ಕಪ್ಪುಹಣ ಹೆಚ್ಚಳ ಕಾರ್ಯತಂತ್ರ ಬದಲಾಗಲಿ


Team Udayavani, Jul 3, 2018, 8:27 AM IST

money.jpg

ಸ್ವಿಸ್‌ ಬ್ಯಾಂಕಿನಲ್ಲಿ ಭಾರತೀಯರು ಇಟ್ಟಿರುವ ಕಪ್ಪುಹಣ ಕಳೆದೊಂದು ವರ್ಷದಲ್ಲಿ ಶೇ.50 ಹೆಚ್ಚಳವಾಗಿದೆ ಎಂಬ ವರದಿ ದೇಶದ ಜನರಿಗೆ ಅಚ್ಚರಿಯುಂಟು ಮಾಡಿದ್ದರೆ, ಕೇಂದ್ರ ಸರಕಾರಕ್ಕೆ ತೀರಾ ಮುಜುಗರವುಂಟು ಮಾಡಿದೆ. 2017ರಲ್ಲಿ ಸ್ವಿಸ್‌ಬ್ಯಾಂಕಿನಲ್ಲಿ ಭಾರತೀಯರು ಜಮೆ ಮಾಡಿರುವ ಮೊತ್ತ 7000 ಕೋ. ರೂ.2016ರಲ್ಲಿ ಕಪ್ಪುಹಣದ ಮೊತ್ತ 4660 ಕೋ. ರೂ. ಇತ್ತು. ಒಂದೇ ವರ್ಷದಲ್ಲಿ ಈ ಮೊತ್ತ ಬಹುತೇಕ ಇಮ್ಮಡಿಯಾಗಿರುವುದು ಜನಸಾಮಾನ್ಯರ ಅಚ್ಚರಿಗೆ ಕಾರಣ. 

ಸ್ವಿಸ್‌ ಬ್ಯಾಂಕಿನಲ್ಲಿರುವ ಎಲ್ಲ ಕಪ್ಪುಹಣವನ್ನು ತರುವುದಾಗಿ 2014ರ ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮೋದಿ ಸಾರಿದ್ದರು. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನಲ್ಲೂ ಕಪ್ಪುಹಣದ ವಿರುದ್ಧ ನೀಡಿದ್ದ ಹೇಳಿಕೆಗಳ ಪಾಲೂ ಇತ್ತು. ಅನಂತರ ಮೋದಿ ಸರಕಾರ ಕಪ್ಪುಹಣದ ವಿರುದ್ಧ ಹಲವು ಕಠಿನ ಕಾನೂನುಗಳನ್ನು ರಚಿಸಿ ಸಮರ ಸಾರಿದರೂ ಕಪ್ಪುಹಣದ ಹರಿವು ನಿಂತಿಲ್ಲ ಎನ್ನುವುದು ಸೋಜಿಗವೇ ಸರಿ. ಕಪ್ಪುಹಣ ತರುವುದು ಬಿಡಿ ಕನಿಷ್ಠ ಕಪ್ಪುಹಣ ದೇಶದಿಂದ ಹೊರಗೆ ಹೋಗುವುದನ್ನು ತಡೆಯುವುದಕ್ಕೂ ನಿಮ್ಮಿಂದ ಸಾಧ್ಯವಾಗಿಲ್ಲ ಎಂಬ ಲೇವಡಿಗೆ ಕೇಂದ್ರ ಸರಕಾರ ಗುರಿಯಾಗಿದೆ. 2019ರ ಲೋಕಸಭಾ ಚುನಾವಣೆಗೆ ತಯಾರಾಗುತ್ತಿರುವ ಹೊತ್ತಿಗೆ ಬಹಿರಂಗವಾಗಿರುವ ವರದಿ ಸರಕಾರಕ್ಕಾಗಿರುವ ಒಂದು ಹಿನ್ನಡೆಯೂ ಹೌದು. ಉಳಿದೆಲ್ಲ ದೇಶಗಳಿಂದ ಸ್ವಿಸ್‌ ಬ್ಯಾಂಕಿಗೆ ಹರಿದು ಹೋಗಿರುವ ಮೊತ್ತದಲ್ಲಿ ಶೇ. 3 ಏರಿಕೆಯಾಗಿದ್ದರೆ ಭಾರತದಿಂದ ಹೋಗಿರುವ ಮೊತ್ತದಲ್ಲಿ ಶೇ. 50 ಏರಿಕೆಯಾಗಿರುವುದು ಕಪ್ಪುಹಣದ ವಿರುದ್ಧದ ಹೋರಾಟದಲ್ಲಿ ನಾವು ಸಾಧಿಸಬೇಕಾದದ್ದೂ ಇನ್ನೂ ಬಹಳ ಇದೆ ಮತ್ತು ಹೋರಾಟದ ಕಾರ್ಯತಂತ್ರವೂ ಬದಲಾಗಬೇಕಿದೆ ಎನ್ನುವುದನ್ನು ತಿಳಿಸುತ್ತದೆ. 

