ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆ ಸವಾಲು ದೊಡ್ಡದಿದೆ


Team Udayavani, Jun 17, 2020, 7:45 AM IST

editorial-copy

ಕೋವಿಡ್ ಸೋಂಕಿತರ ಸಂಖ್ಯೆ ಆಘಾತ ಹುಟ್ಟಿಸುವ ರೀತಿಯಲ್ಲಿ ಬೆಳೆಯುತ್ತಲೇ ಇದೆ. ಜೂನ್‌ 12ನೇ ತಾರೀಖೀನಿಂದ ಪ್ರತಿದಿನ 10 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಲಾರಂಭಿಸಿವೆ. ಟೆಸ್ಟ್‌ಗಳ ಸಂಖ್ಯೆ ಅಧಿಕವಾಗಿರುವುದರಿಂದ, ಸೋಂಕಿತರೂ ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗುತ್ತಿದ್ದಾರೆ ಎನ್ನುವ ವಾದದಲ್ಲಿ ಹುರುಳಿದೆಯಾದರೂ, ಅದೇ ಸಂಪೂರ್ಣ ಸತ್ಯವಲ್ಲ. ಲಾಕ್‌ಡೌನ್‌ ನಿಯಮ ಸಡಿಲಿಕೆಯಾದ ನಂತರದಿಂದ ದೇಶದಲ್ಲಿ ಸೋಂಕು ಪ್ರಸರಣ ಅಧಿಕವಾಗಿಬಿಟ್ಟಿದೆ.

ಈಗ ಬೇಸಿಗೆಯ ಧಗೆ ದೂರವಾಗಿ ಮಳೆ ಹನಿ ಬಂದಪ್ಪಳಿಸುತ್ತಿರುವ ವೇಳೆಯಲ್ಲೇ, ಮಳೆಗಾಲದಲ್ಲಿ ಕೋವಿಡ್ ಕಡಿಮೆಯಾಗುವುದೇ ಎನ್ನುವ ಚರ್ಚೆ ಆರಂಭವಾಗಿದೆ. ಆದರೆ, ಫೆಬ್ರವರಿ ತಿಂಗಳ ಆರಂಭದಲ್ಲಿ, ಅಂದರೆ ಕೊರೊನಾ ವೈರಸ್‌ ಭಾರತಕ್ಕೆ ಕಾಲಿಟ್ಟು ಕೆಲವೇ ದಿನಗಳಾಗಿದ್ದ ಹೊತ್ತಲ್ಲಿ, ಸುಡು ಬಿಸಿಲಿಗೆ ಕೊರೊನಾ ವೈರಸ್‌ ದುರ್ಬಲವಾಗಿಬಿಡುತ್ತದೆ ಎಂದೇ ಭಾವಿಸಲಾಗಿತ್ತು. ಹಲವು ತಜ್ಞರು ಕೂಡ ಇದೇ ಮಾತನ್ನೇ ಹೇಳಿದ್ದರು. ಆದರೆ, ಅದರಿಂದ ಕೊರೊನಾದ ವೇಗಕ್ಕೇನೂ ಪೆಟ್ಟು ಬೀಳಲಿಲ್ಲ. ಈಗ ಮಳೆಗಾಲ ಎದುರಾಗಿದ್ದು, ವೈರಸ್‌ನ ಮೇಲೆ, ಹಾಗೂ ಅದರ ಪ್ರಸರಣ ಶಕ್ತಿಯ ಮೇಲೆ ಮಳೆಯ ಪ್ರಭಾವ ಹೇಗಿರಲಿದೆ ಎನ್ನುವ ಬಗ್ಗೆ ಚರ್ಚೆಗಳು, ಭವಿಷ್ಯವಾಣಿಗಳು ಆರಂಭವಾಗಿದೆ. ಆದರೆ, ವೈರಾಣು ತಜ್ಞರು ಮತ್ತು ಸಾಂಕ್ರಾಮಿಕ ರೋಗ ತಡೆ ತಜ್ಞರು ಮಾತ್ರ ಕೋವಿಡ್‌-19 ಯಾವ ಕಾಲದಲ್ಲಿ ಹೇಗೆ ವರ್ತಿಸುತ್ತದೆ ಎನ್ನುವುದನ್ನು ತಿಳಿದುಕೊಳ್ಳಲು ಹಲವು ವರ್ಷಗಳೇ ಬೇಕು ಎನ್ನುತ್ತಾರೆ. ಬೇಸಿಗೆ, ಮಳೆಗಾಲ, ಚಳಿಗಾಲದಲ್ಲಿ ವೈರಸ್‌ನ ವರ್ತನೆಯನ್ನು ಹಲವು ವರ್ಷಗಳವರೆಗೆ ಪರೀಕ್ಷಿಸಿ, ಅದನ್ನು ಅನ್ಯ ದೇಶಗಳೊಂದಿಗೆ ಹೋಲಿಸಿ ನೋಡಿದ ಮೇಲೆಯೇ ಸ್ಪಷ್ಟವಾಗಿ ಹೇಳಲು ಸಾಧ್ಯವಾಗುತ್ತದೆ ಎನ್ನುವುದು ವೈರಾಣು ತಜ್ಞರ ಅಭಿಪ್ರಾಯ.

