ಪ್ರಜಾತಂತ್ರದ ಕತ್ತುಹಿಚುಕುವ ನಿರ್ಧಾರ ಅಸ್ಥಿರತೆಯತ್ತ ತಮಿಳುನಾಡು


Team Udayavani, Sep 20, 2017, 12:42 PM IST

22-PT-44.jpg

ಪಳನಿಸ್ವಾಮಿ ಮತ್ತು ಪನ್ನೀರ್‌ಸೆಲ್ವಂ ಬಣಗಳು ರಾಜಿಯಾಗುವುದ ರೊಂದಿಗೆ ಒಂದು ಹಂತದಲ್ಲಿ ಸ್ಥಿರತೆಗೆ ಬಂತು ಎಂದು ಭಾವಿಸಿದ್ದ ತಮಿಳುನಾಡಿನ ರಾಜಕೀಯ ಮತ್ತೆ ಅಸ್ಥಿರತೆಯತ್ತ ಸಾಗಿದೆ. ಸೋಮವಾರ ಸ್ಪೀಕರ್‌ ಪಿ. ಧನಪಾಲ್‌ ಎಐಎಡಿಎಂಕೆಯ 18 ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಪಕ್ಷದಿಂದ ಉಚ್ಛಾಟಿತರಾಗಿರುವ ಟಿ. ಟಿ. ವಿ. ದಿನಕರನ್‌ ಅವರನ್ನು ಬೆಂಬಲಿಸುತ್ತಿರುವ 18 ಶಾಸಕರನ್ನು ಪಕ್ಷಾಂತರ ವಿರೋಧಿ ಕಾಯಿದೆ ಯಡಿಯಲ್ಲಿ ಅನರ್ಹಗೊಳಿಸಿರುವ ಕ್ರಮದ ಕಾನೂನು ಮತ್ತು ಸಾಂವಿಧಾನಿಕ ಮಾನ್ಯತೆಯ ಕುರಿತು ಈಗ ಭಾರೀ ಚರ್ಚೆಯಾಗುತ್ತಿದೆ. ಸ್ಪೀಕರ್‌ ನಿರ್ಧಾರಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಇದು ಪ್ರಜಾತಂತ್ರದ ಕತ್ತು ಹಿಚುಕುವ ಕ್ರಮ ಎಂದು ಹೇಳಲಾಗುತ್ತಿದೆ.

18 ಶಾಸಕರು ಪಳನಿಸ್ವಾಮಿ ವಿರುದ್ಧ ಬಂಡೆದಿದ್ದಾರೆಯೇ ಹೊರತು ಪಕ್ಷದ ಸಚೇತಕಾಜ್ಞೆಯನ್ನು ಉಲ್ಲಂ ಸಿಲ್ಲ ಹಾಗೂ ಬೇರೊಂದು ಪಕ್ಷಕ್ಕೆ ಸೇರಿಲ್ಲ. ಅಲ್ಲದೆ ಪಕ್ಷಕ್ಕೆ ರಾಜೀನಾಮೆಯನ್ನೂ ನೀಡಿಲ್ಲ. ಹೀಗಾಗಿ ಇದು ಪಕ್ಷಾಂತರ ವಿರೋಧಿ ಕಾಯಿದೆಯಡಿ ನಿಷ್ಕರ್ಷೆಯಾಗಬೇಕಾದ ಪ್ರಕರಣವಲ್ಲ. ಕರ್ನಾಟಕದಲ್ಲಿ ಯಡಿಯೂರಪ್ಪ ನೇತೃತ್ವದ ಸರಕಾರವಿದ್ದಾಗ ಇದೇ ರೀತಿ 11 ಶಾಸಕರನ್ನು ಅನರ್ಹಗೊಳಿಸಲಾಗಿತ್ತು. ಹೈಕೋರ್ಟ್‌ ಈ ಕ್ರಮವನ್ನು ಎತ್ತಿ ಹಿಡಿದರೂ ಅನಂತರ ಸುಪ್ರೀಂ ಕೋರ್ಟ್‌ ಅನರ್ಹತೆ ನಿರ್ಧಾರವನ್ನು ರದ್ದುಗೊಳಿಸಿತ್ತು. ತಮಿಳುನಾಡಿನ ಈಗಿನ ಪರಿಸ್ಥಿತಿಗೂ ಕರ್ನಾಟಕದ ಹಿಂದಿನ ಪರಿಸ್ಥಿತಿಗೂ ಬಹಳಷ್ಟು ಸಾಮ್ಯತೆಗಳಿವೆ. ಈ ಪ್ರಕರಣದಲ್ಲಿ ಪಕ್ಷಾತೀತವಾಗಿ ವರ್ತಿಸಬೇಕಾಗಿದ್ದ ಸ್ಪೀಕರ್‌ ಸರಕಾರವನ್ನು ಉಳಿಸುವ ಸಲುವಾಗಿ ಸಂವಿಧಾನ ಮತ್ತು ಕಾನೂನನ್ನು ಗಾಳಿಗೆ ತೂರಿರುವುದು ಪ್ರಜಾತಂತ್ರಕ್ಕೆ ಭೂಷಣವಾಗಿರುವ ನಡತೆಯಲ್ಲ. ಅನರ್ಹಗೊಂಡಿರುವ ಶಾಸಕರಿಗೆ ತತ್‌ಕ್ಷಣವೇ ಶಾಸಕರ ಭವನವನ್ನು ತೆರವುಗೊಳಿಸಬೇಕೆಂದು ಆದೇಶಿಸಿರುವುದು ಸೇಡಿನ ಕ್ರಮದಂತೆ ಕಾಣಿಸುತ್ತಿದೆ. 

