಾಖ್‌ ಪ್ರಾಂತ್ಯದಲ್ಲಿ ಅಶಾಂತಿ ಸೃಷ್ಟಿಸಲು ಪಾಕಿಸ್ಥಾನ ಹಾಗೂ ಚೀನ ನಿರಂತರವಾಗಿ ಪ್ರಯತ್ನಿಸುತ್ತಲೇ ಇವೆ. ಅವುಗಳ ಈ ಕುತಂತ್ರಕ್ಕೆ ಕಾಶ್ಮೀರದ ರಾಜಕಾರಣಿಗಳು ದಾಳವಾಗಿ ಬದಲಾಗಬಾರದು.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.