ಅಮೆರಿಕದ ಸೆಂಟರ್‌ ಫಾರ್‌ ಡಿಸೀಸ್‌ ಪ್ರಿವೆನ್ಶನ್‌ನ ಸದಸ್ಯ, ಹಿರಿಯ ವಿಜ್ಞಾನಿ ಡಾ| ಮಾರ್ಕ್‌ ಅಲೆನ್‌, “”ಇನ್‌ಫ್ಲ್ಯೂಯೆನಾ ಇರಲಿ ಅಥವಾ ಶ್ವಾಸಕೋಶಕ್ಕೆ ತೊಂದರೆ ಮಾಡುವ ವಿವಿಧ ವೈರಸ್‌ಗಳಿರಲಿ…ಈಗಲೂ ಅವು ಯಾವ ಕಾಲಕ್ಕೆ ಹೇಗೆ ವರ್ತಿಸುತ್ತವೆ ಎನ್ನುವುದಕ್ಕೆ ನಿಖರ ಉತ್ತರ ದೊರೆತಿಲ್ಲ” ಎನ್ನುತ್ತಾರೆ.

ಈ ಕಾರಣಕ್ಕಾಗಿಯೇ ಮಳೆಗಾಲದಲ್ಲಿ ವೈರಸ್‌ ಹಾವಳಿ ಕಡಿಮೆಯಾಗಿಬಿಡುತ್ತದೆ, ಚಳಿಗಾಲದಲ್ಲಿ ಹೊರಟುಹೋಗುತ್ತದೆ ಎಂದೆಲ್ಲ ತಪ್ಪು ಸಂದೇಶ ಹರಿದಾಡಲಾರಂಭಿಸಿದರೆ, ಜನರಿಗೆ ಕೊರೊನಾ ಬಗ್ಗೆ ಅಸಡ್ಡೆ ಮೂಡಿಬಿಡುತ್ತದೆ. ಹಾಗೆ, ಆಗುವುದು ತೀರಾ ಅಪಾಯಕಾರಿ ಎನ್ನುವುದು ನೆನಪಿರಲಿ. ಈಗಿನ್ನೂ ದೇಶದಲ್ಲಿ ಕೊರೊನಾ ಉತ್ತುಂಗಕ್ಕೇರಿಲ್ಲ. ಹೀಗಾಗಿ, ಸಾಂಕ್ರಾಮಿಕದ ಹಾವಳಿ ಅಧಿಕವಾಗಿರುವುದರಿಂದ ಈಗ ಮೊದಲಿಗಿಂತಲೂ ನಾವು ಹೆಚ್ಚು ಎಚ್ಚರಿಕೆಯಿಂದ ಇರಬೇಕಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

14-editorial

Campaigns: ಪ್ರಚಾರದಲ್ಲಿ ದ್ವೇಷ ಭಾಷಣ: ಸ್ವಯಂ ನಿಯಂತ್ರಣ ಅಗತ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.