ಸದ್ಯದ ಬಲಾಬಲದ ಪ್ರಕಾರ ಬಹುಮತ ಸಾಬೀತುಪಡಿಸಲು 103 ಶಾಸಕ ಬಲ ಇದ್ದರೆ ಸಾಕಾಗುತ್ತದೆ. ಇಷ್ಟು ಶಾಸಕರು ಪಳನಿಸ್ವಾಮಿ ಜತೆಗಿರುವುದರಿಂದ ವಿಶ್ವಾಸಮತ ಗೆಲ್ಲುವ ಸಾಧ್ಯತೆಯಿದೆ. ಆದರೆ ಇತ್ತೀಚೆಗಿನ ಬೆಳವಣಿಗೆಗಳಿಂದಾಗಿ ಎಐಎಡಿಎಂಕೆ ಮತ್ತು ನಿರ್ದಿಷ್ಟವಾಗಿ ಪಳನಿಸ್ವಾಮಿ ಸರಕಾರದ ಮೇಲಿಟ್ಟಿರುವ ಜನರ ವಿಶ್ವಾಸ ಮಾತ್ರ ನಷ್ಟವಾಗಿದೆ.  ತನ್ನನ್ನು ಬೆಂಬಲಿಸುವ ಶಾಸಕರು ನಿಷ್ಠಾಂತರ ಮಾಡುವುದನ್ನು ತಡೆಯುವ ಸಲುವಾಗಿ ದಿನಕರನ್‌ ಅವರನ್ನು ಕರೆತಂದು ಮಡಿಕೇರಿಯ ಒಂದು ರೆಸಾರ್ಟ್‌ನಲ್ಲಿಟ್ಟಿದ್ದಾರೆ. ಸೆ. 20ರ ತನಕ ವಿಶ್ವಾಸಮತ ಯಾಚಿಸುವುದಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿರುವುದರಿಂದ ಅನಂತರವೇ ಈ ಶಾಸಕರು ಚೆನ್ನೈಗೆ ಹೋಗಲಿದ್ದಾರೆ. ಅಧಿಕಾರದ ಅತೀವ ಲಾಲಸೆಯಿರುವ ದಿನಕರನ್‌ ಮತ್ತು ಶಶಿಕಲಾ ನಡೆಸುತ್ತಿರುವ ಚಟುವಟಿಕೆಗಳು ಸಭ್ಯ ರಾಜಕೀಯ ಪರಿಭಾಷೆಗೆ ಸರಿಹೊಂದುವಂತಿಲ್ಲ ಎನ್ನುವುದು ನಿಜವಾಗಿದ್ದರೂ ಶಾಸಕರು ವಿಶ್ವಾಸಮತ ಪ್ರಕ್ರಿಯೆಯಲ್ಲಿ ಭಾಗವಹಿಸುವುದನ್ನು ತಡೆಯುವ ಸಲುವಾಗಿ ಸ್ಪೀಕರ್‌ ರಾಜಕೀಯ ಪಕ್ಷಪಾತದ ನಿರ್ಧಾರ ಕೈಗೊಂಡು ಶಾಸಕರನ್ನು ಅನರ್ಹಗೊಳಿಸಿರುವುದು ಮಾತ್ರ ಪ್ರಜಾಪ್ರಭುತ್ವದ ಆಶಯಕ್ಕೆ ಕೊಡಲಿಯೇಟು ನೀಡಿದಂತಾಗಿದೆ. ಪಳನಿಸ್ವಾಮಿ ಮತ್ತು ಪನ್ನೀರ್‌ಸೆಲ್ವಂ ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಯಾವ ಮಟ್ಟಕ್ಕೂ ಇಳಿಯಲು ಹಿಂಜರಿಯುವುದಿಲ್ಲ ಎಂಬಂತೆ ಕಾಣಿಸುತ್ತಿದ್ದಾರೆ. ಹಂಗಾಮಿ ರಾಜ್ಯಪಾಲರಾಗಿರುವ ವಿದ್ಯಾಸಾಗರ ರಾವ್‌ ಅವರ ನಡೆಯೂ ಹಲವು ಅನುಮಾನಗಳಿಗೆ ಎಡೆಮಾಡಿಕೊಡುತ್ತಿದೆ. ಕಳೆದ ಏಳೆಂಟು ತಿಂಗಳಿಂದ ರಾಜಕೀಯ ಅಸ್ಥಿರತೆ ಇದ್ದರೂ ರಾಜ್ಯಪಾಲರು ನಿಗೂಢ ಮೌನವಹಿಸಿದ್ದಾರೆ.

