ಟ್ರಂಪ್‌ ಮನವೊಲಿಸಲಿ ಕೇಂದ್ರ ಸರಕಾರ


Team Udayavani, Jun 3, 2019, 6:05 AM IST

donald

ವ್ಯಾಪಾರ, ವ್ಯವಹಾರಕ್ಕೆ ಸಂಬಂಧಿಸಿದಂತೆ ಅಮೆರಿಕ ಮತ್ತು ಭಾರತ ದೇಶಗಳ ನಡುವೆ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ತಿಕ್ಕಾಟ ಇದೀಗ ತುಸು ಬಿಗಡಾಯಿಸಿದಂತೆ ಕಂಡುಬರುತ್ತಿದೆ. ವಾಣಿಜ್ಯ ವಿಚಾರದಲ್ಲಿ ಚೀನದೊಂದಿಗೆ ನೇರವಾಗಿ ಸಮರ ಆರಂಭಿಸಿರುವ ಅಮೆರಿಕ ಇದೀಗ ಇದೇ ಅಸ್ತ್ರವನ್ನು ಭಾರತದ ಮೇಲೂ ಪ್ರಯೋಗಿಸಲು ಮುಂದಾಗಿದೆ. ಇದರ ಮೊದಲ ಹೆಜ್ಜೆಯಾಗಿ ಸರಿಸುಮಾರು 44 ವರ್ಷಗಳ ಹಿಂದೆ ಸಾಮಾನ್ಯ ಆದ್ಯತೆ ನೀತಿಯಡಿ ಭಾರತಕ್ಕೆ ನೀಡಿದ್ದ ‘ಆದ್ಯತಾ ವ್ಯಾಪಾರ ಮಾನ್ಯತೆ’ಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ರದ್ದುಗೊಳಿಸುವ ಘೋಷಣೆ ಮಾಡಿದ್ದಾರೆ. ಅಮೆರಿಕದ ಈ ನಿರ್ಧಾರ ಜೂ. 5ರಿಂದಲೇ ಜಾರಿಗೆ ಬರಲಿದೆ.

ಅಮೆರಿಕದ ಈ ನಿರ್ಧಾರದಿಂದ ಪ್ರತಿವರ್ಷ ಭಾರತದಿಂದ ಅಮೆರಿಕಕ್ಕೆ ರಫ್ತಾಗುತ್ತಿದ್ದ 38 ಸಾವಿರ ಕೋ. ರೂ. ಮೌಲ್ಯದ ವಸ್ತುಗಳ ವ್ಯಾಪಾರಕ್ಕೆ ಲಭಿಸುತ್ತಿದ್ದ ಸುಂಕ ವಿನಾಯಿತಿ ರದ್ದಾಗಲಿದೆ. ಅಮೆರಿಕದ ಉತ್ಪನ್ನಗಳನ್ನು ಭಾರತದ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ನಿಷ್ಪಕ್ಷಪಾತ ಮತ್ತು ನ್ಯಾಯಸಮ್ಮತ ಅವಕಾಶವನ್ನು ಭಾರತ ನೀಡುತ್ತಿಲ್ಲ, ಅಂದರೆ ಭಾರತ ತನ್ನ ಉತ್ಪನ್ನಗಳಿಗೆ ಹೆಚ್ಚಿನ ಸುಂಕವನ್ನು ವಿಧಿಸುತ್ತಿದೆ ಎಂಬುದು ಡೊನಾಲ್ಡ್ ಟ್ರಂಪ್‌ ನೇತೃತ್ವದ ಅಮೆರಿಕ ಸರಕಾರದ ಆರೋಪವಾಗಿದೆ. ಈ ಸಂಬಂಧ ಅಮೆರಿಕ ಮಾ. 4 ರಂದೇ ಮುನ್ಸೂಚನೆ ನೀಡಿದ್ದಲ್ಲದೆ ಈ ಬಗ್ಗೆ ಎಚ್ಚರಿಕೆಯನ್ನೂ ನೀಡಿತ್ತು. ಆದರೆ ಲೋಕಸಭೆ ಚುನಾವಣೆ ನಡೆಯುತ್ತಿದ್ದ ಕಾರಣದಿಂದಾಗಿ ಭಾರತ ಸರಕಾರ ಈ ಬಗ್ಗೆ ಹೆಚ್ಚಿನ ತಲೆಕೆಡಿಸಿಕೊಳ್ಳದೇ ಹಾಲಿ ನೀತಿಯನ್ನೇ ಮುಂದುವರಿಸುವಂತೆ ಅಮೆರಿಕಕ್ಕೆ ಮನವಿ ಮಾಡಿಕೊಂಡಿತ್ತು.