ಭ್ರಷ್ಟಾಚಾರ ಮತ್ತು ಕಪ್ಪುಹಣದ ವಿರುದ್ಧ ಸಮರ ಎಂದು ಘೋಷಿಸಿ ಮಾಡಿದ್ದ ನೋಟು ರದ್ದು ಕ್ರಮವೂ ಕಪ್ಪುಹಣವನ್ನು ನಿಯಂತ್ರಿಸುವಲ್ಲಿ ವಿಫ‌ಲವಾಗಿದೆ ಎಂಬ ಕಹಿಸತ್ಯವನ್ನು ಕೇಂದ್ರ ಒಪ್ಪಿಕೊಳ್ಳಲೇಬೇಕಾಗಿದೆ. ನೋಟು ರದ್ದು ಕಪ್ಪುಹಣದ ವಿರುದ್ಧ ನಡೆಸಿದ ಸರ್ಜಿಕಲ್‌ ಸ್ಟ್ರೈಕ್‌ ಎಂದು ಸರಕಾರ ಹೇಳಿಕೊಂಡರೆ ಇದೀಗ ಇದಕ್ಕೆ ತದ್ವಿರುದ್ಧವಾಗಿರುವ ಬೆಳವಣಿಗೆ ಸಂಭವಿಸಿರುವುದು ಅಚ್ಚರಿ ಮೂಡಿಸುತ್ತಿದೆ.

ಹಾಗೇ ನೋಡಿದರೆ ನೋಟು ರದ್ದಾಗುವುದಕ್ಕಿಂತ ಮುಂಚೆ ಕಪ್ಪುಹಣದ ಪ್ರಮಾಣ ಇಳಿಕೆಯಾಗಿತ್ತು. 1987ರಲ್ಲಿ ಸ್ವಿಸ್‌ ಬ್ಯಾಂಕಿನಲ್ಲಿರುವ ಭಾರತೀಯರ ಕಪ್ಪುಹಣದ ಮೊತ್ತದಲ್ಲಿ ಇಳಿಕೆ ಕಂಡು ಬಂದಿತ್ತು. ಕಳೆದ ಒಂದು ದಶಕದಲ್ಲಿ ಕಪ್ಪುಹಣದ ಮೊತ್ತ ಕುಸಿತವಾಗುತ್ತಲೇ ಇತ್ತು. 2006ರಲ್ಲಿ ಭಾರತೀಯರ 23,000 ಕೋ. ರೂ. ಕಪ್ಪುಹಣವಿತ್ತು. ಈ ಮೊತ್ತಕ್ಕೆ ಹೋಲಿಸಿದರೆ 7,000 ಕಡಿಮೆಯಾಗಿದ್ದರೂ ಕಪ್ಪುಹಣದ ಮೊತ್ತದ ಏರಿಕೆ ಪ್ರಾರಂಭವಾಗಿರುವುದು ಮಾತ್ರ ಕಳವಳಕಾರಿ ವಿಚಾರ. 