ಕೇಂದ್ರದ ನರೇಂದ್ರ ಮೋದಿ ಸರಕಾರವೂ ರಾಜಕೀಯ ಅಸ್ಥಿರತೆಯಲ್ಲೇ ತನ್ನ ಲಾಭವನ್ನು ಲೆಕ್ಕಹಾಕುತ್ತಾ ಕದಡಿದ ನೀರಿನಲ್ಲಿ ಮೀನು ಹಿಡಿಯುವ ಪ್ರಯತ್ನದಲ್ಲಿರುವಂತೆ ಕಾಣಿಸುತ್ತಿದೆ. ಶಾಸಕರನ್ನು ಅನರ್ಹಗೊಳಿಸಿದ ಕ್ರಮ ನ್ಯಾಯಾಲಯದ ಮೆಟ್ಟಿಲೇರುವುದು ಖಚಿತ. ನ್ಯಾಯಾಲಯ ಈ ವಿವಾದವನ್ನು ಇತ್ಯರ್ಥಗೊಳಿಸುವ ತನಕ ವಿಶ್ವಾಸಮತ ಯಾಚನೆ ಸಾಧ್ಯವಿಲ್ಲ. ಶಾಸಕರು ತಮ್ಮ ಸರಕಾರಕ್ಕೆ ನೀಡಿರುವ ಬೆಂಬವನ್ನು ಹಿಂದೆಗೆದುಕೊಂಡರೆ ಅವರ ಸದಸ್ಯತ್ವ ಆಯಾಚಿತವಾಗಿ ರದ್ದಾಗುತ್ತದೆಯೇ ಎನ್ನುವುದನ್ನು ಇನ್ನು ನ್ಯಾಯಾಲಯ ನಿರ್ಧರಿಸಬೇಕು. ಆದರೆ ಈಗಾಗಲೇ ಮೇಲ್ಪಂಕ್ತಿಯಾಗುವ ತೀರ್ಪು ಇರುವುದರಿಂದ ನ್ಯಾಯಾಲಯದ ನಿರ್ಧಾರ ಪಳನಿಸ್ವಾಮಿ ಸರಕಾರಕ್ಕೆ ಪ್ರತಿಕೂಲವಾಗುವ ಸಾಧ್ಯತೆಯೇ ಹೆಚ್ಚಿದೆ. ಏನೇ ಆದರೂ ಇತ್ತೀಚೆಗಿನ ದಿನಗಳಲ್ಲಿ ರಾಜಕೀಯ ನಾಯಕರು ಅಧಿಕಾರಕ್ಕಾಗಿ ಅನುಸರಿಸುತ್ತಿರುವ ಅಡ್ಡಹಾದಿಗಳು ರಾಜಕೀಯದ ನೈತಿಕತೆಯನ್ನು ಅಧಃಪತನಕ್ಕಿಳಿಸಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.