ಸದ್ಯದ ಲೆಕ್ಕಾಚಾರಗಳ ಪ್ರಕಾರ ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸ್ಟೀಲ್, ಅಲ್ಯೂಮಿನಿಯಂ ಮತ್ತು ಎಲೆಕ್ಟ್ರಿಕ್‌ ಸಾಮಗ್ರಿ, ಜವಳಿ, ವಾಹನ ಸಹಿತ ಸುಮಾರು 2,000ಕ್ಕೂ ಅಧಿಕ ಉತ್ಪನ್ನಗಳಿಗೆ ಅಮೆರಿಕ ಇತರ ದೇಶಗಳ ಉತ್ಪನ್ನಗಳಿಗೆ ವಿಧಿಸುವ ಮಾದರಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸುಂಕವನ್ನು ವಿಧಿಸಲಿದೆ. ಇದು ಭಾರತದ ಒಟ್ಟಾರೆ ರಫ್ತು ವ್ಯವಹಾರದ ಮೇಲೆ ಪರಿಣಾಮವನ್ನು ಉಂಟು ಮಾಡುವ ಸಾಧ್ಯತೆ ಇದೆ. ಆದರೆ ಅಮೆರಿಕದ ಈ ನಿರ್ಧಾರದಿಂದ ಭಾರತದ ರಫ್ತು ಉದ್ಯಮದ ಮೇಲೆ ಬಲುದೊಡ್ಡ ಹೊಡೆತ ಬೀಳಲಾರದು ಎಂದು ವಾಣಿಜ್ಯ ಕಾರ್ಯದರ್ಶಿ ಸ್ಪಷ್ಟನೆ ನೀಡಿದ್ದು, ಕಳೆದ ಸಾಲಿನಲ್ಲಿ ಅಮೆರಿಕಕ್ಕೆ ರಫ್ತು ಮಾಡಿದ 38,000 ಕೋ. ರೂ. ಮೌಲ್ಯದ ಉತ್ಪನ್ನಗಳ ಪೈಕಿ ಕೇವಲ 1,300 ಕೋ. ರೂ. ಮೌಲ್ಯದ ಉತ್ಪನ್ನಗಳಿಗೆ ಜಿಎಸ್‌ಪಿ ಅಡಿ ಸುಂಕ ವಿನಾಯಿತಿ ಲಭಿಸಿತ್ತು ಎಂದು ತಿಳಿಸಿದೆ.

ಭಾರತ ಆರ್ಥಿಕವಾಗಿ ಒಂದಿಷ್ಟು ಚೇತರಿಕೆ ಕಾಣುತ್ತಿರುವಂತೆಯೇ ಅಮೆರಿಕ ಈ ನಿರ್ಧಾರ ಕೈಗೊಂಡಿರುವುದು ದೇಶದ ಪಾಲಿಗೆ ತುಸು ಹಿನ್ನಡೆಯೇ ಸರಿ. ಕೆಲವು ತಿಂಗಳುಗಳ ಹಿಂದೆಯಷ್ಟೇ ಇರಾನ್‌ನ ತೈಲ ಖರೀದಿಗೆ ನಿರ್ಬಂಧ ಹೇರಿದ್ದ ಅಮೆರಿಕ ಇದರ ಮುಂದುವರಿದ ಭಾಗವಾಗಿ ಭಾರತವನ್ನು ಆದ್ಯತೆಯ ರಾಷ್ಟ್ರಗಳ ಪಟ್ಟಿಯಿಂದ ಕೈಬಿಡುವ ನಿರ್ಧಾರ ಕೈಗೊಂಡಿದೆ.

ಅಮೆರಿಕದ ಈ ನಿರ್ಧಾರಗಳು ಕೇವಲ ಭಾರತದ ರಫ್ತು ಉದ್ಯಮಕ್ಕೆ ಮಾತ್ರವಲ್ಲದೆ ದೇಶದ ಆರ್ಥಿಕತೆಯ ಮೇಲೂ ಪರಿಣಾಮ ಬೀರುವುದರಿಂದ ಈ ದಿಸೆಯಲ್ಲಿ ಕೇಂದ್ರ ಸರಕಾರ ತುಸು ಜಾಣ್ಮೆಯ ನಡೆಯನ್ನು ತನ್ನದಾಗಿಸಿಕೊಳ್ಳುವ ಅಗತ್ಯವಿದೆ. ಅಮೆರಿಕದೊಂದಿಗಿನ ವಾಣಿಜ್ಯ ಸಂಬಂಧವನ್ನು ಇನ್ನಷ್ಟು ಬಲಗೊಳಿಸಲು ಅಮೆರಿಕದ ಆದ್ಯತೆ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಮುಂದುವರಿಯುವ ಆವಶ್ಯಕತೆ ಇದ್ದು ಈ ದಿಸೆಯಲ್ಲಿ ಅಮೆರಿಕ ಅಧ್ಯಕ್ಷರ ಮನವೊಲಿಸುವ ಕಾರ್ಯಕ್ಕೆ ಮುಂದಾಗಬೇಕಿದೆ.

ಪರಿಗಣಿಸದೇ ದೇಶದ ಹಿತಾಸಕ್ತಿ ಅದರಲ್ಲೂ ಮುಖ್ಯವಾಗಿ ಉಭಯ ದೇಶಗಳ ನಡುವಣ ದ್ವಿಪಕ್ಷೀಯ ಸಂಬಂಧದ ದೃಷ್ಟಿಯಿಂದ ಕೇಂದ್ರ ಸರಕಾರ ಚಾಣಾಕ್ಷ ನಿರ್ಧಾರಕ್ಕೆ ಬರುವ ಅಗತ್ಯವಿದೆ. ಹೊಸದಾಗಿ ಅಧಿಕಾರಕ್ಕೆ ಬಂದಿರುವ ಸರಕಾರಕ್ಕೆ ಆರಂಭದಲ್ಲಿಯೇ ಇದೊಂದು ಸವಾಲಾಗಿದೆ. ಎರಡೂ ದೇಶಗಳ ನಾಯಕರು ಈ ವಿಚಾರವಾಗಿ ಪರಸ್ಪರ ಸಮಾಲೋಚನೆ ನಡೆಸಿ ಉಭಯ ದೇಶಗಳ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಸೂಕ್ತ ನಿರ್ಧಾರಕ್ಕೆ ಬರಬೇಕಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.