ಸ್ವಿಸ್‌ ಬ್ಯಾಂಕಿನಲ್ಲಿರುವ ಎಲ್ಲ ಹಣ ಕಾಳಧನವಲ್ಲ. ಇದರಲ್ಲಿ ನಿಜವಾದ ವ್ಯಾಪಾರ, ವಹಿವಾಟಿನ ಹಣವೂ ಇರಬಹುದು ಎಂಬ ಸಚಿವ ಪಿಯೂಷ್‌ ಗೋಯಲ್‌ ಸಮರ್ಥನೆ ಮಾತ್ರ ಹಾಸ್ಯಾಸ್ಪದ. ಅಂತೆಯೇ ಹಿಂದಿನ ವಿತ್ತ ಸಚಿವ ಪಿ. ಚಿದಂಬರಂ ಪ್ರಾರಂಭಿಸಿದ ಉದಾರ ವರ್ಗಾವಣೆ ನೀತಿ ಯಿಂದಾಗಿ ಕಪ್ಪುಹಣ ಹರಿದು ಹೋಗುತ್ತಿದೆ ಎಂಬಂತಹ ಸಬೂಬುಗಳನ್ನು ತೋರಿಸುವುದನ್ನು ಬಿಟ್ಟು ಎಲ್ಲಿ ಲೋಪವಾಗಿದೆ ಎನ್ನುವುದರತ್ತ ಗಮನಹರಿಸಿ ಕ್ರಮಕೈಗೊಳ್ಳಲು ಇದು ಸಕಾಲ. ಈ ನಿಟ್ಟಿನಲ್ಲಿ ವರದಿಯನ್ನು ಒಂದು ಎಚ್ಚರಿಕೆಯ ಗಂಟೆ ಎಂಬಂತೆ ಪರಿಗಣಿಸಬೇಕು. ಪ್ರತಿಯೊಂದಕ್ಕೂ ಹಿಂದಿನ ಸರಕಾರವನ್ನು ದೂಷಿಸುತ್ತಾ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುವುದು ವಿವೇಕವಲ್ಲ ಎನ್ನುವುದನ್ನು ಸರಕಾರ ನಡೆಸುವವರು ಅರ್ಥ ಮಾಡಿಕೊಳ್ಳಬೇಕು. ಹಾಗೆಂದು ಕಪ್ಪುಹಣದ ವಿರುದ್ಧ ಸರಕಾರ ಕೈ ಗೊಂಡಿರುವ ಕ್ರಮಗಳೆಲ್ಲ ವಿಫ‌ಲಗೊಂಡಿವೆ ಎನ್ನುವಂತಿಲ್ಲ. ಕಪ್ಪುಹಣ ಸ್ವಯಂ ಘೋಷಿಸುವ ಯೋಜನೆಯೊಂದರಿಂದಲೇ ಸುಮಾರು 65,000 ಕೋ. ರೂ. ವಸೂಲಾಗಿದೆ. ಅಂತೆಯೇ ಕಪ್ಪುಹಣದ ವಿರುದ್ಧ ಸರಕಾರ ನಡೆಸುತ್ತಿರುವ ಹೋರಾಟದ ಪ್ರಾಮಾಣಿಕತೆಯನ್ನೂ ಶಂಕಿಸುವಂತಿಲ್ಲ. ಆದರೆ ಸತತ ಪ್ರಯತ್ನಗಳ ಹೊರತಾಗಿಯೂ ಕಪ್ಪುಹಣದ ಹರಿವು ನಿಂತಿಲ್ಲ ಎಂದಾದರೆ ಇದರ ಮೂಲವನ್ನು ಪತ್ತೆ ಹಚ್ಚುವಲ್ಲಿ ಇನ್ನಷ್ಟು ಸಾಧನೆ ಆಗಬೇಕು ಎಂದು ಅರ್ಥ. ಕಪ್ಪುಹಣದ ಉತ್ಪತ್ತಿ ಮತ್ತು ಹರಿವಿನ ಮೂಲವನ್ನು ಕಂಡುಕೊಳ್ಳುವ ತನಕ ಈ ಪಿಡುಗನ್ನು ಸಂಪೂರ್ಣವಾಗಿ ಮೂಲೋತ್ಪಾಟನೆ ಮಾಡುವುದು ಅಸಾಧ್ಯ. ಈ ಸಂದರ್ಭದಲ್ಲಿ ನಿರ್ದಿಷ್ಟವಾಗಿ ಕಪ್ಪುಹಣ ವಿಪುಲವಾಗಿ ಸೃಷ್ಟಿಯಾಗುತ್ತಿರುವ ವಲಯಗಳನ್ನು ಕೇಂದ್ರೀಕರಿಸಿಕೊಂಡ ಕಾರ್ಯತಂತ್ರಗಳನ್ನು ರೂಪಿಸಿಕೊಳ್ಳುವುದು ತೀರಾ ಅಗತ್ಯ ಮತ್ತು ಈಗಿನ ತುರ್ತು. 

ಟಾಪ್ ನ್ಯೂಸ್

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

Climate Change: ಹವಾಮಾನ ವೈಪರೀತ್ಯ… ಆರೋಗ್ಯದ ಮೇಲಿರಲಿ ಕಾಳಜಿ

Climate Change: ಹವಾಮಾನ ವೈಪರೀತ್ಯ… ಆರೋಗ್ಯದ ಮೇಲಿರಲಿ ಕಾಳಜಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.